• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರನ್ನ ನಂಬಿ ಆದರೆ ಮೂಢನಂಬಿಕೆ ಬೇಡ
ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಕುತೂಹಲ ಹಾಗೂ ಪರಿಹಾರವನ್ನು ಕಂಡುಕೊಳ್ಳುವ ದೃಷ್ಟಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಭಾರತ ಜ್ಞಾನ ವಿಜ್ಞಾನ ಸಮಿತಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಜಿಲ್ಲಾ ಬಿಜೆಎಸ್‌ವಿ ಉಪಾಧ್ಯಕ್ಷೆ ಸಿ ಸೌಭಾಗ್ಯ ಹೇಳಿದರು. ರಸಪ್ರಶ್ನೆಯ ಮೂಲಕ ಮಕ್ಕಳಲ್ಲಿನ ಹಲವು ಪ್ರಶ್ನೆಗಳಿಗೆ ಕುತೂಹಲವನ್ನು ಸಹ ಪರಿಹಾರ ಮಾಡಿದರಲ್ಲದೆ ತಮ್ಮ ವತಿಯಿಂದ ಮಕ್ಕಳಿಗೆ ಕಿರು ಕಾಣಿಕೆ ನೀಡಿ ಪ್ರೋತ್ಸಾಹಿಸಿದರು.
ಕೃಷ್ಣ ಕಾನೂನು ಕಾಲೇಜಿಗೆ ನ್ಯಾಕ್‌ನಿಂದ ಮಾನ್ಯತೆ
ಎಂ. ಕೃಷ್ಣ ಕಾನೂನು ಕಾಲೇಜಿಗೆ ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನ ನ್ಯಾಕ್ ಪರಿಶೀಲನೆ ನಂತರ ಬಿ ಗ್ರೇಡ್ ಮಾನ್ಯತೆ ನೀಡಿದೆ ಎಂದು ಪ್ರಾಂಶುಪಾಲ ಡಾ. ಶ್ರೀನಿವಾಸ್ ತಿಳಿಸಿದರು. ಈ ಗ್ರೇಡ್ ಮುಂದಿನ 5ವರ್ಷಗಳ ಕಾಲ ಮುಂದುವರಿಯಲಿದ್ದು, ಕಾಲೇಜಿನ ವಾತಾವರಣ, ವಿದ್ಯಾರ್ಥಿಗಳಿಗೆ ಕಾಲೇಜಿನ ಸೌಕರ್ಯಗಳು, ಬೋಧನ ಕೌಶಲ್ಯ, ವಿದ್ಯಾರ್ಥಿಗಳ ಚಟುವಟಿಕೆ, ಗ್ರಂಥಾಲಯ ವ್ಯವಸ್ಥೆ, ಶಿಸ್ತು, ಹಲವಾರು ವಿಚಾರಗಳನ್ನ ಪರಿಶೀಲಿಸಿದ ತಂಡವು ಮೆಚ್ಚುಗೆ ವ್ಯಕ್ತಪಡಿಸಿದೆ.
ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ
ಮನೆಗೆ ನುಗ್ಗಿ 15 ಲಕ್ಷ ರು.ನಗದು ಹಾಗೂ ಸುಮಾರು 7 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣ ಎದುರು ಕೆ.ಎಚ್.ಬಿ. ಬಡಾವಣೆಯಲ್ಲಿ ಸಂಭವಿಸಿದೆ. ಕಳ್ಳರು ಮನೆ ಪ್ರವೇಶ ಮಾಡಲು ಕಬ್ಬಿಣದ ಆಯುಧದಿಂದ ಮುಂಬಾಗಿಲು ಮೀಟಿ ಕಳ್ಳತನ ಮಾಡಿರುವುದು ಕೇವಲ ನಾಲ್ಕೈದು ಗಂಟೆಗಳಲ್ಲಿ ಮಾತ್ರ ಈ ಘಟನೆ ನಡೆದಿದ್ದು, ನಗದು, ಚಿನ್ನಾಭರಣ ಸೇರಿ ಒಟ್ಟು ಮೌಲ್ಯ 22 ಲಕ್ಷ ರು. ಎಂದು ಅಂದಾಜಿಸಲಾಗಿದೆ. ಚೋರ ಎಲ್ಲವನ್ನು ಬ್ಯಾಗಿನಲ್ಲಿ ಹಾಕಿಕೊಂಡು ಬೈಕ್‌ನಲ್ಲಿ ಪರಾರಿಯಾಗುವ ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜಯಕರ್ನಾಟಕ ಹೋರಾಟಕ್ಕೆ ಕುಮಾರಸ್ವಾಮಿ ಬೆಂಬಲ
ಕಾಡಾನೆಯಿಂದ ಶಾಶ್ವತ ಪರಿಹಾರಕ್ಕಾಗಿ ನಡೆಸುತ್ತಿರುವ ಐದನೇ ದಿನದ ಹೋರಾಟ ಸ್ಥಳಕ್ಕೆ ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಆಗಮಿಸಿ ಕೆಲ ಸಮಯ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಫೆಬ್ರವರಿ ಒಳಗೆ ಆನೆ ಕಾರಿಡರ್ ಮಾಡುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳದಿದ್ದರೇ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಐದನೇ ದಿವಸ ಹೋರಾಟ ಕೊನೆಗೊಳಿಸಿದ ವೇಳೆ ಜಯ ಕರ್ನಾಟಕ ಸಂಘಟನೆ ಎಚ್ಚರಿಕೆ ನೀಡಿದ್ದಾರೆ. ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಜಯಕರ್ನಾಟಕ ಹೋರಾಟದ ಕೊನೆಯ ದಿವಸ ಸ್ಥಳಕ್ಕೆ ಆಗಮಿಸಿ ತಾವು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪೋಷಕರು ಮಕ್ಕಳಿಗೆ ಕ್ರೀಡೆಗೂ ಪ್ರೋತ್ಸಾಹಿಸಬೇಕು
ಶಾಲೆಗಳಿಗೆ ಮಕ್ಕಳನ್ನು ಕೇವಲ ಅಂಕಗಳಿಕೆಗಾಗಿ ಮಾತ್ರ ಸೇರಿಸುವ ಪೋಷಕರ ಮನಸ್ಥಿತಿ ಬದಲಾಗಬೇಕು. ಪೋಷಕರು ಓದುವುದರ ಜೊತೆಗೆ ಕ್ರೀಡೆಗೂ ಕೂಡ ಸಮಯ ಕೊಡಬೇಕು ಎಂದು ಟೈಮ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ಸಲಹೆ ನೀಡಿದರು. ತಮ್ಮ ಮಕ್ಕಳು ಹೆಚ್ಚು ಅಂಕ ಪಡೆದು ಪತ್ರಿಕೆಗಳಲ್ಲಿ ಮಕ್ಕಳ ಭಾವಚಿತ್ರ ಬಂದರೆ ಅಷ್ಟೇ ಸಾಧನೆ ಎಂದುಕೊಳ್ಳುತ್ತಾರೆ. ಒಳ್ಳೆಯ ಅಂಕಗಳಿಕೆ ಮಾಡಿದರೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂದು ಭಾವಿಸುತ್ತಾರೆ, ಈ ಕಲ್ಪನೆ ತಪ್ಪು ಎಂದರು.
ವಕ್ಫ್ ಬೋರ್ಡ್‌ ಬಿಲ್ ತಿದ್ದುಪಡಿಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ
ಅಸಂವಿಧಾನಿಕ ವಕ್ಫ್ ಬೋರ್ಡ್‌ ಬಿಲ್ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಡಿ. 16ರ ಸೋಮವಾರ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ನವಲಗುಂದ್ ತಿಳಿಸಿದರು. ಗ್ರಾಮದೇವತೆ ಶ್ರೀ ಕರಿಯಮ್ಮ ದೇವಾಲಯದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಲಿದ್ದು ನಗರದ ಪಿ.ಪಿ. ವೃತ್ತದಲ್ಲಿ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ಈ ಹಿಂದೆ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ೧೬೦೦ ಕೋಟಿ ರು. ಗಳನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲವಾದರೆ ನಿಗಮಗಳನ್ನು ಮುಚ್ಚಿಬಿಡಿ ಎಂದು ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಘಟಕದಿಂದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ ೬೦೬೫ ಅರ್ಜಿಗಳು ಸಲ್ಲಿಕೆಯಾದರೂ ಒಂದು ಪೈಸೆ ಹಣವು ಕೂಡಾ ಬಿಡುಗಡೆ ಮಾಡದೇ ಇರುವುದು ಈ ರೀತಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಅನ್ಯಾಯವನ್ನು ಬಿಜೆಪಿ ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಮೋರ್ಚಾ ಬಲವಾಗಿ ಖಂಡಿಸುತ್ತದೆ ಎಂದರು.
ಬೇಲೂರು ಪುರಸಭೆ ಅಧ್ಯಕ್ಷ ವಿರುದ್ಧ ವಾಮಾಚಾರ
ನಾನು ಯಾರಿಗೂ ಕೇಡು ಬಗೆಯುವನಲ್ಲ, ನನ್ನ ಪಕ್ಷದವರೇ ನನ್ನ ವಿರುದ್ಧ ಮಾತನಾಡುತ್ತಿದ್ದು ಅಭಿವೃದ್ಧಿ ಕೆಲಸಗಳಿಗೂ ನನ್ನ ಪಕ್ಷದ ಸದಸ್ಯರೇ ಅಡ್ಡಗಾಲು ಹಾಕುತ್ತಿದ್ದಾರೆ. ಇಂತಹ ಮಾಟ ಮಂತ್ರಗಳಿಗೆ ಹೆದರುವವನು ನಾನಲ್ಲ. ಭಗವಂತನ ಆಶೀರ್ವಾದ ನನಗಿದೆ. ಇದಕ್ಕೆಕಾಲವೇ ಉತ್ತರ ಕೊಡುತ್ತದೆ. ತಮ್ಮ ಕೊಠಡಿ ಸಮೀಪ ಇರುವ ಮರಕ್ಕೆ ಮಂತ್ರಿಸಿದ ನಿಂಬೆಹಣ್ಣು, ತಾಯತ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾಕಿದ್ದು, ವಾಮಾಚಾರ ನಡೆಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್ ಅಶೋಕ್ ದೂರಿದ್ದಾರೆ.
ಗೋಬಿ ಮಾರುವ ವ್ಯಕ್ತಿಗೆ ಇರುವಷ್ಟು ನೆಮ್ಮದಿ ನಮಗೆ ಸರ್ಕಾರಿ ನೌಕರರಿಗೆ ಇಲ್ಲ
ಅಧಿಕಾರಿಗಳ ಒತ್ತಡದಿಂದ ಹೆಂಡತಿ, ಮಕ್ಕಳನ್ನು ದೇವಾಲಯಕ್ಕೂ ಕರೆದುಕೊಂಡು ಹೋಗುವಷ್ಟು ಯೋಗ್ಯತೆ ಇಲ್ಲವಾಗಿದೆ. ಗೋಬಿ ಮಂಚೂರಿ ಮಾರಾಟ ಮಾಡುವ ವ್ಯಕ್ತಿಗೆ ಇರುವಷ್ಟು ನೆಮ್ಮದಿ ಇಂದು ನಮಗೆ ಸರ್ಕಾರಿ ನೌಕರರಿಗೆ ಇಲ್ಲವೆಂದು ಬೇಸರ ಹಾಗೂ ಅಸಹಾಯಕತೆಯಿಂದ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ನುಡಿದರು. ಜಿಲ್ಲಾ ನೌಕರರ ಸಮಸ್ಯೆ ಕುರಿತು ದನಿ ಎತ್ತಿ ಸಮರ್ಪಕವಾಗಿ ಮಾತಾಡಬೇಕು ಮತ್ತು ಸರ್ಕಾರಿ ನೌಕರರ ನೋವು, ಅನುಭವಿಸುತ್ತಿರುವ ಸಂಕೀರ್ಣತೆ, ಬೇಡಿಕೆ ಹಾಗೂ ಅವರುಗಳ ಹಿತವನ್ನು ಸಮರ್ಪಕವಾಗಿ ಕಾಯಬೇಕು ಎಂದು ನೂತನ ಸದಸ್ಯರಿಗೆ ಸಲಹೆ ನೀಡಿದರು.
ಜನರು ಎಚ್ಐವಿ ಕಾಯಿಲೆ ಹರಡದಂತೆ ಜಾಗೃತರಾಗಿರಬೇಕು
ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಕ್ಕೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಚಂಪಾಶ್ರೀ, 2ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಎಂ.ರಘು, ತಾಲೂಕು ಆರೋಗ್ಯ ಅಧಿಕಾರಿ ಡಾ. ಪುಷ್ಪಲತಾ ಅವರು ಚಾಲನೆ ನೀಡಿದರು. ಶುದ್ಧೀಕರಿಸಿರುವಂತ ಹೊಸದಾದ ಸೂಜಿಯನ್ನು ಬಳಸಬೇಕು. ಪರೀಕ್ಷಿಸಿದ ರಕ್ತವನ್ನು ಸ್ವೀಕರಿಸಬೇಕು. ಈ ಎಲ್ಲಾ ವಿಧಾನಗಳನ್ನು ಅಳವಡಿಸುವುದರಿಂದ ಎಚ್ಐವಿ ಕಾಯಿಲೆಯನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved