• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ಯಪಾನದಿಂದ ಮುಕ್ತರಾದರೆ ಉತ್ತಮ ಜೀವನ ನಡೆಸಲು ಸಾಧ್ಯ
ಮದ್ಯಪಾನದಿಂದ ಮುಕ್ತವಾದ ಕುಟುಂಬಗಳು ಆರ್ಥಿಕವಾಗಿ ಅಭಿವೃದ್ಧಿಯಾಗುತ್ತವೆ ಎಂದು ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ ಹೇಳಿದರು.
ವೇತನ ಹೆಚ್ಚಳ, ಉದ್ಯೋಗ ಭದ್ರತೆ ಒದಗಿಸಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಶಿವಲಿಂಗೇಗೌಡ ₹65 ಕೋಟಿ ಹಂಚಿಕೆ ಎಸ್‌ಐಟಿ ತನಿಖೆ ಮಾಡಿ
ದಲಿತ ಸಮುದಾಯದವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ 65 ಕೋಟಿ ರು. ಹಂಚಿಕೆ ಮಾಡುವ ಸಂಬಂಧ ಆಪ್ತರ ಜೊತೆ ಮಾತನಾಡಿದ್ದ ಆಡಿಯೋ ಎಲ್ಲಾ ಕಡೆ ವೈರಲ್ ಆಗಿದ್ದರೂ, ಎಸ್‌ಐಟಿ ರಚಿಸಿ ತನಿಖೆ ಏಕೆ ಮಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಜಿ. ದೇವರಾಜೇಗೌಡ ಪ್ರಶ್ನಿಸಿದರು.
ಮುಂಜಾಗ್ರತೆಯಿಂದ ಏಡ್ಸ್‌ ತಡೆಗಟ್ಟಬಹುದು
ಅಗತ್ಯ ತಿಳಿವಳಿಕೆ ಹಾಗೂ ಮುಂಜಾಗ್ರತೆ ಕ್ರಮಗಳ ಪಾಲನೆಯಿಂದ ಏಡ್ಸ್ ಎಂಬ ಮಹಾಮಾರಿಯನ್ನು ಬುಡಸಮೇತ ಕಿತ್ತೊಗೆಯಲು ಜನರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಾಗಿದ್ದು, ಸರ್ಕಾರದ ಜತೆಗೆ ಪ್ರಜ್ಞಾವಂತ ನಾಗರಿಕರು ಕೈ ಜೋಡಿಸುವ ಮೂಲಕ ಏಡ್ಸ್ ನಿರ್ಮೂಲನೆಗೆ ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಸಲಹೆ ನೀಡಿದರು. ಏಡ್ಸ್‌ ರೋಗ ಬಾರದಂತೆ ಹೆಚ್ಚಿನ ಜಾಗ್ರತೆ ಹಾಗೂ ಮುಂಜಾಗ್ರತೆ ಕ್ರಮಗಳ ಪಾಲನೆ ಮಾಡುಬೇಕಿದೆ ಮತ್ತು ಸ್ವಾಸ್ಥ ಸಮಾಜ ನಿರ್ಮಾಣದಲ್ಲಿ ಮುಂಜಾಗ್ರತೆ ಕ್ರಮಗಳು ಜತೆಗೆ ಕಾನೂನಿನ ಪಾಲನೆ ಅತ್ಯಗತ್ಯವಾಗಿದೆ ಎಂದರು.
ಎಐಐಎಂಎಸ್ ಪರೀಕ್ಷೆಯಲ್ಲಿ ನಿಖಿಲ್ ರಾಷ್ಟ್ರಕ್ಕೆ ಪ್ರಥಮ
ಬೇಲೂರು ಪಟ್ಟಣದ ಜೆಪಿನಗರದ ನಿವಾಸಿ ಡಾ.ಬಿ.ಎನ್.ನಿಖಿಲ್ ಇತ್ತೀಚೆಗೆ ಭಾರತ ಮಟ್ಟದ ಎಐಐಎಂಎಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ವಿಶ್ವವಿಖ್ಯಾತ ಬೇಲೂರಿನ ಕೀರ್ತಿಯನ್ನು ಹೆಚ್ಚಿಸುವ ಜೊತೆಗೆ ರಾಜ್ಯದ ಘನತೆಗೆ ಗೌರವ ತಂದಿದ್ದಾರೆ ಎಂದು ಗಣ್ಯರು ವಿದ್ಯಾರ್ಥಿ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಕ್ಕಳಿಗೆ ಸಂಸ್ಕಾರ ನೀಡಿ ಮೊಬೈಲ್‌ನಲ್ಲ
ಪೋಷಕರು ಮಕ್ಕಳಿಗೆ ಸಂಸ್ಕಾರ ನೀಡಬೇಕು. ಮಕ್ಕಳನ್ನು ಮೊಬೈಲ್ ಹಾವಳಿಯಿಂದ ದೂರವಿರುವಂತೆ ನೋಡಿಕೊಳ್ಳಬೇಕು ಎಂದು ಕೆಸವತ್ತೂರು ಮಠದ ಯತಿಗಳಾದ ಶ್ರೀ ಬಸವರಾಜೇಂದ್ರ ಸ್ವಾಮಿಗಳು ತಿಳಿಸಿದರು. ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷರಾದ ಪಾಂಡುರಂಗ ಅವರ ೫೦ನೇ ವರ್ಷದ ಸುವರ್ಣ ಸಂಭ್ರಮ ಆಚರಣೆಯಲ್ಲಿ ಆಶೀರ್ವಚನ ನೀಡಿ ಮಾತನಾಡುತ್ತಾ, ಸರಳ ಜೀವನದ ಜೊತೆಗೆ ಸಂಸ್ಕಾರವಂತರಾಗಿ ಬೆಳೆದಾಗ ಸಮಾಜದಲ್ಲಿ ಶಾಂತಿ, ನೆಮ್ಮದಿ, ಇರುತ್ತದೆ ಎಂದರು.
ಬೇಡಿಕೆ ಈಡೇರಿಕೆಗಾಗಿ ಬಿಸಿಯೂಟ ನೌಕರರ ಪ್ರತಿಭಟನೆ
ದೇಶದ ಬಿಸಿಯೂಟ ಕಾರ್ಮಿಕರಿಗೆ ಕನಿಷ್ಠ ವೇತನ ನಿಗಧಿ ಮತ್ತು ಸಾಮಾಜಿಕ ಭದ್ರತೆ ಸೇರಿದಂತೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಸೋಮವಾರ ನಗರದಲ್ಲಿರುವ ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ೧೧.೨೦ ಲಕ್ಷಕ್ಕೂ ಹೆಚ್ಚು ಶಾಲೆಗಳಲ್ಲಿ ೧೧.೮೦ ಕೋಟಿ ಮಕ್ಕಳಿಗೆ ಈ ಬಿಸಿಯೂಟ ಸೇವೆ ನೀಡಲಾಗುತ್ತಿದೆ ಎಂದರು.
ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ
ಮಕ್ಕಳು ಶಾಲಾ ಹಂತದಲ್ಲಿ ಪಠ್ಯ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಗೊಳಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಆರ್‌. ಪೂರ್ಣಿಮಾ ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಮಕ್ಕಳು ತಮ್ಮ ಪ್ರತಿಭೆಯನ್ನು ಉತ್ತಮವಾಗಿ ಪ್ರಸುತ್ತಪಡಿಸುವ ಮೂಲಕ ರಾಜ್ಯಮಟ್ಟದಲ್ಲಿ ಹಾಸನ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಸ್ವಯಂ ಪ್ರೇರಿತ ಅರಸೀಕೆರೆ ಬಂದ್ ಸಂಪೂರ್ಣ
ವಕ್ಫ್‌ ಹೋರಾಟ ಸಮಿತಿ ಮತ್ತು ಹಿರಿಯ ನಾಗರಿಕರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಕರೆ ನೀಡಲಾಗಿದ್ದ ಸ್ವಯಂಪ್ರೇರಿತ ಅರಸೀಕೆರೆ ಬಂದ್ ಸಂಪೂರ್ಣ ಯಶಸ್ವಿಯಾಯಿತು. ವಕ್ಫ್‌ಗೆ ರೈತನ ಜಮೀನು ಮಠಮಾನ್ಯಗಳು, ಆಸ್ತಿ, ಕಟ್ಟಡ, ನಿವೇಶನ, ದೇವಾಲಯಗಳ ಆಸ್ತಿಗಳು, ಹಳ್ಳಿಗಳು, ಸ್ಮಶಾನಗಳು , ಸರ್ಕಾರಿ ಕಟ್ಟಡ ಸರ್ಕಾರಿ ಆಸ್ತಿಯನ್ನು ಕಬಳಿಸುವ ಕಾನೂನಿನ ಅಧಿಕಾರವನ್ನು ಹಿಂದಿನ ಕಾಂಗ್ರೆಸ್ ಸರ್ಕಾರಗಳು ನೀಡಿದೆ ಎಂದು ರಂಗಭೂಮಿ ಕಲಾವಿದ ಕರಿಯಪ್ಪ ಆರೋಪಿಸಿದರು.
ವಿರೋಧದ ನಡುವೆಯೂ ಟೋಲ್‌ ಸಂಗ್ರಹಕ್ಕೆ ಚಾಲನೆ
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ಸಂಪೂರ್ಣ ಮುಗಿಯುವ ಮುನ್ನವೇ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದ ಹೆದ್ದಾರಿ ಪ್ರಾಧಿಕಾರದವರ ಕ್ರಮವನ್ನು ಖಂಡಿಸಿ ಸೋಮವಾರ ಕರವೇ ಸೇರಿದಂತೆ ವಿವಿಧ ಸಂಘಟನೆಗಳು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಚೌಲಗೆರೆ ಬಳಿ ಪ್ರತಿಭಟನೆ ನಡೆಸಿದವು.ಆಲೂರು ಬಳಿಯ ಚೌಲಗೆರೆ ಗ್ರಾಮದ ಸುಂಕ ವಸಲಾತಿ ಕೇಂದ್ರದಲ್ಲಿ ವಾಹನಗಳಿಂದ ಟೋಲ್ ಹಣವನ್ನ ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಯಿತು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved