• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಹಿಂದೂ ದೇವಾಲಯಗಳ ಅರ್ಚಕರ ಸಂಘದ ಶ್ರೀಧರಮೂರ್ತಿ ಒತ್ತಾಯ
ಅರ್ಚಕರು ಮೃತರಾದರೆ ೨ ಲಕ್ಷ ರು. ಪರಿಹಾರ ಹಾಗೂ ಅರ್ಚಕರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ನೀಡಬೇಕು ಎಂದು ಚನ್ನರಾಯಪಟ್ಟಣ ತಾಲೂಕು ಹಿಂದೂ ದೇವಾಲಯಗಳ ಅರ್ಚಕರ ಸಂಘದ ಅಧ್ಯಕ್ಷ ಶ್ರೀಧರಮೂರ್ತಿ ತಿಳಿಸಿದರು. ಬೆಂಗಳೂರಿನಲ್ಲಿ ಆಯುಕ್ತ ಡಾ.ವೆಂಕಟೇಶ್ ಅವರನ್ನು ಭೇಟಿ ಮಾಡಿ ಮಾತನಾಡಿದರು.
ಪ್ರಸಕ್ತ ಸಮಾಜದಲ್ಲಿ ಮೌಲ್ಯ ಪ್ರಜ್ಞೆ ಕುಸಿಯುತ್ತಿದೆ: ಸಾಹಿತಿ ರೂಪಾ ಹಾಸನ
ಪ್ರಸಕ್ತ ಸಮಾಜದಲ್ಲಿ ಮೌಲ್ಯ ಪ್ರಜ್ಞೆ ಕುಸಿಯುತ್ತಿದ್ದು, ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ-ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ, ಸಾಹಿತಿ ಹಾಗೂ ಹೋರಾಟಗಾರರಾದ ರೂಪ ಹಾಸನ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಆಶಾ ಕಾರ್ಯಕರ್ತೆಯರ ಹಾಸನ ಜಿಲ್ಲಾ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪಿಒಪಿ ಗಣೇಶ ಮೂರ್ತಿ ವ್ಯಾಪಾರ ಮಾಡುವಂತಿಲ್ಲ
ಹಾಸನ ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಹಾಗೂ ಗೌರಿ ಗಣೇಶ ಮೂರ್ತಿಗಳ ತಯಾರಿಕರಿಗೆ ಮತ್ತು ಮಾರಾಟಗಾರರಿಗೆ ಈ ಬಾರಿಯ ಗೌರಿಗಣೇಶ ಹಬ್ಬದಲ್ಲಿ ಪ್ಲಾಸ್ಟರ್ ಆಫ್‌ ಪ್ಯಾರಿಸ್ (ಪಿ.ಒ.ಪಿ) ಮತ್ತು ವಿಷಕಾರಿ ಬಣ್ಣ ಲೇಪನದ ಗೌರಿಗಣೇಶ ವಿಗ್ರಹಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಸನ ನಗರಸಭಾ ವ್ಯಾಪ್ತಿಯಲ್ಲಿ ಈ ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ಪರಿಸರ ನಿಯಮಗಳನ್ವಯ ವಾಯು ಮತ್ತು ಜಲ ಮಾಲಿನ್ಯ ನಿಯಂತ್ರಣ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು. ಆದ್ದರಿಂದ ಪರಿಸರ ಸ್ನೇಹಿ ವಿಗ್ರಹಗಳನ್ನು ಮತ್ತು ಹಸಿರು ಪಟಾಕಿಗಳ ಬಳಕೆಯು ಸಾರ್ವಜನಿಕರ ಜವಾಬ್ದಾರಿ ಎಂದು ನಗರಸಭೆ ಆಯುಕ್ತರಾದ ನರಸಿಂಹಮೂರ್ತಿ ಎಚ್ಚರಿಕೆ ನೀಡಿದರು.
ಬೈಚನಹಳ್ಳಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ
ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೆ ಶುದ್ಧ ಕುಡಿಯುವ ನೀರು ವ್ಯವಸ್ಥೆ ಮತ್ತು ನೋಟ್‌ಬುಕ್ ವಿತರಿಸುವುದು ಪುಣ್ಯದ ಕೆಲಸ. ಅವಕಾಶ ಇದ್ದಾಗ ಇಂತಹ ಕೆಲಸಗಳನ್ನು ಮಾಡಬೇಕು ಎಂದು ಶಾಸಕ ಎ.ಮಂಜು ತಿಳಿಸಿದರು. ಬೈಚನಹಳ್ಳಿ ಪ್ರೌಢಶಾಲೆ ಆವರಣದಲ್ಲಿ ಗಾಂಧಿನಗರ ದಿವಾಕರ್ ಅವರು ನೀಡಿರುವ ನೋಟ್‌ಬುಕ್, ನೀರು ಶುದ್ಧೀಕರಣ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೊಂದು ವಿಶೇಷ ಕಾರ್ಯಕ್ರಮ. ದಾನ ಮಾಡುವ ಚಿಂತನೆ, ಮನಸ್ಸು ಎಲ್ಲರಿಗೂ ಬರುವುದಿಲ್ಲ. ಗಾಂಧಿನಗರ ದಿವಾಕರ್‌ ಅವರು ಶಾಲಾ ಮಕ್ಕಳಿಗೆ ನೀರು ಶುದ್ಧೀಕರಣ ಯಂತ್ರ ಮತ್ತು 20 ಸಾವಿರ ನೋಟ್‌ಬುಕ್ ನೀಡುತ್ತಿರುವುದು ಸಂತೋಷದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೃಷ್ಣನ ಜೀವನ ಎಲ್ಲರಿಗೂ ಮಾದರಿಯಾಗಲಿ
ಭಾರತ ಹಬ್ಬಗಳ ತವರೂರು. ಹಬ್ಬ ಮಾಡುತ್ತೇವೆ ಎಂದರೆ ಮನೆಯನ್ನೆಲ್ಲ ಸ್ವಚ್ಛಗೊಳಿಸುತ್ತೇವೆ. ಉಪವಾಸ ವ್ರತ ಇಟ್ಟುಕೊಳ್ಳುತ್ತಾರೆ. ತನು ಮನದ ಶುದ್ಧತೆಯನ್ನು ಮಾಡಿಕೊಳ್ಳುತ್ತಾರೆ. ಸತ್ಯತೆ ಶುದ್ಧತೆಗೆ ಜೀವನದಲ್ಲಿ ಹೆಚ್ಚಿನ ಬೆಲೆ ಸಿಗುತ್ತದೆ. ಆಧ್ಯಾತ್ಮಿಕ ಶಿಕ್ಷಣವನ್ನು ತಮ್ಮದಾಗಿಸಿಕೊಂಡರೆ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಬಹುದು. ಕೃಷ್ಣನ ಕೈಯಲ್ಲಿರುವ ಕೊಳಲು, ಕುಡಿಕೆಯಲ್ಲಿರುವ ಬೆಣ್ಣೆ ಜ್ಞಾನ ಸಂಪನ್ನತೆಯನ್ನು ತಿಳಿಸುತ್ತದೆ. ಕೃಷ್ಣನ ಜೀವನ ಎಲ್ಲರಿಗೂ ಮಾದರಿಯಾಗಲಿ ಎಂದು ಬ್ರಹ್ಮ ಕುಮಾರಿ ಸೇವಾ ಕೇಂದ್ರ ಸಂಚಾಲಕಿ ಬಿ.ಕೆ.ಕಾವೇರಿ ಹೇಳಿದರು.
ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಅಲ್ಪಸಂಖ್ಯಾತರ ಮುಖಂಡರಾದ ಐವನ್ ಡಿಸೋಜ ಅವರ ಮಾತುಗಳನ್ನು ತಿರುಚಿ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅವರಿಗೆ ಮತ್ತು ಅವರ ಕುಟುಂಬದವರಿಗೆ ಮಾನಸಿಕವಾಗಿ ನೀಡುತ್ತಿರುವ ಹಿಂಸೆ, ಕಿರುಕುಳ ಹಾಗೂ ವ್ಯಕ್ತಿಯ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಾಸನ ಕಾಂಗ್ರೆಸ್ ಸಮಿತಿ ತೀವ್ರವಾಗಿ ಒತ್ತಾಯಿಸುತ್ತೇವೆ ಎಂದರು.
ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮದ ಹೀರೆಕೆರೆ ಸಮೀಪದ ವಾಸದ ಮನೆಗಳಿಗೆ ತೆರಳುವ ರಸ್ತೆಯನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಳೆದ ಹತ್ತರು ವರ್ಷದಿಂದ ಹೀರೆಕೆರೆ ದಂಡೆಯಲ್ಲಿ ಬದಿಯಲ್ಲಿ ಸುಮಾರು ೧೦ಕ್ಕೂ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಇಲ್ಲಿನ ಪ್ರಮುಖ ಉದ್ಯೋಗ ಹೈನುಗಾರಿಕೆಯಾಗಿದೆ. ಬೆಳಿಗ್ಗೆ ಸಂಜೆ ಇಲ್ಲಿಂದ ಹಾಲು ತೆಗೆದುಕೊಂಡು ಡೇರಿಗೆ ಹಾಲು ಹಾಕಲು, ವಿದ್ಯಾರ್ಥಿಗಳು, ಮಕ್ಕಳು ವೃದ್ಧರು ಪರದಾಡುವಂತಾಗಿದೆ. ವಯೋವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೆಸರು ರಸ್ತೆಯಲ್ಲಿ ಸಾಧ್ಯವಾಗುತ್ತಿಲ್ಲ ಎಂದರು.
ಶ್ರೀಕೃಷ್ಣನ ಸಂದೇಶಗಳು ಸರ್ವಕಾಲಿಕ
ಶ್ರೀ ಕೃಷ್ಣ ಪರಮಾತ್ಮನು ನೀಡಿದಂತಹ ಸಂದೇಶಗಳು ಸಾರ್ವಕಾಲಿಕ ಸತ್ಯವಾಗಿದ್ದು, ಸರ್ವರೂ ಶ್ರೀ ಕೃಷ್ಣ ಸಂದೇಶಗಳನ್ನು ಪಾಲಿಸುವದರ ಮೂಲಕವಾಗಿ ತಮ್ಮ ಜೀವನವನ್ನು ಪಾವನ ಮಾಡಿಕೊಳ್ಳಬೇಕು. ಶ್ರೀ ಕೃಷ್ಣನು ಅನೇಕ ಅವತಾರಗಳಲ್ಲಿ ಜನಿಸಿ ಮನುಕುಲಕ್ಕೆ ಸಂದೇಶಗಳನ್ನು ನೀಡಿದ್ದಾನೆ. ನಾವು ಕೊನೆಯ ತನಕವೂ ಕೂಡ ಪರೋಪಕಾರಿ, ಸಹಬಾಳ್ವೆ, ಸಾಮರಸ್ಯದಿಂದ ಇರಬೇಕು. ಅಸೂಯೆ, ದ್ವೇಷಗಳನ್ನು ಬಿಟ್ಟು ನಾವೆಲ್ಲರೂ ಒಂದು ಎಂಬ ಭಾವನೆ ಮೂಡಬೇಕು ಎಂಬ ಸಂದೇಶ ನೀಡಿದ ಶ್ರೀ ಕೃಷ್ಣನು ದಾರ್ಶನಿಕ ವ್ಯಕ್ತಿ ಎಂದು ತಾಲೂಕು ಯಾದವ ಸಂಘದ ಗೌರವಾಧ್ಯಕ್ಷ ಅಣ್ಣೇಗೌಡ ಹೇಳಿದರು.
ಹತ್ತು ತಿಂಗಳ ಮಗುವಿಗೆ ಯಶಸ್ವಿ ಬೆನ್ನುಮೂಳೆ ಶಸ್ತ್ರಚಿಕಿತ್ಸೆ
ಹಾಸನದವರೇ ಆದ ದಂಪತಿಗೆ ಈಗ್ಗೆ ಹತ್ತು ತಿಂಗಳ ಹಿಂದೆ ಗಂಡು ಮಗು ಜನಿಸಿತ್ತು. ಗಂಡು ಸಂತಾನದಿಂದ ಕುಟುಂಬದವರೆಲ್ಲಾ ಸಂತೋಷದಿಂದಲೇ ಇದ್ದರು. ಆದರೆ, ಮಗು ಬೆಳೆಯುತ್ತಾ ಬೆಳೆಯುತ್ತಾ ಅದರ ಬೆನ್ನಿನ ಸೊಂಟದ ಭಾಗದಲ್ಲಿ ಜುಟ್ಟಿನ ರೀತಿಯಲ್ಲಿ ಒಂದಷ್ಟು ಕೂದಲು ಬೆಳೆಯತೊಡಗಿತ್ತು. ಈ ಕೂದಲು ನೋಡನೋಡುತ್ತಿದ್ದಂತೆ ಉದ್ದವಾಗಿ ಬೆಳೆಯುತ್ತಿತ್ತು. ಇದನ್ನು ಗಮನಿಸಿದ ಪೋಷಕರು ಮಂಜುನಾಥ ಆಸ್ಪತ್ರೆಗೆ ತೋರಿಸಿದ್ದು, ವೈದ್ಯರಾದ ಅಮೋಘ್‌ ಗೌಡ ಹಾಗೂ ತಂಡ ಸೂಕ್ತ ಶಸ್ತ್ರಚಿಕಿತ್ಸೆ ನಡೆಸಿದ್ದರಿಂದ ಮಗು ಭವಿಷ್ಯದಲ್ಲಿ ಎದುರಿಸಬೇಕಾದ ಅತ್ಯಂತ ಗಂಭೀರ ಸಮಸ್ಯೆಯಿಂದ ಪಾರಾಗಿದೆ.
ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಹಾಸ್ಟೆಲ್ ಪ್ರವೇಶಾತಿ, ಸಮರ್ಪಕ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹಾಸ್ಟೆಲ್‌ ಪ್ರವೇಶಾತಿಯನ್ನು ಆರಂಭಿಸಬೇಕೆಂದು ಮತ್ತು ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸುತ್ತೇವೆ ಎಂದರು. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿದ್ಯಾರ್ಥಿವೇತನಗಳು ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರೂ ಸಹ ವಿದ್ಯಾರ್ಥಿಗಳಿಗೆ ಕಳೆದ ೩ ವರ್ಷಗಳಿಂದ ಸಮರ್ಪಕವಾಗಿ ವಿದ್ಯಾರ್ಥಿ ವೇತನ ಬರದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ದೂರಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved