• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಫಿ ಎಸ್ಟೇಟ್‌ ಕಾರ್ಮಿಕರ ಮೇಲೆ ಕಾಡಾನೆ ದಾಳಿ
ಕಾಫಿ ಕೊಯ್ಲಿನ ಕೆಲಸ ಮಾಡುತ್ತಿರುವಾಗ ಒಂಟಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಶಬಾನ (45 ವರ್ಷ) ಎಂಬುವವರಿಗೆ ಕಾಲಿಗೆ ಹಾಗೂ ಜಯಂತಿ(47 ವರ್ಷ) ಎಂಬುವವರಿಗೆ ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಲೂಕಿನ ಅರೇಹಳ್ಳಿ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳೆ ಹಾನಿ ಜೊತೆಗೆ ಮಾನವರ ಮೇಲೂ ದಾಳಿ ನಡೆಸುತ್ತಿರುವುದು ಹೆಚ್ಚಳವಾಗುತ್ತಿದೆ.
ಅಂಕಗಳ ಹಿಂದೆ ಬೀಳದೇ ಸಮಗ್ರ ಶಿಕ್ಷಣ ಪಡೆಯಿರಿ
ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಮಕ್ಕಳು ಸಮಗ್ರವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಶಿಕ್ಷಣವನ್ನು ಕಲಿಯಬೇಕು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಕಾಂತರಾಜು ತಿಳಿಸಿದರು. ಪ್ರಾಪಂಚಿಕ ವಿಷಯಗಳ ಬಗ್ಗೆ ಅರಿವನ್ನು ಹೊಂದಬೇಕು ಮತ್ತು ಸಮಾನತೆ ಭ್ರಾತೃತ್ವ ಹಾಗೂ ಸಮಾಜದಲ್ಲಿ ಶಿಕ್ಷಣದಿಂದ ಉನ್ನತವಾದ ಹುದ್ದೆಗಳ ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಬಾಲ್ಯದಿಂದಲೇ ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಸಲಹೆ
ಬಾಲ್ಯದಿಂದಲೇ ನಿಯಮಿತವಾಗಿ ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ದೇಹ ಆರೋಗ್ಯವಾಗಿರುತ್ತದೆ. ಮಾನಸಿಕ ಆರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು. ಮಕ್ಕಳು ಎಲ್ಲಾ ಕ್ರೀಡೆಗಳಲ್ಲಿ ಎಲ್ಲರೂ ಭಾಗವಹಿಸಿ, ಸೋಲು- ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳಿ ಎಂದು ಕಿವಿಮಾತು ಹೇಳಿ, ಚಿಕ್ಕವರಿದ್ದಾಗಲೇ ಕ್ರೀಡೆಯನ್ನು ಜೀವನದಲ್ಲಿ ರೂಪಿಸಿಕೊಂಡರೆ ಮುಂದೆ ದೇಹ ಆರೋಗ್ಯವಾಗಿರುತ್ತದೆ. ಮಾನಸಿಕ ಆರೋಗ್ಯ ಕೂಡ ಉತ್ತಮವಾಗಿರುತ್ತದೆ, ಸಂತ ಫಿಲೋಮಿನ ಶಾಲೆಯ ಏನೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸುವ ಕೆಲಸ ನಾನು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ನಟೇಶ್ ಕುಮಾರ್‌ಗೆ ನುಡಿನಮನ
ಕೆಲ ದಿನಗಳ ಹಿಂದಷ್ಟೇ ಅಗಲಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಹಾಸನ ಜಿಲ್ಲಾ ಬಿಜೆಪಿ ಮಾಜಿ ಸಂಘಟನಾ ಪ್ರಧಾನ ಕಾರ್ಯದರ್ಶಿ ನಟೇಶ್ ಕುಮಾರ್‌ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಸಾಮಾನ್ಯರು ಸುಂದರ ಜಗತ್ತಿನಲ್ಲಿ ಬದುಕುತ್ತಾರೆ. ಆದರೆ, ಶ್ರೇಷ್ಠರು ತಾನು ಬದುಕಿದ ಸಮಾಜವನ್ನು, ಜಗತ್ತನ್ನು ಸುಂದರವಾಗಿಸುತ್ತಾರೆ. ಹಾಗೆಯೇ ನಟೇಶ್ ಅವರು ತಾನು ಬದುಕಿದ ಸಮಾಜವನ್ನು, ಜಗತ್ತನ್ನು ಸುಂದರವಾಗಿಸಿದ್ದಾರೆ ಎಂದು ಜನಸೇವಾ ಶಿಕ್ಷಣದ ಮುಖಂಡ ನಿರ್ಮಲ್ ಕುಮಾರ್‌ ಅವರು ಹೇಳಿದರು.
ವಿದ್ಯೆ ಜತೆಗೆ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ
ಮಕ್ಕಳಿಗೆ ವಿದ್ಯೆಯೊಂದಿಗೆ ನಮ್ಮ ಸಂಸ್ಕೃತಿ, ಸಂಸ್ಕಾರ ಹಾಗೂ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಮಹತ್ತರದ್ದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ಇತ್ತೀಚಿನ ದಿನಗಳಲ್ಲಿನ ಜಂಜಾಟದ ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಹಳುಹಿಸಿದರೆ ಸಾಕು ಎನ್ನುತ್ತಾರೆ. ನಾವು ಮಕ್ಕಳಿಗೆ ಏನು ಕೊಡಬೇಕೆಂಬುದನ್ನು ಬಿಟ್ಟು ದುಡಿಮೆಯಲ್ಲೆ ತೊಡಗುತ್ತೇವೆ. ಮನೆಯೇ ಮೊದಲ ಪಾಠಶಾಲೆ, ತಾಯಿ ಮೊದಲ ಗುರುವಾದರೆ ಶಾಲೆಯಲ್ಲಿ ಶಿಕ್ಷಕರು ಎರಡನೇ ತಾಯಿಯಾಗಿರುತ್ತಾರೆ ಎಂಬುದನ್ನು ಪ್ರತಿಯೊಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.
ಚೌಲಗೆರೆ ಟೋಲ್‌ ಇಂದು ಉದ್ಘಾಟನೆ
ಆಲೂರು ತಾಲೂಕಿನ ಚೌಲಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿರ್ಮಿಸಿರುವ ಸುಂಕ ವಸೂಲಿ ಕೇಂದ್ರ ಕಾರ್ಯಾರಂಭಕ್ಕೆ ಎಲ್ಲಾ ಸಿದ್ಧತೆ ಆರಂಭವಾಗಿದೆ. ಸೋಮವಾರ ಇದನ್ನು ಉದ್ಘಾಟಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿರ್ಧರಿಸಿದ್ದಾರೆ. ಆದರೆ, ಉದ್ಘಾಟನೆಗೂ ಮುನ್ನವೇ ತೀವ್ರ ವಿರೋಧ ವ್ಯಕ್ತವಾಗಿದೆ. ಟೋಲ್‌ ಶುಲ್ಕ ವಸೂಲಿ ಮಾಡಲು ತೋರುತ್ತಿರುವ ಆಸಕ್ತಿ ರಸ್ತೆ ಗುಣಮಟ್ಟ ಕಾಪಾಡುವಲ್ಲಿ ಇಲ್ಲ. ಜತೆಗೆ ಈ ಟೋಲ್‌ನಲ್ಲಿ ಯಾವ ವಾಹನಕ್ಕೆ ಎಷ್ಟು ಸುಂಕ ಎನ್ನುವುದನ್ನು ಈವರೆಗೂ ನಾಮಫಲಕದಲ್ಲಿ ಹಾಕಿಲ್ಲ.
ತಾಯಿಗಿಂತ ದೊಡ್ಡ ಶಕ್ತಿ ಜಗತ್ತಿನಲ್ಲಿಲ್ಲ
ಭಗವಂತನಿಗೂ ಭಕ್ತಿಗೂ ಮಧ್ಯೆ ಇರುವ ಅಜ್ಞಾನ ಮತ್ತು ಅಹಂಕಾರ ಎಂಬ ಪರದೆಯದನ್ನು ಸರಿಸಿದಾಗ ಮಾತ್ರ ದೇವರು ಕಾಣಿಸುತ್ತಾನೆ. ನಂಬಿಕೆಯಿಂದ ಮಾತ್ರ ದೇವರನ್ನು ಕಾಣಲು ಸಾಧ್ಯ ಎಂದು ಸಿದ್ಧಗಂಗಾ ಮಠಾಧೀಶರಾದ ಡಾ. ಶಿವಕುಮಾರಸ್ವಾಮಿಗಳು ಅಭಿಪ್ರಾಯಪಟ್ಟರು. ತಾಯಿ ಮಕ್ಕಳಿಗೆ ಕೊಡುವಂತಹ ಸಂಸ್ಕಾರ ಯಾರಿಂದಲೂ ಕೊಡಲು ಸಾಧ್ಯವಿಲ್ಲ. ತಾಯಿಗಿಂತ ದೊಡ್ಡ ಶಕ್ತಿ, ದೊಡ್ಡ ದೇವರು ಜಗತ್ತಿನಲ್ಲಿ ಕಾಣುವುದಿಲ್ಲ. ದೇವರು ಸೇರಿದಂತೆ ಯಾವುದೇ ಋಣ ತೀರಿಸಬಹುದು. ಆದರೆ ತಾಯಿ ಋಣ ತೀರಿಸಲು ಸಾಧ್ಯವಿಲ್ಲ ಎಂದರು.
ನಿವೃತ್ತರಿಗಾಗಿ ವಿಶ್ರಾಂತಿ ಮನೆ ನಿರ್ಮಾಣಕ್ಕೆ ಚಿಂತನೆ
೬೫ ವರ್ಷಕ್ಕಿಂತ ಮೇಲ್ಪಟ್ಟ ನಿವೃತ್ತ ನೌಕರರ, ನಿವೃತ್ತ ಯೋಧರ, ಸಮಾಜ ಸೇವಕರ ವಿಶ್ರಾಂತಿ ಮನೆ ಪ್ರಾರಂಭಿಸುತ್ತಿದ್ದೇವೆ ಎಂದು ಉದ್ಯಮಿ ಟಿ. ಶಿವಕುಮಾರ್ ತಿಳಿಸಿದ್ದಾರೆ. ಕೆಲವರಿಗೆ ಒಂಟಿತನ ಕಾಡುತ್ತಿದೆ. ಇಂತಹ ಮನಸ್ಥಿತಿಯಿಂದ ಇವರನ್ನು ಹೊರತಂದು ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುವ ಭರವಸೆ ಮೂಡಿಸಿ, ಇಂತಹವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ವಿಶ್ರಾಂತಿ ಮನೆ ತೆರೆಯಲಾಗುತ್ತಿದೆ ಎಂದರು.
ಸಮಾಜಮುಖಿ ಸೇವೆ ಕೈಗೊಳ್ಳುವುದೇ ರೆಡ್‌ಕ್ರಾಸ್‌ ಸಂಸ್ಥೆ ಉದ್ದೇಶ
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಸಮಾಜಮುಖಿ ಸೇವೆಯಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಿದೆ ಎಂದು ತಾಲೂಕು ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಭರತ್ ಕುಮಾರ್‌ ತಿಳಿಸಿದರು. ರೆಡ್‌ಕ್ರಾಸ್ ಸಂಸ್ಥೆಯು ಸಮಾಜಮುಖಿ ಸೇವೆಯಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಘಸಂಸ್ಥೆ ಹೊಂದಿರುವ ತಾಲೂಕು ಎಂದರೆ ಅದು ಚನ್ನರಾಯಪಟ್ಟಣ. ತಾಲೂಕಿನಲ್ಲಿ ಅನೇಕ ಸಂಘಸಂಸ್ಥೆಗಳು ತನ್ನದೇ ಆದ ಸಮಾಜಮುಖಿ ಸೇವೆಯನ್ನು ಸಲ್ಲಿಸುತ್ತಿವೆ ಎಂದರು.
ಹಕ್ಕು ಮತ್ತು ಕರ್ತವ್ಯಗಳ ಸರಿಯಾದ ಬಳಕೆಯಾಗುತ್ತಿಲ್ಲ
ಸಂವಿಧಾನದಲ್ಲಿ ನೀಡಿರುವ ಹಕ್ಕು ಹಾಗೂ ಕರ್ತವ್ಯ ಪಾಲಿಸಲು ಜಾಗೃತಿ ಮೂಡಿಸುತ್ತಿದ್ದರೂ ನಾಗರಿಕರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳದಿರುವುದು ವಿಷಾದನೀಯ ಎಂದು ಬೇಲೂರು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್. ಶಶಿಕಲಾ ಬೇಸರ ವ್ಯಕ್ತಪಡಿಸಿದರು. ಪ್ರಕೃತಿವಿಕೋಪದಂಥ ಘಟನೆಗಳು ನಡೆಯಲು ಮಾನವನ ದುರಾಸೆಯ ಪರಮಾವಧಿ, ಆಧುನೀಕತೆ ಹೆಸರಿನಲ್ಲಿ ಕಾಡು ಕಡಿಯುವುದು ಎಷ್ಟರ ಮಟ್ಟಿಗೆ ಸರಿ. ಮಾನವ ಹಕ್ಕುಗಳ ಸಂರಕ್ಷಣೆ ಸಂವಿಧಾನ ನೀಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪಾಲಿಸಬೇಕು ಎಂದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved