• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಹಕ್ಕುಗಳ ವೇದಿಕೆ ಹೆಸರಿನಲ್ಲಿ ಮಹಿಳೆಯಿಂದ ಮೋಸ
ಹಾಸನ ನಗರದ ಸಮೀಪ ವಿಜಯನಗರದ ವಾಸಿಯಾದ ಅನುಷಾ ಕೃಪಾ ಮತ್ತು ಇವರ ಸ್ನೇಹಿತರಾದ ಭುವನೇಶ್ವರಿ ಅಶ್ವಿನಿ, ದೇವರಾಜ್, ಗಫಾರ್, ಶಶಿ, ಅಭಿಷೇಕ್ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತನೆಂದು ಹೇಳಿಕೊಳ್ಳುವ ಸಯ್ಯದ್ ಏಜಾಜ್ ಇವರು ರೈತರಿಗೆ ಮೋಸ ಮಾಡಿ, ಕೋಟ್ಯಂತರ ರುಪಾಯಿ ಹಣವನ್ನು ಪಡೆದು ವಂಚಿಸಿದ್ದು, ನಮಗೆ ವಂಚಿಸಿರುವವರ ಮೇಲೆ ನಾವುಗಳು ಹಾಸನ ಪೆನ್ನನ್ ಮೊಹಲ್ಲಾ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ರವರಿಗೆ ದೂರು ನೀಡಲು ಹೋದಾಗ ಇನ್ಸ್‌ಪೆಕ್ಟರ್‌ರವರು ನಮ್ಮ ದೂರನ್ನು ಸ್ವೀಕರಿಸಿಲ್ಲ ಎಂದು ರೈತರು ಎಸ್‌ಪಿ ಮೊಹಮದ್‌ ಸುಜೀತಾರಿಗೆ ಮನವಿ ಸಲ್ಲಿಸಿದ್ದಾರೆ.
ಜೆಡಿಎಸ್ ಮೈತ್ರಿ ಧರ್ಮ ಪಾಲಿಸಿದೆ
ಹಾಸನ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದವರು ಮೈತ್ರಿ ಧರ್ಮವನ್ನು ಪಾಲನೆ ಮಾಡಿಲ್ಲ ಎಂದು ಮಾಜಿ ಶಾಸಕ ಪ್ರೀತಂ ಗೌಡರು ಹೇಳಿಕೆ ನೀಡಿದ್ದು, ನಾವು ಮೈತ್ರಿ ಧರ್ಮವನ್ನು ಪಾಲನೆ ಮಾಡಿದ್ದು, ಬಿಜೆಪಿಯವರಿಗೆ ಮೈತ್ರಿ ಧರ್ಮ ಏನೆಂದು ಗೊತ್ತಿಲ್ಲ ಎಂದು ಬಿಜೆಪಿ ಹೇಳಿಕೆಗೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡರು ತಿರುಗೇಟು ನೀಡಿದರು.
ವಿಮೆಗಾಗಿ ಬೇರೊಬ್ಬನನ್ನು ಕೊಲ್ಲಿಸಿದ ದಂಪತಿ
ವಿಮೆ ಹಣಕ್ಕಾಗಿ ಒಬ್ಬ ವ್ಯಕ್ತಿಯ ಬದಲಾಗಿ ಬೇರೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಅದನ್ನು ಅಪಘಾತ ಎಂದು ಬಿಂಬಿಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗಂಡಸಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಡಬಲ್ ಆಕ್ಸಿಡೆಂಟ್ ಬೆನಿಫಿಟ್ ಮಾಡಿಸಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಕೋಟಿಗಟ್ಟಲೆ ಹಣ ಬರುತ್ತದೆ ಎಂದು ತಿಳಿದು, ಯಾರೋ ಅಪರಿಚಿತ ವ್ಯಕ್ತಿಯನ್ನು ಕರೆತಂದು, ಆರೋಪಿಗಳು ಇತರರ ಸಹಾಯದಿಂದ ಅಪರಿಚಿತ ವ್ಯಕ್ತಿಯ ಮೇಲೆ ಲಾರಿಯನ್ನು ಹತ್ತಿಸಿ ಕೊಲೆ ಮಾಡಿ, ಅದನ್ನೇ ಮುನಿಸ್ವಾಮಿಗೌಡನ ಸಾವು ಎಂದು ಬಿಂಬಿಸಿ, ಇನ್ಸೂರೆನ್ಸ್ ಹಣವನ್ನು ಪಡೆಯಲು ಕೊಲೆ ಮಾಡಲಾಗಿರುವುದು ಬೆಳಕಿಗೆ ಬಂದಿದೆ.
ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ
ಬೇಲೂರು ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋ ಷ್ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು. ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ದಿನಮಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ನಾಗರಿಕರು ಸರ್ಕಾರಿ ಶಾಲೆಗಳೆಂದು ಕೀಳಾಗಿ ಕಾಣಬಾರದು ಎಂದರು.
ಮಳೆಗೆ ಕುಸಿದುಬಿದ್ದ ಶಿವಸಾಗರ ದೇವಸ್ಥಾನದ ಗೋಡೆ
ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಶಿವಸಾಗರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ದೇವಸ್ಥಾನದ ಮಣ್ಣಿನ ಗೋಡೆ ಕುಸಿದು ಬಿದ್ದಿದೆ.ಈ ಬಗ್ಗೆ ಕಳೆದ ಒಂದು ತಿಂಗಳ ಹಿಂದಿಯೇ ತಹಸೀಲ್ದಾರ್ ಹಾಗೂ ಸ್ಥಳೀಯ ಶಾಸಕರಿಗೆ ಮನವಿ ಪತ್ರ ಕೊಟ್ಟರೂ ಯಾರು ಕೂಡ ಗಮನಹರಿಸಿಲ್ಲ, ಇತ್ತ ತಿರುಗಿ ಸಹ ನೋಡಿಲ್ಲ. ಹಾಗಾಗಿ ಕೂಡಲೇ ಸಂಬಂಧಪಟ್ಟವರು ಸ್ಥಳ ಪರಿಶೀಲನೆ ನೆರವು ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮಸ್ಥರೆಲ್ಲ ಸೇರಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ತಿಳಿಸಿದರು.
ಇಂದು ದುಡ್ಡಿಗೆ ಜನರಲ್ಲಿ ಸಮಸ್ಯೆ ಇಲ್ಲ ನಗುವಿಗೆ ಸಮಸ್ಯೆ
ಬಸವಣ್ಣನವರು ಕಾಯಕವೇ ಕೈಲಾಸವೆಂದರು, ಕೈಲಾಸ ಕಾಣಬೇಕಾದರೇ ಶಿಸ್ತು, ಸಮಯ ಪ್ರಜ್ಞೆ, ನಿಷ್ಟೆ ಹಾಗೂ ತಾಳ್ಮೆ ಮುಖ್ಯವಾಗಿದೆ, ಇತ್ತೀಚಿನ ದಿನಗಳಲ್ಲಿ ಹಣದ ಹಿಂದೆ ಓಡುವವರ ಸಂಖ್ಯೆ ಹೆಚ್ಚಿದೆ. ಆದರೆ ಸೇವಾ ಮನೋಭಾವ ಕಾಣದಾಗಿದೆ. ಇಂದು ದುಡ್ಡಿಗೆ ಜನರಲ್ಲಿ ಸಮಸ್ಯೆ ಇಲ್ಲ, ಆದರೆ ನಗುವಿನ ಸಮಸ್ಯೆ, ನೆಮ್ಮದಿಯ ಬದುಕಿನ ಸಮಸ್ಯೆ ಹಾಗೂ ಅಸೂಯೆ ಸಮಸ್ಯೆ ಬಹಳವಾಗಿ ಕಾಡುತ್ತಿದೆ. ಇದು ತೊಲಗಬೇಕಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರಭುಶಂಕರ್‌ ಸಲಹೆ ನೀಡಿದರು.
ತಮ್ಮ ಮನೆ ಕೆಲಸದ ಮಹಿಳೆ ಮೇಲೆ ಪ್ರಜ್ವಲ್‌ ರೇಪ್‌ ದೃಢ -ವಿಡಿಯೋಗಳೂ ಸತ್ಯ : ವಿಶೇಷ ತನಿಖಾ ತಂಡ

ತಮ್ಮ ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಅವರ ಪುತ್ರ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ  ವಿಶೇಷ ತನಿಖಾ ತಂಡ (ಎಸ್‌ಐಟಿ) ಉಲ್ಲೇಖಿಸಿದೆ.

ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಡಿಸಿಗೆ ಮನವಿ
ಚನ್ನಕೇಶವ ದೇವಾಲಯ ಯುನೆಸ್ಕೋ ಸಂಸ್ಥೆಗೆ ಸೇರ್ಪಡೆಯಾಗಿದ್ದು ಪ್ರವಾಸಿಗರ ಸೌಕರ್ಯಗಳಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು. ಪಟ್ಟಣದಲ್ಲಿ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯ ಸಂಘಗಳ ಪ್ರಮುಖರುಗಳಿಂದ ಸಲಹೆ ಸಹಕಾರ ಸ್ವೀಕರಿಸಿ ಉತ್ತಮ ಆಡಳಿತ ನಡೆಸಲು ಚಿಂತನೆ ನಡೆಸಿದ್ದೇನೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ನನ್ನನ್ನೆ ಭೇಟಿ ಮಾಡಿ ಸಮಸ್ಯೆ ಪರಿಹರಿಸಿ ಕೊಳ್ಳಲಿ ಎಂದು ಪುರಸಭೆ ನೂತನ ಅಧ್ಯಕ್ಷ ಎ.ಆರ್‌.ಅಶೋಕ್ ತಿಳಿಸಿದ್ದಾರೆ.
ಬ್ರಹ್ಮಕುಮಾರಿ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ
ಕೊಣನೂರಿನ ಬ್ರಹ್ಮಕುಮಾರಿ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ ಮಹೋತ್ಸವ ಆಚರಿಸಲಾಯಿತು.ರಕ್ಷಾಬಂಧನವೂ ಭಾರತೀಯ ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರುವ ಆಧ್ಯಾತ್ಮಿಕ ಮೌಲ್ಯಗಳನ್ನು ಮತ್ತು ವಿಶ್ವಬಂಧುತ್ವವನ್ನು ಸರ್ವರಿಗೂ ನೀಡುವ ಅದ್ಭುತವಾದ ಹಬ್ಬವಾಗಿದೆ. ಕೊಣನೂರಿನ ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸನದ ಬಿ.ಕೆ. ಮೀನಾ ಅವರು ಮಾತನಾಡಿ, ಸಹೋದರತೆಯನ್ನು ಸಾರುವ ಪವಿತ್ರ ಹಬ್ಬ ಈ ರಕ್ಷಾಬಂಧನವಾಗಿದೆ. ನಮ್ಮಲ್ಲಿ ಸಕಾರಾತ್ಮಕ ಪರಿವರ್ತನೆಯನ್ನು ತಂದುಕೊಂಡು ಶ್ರೇಷ್ಠ ನಡವಳಿಕೆಯನ್ನು ಜೀವನದಲ್ಲಿ ಪಾಲಿಸುವ ಪ್ರತಿಜ್ಞೆಯನ್ನು ಕೈಗೊಳ್ಳುವ ದಿನವಾಗಿದೆ
ಕ್ರೀಡೆ ಏಕಾಗ್ರತೆ ಹಾಗೂ ಚಿಂತನಾ ಶಕ್ತಿ ಹೆಚ್ಚಿಸುತ್ತದೆ
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗುತ್ತದೆ. ಕಲಿಕೆಯಲ್ಲಿ ಏಕಾಗ್ರತೆ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ಸಮಚಿತ್ತ ನಿರ್ಧಾರ ಕೈಗೊಳ್ಳಲು ಕ್ರೀಡೆ ಮಹತ್ವದ ಪಾತ್ರ ಕೈಗೊಳ್ಳುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಅಭಿಪ್ರಾಯಪಟ್ಟರು. ಹಳ್ಳಿಮೈಸೂರು ಹೋಬಳಿ ಮಟ್ಟದ ೨೦೨೪-೨೫ನೇ ಸಾಲಿನ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಜೆಎಸ್‌ಎಸ್ ಸಂಸ್ಥೆಯು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸುವ ಜತೆಗೆ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದಿದೆ ಎಂದು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved