• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ ಹಂಪಿ ಮಾದರಿಯಂತೆ ಹೊಯ್ಸಳ ಉತ್ಸವ ನಡೆಸಲಿ
ಹೊಯ್ಸಳರ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಹಂಪಿಯ ಮಾದರಿಯಲ್ಲಿ ಪ್ರತಿವರ್ಷ ಹೊಯ್ಸಳ ಉತ್ಸವವನ್ನು ಜಿಲ್ಲೆಯಲ್ಲಿ ಸರ್ಕಾರದ ಪ್ರೋತ್ಸಾಹದೊಂದಿಗೆ ಆಚರಿಸಬೇಕೆಂದು ಒತ್ತಾಯಿಸಿ ನವಕರ್ನಾಟಕ ಯುವಶಕ್ತಿ ವತಿಯಿಂದ ಭಾನುವಾರ ಹಾಸನದಲ್ಲಿ ಭವ್ಯ ಹೊಯ್ಸಳ ಉತ್ಸವ ಮೆರವಣಿಗೆ ನಡೆಯಿತು. ೧೧ ಶತಮಾನದಿಂದ ೧೬ನೇ ಶತಮಾನದವರೆಗೂ ಕನ್ನಡಿಗರು ಹೆಮ್ಮೆಪಡುವ ರೀತಿಯಲ್ಲಿ ಪಕ್ಕದ ತಮಿಳುನಾಡು ಮತ್ತು ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ನಮ್ಮ ಕನ್ನಡಿಗರ ಹಿರಿಯ ಗರಿಮೆಯನ್ನು ಎತ್ತಿ ಹಿಡಿದಂತಹ ಹೊಯ್ಸಳರು ನಮಗೆ ಅನೇಕ ಕೊಡುಗೆಯನ್ನು ಕೊಟ್ಟು ಹೋಗಿದ್ದಾರೆ, ಕನ್ನಡಿಗರಾದ ನಾವು ಹೆಮ್ಮೆ ಪಡುವಂತಹ ಕೊಡುಗೆ ಹೊಯ್ಸಳರದ್ದು ಎಂದು ಬಣ್ಣಿಸಿದರು.
ಗಣಪತಿ ವಿರ್ಸಜನೆಯಲ್ಲಿ ಸಾಂಸ್ಕೃತಿಕ ಕಲೆಗಳ ಮೆರುಗು
ಗಣೇಶನ ಉತ್ಸವ ೩೨ ದಿನಗಳ ಕಾಲ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳಿಂದ ವೈಭವದಿಂದ ಜರುಗಿತ್ತು. ವಿಸರ್ಜನಾ ಮಹೋತ್ಸವಕ್ಕೆ ಶನಿವಾರ ಮಧ್ಯಾಹ್ನ ಪೂಜೆಯಲ್ಲಿ ಸಮಿತಿಯ ಗೌರಾವಾಧ್ಯಕ್ಷ ಟಿ.ಶಿವಕುಮಾರ್ ಚಾಲನೆ ನೀಡಿದರು. ಶನಿವಾರ ಸಂಜೆ ಸಂಪ್ರದಾಯದಂತೆ ಪೂಜಾ ಕೈಂಕರ್ಯ ನೆರವೇರಿಸಿ, ವಿವಿಧ ಪುಷ್ಪಗಳು ಹಾಗೂ ವಿದ್ಯುತ್ ದೀಪಗಳಿಂದ ಸರ್ವಾಲಂಕೃತಗೊಂಡ ವೈಭವದ ರಥದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪೇಟೆ ಮುಖ್ಯರಸ್ತೆ, ಕೋಟೆ ರಾಜ ಬೀದಿಯಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಡಾ. ಅಂಬೇಡ್ಕರ್ ನಗರದಲ್ಲಿ ಮಹಿಳೆಯರು ಮನೆಗಳ ಮುಂದೆ ರಂಗೋಲಿ ಇಟ್ಟು, ಶ್ರೀಸ್ವಾಮಿಯ ಮೂರ್ತಿಗೆ ಪೂಜೆಯನ್ನು ಭಕ್ತಿಯಿಂದ ನೆರವೇರಿಸಿದರು.
ಅಕ್ಟೋಬರ್ ಮೂರರಂದು ಬ್ಯಾರಿ ಭಾಷಾ ದಿನಾಚರಣೆ
ಆಕ್ಸ್ಫರ್ಡ್ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಭಾಷೆ ಎಂದರೆ ಸಂಸ್ಕೃತಿ. ಭಾಷೆಯ ಬಗ್ಗೆ ಅಭಿಮಾನ ಇರಬೇಕು. ಮನೆಯಲ್ಲಿ ಹೊರಗೆ ನೀವು ಯಾವುದೇ ಭಾಷೆ ಬಳಸಿದರೂ ಮನೆಯಲ್ಲಿ ಮಾತ್ರ ಬ್ಯಾರಿ ಭಾಷೆಯನ್ನೇ ಮಾತನಾಡಬೇಕು. ಭಾಷೆ ಉಳಿಯಬೇಕಾದರೆ ಅದರ ಬಳಕೆ ಅವಶ್ಯಕ. ಬ್ಯಾರಿ ಭಾಷಿಕರು ರಾಜ್ಯ ಹಾಗೂ ಅಂತರರಾಜ್ಯ ಮಟ್ಟದಲ್ಲಿ ಬದುಕನ್ನು ಕಟ್ಟಿಕೊಂಡಿದ್ದು, ಎಲ್ಲರೂ ಒಂದಾಗಬೇಕು. ಏಕತೆ ಇದ್ದಾಗ ಮಾತ್ರ ನಮ್ಮ ಏಳಿಗೆ ಸಾಧ್ಯ, ಇಲ್ಲದಿದ್ದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಭೈರಪ್ಪಗೆ ಮರಣೋತ್ತರ ಭಾರತರತ್ನ ನೀಡಲು ಒತ್ತಾಯ
ಹಿರೀಸಾವೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದರು. ಸರಸ್ವತಿ ಸಮ್ಮಾನ್ ಶ್ರೀ ಎಸ್.ಎಲ್. ಭೈರಪ್ಪ ಅವರು ಬರೆದಿರುವ ಕಾದಂಬರಿಗಳು ಕೇವಲ ಕಾಲ್ಪನಿಕವಲ್ಲ. ಸಮಾಜ ಹಾಗೂ ಜನಸಾಮಾನ್ಯರ ಬದುಕಿಗೆ ಹತ್ತಿರವಾಗಿದ್ದು ಯುವ ಸಮುದಾಯಕ್ಕೆ ದಾರಿದೀಪವಾಗಲಿವೆ. ಅವರ ಕಾದಂಬರಿಗಳು ಮಾರ್ಗಸೂಚಿಯಾಗಿವೆ ಎಂದು ತಿಳಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯುವುದು ಸುಲಭವಲ್ಲ ಎಂದರು.
ಅನಿಯಂತ್ರಿತ ಜೀವನಶೈಲಿ ಹೃದಯ ರೋಗಕ್ಕೆ ಕಾರಣ
ಇಂಡಿಯಾನಾ ಆಸ್ಪತ್ರೆಯ ಮೆಡಿಕಲ್ ನಿರ್ದೇಶಕ ಹಾಗೂ ಹೃದ್ರೋಗ ತಜ್ಞ ಡಾ. ಎಂ. ಅನೂಪ್ ಮಾತನಾಡಿ, ಅನಿಯಂತ್ರಿತ ಜೀವನ ಶೈಲಿ, ವ್ಯಾಯಾಮದ ಕೊರತೆ, ಅತಿಯಾದ ಒತ್ತಡ, ಧೂಮಪಾನ, ಮದ್ಯಪಾನ ಮತ್ತು ಅಸಮರ್ಪಕ ಆಹಾರ ಪದ್ಧತಿ ಇವುಗಳೆಲ್ಲ ಹೃದಯ ರೋಗದ ಪ್ರಮುಖ ಕಾರಣಗಳು. ಇಂತಹ ಸಂದರ್ಭದಲ್ಲಿ ಜನರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ, ಹೃದಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಹೃದಯದ ನಾಡಿಯನ್ನು ನೀವು ಅರಿತುಕೊಳ್ಳಿ, ಈ ಘೋಷವಾಕ್ಯದೊಂದಿಗೆ ಹೃದಯ ಆರೋಗ್ಯದ ಮಹತ್ವವನ್ನು ಸಾರುವ ಉದ್ದೇಶವಾಗಿದೆ ಎಂದು ಹೇಳಿದರು.
ಪೌರ ಕಾರ್ಮಿಕರಿಗೆ ನಿವೇಶನ ದೊರಕಿಸಲು ಕ್ರಮ
ಪೌರ ಕಾರ್ಮಿಕ ರವಿಕುಮಾರ್‌ರವರು ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವುದು ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದೆ. ಕೂಡಲೆ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದ ಸಂದರ್ಭದಲ್ಲಿ, ಮುಖ್ಯಾಧಿಕಾರಿ ಪ್ರತಿಕ್ರಿಯಿಸಿ, ನಿವೇಶನ ಹಂಚಿಕೆ ಕುರಿತು ಇದ್ದ ಕೆಲವು ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ ಜಿಲ್ಲಾಧಿಕಾರಿಗಳ ಲಾಗಿನ್‌ಗೆ ಅಪಲೋಡ್ ಮಾಡಲಾಗಿದೆ. ಸದ್ಯದಲ್ಲೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ನಿವೇಶನ ಹಂಚಿಕೆ ಕುರಿತು ಮನವಿ ಮಾಡಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳು ಮನವಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.
ಪತ್ರಕರ್ತರ ಸಂಘದದಲ್ಲಿ ನಾಳೆ ಡಿವಿಜಿ ಸಭಾಂಗಣ ಉದ್ಘಾಟನೆ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಡಿವಿಜಿ ಸಭಾಂಗಣದ ಉದ್ಘಾಟನೆಯು ಸೆಪ್ಟಂಬರ್ ೩೦ರ ಮಂಗಳವಾರ ಶಾಸಕ ಎಚ್.ಪಿ. ಸ್ವರೂಪ್ ಅವರು ನೆರವೇರಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ. ಎಚ್. ವೇಣುಕುಮಾರ್ ತಿಳಿಸಿದರು. ಈ ಸಮಾರಂಭದ ಕಾರ್ಯಕ್ರಮಕ್ಕೆ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಪತ್ರಿಕೆಯ ಎಲ್ಲಾ ಸಂಪಾದಕರು, ಎಲ್ಲಾ ವರದಿಗಾರರು, ಛಾಯಾಗ್ರಹಕರು, ಸಮಸ್ತ ಪತ್ರಕರ್ತರು ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಅರಣ್ಯ ಇಲಾಖೆ ಒತ್ತುವರಿ ಜಾಗ ತೆರವು ಆದೇಶಕ್ಕೆ ಸ್ವಾಗತ
ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಒತ್ತುವರಿ ಜಾಗಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದು ಅರಣ್ಯ ರಕ್ಷಣೆಗೆ ಒಳ್ಳೆಯ ಹೆಜ್ಜೆಯಾದರೂ, ಕಾನೂನು ಬದ್ಧವಾಗಿ ಸಣ್ಣ ಹಿಡುವಳಿದಾರ ರೈತರಿಗೆ ಮಂಜೂರಾಗಿರುವ ಜಾಗವನ್ನು ಅವರಿಗೆ ಬಿಟ್ಟುಕೊಡಬೇಕು. ಅಕ್ರಮವಾಗಿ ಕಬಳಿಸಿದ ಜಾಗವನ್ನಷ್ಟೇ ತೆರವು ಮಾಡಬೇಕು ಎಂದು ಒತ್ತಾಯಿಸಿದರು. ಹಾಸನ ಜಿಲ್ಲೆಯಲ್ಲಿ ಒಟ್ಟು ೨,೧೧,೭೬೩ ಎಕರೆ ಅರಣ್ಯ ಪ್ರದೇಶವಿದ್ದು, ಅದರಲ್ಲೂ ಸುಮಾರು ೩೦,೦೦೦ ಎಕರೆ ಪ್ರದೇಶ (ಶೇಕಡಾ ೧೫ರಷ್ಟು) ಒತ್ತುವರಿಯಾಗಿದ್ದು, ಕೆಲವನ್ನು ಸರ್ಕಾರವೇ ರೈತರಿಗೆ ಮಂಜೂರು ಮಾಡಿದೆ. "ಇವುಗಳಲ್ಲಿ ಮಂಜೂರಾದ ಜಾಗಗಳನ್ನು ಹೊರತುಪಡಿಸಿ ಉಳಿದ ಅಕ್ರಮ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಬೇಕು " ಎಂದು ಶಿವರಾಂ ಅಭಿಪ್ರಾಯಪಟ್ಟರು.
ಶರನ್ನವರಾತ್ರಿಯ ಪ್ರಯುಕ್ತ ಲಲಿತ ಸಹಸ್ರನಾಮ ಪಾರಾಯಣ
ಶ್ರೀ ಶಂಕರ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಠದಲ್ಲಿ ನಡಡದ ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಲಲಿತಾ ಹೋಮದಲ್ಲಿ ಆಶೀರ್ವಚನ ನೀಡಿ ವೇದಬ್ರಹ್ಮ ಕೆ. ಆರ್. ಮಂಜುನಾಥ್ ಮಾತನಾಡಿ, ಶರನ್ನವರಾತ್ರಿ ದೇವಿ ಆರಾಧನೆಯ ಪ್ರಯುಕ್ತ. ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಲಲಿತಾ ಹೋಮವು ಭಕ್ತರ ಮನಸ್ಸಿಗೆ ಶಾಂತಿ ಹಾಗೂ ಸಮಾಜಕ್ಕೆ ಸೌಹಾರ್ದ ತರುತ್ತದೆ. ಶಕ್ತಿಯ ಆರಾಧನೆ ಮಾನವನ ಆಂತರಿಕ ಶಕ್ತಿಯನ್ನು ಜಾಗೃತಗೊಳಿಸುತ್ತದೆ ಹಾಗು ಪ್ರತಿದಿನ ಹೋಮಗಳು ನಡೆಸಲಾಗುತ್ತದೆ. ದೇಶವು ಶಾಂತಿ, ನೆಮ್ಮದಿಯಿಂದ ಇದ್ದು, ನಾಡು ಮಳೆ, ಬೆಳೆ ಬಂದು ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿ ಹೋಮ ನಡೆಸಿದ್ದೇವೆ ಎಂದು ತಿಳಿಸಿದರು.
ತೇಜಸ್ವಿ ಕೊಡುಗೆಗಳು ಇಂದಿನವರಿಗೆ ಮಾರ್ಗದರ್ಶಿ
ಕನ್ನಡದ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬರಾಗಿದ್ದ ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡಕ್ಕೆ ನೀಡಿದ ಕೊಡುಗೆ ಅಪಾರವಾದುದು. ಅವರ ಬರಹ, ಶ್ರದ್ಧೆ, ಸರಳ ಬದುಕು ಇಂದಿನವರಿಗೆ ಮಾರ್ಗದರ್ಶಿ ಆಗಿದೆ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಂ.ಮಾದಯ್ಯ ತಿಳಿಸಿದರು. ತೇಜಸ್ವಿ ಯಾವುದೇ ಪಂಥಕ್ಕೆ ಸಿಲುಕದ ಅಪರೂಪದ ಲೇಖಕ. ಸಾಮಾನ್ಯ ಪಾತ್ರಗಳ ಮೂಲಕ ವೈಚಾರಿಕ ಸಂದೇಶವನ್ನು ಸಾರಿದವರು. ಮಂತ್ರ ಮಾಂಗಲ್ಯದ ಮೂಲಕ ಸರಳ ಮದುವೆಯ ಪರಂಪರೆಗೆ ನಾಂದಿ ಹಾಡಿದವರು. ಆ ಕಾಲದ ಎಲ್ಲ ಹೋರಾಟಗಳಿಗೆ ಪ್ರೇರಣೆ ಆಗಿದ್ದರು ಎಂದು ಸ್ಮರಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved