• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾರಿಗೂ ನೋವಾಗದಂತೆ ಎಸ್‌ ಎಂ ಕೃಷ್ಣ ರಾಜಕಾರಣ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಇ. ಎಚ್. ಲಕ್ಷ್ಮಣ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಎರಡು ಜನ ಸರಳ ಸಜ್ಜನಿಕೆಯ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಮತ್ತು ಎಸ್.ಎಂ. ಕೃಷ್ಣ ಇಬ್ಬರಲ್ಲೂ ಕೂಡ ಒಂದು ರೀತಿಯ ಹೊಂದಾಣಿಕೆ ಇದ್ದವರು. ಯಾವತ್ತು ಕೂಡ ಯಾರಿಗೂ ನೋವಾಗದ ರೀತಿ ರಾಜಕಾರಣ ಮಾಡಿಕೊಂಡವರು ಎಂದರು.
ಆಲೂರು ನಿಲ್ದಾಣದಲ್ಲಿ ರೈಲು ನಿಲುಗಡೆ ರದ್ದು
ಕಳೆದ ಹಲವು ವರ್ಷಗಳ ಸಾರ್ವಜನಿಕರ ಹಾಗೂ ವಿವಿಧ ಸಂಘ ಸಂಸ್ಥೆಗಳ ನಿರಂತರ ಹೋರಾಟದ ಫಲವಾಗಿ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲುಗಳ ನಿಲುಗಡೆ ಮಾಡಲಾಗಿತ್ತು. ಆದರೆ ಕಳೆದ ಮೂರು ನಾಲ್ಕು ದಿನಗಳಿಂದ ಇಲಾಖೆಯವರು ಟಿಕೆಟ್ ಸಂಗ್ರಹದ ಹಣ ಕಡಿಮೆ ಆಯಿತು ಎಂಬ ಕಾರಣಕ್ಕೆ ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಿದ್ದಾರೆ. ಆದರೆ ಆಲೂರಿನಲ್ಲಿ ನಿಲುಗಡೆ ರದ್ದುಗೊಳಿಸಿರುವುದು ರೈಲ್ವೆ ಇಲಾಖೆಯವರಿಗೆ ತಿಳಿದಿದೆಯೋ ಇಲ್ಲವೋ ಅಥವಾ ಇಲಾಖೆಯವರಲ್ಲಿಯೇ ಸಂವಹನ ಇಲ್ಲವೇ ಎಂಬುದು ತಿಳಿಯದಾಗಿದೆ.
ಹಿಂದೂ ಸಮಾಜಕ್ಕೆ ಗಟ್ಟಿಯಾಗಿ ನಿಲ್ಲುವ ಶಕ್ತಿ ಇದೆ
ಹಿಂದೂ ಸಮಾಜ ಈ ಹಿಂದಿಗಿಂತಲೂ ಜಾಗೃತವಾಗಿದ್ದರು ಸಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಸವಾಲುಗಳನ್ನು ಎದುರಿಸಿ ಗಟ್ಟಿಯಾಗಿ ನಿಲ್ಲುವ ಶಕ್ತಿ ಹಿಂದೂ ಸಮಾಜಕ್ಕಿದೆ ಎಂದು ಪ್ರಾಂತ ಧರ್ಮ ಪ್ರಸಾರ ಪ್ರಮುಖ್ ಸುನೀಲ್ ಕಾರ್ಕಳ ಹೇಳಿದರು. ದೇಶದಲ್ಲಿ ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಭಯೋತ್ಪಾದನೆಗಳು ನಡೆಯುತ್ತಿದ್ದು ಜೊತೆಗೆ ಮತಾಂತರ ಸಹ ಮಾಡಲಾಗುತ್ತಿದೆ. ಈ ಎಲ್ಲಾ ಸವಾಲುಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇಂದು ಹಿಂದೂ ಸಮಾಜಕ್ಕಿದೆ ಎಂದರು.
ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ
ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶುಕ್ರವಾರ ಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.
ಬೆಂಬಲ ಬೆಲೆಯಡಿ ರಾಗಿ ಮಾರುವವರು ಡಿ.31ರೊಳಗೆ ನೋಂದಾಯಿಸಿಕೊಳ್ಳಿ
ಪ್ರಸಕ್ತ ಸಾಲಿಗೆ ಕನಿಷ್ಠ ಬೆಂಬಲ ಬೆಲೆಯಡಿ ಗುಣಮಟ್ಟದ ರಾಗಿ ಖರೀದಿಗಾಗಿ ತಾಲೂಕಿನ ರೈತರು ಡಿ.೩೧ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ರೈತರು ತಾಲೂಕು ಕೇಂದ್ರ ಸೇರಿದಂತೆ ನುಗ್ಗೇಹಳ್ಳಿ, ಉದಯಪುರ, ಶ್ರವಣಬೆಳಗೊಳ, ಬಾಗೂರು, ಮತ್ತು ಹಿರೀಸಾವೆಯ ಹೋಬಳಿಗಳಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಮತ್ತು ರೈತಸಂಪರ್ಕ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೇ ೫೦೭ ರೈತರು ನೋಂದಣಿ ಮಾಡಿಸಿಕೊಂಡಿದ್ದು, ಡಿ.೩೧ರವರೆಗೂ ನೋಂದಣಿಗೆ ಅವಕಾಶವಿದ್ದು, ಶೀಘ್ರು ನೋಂದಣಿಗೆ ಮುಂದಾಗಬೇಕು ಎಂದರು.
ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶಕ್ಕೆ ದಶಸೂತ್ರ
ಈ ಬಾರಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭೂತಪೂರ್ವ ಫಲಿತಾಂಶಕ್ಕೆ ಶಿಕ್ಷಣ ಇಲಾಖೆ ವತಿಯಿಂದ ದಶ ಸೂತ್ರಗಳನ್ನು ಅಳವಡಿಸಲಾಗಿದ್ದು, ಶಿಕ್ಷಕರು ಸಹಕರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಕೆ. ಪಾಂಡು ತಿಳಿಸಿದರು. ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಲ್ಲಾ ಶಾಲೆಗಳಲ್ಲೂ ಈ ಬಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜು ಗೊಳಿಸಲಾಗುತ್ತಿದ್ದು, ಈ ಬಾರಿಯ ಫಲಿತಾಂಶದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳು ಮುಚ್ಚುತ್ತಿರುವುದಕ್ಕೆ ಕಳವಳ
ಕನ್ನಡ ಭಾಷೆಯ ಬೆಳವಣಿಗೆಗೆ ಸಂವಿಧಾನದ ಸಹಾಯಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು. ಶುಕ್ರವಾರ ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ನಾಲ್ಕನೇ ತಾಲೂಕು ಕನ್ನಡ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಹಿಂದಿ ಭಾಷೆಗೆ ಸಂವಿಧಾನದ ಬಲ ಇರುವ ಕಾರಣ ವೇಗವಾಗಿ ಬೆಳಯುತ್ತಿದೆ. ಇದೇ ರೀತಿ ರಾಜ್ಯ ಸರ್ಕಾರ ಸಹ ಕನ್ನಡ ಬೆಳವಣಿಗೆಗೆ ಸಂವಿಧಾನ ಬಲ ನೀಡಬೇಕಿದೆ ಎಂದರು.
4ನೇ ದಿನಕ್ಕೆ ಕಾಲಿಟ್ಟ ಜಯ ಕರ್ನಾಟಕ ಪ್ರತಿಭಟನೆ
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಶಾಸಕರು ಹಾಗೂ ಸಂಸದರು ಒಗ್ಗಟ್ಟಿನಿಂದ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು ಮತ್ತು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ಆರ್‌. ಸೋಮೇಶ್ ಕರೆ ನೀಡಿದರು. ಜೈ ಕರ್ನಾಟಕ ಸಂಘಟನೆ ರೈತ ಪರ ಕೆಲಸ ಮಾಡುತ್ತಿದ್ದು ಜಿಲ್ಲಾಡಳಿತ ಧರಣಿ ಸ್ಥಳಕ್ಕೆ ಭೇಟಿ ನೀಡಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ನಿಟ್ಟಿನಲ್ಲಿ ಭರವಸೆ ನೀಡುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.
ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜೆ
ಹೊಳೆನರಸೀಪುರ ಪಟ್ಟಣದ ಕಂಚುಗಾರರ ಬೀದಿಯಲ್ಲಿರುವ ನೇಕಾರ ಕುರುಹಿನಶೆಟ್ಟಿ ಜನಾಂಗದ ಎದುರು ಮುಖದ ಶ್ರೀ ರಾಮಲಿಂಗಾಂಜನೇಯಸ್ವಾಮಿ ದೇವಾಲಯ, ತಾಲೂಕು ಆಫೀಸ್ ಹಿಂಭಾಗದ ರಿವರ್‌ ಬ್ಯಾಂಕ್ ರಸ್ತೆಯ ಬಲಿಜ ಜನಾಂಗದ ಶ್ರೀ ವೀರಾಂಜನೇಯ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ
ಸಮಾನ ಕೆಲಸಕ್ಕೆ ಸಮಾನ ವೇತನ ಎಂದು ಕಾಯ್ದೆ ಬಂದಿದ್ದರೂ ಕೂಡ ಮಲತಾಯಿ ಧೋರಣೆ ಮಾಡಿ ನಮಗೆ ಕೊಡುವಂತಹ ಸೌಲಭ್ಯಗಳು ಇದುವರೆಗೂ ಕೂಡ ಸಿಗುತ್ತಿಲ್ಲ. ಕೂಡಲೇ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಕೆ.ಆರ್‌. ಪುರಂ ಬಳಿ ಇರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರು ಶುಕ್ರವಾರ ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಬ್ಯಾಂಕ್ ಮುಂದೆ ಪ್ರತಿಭಟಿಸಿದರು. ಕ್ಯಾಶುಯಲ್ ಮತ್ತು ಹೊರಗುತ್ತಿಗೆ ನೌಕರರಿಗೆ ಆರೋಗ್ಯ ವಿಮಾ ಸೌಲಭ್ಯವನ್ನು ತಕ್ಷಣ ನೀಡಬೇಕು ಹಾಗೂ ಸಂರಕ್ಷಿತ ನೌಕರರನ್ನು ಮುಖ್ಯ ಕಚೇರಿಗೆ ಅಥವಾ ಸಂಘದ ಆಯ್ಕೆಯ ಸ್ಥಳಕ್ಕೆ ನೇಮಿಸಬೇಕು ಎಂದು ಆಗ್ರಹಿಸಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved