• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಮಳಿಗೆಗಳ ಹರಾಜಿಗೆ ಸಕಲೇಶಪುರ ಪುರಸಭೆ ತೀರ್ಮಾನ
ಪುರಸಭೆಯ ಕೆಲವು ಕಟ್ಟಡಗಳ ಹರಾಜು ಮಾಡಲು ಪುರಸಭೆ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುರಸಭಾ ಅಧ್ಯಕ್ಷೆ ಜ್ಯೋತಿ ರಾಜ್‌ಕುಮಾರ್ ಹೇಳಿದರು. ಪುರಸಭಾ ವ್ಯಾಪ್ತಿಯೊಳಗೆ ೧೨ ವರ್ಷ ಅವಧಿ ಮುಗಿದಿರುವ ಮಳಿಗೆಗಳು, ಆಜಾದ್ ರಸ್ತೆಯಲ್ಲಿರುವ ಮೀನು ಹಾಗೂ ಕೋಳಿ ಮಾಂಸದ ಮಳಿಗೆಗಳು ಹಾಗೂ ಹಳೇ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ನೂತನ ಕಟ್ಟಡವನ್ನು ಬಾಡಿಗೆಗಾಗಿ ಹರಾಜು ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಕಲೇಶಪುರದಲ್ಲಿ ಕಾಫಿ ಧಾರಣೆ ಏರಿಕೆ: ಬೆಳೆಗಾರರ ಸಂತಸ
ಸಕಲೇಶಪುರದಲ್ಲಿ ಇತಿಹಾಸ ಸೃಷ್ಟಿಸಿರುವ ಕಾಫಿ ಧಾರಣೆ ಕಂಡು ಖುದ್ದು ಕಾಫಿ ಬೆಳೆಗಾರರೇ ಈಗ ದಿಗ್ಮೂಢರಾಗಿದ್ದಾರೆ. ಹೌದು ಕಾಫಿ ಮಾರುಕಟ್ಟೆ ಇತಿಹಾಸದಲ್ಲೇ ಪ್ರಸಕ್ತ ವರ್ಷದ ಮಾರುಕಟ್ಟೆಯ ಆರಂಭದ ಬೆಲೆ ಅಧಿಕವಾಗಿದ್ದು ಮತ್ತಷ್ಟು ಬೆಲೆ ಏರಿಕೆಯಾಗುವ ಎಲ್ಲ ಲಕ್ಷಣಗಳು ದಟ್ಟವಾಗಿದೆ.
ಡಿಸೆಂಬರ್‌ 17ಕ್ಕೆ ಬೆಳಗಾವಿ ಅಧಿವೇಶನದಲ್ಲಿ ಬುದ್ಧಿಮಾಂದ್ಯರ ಸತ್ಯಾಗ್ರಹ: ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಶಂಕರ್
ಶ್ರವಣದೋಷವುಳ್ಳವರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಯ ತಾಲೂಕಿನಲ್ಲಿರುವ ಕಿವುಡರು, ಬುದ್ದಿ ಮಾಂದ್ಯರು ಡಿ.೧೭ಕ್ಕೆ ಬೆಳಗಾವಿಗೆ ಬಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಎಚ್.ಶಂಕರ್ ತಿಳಿಸಿದರು. ಹಾಸನದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿ: ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ)
ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಹಮ್ಮಿಕೊಂಡು ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ಆತ್ಮ ತೃಪ್ತಿ ತಂದಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಅರಸೀಕೆರೆಯಲ್ಲಿ ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಮಕ್ಕಳ ಸುಪ್ತ ಮನಸ್ಸನ್ನು ಜಾಗೃತಗೊಳಿಸುತ್ತದೆ: ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ
ವಿದ್ಯಾರ್ಥಿಗಳು ಪ್ರಾಮಾಣಿಕತೆ ಮತ್ತು ಸಭ್ಯತೆಯನ್ನು ಕಲಿಯಬೇಕು. ಇದನ್ನು ಕಲಿಸುವುರಲ್ಲಿ ಪೋಷಕರು ಹಾಗೂ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ನಾವು ಉತ್ತಮ ಸಮಾಜವನ್ನು ನಿರ್ಮಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ಬೇಲೂರಿನಲ್ಲಿ ವಿಜ್ಞಾನ ಮತ್ತು ಕರಕುಶಲ ವಸ್ತುಪ್ರದರ್ಶನವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ನೆಲದ ಮೇಲುಂಡು ಷಷ್ಠಿ ಹರಕೆ ತೀರಿಸಿದ ಭಕ್ತರು
ಸುಬ್ರಹ್ಮಣ್ಯ ಷಷ್ಠಿ ಸಂದರ್ಭದಲ್ಲಿ ಸುಬ್ರಹ್ಮಣ್ಯದಲ್ಲಿ ರಥೋತ್ಸವ ನಡೆಯುವ ದಿನ ಮಲೆನಾಡು ಭಾಗದ ಬಹುತೇಕ ಕುಟುಂಬಗಳು ಷಷ್ಠಿ ಹಬ್ಬವನ್ನು ತರಕಾರಿ ಹಂಚುವ ಮೂಲಕ ಆಚರಿಸುತ್ತಾರೆ. ಎಲ್ಲಾ ತರಕಾರಿಯನ್ನು ಒಟ್ಟು ಸೇರಿಸಿ ಮಾಡಿದ ಅಡುಗೆಯಲ್ಲಿ ವಿಶೇಷ ರೋಗ ನಿರೋಧಕ ಶಕ್ತಿ ಅಡಗಿದೆ ಎಂದು ಹಿರಿಯರು ಹೇಳುತ್ತಾರೆ. ವಿಶೇಷವಾಗಿ ಇಷ್ಟಾರ್ಥ ಸಿದ್ಧಿಸಲೆಂದು ಹರಕೆ ಹೊತ್ತವರು ಪೂಜೆ ಸಲ್ಲಿಸಿದ ಬಳಿಕ ನೆಲದ ಮೇಲೆ ಊಟ ಸವಿಯುತ್ತಾರೆ. ಉಳಿದವರು ಬಾಳೆಎಲೆ ಮೇಲೆ ಊಟ ಸವಿಯುತ್ತಾರೆ.
ಜನ ಕಲ್ಯಾಣ ಸಮಾವೇಶವಲ್ಲ ಅದೊಂದು ಸ್ವಾರ್ಥ ಸಮಾವೇಶ
ಹಾಸನದಲ್ಲಿ ನಡೆದ ಸಮಾವೇಶವು ಸ್ವಾಭಿಮಾನಿ ಸಮಾವೇಶವು ಅಲ್ಲ, ಜನ ಕಲ್ಯಾಣ ಸಮಾವೇಶವು ಅಲ್ಲ ಅದೊಂದು ಸ್ವಾರ್ಥ ಸಮಾವೇಶ. ಕೇವಲ ನಮ್ಮ ಜೆಡಿಎಸ್ ನಾಯಕರನ್ನು ನಿಂದಿಸಲು ಮಾಡಿದ ಸಮಾವೇಶವಾಗಿದ್ದು, ಅವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಬೇಡವೆ? ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಹಾಸನದಲ್ಲಿ ನಡೆದದ್ದು ಸ್ವಾಭಿಮಾನಿ ಸಮಾವೇಶವು ಅಲ್ಲ, ಜನ ಕಲ್ಯಾಣ ಸಮಾವೇಶವು ಅಲ್ಲ ಅದೊಂದು ಸ್ವಾರ್ಥ ಸಮಾವೇಶ ಎಂದರು.
ಬಿಜೆಪಿ ಎಸ್ಸಿ ಘಟಕದಿಂದ ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆ
ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ೬೮ನೇ ಪರಿನಿಬ್ಬಾಣ ದಿನವನ್ನು ತಾಲೂಕು ಬಿಜೆಪಿ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಸಂವಿಧಾನ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಡಿಸೆಂಬರ್ ೯ರಂದು ನಡೆಸಲಾಗುವುದು ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಜಾನೆಕೆರೆ ಅಣ್ಣಪ್ಪ ಹೇಳಿದರು. ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಆಯುಷ್ಮಾನ್ ಎನ್ ಮಹೇಶ್ ಅವರು ಉದ್ಘಾಟಿಸಲಿದ್ದಾರೆ.
ಅತಿಯಾದ ಸಂಪತ್ತು ಆರೋಗ್ಯವನ್ನು ಹಾಳು ಮಾಡುತ್ತದೆ
ಸಂಪತ್ತು ಆರೋಗ್ಯವನ್ನು ಹಾಳು ಮಾಡುತ್ತದೆ. ಆರೋಗ್ಯವೇ ಸಂಪತ್ತು ಎಂಬುದನ್ನು ಗಮನದಲ್ಲಿಟ್ಟುಕೊಂಡು ಜೀವನ ನಡೆಸಬೇಕು ಎಂದು ಮಾಜಿ ಶಾಸಕ ಎ. ಟಿ. ರಾಮಸ್ವಾಮಿ ಅಭಿಪ್ರಾಯಪಟ್ಟರು. ಇಂದು ವೈದ್ಯಕೀಯ ಕ್ಷೇತ್ರದಲ್ಲಿ ನೂತನ ಅವಿಷ್ಕಾರಗಳು ಬರುತ್ತಿವೆ. ಎಲ್ಲ ರೋಗಕ್ಕೂ ಉತ್ತಮವಾದ ಚಿಕಿತ್ಸೆ ಇದೆ. ಪರಿಸರ ನಾಶ, ವಿಷಗಾಳಿ, ನೀರು ಕಲುಷಿತ, ಆಹಾರ ಬೆಳೆಯುವ ಮಣ್ಣಿಗೆ ಅತಿಯಾಗಿ ರಸಾಯನಿಕ ಬಳಕೆ, ಎಲ್ಲ ವಸ್ತುಗಳಲ್ಲೂ ಕಲಬೆರಕೆಯಿಂದ ಆರೋಗ್ಯ ಹಾಳಾಗಲು ಕಾರಣವಾಗುತ್ತಿದೆ ಎಂದರು.
ಕಾಡಾನೆಗೆ ರೆಡಿಯೋ ಕಾಲ‌ರ್ ಅಳವಡಿಕೆ ಕಾರ್ಯಾಚರಣೆ ಯಶಸ್ವಿ
ಕಾಡಾನೆಗೆ ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆಯ ಎರಡನೇ ದಿನವಾದ ಶನಿವಾರ ಅರಣ್ಯ ಇಲಾಖೆ ಶ್ರಮಕ್ಕೆ ಫಲ ದೊರಕಿದೆ. ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಓಲ್ಡ್ ಬೆಲ್ಟ್ ಗುಂಪಿನ ಹೆಣ್ಣಾನೆಗೆ ರೆಡಿಯೋ ಕಾಲ‌ರ್‌ ಅಳವಡಿಸಲಾಯಿತು. ರೆಡಿಯೋ ಕಾಲರ್ ಅಳವಡಿಸಿದ ಆನೆಯ ಆರೋಗ್ಯದ ಮೇಲೆ ಕೆಲಹೊತ್ತು ನಿಗಾವಹಿಸಿದ ನಂತರ ಕಾಫಿ ಎಸ್ಟೇಟ್‌ನಲ್ಲೇ ಬಿಡಲಾಯಿತು. ಸಾಕಾನೆ ಭೀಮನ ನೇತೃತ್ವದಲ್ಲಿ ನಡೆದ ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಏಕಲವ್ಯ, ಶ್ರೀರಾಮ, ಲಕ್ಷ್ಮಣ, ಕಂಜನ್, ಈಶ್ವರ ಸಾಕಾನೆಗಳು ಭಾಗಿಯಾಗಿದ್ದವು.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved