ಮಾನವ ಹಕ್ಕುಗಳ ವೇದಿಕೆ ಹೆಸರಿನಲ್ಲಿ ಮಹಿಳೆಯಿಂದ ಮೋಸಹಾಸನ ನಗರದ ಸಮೀಪ ವಿಜಯನಗರದ ವಾಸಿಯಾದ ಅನುಷಾ ಕೃಪಾ ಮತ್ತು ಇವರ ಸ್ನೇಹಿತರಾದ ಭುವನೇಶ್ವರಿ ಅಶ್ವಿನಿ, ದೇವರಾಜ್, ಗಫಾರ್, ಶಶಿ, ಅಭಿಷೇಕ್ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತನೆಂದು ಹೇಳಿಕೊಳ್ಳುವ ಸಯ್ಯದ್ ಏಜಾಜ್ ಇವರು ರೈತರಿಗೆ ಮೋಸ ಮಾಡಿ, ಕೋಟ್ಯಂತರ ರುಪಾಯಿ ಹಣವನ್ನು ಪಡೆದು ವಂಚಿಸಿದ್ದು, ನಮಗೆ ವಂಚಿಸಿರುವವರ ಮೇಲೆ ನಾವುಗಳು ಹಾಸನ ಪೆನ್ನನ್ ಮೊಹಲ್ಲಾ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ರವರಿಗೆ ದೂರು ನೀಡಲು ಹೋದಾಗ ಇನ್ಸ್ಪೆಕ್ಟರ್ರವರು ನಮ್ಮ ದೂರನ್ನು ಸ್ವೀಕರಿಸಿಲ್ಲ ಎಂದು ರೈತರು ಎಸ್ಪಿ ಮೊಹಮದ್ ಸುಜೀತಾರಿಗೆ ಮನವಿ ಸಲ್ಲಿಸಿದ್ದಾರೆ.