• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತೆ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ಅತ್ಯಾಚಾರದಿಂದ ಅಸ್ವಸ್ಥವಾಗಿರುವ ಐದು ವರ್ಷದ ಅಪ್ರಾಪ್ತ ಬಾಲಕಿಯು ತೀರ ಹಿಂದುಳಿದ ಮಡಿವಾಳ ಜನಾಂಗಕ್ಕೆ ಸೇರಿದ್ದಾಳೆ. ಬಾಲಕಿಯ ಮೇಲೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸೇವೆಯಲ್ಲಿ ವಾಸವಾಗಿರುವ ಗಂಗಾಧರ ಗೌಡ ಅಲಿಯಾಸ್ ಪರಮೇಶ್ವರ್‌ರವರ ಮಗ ಯಶಸ್ ಗೌಡ ಅತ್ಯಾಚಾರ ಎಸಗಿದ್ದು, ಹಾಸನ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುತ್ತಾಳೆ. ಈಕೆಯ ಪೋಷಕರು ಆರ್ಥಿಕವಾಗಿ, ಸಾಮಾಜಿಕವಾಗಿ ಅತ್ಯಂತ ಹಿಂದುಳಿದವರಾಗಿರುತ್ತಾರೆ. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ಮತ್ತು ಬಾಲಕಿಯ ಪೋಷಕರಿಗೆ ಸೂಕ್ತ ರಕ್ಷಣೆ ಕೊಟ್ಟು ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಡಿವಾಳ ಯುವ ಘಟಕ ಪ್ರತಿಭಟನೆ ನಡೆಸಿತು.
ಎಚ್ಐವಿ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಅರಿವು
ಸಂತೆಮರೂರು ಗ್ರಾಮ ಪಂಚಾಯತಿ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ದುಮ್ಮಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ಸುಮಾರು 65ಕ್ಕೂ ಹೆಚ್ಚು ಜನರು ಭಾಗವಹಿಸಿ ಮಧುಮೇಹ, ಅಧಿಕ ರಕ್ತದ ಒತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆ ಮಾಡಿಸಿಕೊಂಡರು. ಎಚ್ಐವಿ ಕಾಯಿಲೆ ಹರಡುವ ವಿಧಾನ ಹಾಗೂ ಎಚ್ಐವಿ ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಕ್ರಮಗಳನ್ನ ಕುರಿತು ಜನರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮ ಇದಾಗಿದೆ.
ನಗರಸಭೆಯಲ್ಲಿ ಕಾಂಗ್ರೆಸ್‌ ಅಧಪತ್ಯ ಸಾಧಿಸಿದ ಶಾಸಕ ಶಿವಲಿಂಗೇಗೌಡ
ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪರ-ವಿರೋಧ ಗೋಜಲಿನಲ್ಲಿ ಎಲ್ಲೂ ಗುರುತಿಸಿಕೊಳ್ಳದೇ ಸೈಲೆಂಟಾಗಿದ್ದುಕೊಂಡೇ ತಮ್ಮ ಆಪ್ತರ ಮೂಲಕ ನಗರಸಭೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊರಗೆ ಏನೇ ನಡೆಯಲಿ, ಒಳಗೆ ಹೀಗೆಯೇ ಆಗಲಿದೆ ಎಂದು ಎಲ್ಲರೂ ಲೆಕ್ಕಾಚಾರ ಮಾಡಿದಂತೆಯೇ ಜೆಡಿಎಸ್‌ನಿಂದ ಗೆದ್ದಿರುವ ಹಿರಿಯ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಎಂ, ಸಮೀವುಲ್ಲಾ ಅವರೇ ಮತ್ತೊಮ್ಮೆ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಮನೋಹರ್ ಮೇಸ್ತ್ರಿ ಆಯ್ಕೆಯಾದರು.
ಅರಸೀಕೆರೆ ನಗರಸಭೆ ಚುನಾವಣೆಯಂದೇ ಜೆಡಿಎಸ್‌ ಸದಸ್ಯ ರಾಜೀನಾಮೆ
ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತ ಅರಸೀಕೆರೆ ನಗರಸಭೆಯ ೧೦ನೇ ವಾರ್ಡಿನ ಜೆಡಿಎಸ್‌ ಸದಸ್ಯರಾದ ಕೆ.ಎಂ. ಈಶ್ವರಪ್ಪ ಅವರು ಅರಸೀಕೆರೆ ನಗರಸಭೆಗೆ ಚುನಾವಣೆ ನಡೆದ ಗುರುವಾರದಂದೇ ಜಿಲ್ಲಾಧಿಕಾರಿಗಳಿಗೆ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.೧೦ನೇ ವಾರ್ಡಿನ ನಗರಸಭೆ ಸದಸ್ಯರಾಗಿರುವ ನಾನು ೨೦೧೮ ರಿಂದ ೨೦೨೪ರವರೆಗೂ ಪ್ರಮಾಣಿಕವಾಗಿ ಜೆಡಿಎಸ್ ಪಕ್ಷದಲ್ಲಿ ಇದ್ದು, ಇಲ್ಲಿನ ಜೆಡಿಎಸ್ ಮುಖಂಡರು ಮಾಡಿದ ಬೇಸರದಿಂದ ನಗರಸಭೆಯ ನನ್ನ ಸದಸ್ವತ್ವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮೈದುಂಬಿ ಹರಿಯುವ ದ್ವಾರಸಮುದ್ರ ಕೆರೆ; ರೈತೆರಿಗೆ ಜೀವನಾಡಿ
ಇತಿಹಾಸ ಪ್ರಸಿದ್ಧ ಹಾಸನದ ದ್ವಾರಸಮುದ್ರ ಕೆರೆ ಮೈತುಂಬಿ ಕೋಡಿ ಹರಿಯುತ್ತಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆಯಾದಂತಹ ಹಳೆಬೀಡು ದೇವಾಲಯದ ಬಲಭಾಗದಲ್ಲಿದೆ. ಸುಮಾರು ೮೦೦ ಎಕರೆ ವಿಸ್ತೀರ್ಣದ ದ್ವಾರಸಮುದ್ರ ಕೆರೆ.
ಹಾಸನ ನಗರಸಭೆ: ಜೆಡಿಎಸ್‌ನ ಚಂದ್ರೇಗೌಡಗೆ ಅಧ್ಯಕ್ಷ ಸ್ಥಾನ
ಪೂರ್ವನಿಗದಿಯಂತೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ 9ನೇ ವಾರ್ಡ್‌ನ ಜೆಡಿಎಸ್‌ ಸದಸ್ಯ ಚಂದ್ರೇಗೌಡ ಅಧ್ಯಕ್ಷರಾಗಿಯೂ, ಬಿಜೆಪಿಯಿಂದ ಗೆದ್ದರೂ ಜೆಡಿಎಸ್‌ ಜತೆ ಗುರ್ತಿಸಿಕೊಂಡ ಲತಾದೇವಿ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ.
ಸಮಾಜದ ಪ್ರಜ್ಞಾವಂತಿಕೆಯಲ್ಲಿ ಕ್ಯಾಮೆರಾ ಪ್ರಮುಖ ಪಾತ್ರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಡಾ.ಎಚ್.ಎಲ್.ಮಲ್ಲೇಶ್ ಗೌಡ
ಸಮಾಜವನ್ನು ಪ್ರಜ್ಞಾವಂತಿಕೆಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕ್ಯಾಮೆರಾಗಳು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆಯಲ್ಲಿ ಮಾತನಾಡಿದರು.
ಜೀವನದಲ್ಲಿ ನಾರಾಯಣಗುರು ಆದರ್ಶ ರೂಢಿಸಿಕೊಳ್ಳಿ: ನೌಕರರ ಸಂಘದ ಈ.ಕೃಷ್ಣೇಗೌಡ
ಬ್ರಹ್ಮಶ್ರೀ ನಾರಾಯಣಗುರು ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವ ಮೂಲಕ ದೇಶವನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇವರಾಜು ಅರಸು ಸಾಮಾಜಿಕ ನ್ಯಾಯದ ಹರಿಕಾರ: ತಹಸೀಲ್ದಾರ್ ನಂದಕುಮಾರ್
ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ರಾಜ್ಯದ ಪ್ರಥಮ ಮುಖ್ಯಮಂತ್ರಿ ಡಿ. ದೇವರಾಜ ಅರಸು. ಅವರ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಎಂದು ತಹಸೀಲ್ದಾರ್ ನಂದಕುಮಾರ್ ತಿಳಿಸಿದರು. ಆಲೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.
ಮಕ್ಕಳು ಕ್ರೀಡೆ ಜತೆಗೆ ಅಭ್ಯಾಸದ ಕಡೆಗೂ ಒತ್ತು ನೀಡಿ: ಶಾಸಕ ಎಚ್.ಕೆ.ಸುರೇಶ್
ವಿದ್ಯಾರ್ಥಿಗಳು ಕ್ರೀಡೆ ಜತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚು ಒತ್ತು ನೀಡಬೇಕು. ಕ್ರೀಡೆಗೆ ಒಳ್ಳೆಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸೇವಿಸಿದರೆ ದೇಹಕ್ಕೆ ಶಕ್ತಿ ದೊರೆಯುವುದು ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡು ಎ ಮತ್ತು ಬಿ ವಲಯಗಳ ಹಿರಿಯ ಪ್ರಾಥಮಿಕ ಕ್ರೀಡಾಕೂಟದ ಉದ್ಘಾಟನೆಯ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved