• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒತ್ತುವರಿ ತೆರವುಗೊಳಿಸಿ ಹಳ್ಳಿಸಂತೆ ಮಾರುಕಟ್ಟೆ ನಿರ್ಮಿಸಲಿ
ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದ ಸರ್ವೆ ನಂಬರ್ ೧೩ರಲ್ಲಿರುವ ೩೦ ಗುಂಟೆ ಸಂತೆ ಮೈದಾನದ ಜಾಗ ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸಿ ನಂತರ ಹಳ್ಳಿಸಂತೆ ಮಾರುಕಟ್ಟೆ ನಿರ್ಮಾಣ ಮಾಡಬೇಕು ಹಾಗೂ ಒತ್ತುವರಿ ಮಾಡಿರುವವರಿಗೆ ಹಾಗೂ ತಪ್ಪಿತಸ್ಥ ಅಧಿಕಾರಿಗಳನ್ನು ಜೈಲಿಗಟ್ಟಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗರಾಜು ಅರೇಹಳ್ಳಿ ಆಗ್ರಹಿಸಿದರು. ಅರೇಹಳ್ಳಿಯಲ್ಲಿ ಮೂರು ಬಾರಿ ಪ್ರತಿಭಟನೆ ನಡೆಸಿದರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಮುಂದಿನ ದಿನಗಳಲ್ಲಿ ಹಳ್ಳಿ ಸಂತೆ ನಿರ್ಮಾಣ ಮಾಡುತ್ತಿರುವ ಸ್ಥಳದಲ್ಲಿಯೇ ಅಹೋರಾತ್ರಿ ಧರಣಿ ಮಾಡುವ ಕುರಿತು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದರು.
ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನಾಳೆ ಹನುಮ ಜಯಂತಿ
ನೂತನವಾಗಿ ಪ್ರತಿಷ್ಠಾಪಿಸಲ್ಪಟ್ಟಿರುವ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿ.೧೩ರಂದು ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳು ಜರುಗಲಿವೆ. ಬೆಳಗ್ಗೆ ೭ರಿಂದ ಅಭಿಷೇಕ, ಮಹಾಪೂಜೆ ನಂತರ ೧೦ ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. ಮಧ್ಯಾಹ್ನ ೧೧ ಗಂಟೆಗೆ ಸುಗಮ ಸಂಗೀತ ಏರ್ಪಡಿಸಲಾಗಿದ್ದು, ಪ್ರಸಾದ ವಿನಿಯೋಗದ ನಂತರ, ಸಂಜೆ ೪.೩೦ರಿಂದ ಶ್ರೀ ಸ್ವಾಮಿಯವರ ದಿವ್ಯ ಉತ್ಸವವು ಬೃಹತ್ ಮಂಟಪದ ಅಲಂಕಾರ ಮತ್ತು ಡಿಜೆ ಸೌಂಡ್ಸ್‌ನೊಂದಿಗೆ ಭಕ್ತರ ಸಮ್ಮುಖದಲ್ಲಿ ಪಟ್ಟಣದಲ್ಲಿ ನಡೆಯಲಿದೆ.
ಬ್ಲಾಕ್‌ ಕಾಂಗ್ರೆಸ್‌ನಿಂದ ಮಾಜಿ ಸಿಎಂ ಕೃಷ್ಣ ನಿಧನಕ್ಕೆ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅಜಾತಶತ್ರು, ನೇರನುಡಿಯ ನಾಯಕ ಎಲ್ಲಾ ಪಕ್ಷದ ಹಿರಿಯ ಮುತ್ಸದ್ಧಿಗಳ ಜೊತೆ ಒಡನಾಟ ಹಾಗೂ ಉತ್ತಮ ಸ್ನೇಹ ಭಾಂದವ್ಯ ಹೊಂದಿದ್ದ ಸ್ವಚ್ಛ ರಾಜಕಾರಣಿ ಅಗಲಿರುವುದು ಕೇವಲ ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಹಲವಾರು ಮೈಲುಗಲ್ಲನ್ನು ಕಂಡರೂ ಅವರ ಉತ್ರಮ ಆಡಳಿತದ ಮೂಲಕ ರಾಜ್ಯದ ಜನತೆಗೆ ಮನಸಿನಲ್ಲಿ ಉಳಿದಿದ್ದಾರೆ.
ಅರೇಹಳ್ಳಿ ಆರೋಗ್ಯಕೇಂದ್ರದಲ್ಲಿ 24 ಗಂಟೆಯಲ್ಲಿ 8 ಹೆರಿಗೆ
ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 24 ಗಂಟೆಯಲ್ಲಿ 8 ಹೆರಿಗೆ ಮಾಡಿಸಿದ‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಮತಾರವರ ಕಾರ್ಯಕ್ಷಮತೆ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಮತಾರವರು ಒಂದೇ ದಿನದಲ್ಲಿ 4 ಸಾಮಾನ್ಯ, 3 ಹೆಚ್ಚಿನ ಹಾನಿ ಸಂಭವ ಹಾಗೂ ಒಂದು ಶಸ್ತ್ರಚಿಕಿತ್ಸೆ ಮೂಲಕ ಒಟ್ಟಾರೆಯಾಗಿ 8 ಹೆರಿಗೆಯನ್ನು ಮಾಡಿದ್ದು ಸಾರ್ವಜನಿಕ ವಲಯದಲ್ಲಿ ವೈದ್ಯೆಯ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ.
ಅವಧಿ ಮುಗಿದರೂ ಹಾಸ್ಟೆಲ್‌ಗಳಿಗೆ ಬಾರದ ದಿನಸಿ
ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಗಳ ಪಾಲಿಟೆಕ್ನಿಕ್ ಕಾಲೇಜು, ಇತರೆ ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ನಿಗದಿ ಪಡಿಸಿದ ಅವಧಿಗೆ ಪಡಿತರ ಪದಾರ್ಥಗಳು ಸರಬರಾಜು ಮಾಡದೇ ಗುತ್ತಿಗೆದಾರ ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಸ್ಟೆಲ್‌ಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿ ಆಹಾರ ಪದಾರ್ಥಗಳ ವ್ಯತ್ಯಾಸ ಕಂಡುಬಂದಲ್ಲಿ ಶಿಸ್ತುಕ್ರಮಕ್ಕೆ ಮುಂದಾಗುವ ಅಧಿಕಾರಿಗಳು ಇಡಿ ಜಿಲ್ಲೆಯ ಹಾಸ್ಟೆಲ್‌ಗಳಿಗೆ ಪಡಿತರ ಸರಬರಾಜು ಆಗದೆ ೧೦ ದಿನ ಕಳೆದರೂ ಸುಮ್ಮನಿರುವುದು ಅಸಮಾಧಾನ ಮೂಡಿಸಿದೆ.
ದ್ವಿಚಕ್ರ ವಾಹನದಲ್ಲಿ ಅಂಗನವಾಡಿ ಶಿಕ್ಷಕಿಯ ಅಯೋಧ್ಯೆ ಸಂಕಲ್ಪ ಯಾತ್ರೆಗೆ ಚಾಲನೆ
ಅಂಗನವಾಡಿ ಕೇಂದ್ರದ ಶಿಕ್ಷಕಿ ಹಾಗೂ ಹಿರಿಯರ ವಿಭಾಗದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು, ವಿಜಯಕುಮಾರಿ ಕೆ. ಅವರು ಏಕಾಂಗಿಯಾಗಿ ಟಿ.ವಿ.ಎಸ್. ಜ್ಯೂಪಿಟರ್‌ ದ್ವಿಚಕ್ರ ವಾಹನದಲ್ಲಿ ಅಯೋಧ್ಯೆ ಹಾಗೂ ನವದೆಹಲಿ ಭೇಟಿಯ ೩೦೫೧ ಕಿಲೋಮೀಟರ್ ದೂರದ ಸಂಕಲ್ಪ ಯಾತ್ರೆಗೆ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಚಾಲನೆ ನೀಡಿ ಶುಭ ಕೋರಿದರು.ತಮ್ಮ ಸಂಕಲ್ಪ ಯಾತ್ರೆಯನ್ನು ಆರಂಭಿಸಿದರು. ವಿಜಯ ಕುಮಾರಿ ಕೆ. ಅವರಿಗೆ ಪಟ್ಟಣದ ಹಲವರು ಆರ್ಥಿಕ ಸಹಾಯ ಹಸ್ತವನ್ನು ಸಹ ನೀಡಿ ಪ್ರೋತ್ಸಾಹಿಸಿದ್ದಾರೆ.
ಬಹುತೇಕ ಕಾರ್ಮಿಕರು ಶಾಸನಬದ್ಧ ಸೌಲಭ್ಯಗಳಿಂದ ವಂಚಿತರು
ಅಸಂಘಟಿತ ಕಾರ್ಮಿಕ ಕಾರ್ಡ್‌ ನೀಡಲಾಗುತ್ತಿದ್ದು, ಅದನ್ನು ಎಲ್ಲಾ ಕಾರ್ಮಿಕ ವರ್ಗದವರು ಪಡೆಯುವಂತೆ ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ವಿಜಯಕುಮಾರ್‌ ತಿಳಿಸಿದರು. ಪಟ್ಟಣದ ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಅಭಿಯಾನದಲ್ಲಿ ಕಾರ್ಮಿಕ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಸಾರಿಗೆ, ಟೈಲರ್‌ ಹಾಗೂ ಫೋಟೋಗ್ರಫಿ ಕಾರ್ಮಿಕರಿಗೆ ನೋಂದಣಿ ಮಾಡುವ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಲವತ್ತಕ್ಕೂ ಹೆಚ್ಚು ಕಾರ್ಮಿಕರಿಗೆ ನೋಂದಣಿ ಮಾಡಿಸಲಾಯಿತು.
ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ
ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಚಿಕಿತ್ಸೆ ನೀಡುವುದು ಅಗತ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ತಾಲೂಕಿನ ಹಿರೀಸಾವೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಎಲ್ಲಾ ವಿಭಾಗದ ಸಿಬ್ಬಂದಿ ಹೊಂದಾಣಿಕೆಯಿಂದ ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಬರೆದ ಪತ್ರ ಮತ್ತು ಆಸ್ಪತ್ರೆಯಲ್ಲಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ಮಕ್ಕಳ ಗ್ರಾಮಸಭೆಗೆ ಪಾಲ್ಗೊಳ್ಳದ ಅಧಿಕಾರಿಗಳು
ಇಲ್ಲಿನ ಕನಕ ಸಮುದಾಯ ಭವನದಲ್ಲಿ ಬಾಣವರ ಗ್ರಾಮ ಪಂಚಾಯಿತಿ ಮತ್ತು ಪ್ರಕೃತಿ ಫೌಂಡೇಶನ್ ವತಿಯಿಂದ ಮಕ್ಕಳ ವಿಶೇಷ ಹಕ್ಕುಗಳ ಗ್ರಾಮಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಸಭೆಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹೊರತುಪಡಿಸಿ ಯಾವ ಇಲಾಖೆಯ ಅಧಿಕಾರಿಯೂ ಸಹ ಪಾಲ್ಗೊಳ್ಳದಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಅಲ್ಲದೆ ಮಕ್ಕಳಿಗೆ ನಿರಾಸೆ ಉಂಟಾಗಿದೆ.
ಸರ್ಕಾರ ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ಕಲ್ಪಿಸಲಿ
ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ರೈತರು, ಬೆಳೆಗಾರರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಬೇಲೂರು ತಾಲೂಕಿನ ಬಿಕ್ಕೋಡಿನಿಂದ ಬೈಕ್, ಆಟೋ ರ್‍ಯಾಲಿ ಮೂಲಕ ನಗರದ ಹೇಮಾವತಿ ಪ್ರತಿಮೆ ಮುಂದೆ ಐದು ದಿನದ ಪ್ರತಿಭಟನಾ ಧರಣಿ ಜಯಕರ್ನಾಟಕ ಸಂಘಟನೆಯು ಮಂಗಳವಾರದಿಂದ ಆರಂಭಿಸಲಾಯಿತು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved