• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡಿಸಲು ನಿವಾಸಿಗಳಿಗೆ ಶೀಘ್ರದಲ್ಲೇ ನಿವೇಶನ ಮಂಜೂರು
ಕಾಲೇಜು ಮೈದಾನದಲ್ಲಿ ಇರುವ ೫೭ ಗುಡಿಸಲು ಇದು ವಿಶ್ವ ಪ್ರಖ್ಯಾತಿ ಬೇಲೂರು ಪ್ರವಾಸಿ ತಾಣವಾಗಿದ್ದು ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ತೊಂದರೆಯಾಗುತ್ತಿರುವುದರಿಂದ ಅಲ್ಲಿರುವ ಗುಡಿಸಲು ನಿವಾಸಿಗಳನ್ನು ತೆರವುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ. ಅದಕ್ಕೂ ಮೊದಲು ಸ್ಥಳಾಂತರ ಜಾಗದಲ್ಲಿ ಮೂಲಭೂತ ಸೌಕರ್ಯಗಳು ಆಗಬೇಕಿದ್ದು ರಸ್ತೆ, ಚರಂಡಿ, ಯುಜಿಡಿ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಕಲ್ಪಿಸಿ ಗೌರವಯುತವಾಗಿ ಸ್ಥಳಾಂತರಿಸಲು ಯೋಜನೆ ರೂಪಿಸಬೇಕಿದೆ. ಅದಕ್ಕಾಗಿ ರಾಜೀವ್ ಗಾಂಧಿ ಹಾಗೂ ವಾಜಪೇಯಿ ನಿಗಮದ ಆಶ್ರಯ ಸಮಿತಿ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಅಧಿಕಾರಿಗಳ ಹಾಗೂ ಸಮಿತಿಯ ಸದಸ್ಯರ ಸಭೆ ಕರೆದು ತೀರ್ಮಾನಿಸಲಾಗಿದೆ ಎಂದು ಶಾಸಕ ಎಚ್‌ ಕೆ ಸುರೇಶ್‌ ತಿಳಿಸಿದರು.
ಡೀಸಿ ಕಚೇರಿ ಕಟ್ಟಡದಲ್ಲೆ ಬಾಂಗ್ಲಾ ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿ
ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಜನ್ಮದಿನಾಂಕವನ್ನು ಆಧಾರ್‌ ಲಿಂಕ್‌ಗೆ ಸೇರಿಸುತ್ತಿದ್ದ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದಲ್ಲಿರುವ ಆಧಾರ್ ಕೇಂದ್ರದಲ್ಲಿ ಕೆಲಸ ಮಾಡುವ ಕಂಪ್ಯೂಟರ್ ಆಪರೇಟರ್ ಅನುಶ್ರೀ ಎಂಬಾಕೆ ಸಿಕ್ಕಿಬಿದ್ದಿದ್ದು, ಅಕೆ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲೆ ಆಧಾರ್ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಅನುಶ್ರೀ ಎಂಬುವರ ಬಳಿ ಹಣ ಕೊಟ್ಟರೇ ಸಾಕು ನಕಲಿ ಜನ್ಮದಿನಾಂಕವನ್ನು ಸೃಷ್ಠಿ ಮಾಡಲು ಖಾಸಗೀ ಇಂಟರ್‌ ಪಾರ್ಲರ್‌ಗೆ ವಿಳಾಸ ಹೇಳಿ ಕಳುಹಿಸಿ ಕೊಡುತ್ತಾರೆ. ಅಲ್ಲಿ ಸಿದ್ಧವಾದ ಮೇಲೆ ಈಕೆ ಆಧಾರ್‌ಗೆ ಲಿಂಕ್ ಮಾಡಿಕೊಡುವುದನ್ನು ಮೈಗೂಡಿಸಿಕೊಂಡು ಸಂಬಳದ ಜೊತೆ ಈ ರೀತಿಯ ದೇಶದ್ರೋಹಿ ಕೆಲಸ ಮಾಡಿ ಒಬ್ಬರಿಂದ ೫ ಸಾವಿರದಿಂದ ೧೦ ಸಾವಿರದವರೆಗೂ ಹಣ ಪಡೆಯುತ್ತಿದ್ದಳು.
ಗೌರಿಗಣೇಶ ಈದ್‌ ಮಿಲಾದ್‌ ಹಬ್ಬದ ಹಿನ್ನೆಲೆಯಲ್ಲಿ ಶಾಂತಿಸಭೆ
ಗೌರಿ ಗಣೇಶ ಮತ್ತು ಈದ್ ಮಿಲಾದ್ ಒಂದೇ ತಿಂಗಳಲ್ಲಿ ಬಂದಿರುವುದರಿಂದ ಈ ಶಾಂತಿ ಸಭೆಯನ್ನು ಕರೆಯಲಾಗಿದೆ. ಉಭಯ ಸಮುದಾಯದವರು ಸೌಹಾರ್ದಯುತವಾಗಿ ಎರಡು ಹಬ್ಬಗಳಿಗೆ ಪರಸ್ಪರ ಸಹಕಾರವನ್ನು ನೀಡಿಕೊಂಡು ಆಚರಿಸುತ್ತೇವೆಂದು ತಿಳಿಸಿರುವುದು ಸಂತೋಷವಾಗಿದೆ ಎಂದು ಡಿವೈಎಸ್ಪಿ ಲೋಕೇಶ್ ಹೇಳಿದರು. ಎರಡು ವಿಶೇಷ ಹಬ್ಬಗಳಲ್ಲಿ ನಾವು ಹೆಚ್ಚಿನ ರಕ್ಷಣಾ ವ್ಯವಸ್ಥೆಗಾಗಿ ಹೊರ ಸಿಬ್ಬಂದಿಯನ್ನು ಬರಮಾಡಿಕೊಳ್ಳುತ್ತೇವೆ. ಎರಡು ಹಬ್ಬಗಳ ಆಚರಣೆಗೆ ನಮ್ಮಿಂದ ಸಂಪೂರ್ಣ ಸಹಕಾರ ಇರುತ್ತದೆ. ಕಳೆದ ವರ್ಷದಂತೆ ಇದ್ದ ನಿಯಮವನ್ನು ಈ ಬಾರಿಯೂ ಪಾಲಿಸಬೇಕು. ಅಗತ್ಯ ಬಿದ್ದಲ್ಲಿ ಮಹಲ್ಲವಾರು ಸಭೆ ಮಾಡುತ್ತೇವೆ. ಹಬ್ಬ ಸಮೀಪಿಸಿದಂತೆ ಇನ್ನೊಂದು ಸಭೆಯನ್ನು ನಡೆಸಲಾಗುವುದು. ಶ್ರೀ ಪ್ರಸನ್ನ ಗಣಪತಿ ಭಕ್ತ ಮಂಡಳಿಯವರು ಮತ್ತು ಮುಸ್ಲಿಂ ಜಮಾತ್ ಕಮಿಟಿಯವರು ಪರಸ್ಪರ ಸಹಕಾರದೊಂದಿಗೆ ಹಬ್ಬಗಳನ್ನು ಆಚರಿಸಿಕೊಂಡು ಹೋಗುವುದಾಗಿ ತಿಳಿಸಿದ್ದೀರಿ ಸಂತೋಷ ಎಂದರು.
ಸ್ವಯಂ ನಿಯಂತ್ರಣವೇ ಏಡ್ಸ್ ನಿಯಂತ್ರಣಕ್ಕೆ ದಾರಿ
ಎಚ್‌ಐವಿ ಸೋಂಕಿತರಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಎಚ್‌ಐವಿ ಸೋಂಕಿತ ವ್ಯಕ್ತಿಯನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕು. ಯಾವುದೇ ತಾರತಮ್ಯ ಮಾಡಬಾರದು ಎಲ್ಲರಂತೆ ಬದುಕಲು ಅವಕಾಶ ನೀಡಬೇಕು ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವಿ ಮಹೇಶ್‌ ತಿಳಿಸಿದರು. ಎಚ್‌ಐವಿ ಹರಡದಂತೆ ತಡೆಯಬೇಕಾದರೆ ಸ್ವಯಂ ನಿಯಂತ್ರಣ ಅಗತ್ಯ. ಸುರಕ್ಷಿತವಲ್ಲದ ಲೈಂಗಿಕ ಸಂಪರ್ಕ, ಸಂಸ್ಕರಿಸಿದ ಸಿರಿಂಜ್ ಮೂಲಕ ಮಾದಕ ದ್ರವ್ಯ ತೆಗೆದುಕೊಳ್ಳುವುದರಿಂದ ಹೆಚ್‌ಐವಿ ಹರಡುತ್ತದೆ. ಗರ್ಭಿಣಿಯರಲ್ಲಿ ಎಚ್‌ಐವಿ ಇದ್ದರೆ ಹುಟ್ಟುವ ಮಗುವಿಗೆ ಹರಡದಂತೆ ತಡೆಯುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಲಾಗುವುದು ಎಂದರು.
ನೊಳಂಬ ಲಿಂಗಾಯತ ಸಮುದಾಯದಿಂದ ನಾಳೆ ಪ್ರತಿಭಾ ಪುರಸ್ಕಾರ
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ನೊಳಂಬ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸೆ.1ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನೊಳಂಬ ಲಿಂಗಾಯತ ಸಮುದಾಯದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ನೊಳಂಬ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ರಾಂಪುರ ಜಯಣ್ಣ ತಿಳಿಸಿದ್ದಾರೆ.
ಸಮೀವುಲ್ಲಾ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಜಿವಿಟಿ ಬಸವರಾಜು
ನಗರದ ಪ್ರಥಮ ಪ್ರಜೆಯಾದ ಸಮಿವುಲ್ಲಾರವರು ಈಗ ಯಾವ ಪಕ್ಷದಲ್ಲಿದ್ದಾರೆ, ಕಳೆದ ವಿಧಾನಸಭಾ-ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆ ಯಾರ ಜೊತೆ ಇದ್ದೀರೆಂದು ತಿಳಿಯದ? ಅರಸೀಕರೆ ಜನತೆ ದಡ್ಡರಲ್ಲ. ಶಾಸಕರ ಜೊತೆ ಸೇರಿ ಹಣಬಲ ಮತ್ತು ಕುತಂತ್ರ ಮಾರ್ಗದಿಂದ ನಗರಸಭಾ ಅಧ್ಯಕ್ಷರಾಗಿರುವ ನೀವು ಕಳೆದ ಬಾರಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಗರದಲ್ಲಿ ನಡೆದ ರಸ್ತೆ ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದ್ದೀರಿ ಎಂದು ಜಿವಿಟಿ ಬಸವರಾಜು ನೇರವಾಗಿ ಆರೋಪಿಸಿದರು.
ಬಾಲಕಿಯರ ಹಾಸ್ಟೆಲ್‌ ವಾರ್ಡನ್‌ ಮೇಲೆ ಕ್ರಮ ಕೈಗೊಳ್ಳಿ
ಹೊಳೆನರಸೀಪುರದ ಪ್ರಿ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಮೇಲ್ವಿಚಾರಕರಾಗಿರುವ ಚಂದ್ರಿಕಾ ಮೇಲೆ ಶಿಸ್ತು ಕ್ರಮ ಜರುಗಿಸದಿದ್ದರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಸೋಮಶೇಖರ್ ಎಚ್ಚರಿಸಿದರು. ರಾಜಕೀಯ ಒತ್ತಡವನ್ನು ಬಳಸಿ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಕಟ್ಟೆ, ಕುಂಚೇವು ಮತ್ತು ಹೊಳೆನರಸೀಪುರದ ಪ್ರಿ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ತನ್ನ ಗಂಡನನ್ನೇ ಕಾವಲುಗಾರರನ್ನಾಗಿ ನೇಮಿಸಿಕೊಂಡಿರುತ್ತಾರೆ ಎಂದು ದೂರಿದರು.
ಹೊಳೆನರಸೀಪುರ ಆಸ್ಪತ್ರೆಯಲ್ಲಿ ಲಿಫ್ಟ್‌ ಇಲ್ಲದೆ ಗರ್ಭಿಣಿಯರಿಗೆ ತೊಂದರೆ
ಹೊಳೆನರಸೀಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಲಿಫ್ಟ್ ಕೆಟ್ಟು ಗರ್ಭಿಣಿಯರು ಹಾಗೂ ತಾಯಂದಿರು, ಪುಟ್ಟ ಮಕ್ಕಳು ರಕ್ತ ಹಾಗೂ ಇತರೆ ಪರೀಕ್ಷೆಗಳಿಗೆ ೩ನೇ ಮಹಡಿಗೆ ಮೆಟ್ಟಿಲು ಮೂಲಕ ತೆರಳಬೇಕಾಗಿದ್ದು, ಈ ಸ್ಥಿತಿ ತಾಲೂಕು ಆರೋಗ್ಯಾಧಿಕಾರಿ ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿಯ ಕಾರ್ಯದಕ್ಷತೆಯನ್ನು ಅನುಮಾನಿಸುವ ಸ್ಥಿತಿ ನಿರ್ಮಾಣವಾಗಿದೆ.
ಶಿಫಾರಸು ಇಲ್ಲದೆ ಬರುವವರಿಗೆ ಮೊದಲ ಆದ್ಯತೆ ಕೊಡಿ
ಶಿಫಾರಸು ಹಾಗೂ ಪರಿಚಯವನ್ನು ಹೇಳಿಕೊಂಡು ಸರ್ಕಾರಿ ಕಚೇರಿಗೆ ಬರುವ ಜನರ ಕೆಲಸ ಕಾರ್ಯಗಳು ಒಂದು ವಾರ ತಡವಾದರೂ ಪರವಾಗಿಲ್ಲ, ಯಾವುದೇ ಶಿಫಾರಸುಗಳೂ ಇಲ್ಲದಂತೆ ಕಚೇರಿಗೆ ಬರುವ ಸಾಮಾನ್ಯ ಜನರಿಗೆ ಮೊದಲ ಆದ್ಯತೆ ನೀಡಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕೆಂದು ಸಂಸದ ಶ್ರೇಯಸ್ ಪಟೇಲ್ ಸೂಚಿಸಿದ್ದಾರೆ. ಗ್ರಾಮೀಣ ಜನರಿಗೆ ಕಚೇರಿಗೆ ಅಲೆದಾಡಿಸದೆ, ಭ್ರಷ್ಟಾಚಾರ ರಹಿತವಾಗಿ ಜನರ ಕೆಲಸಗಳನ್ನು ಕಾನೂನಿನಂತೆ ಸಮರ್ಪಕವಾಗಿ ಮಾಡಿಕೊಡಬೇಕೆಂದು ತಿಳಿ ಹೇಳಿದ್ದಾರೆ.
ಕಚೇರಿಗೆ ಬಂದ ಜನರೊಂದಿಗೆ ಮೊದಲು ಸರಿಯಾಗಿ ವರ್ತಿಸಿ
ಚನ್ನರಾಯಪಟ್ಟಣ ತಾಲೂಕು ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಶ್ರೇಯಸ್‌ ಎಂ ಪಟೇಲ್‌ ಅವರು, ರೈತರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನಮ್ಮ ಬಳಿ ಬರುವುದನ್ನು ತಪ್ಪಿಸಿ ಅಧಿಕಾರಿಗಳು ಕೆಲಸ ಮಾಡಿಕೊಡುವುದಾದರೆ ನೇರವಾಗಿ ಹೇಳಿ, ಅದನ್ನು ಬಿಟ್ಟು ದಿನಗಟ್ಟಲೆ ರೈತರನ್ನು ಅಲೆಸಿ ಅವರ ಚಪ್ಪಲಿಯನ್ನು ಸವೆಸಬೇಡಿ ಎಂದರು. ನಾವು ಜನರಿಂದ ಆಯ್ಕೆಯಾಗಿದ್ದೇವೆ. ನಮ್ಮದು ಐದು ವರ್ಷದ ಅಧಿಕಾರ. ಆದರೆ ಅಧಿಕಾರಿಗಳದ್ದು ಐವತ್ತು ವರ್ಷದ ಅಧಿಕಾರ. ಆ ಅಧಿಕಾರವನ್ನು ಸರಿಯಾಗಿ ಉಪಯೋಗಿಸಿ ಜನರ ಸೇವೆಗೆ ಅವಕಾಶ ಮಾಡಿಕೊಡಿ ಎಂದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved