• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಬ್ರಮಣ್ಯ ಸನ್ನಿಧಿಯಲ್ಲಿ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ
ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಮಣ್ಯಸ್ವಾಮಿ ಸನ್ನಿಧಿಯಲ್ಲಿ ಸುಬ್ರಮಣ್ಯ ಷಷ್ಠಿ ಪ್ರಯುಕ್ತ ಶನಿವಾರ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ್ದ ರಥದಲ್ಲಿ ಪ್ರತಿಷ್ಟಾಪಿಸಿ, ಪೂಜಾ ಕೈಂಕರ್ಯ ನೆರವೇರಿಸಿದ ನಂತರ ದೇವಾಲಯದ ಪ್ರಾಂಗಣದಲ್ಲಿ ಪ್ರಾಕಾರೋತ್ಸವ ನಡೆಸಿದ ನಂತರ ಶ್ರೀ ಸ್ವಾಮಿಯ ಮೂರ್ತಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು.
ಸಾವಯವ ಪದ್ಧತಿ ಅನುಸರಿಸಿ ಮುಂದಿನ ಪೀಳಿಗೆಗೂ ಭೂಮಿ ಸಂರಕ್ಷಿಸಿ
ಮಣ್ಣಿನ ಫಲವತ್ತತೆ ಕಾಪಾಡಲು ಪೂರ್ವಿಕರ ಹಾಗೆ ಸಾವಯವ ಕೃಷಿ ಮಾಡಿ ಮುಂದಿನ ಪೀಳಿಗೆಗೆ ಕೃಷಿ ಭೂಮಿ ಉಳಿಸಿ ಸಂರಕ್ಷಿಸಬೇಕಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಅನ್ನ ಬೆಳೆಯುವ ಭೂಮಿ ದೇವರು. ಅದರಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಗೂ ಗಾಜಿನ ಚೂರುಗಳನ್ನು ಹಾಕಬಾರದು. ದೀಪಾವಳಿ ಹಬ್ಬದಲ್ಲಿ ಗೋವುಗಳ ಸಗಣಿಯ ಕೆರಕನನ್ನು ಹೂಗಳಿಂದ ಪೂಜಿಸುವುದೇ ಭೂಮಿ ಪೂಜೆ ಆಗಿತ್ತು. ಈಗಲೂ ನಮ್ಮ ಹಳ್ಳಿಗಳಲ್ಲಿ ಈ ಸಂಪ್ರದಾಯವಿದೆ. ಮನುಷ್ಯನ ಆರೋಗ್ಯ ಎಷ್ಟು ಮುಖ್ಯವೋ ಹಾಗೆಯೇ ಭೂಮಿಯ ಆರೋಗ್ಯವು ಆರೋಗ್ಯವೂ ಮುಖ್ಯ. ಪ್ರತಿಯೊಬ್ಬರೂ ಭೂಮಿಯ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಹಣ ಮತ್ತು ರಾಜಕೀಯವೇ ನನ್ನ ಸೋಲಿಗೆ ಕಾರಣ
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಣ ಹಾಗೂ ರಾಜಕೀಯ ಭಾರೀ ಪ್ರಭಾವ ಬೀರಿದ್ದು, ಆ ಕಾರಣದಿಂದಾಗಿ ನನ್ನ ಜತೆ ಇದ್ದ ಕೆಲವರು ಆಮಿಷಗಳಿಗೆ ಒಳಗಾದರು. ಅದರ ಪರಿಣಾಮ ಸ್ವಾಭಿಮಾನಿ ತಂಡದಿಂದ ಸ್ಪರ್ಧೆ ಮಾಡಿದ್ದ ನನಗೆ ಸೋಲಾಯಿತು. ಮುಂದಿನ ದಿನಗಳಲ್ಲಿ ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೀಯ ಚುನಾವಣೆಯ ಪರಾಜಿತ ಅಭ್ಯರ್ಥಿ ಶ್ರೀನಿವಾಸ್‌ ತಿಳಿಸಿದರು.
ಕ್ಷಯ ಮುಕ್ತ ಭಾರತದೆಡೆಗೆ 100 ದಿನಗಳ ಅಭಿಯಾನ
ಕ್ಷಯ ಮುಕ್ತ ಭಾರತದೆಡೆಗೆ 100 ದಿನಗಳ ಅಭಿಯಾನ ಕುರಿತು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕ್ಷಯ ರೋಗವು ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದ್ದು ಕ್ಷಯ ರೋಗದ ಲಕ್ಷಣಗಳಾದ ಎರಡು ವಾರಕ್ಕಿಂತ ಜಾಸ್ತಿ ಕೆಮ್ಮು, ಜ್ವರ, ಕಫ ಬರುವುದು, ಹಸಿವಾಗದೆ ಇರುವುದು, ತೂಕ ಕಡಿಮೆಯಾಗುವುದು, ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆರೋಗ್ಯ ಸಂಸ್ಥೆಗೆ ಭೇಟಿ ನೀಡಿ ಕಫ ಪರೀಕ್ಷೆ ಮತ್ತು ಎಕ್ಸೆರೇ ಪರೀಕ್ಷೆಯನ್ನು ಮಾಡಿಸಿ ಸೂಕ್ತ ಚಿಕಿತ್ಸೆಯನ್ನು ಪಡೆಯಲು ತಿಳಿಸಿದರು.
ರಾಮನಾಥಪುರ ಜಾತ್ರೆಯಲ್ಲಿ ಶಾಸಕ ರೇವಣ್ಣ ಭಾಗಿ
ಕಾವೇರಿ ನದಿ ದಂಡೆಯಲ್ಲಿರುವ ರಾಮನಾಥಪುರ ಶ್ರೀಕ್ಷೇತ್ರವು ಇಂದಿಗೂ ತನ್ನ ಗತವೈಭವವನ್ನು ಹಾಗೂ ಜನಾಕರ್ಷಣೆಯನ್ನು ವೃದ್ಧಿಸಿಕೊಳ್ಳುತ್ತಾ ಈ ಕ್ಷೇತ್ರದ ಮಹಿಮೆಯ ಮಹತ್ವವನ್ನು ಕಾಯ್ದುಕೊಂಡು ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವವನ್ನು ಹೊಂದಿರುವ ಪುಣ್ಯಕ್ಷೇತ್ರವಾಗಿದೆ ಎಂದು ಶಾಸಕ ಎಚ್.ಡಿ. ರೇವಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷ ಮಾಸ, ದಿನಗಳಲ್ಲಿ ವಿಶೇಷ ಪೂಜೆ, ಹಾಗೂ ಪ್ರತಿ ವರ್ಷ ರಾಮನಾಥಪುರದಲ್ಲಿ 6 ರಥೋತ್ಸವಗಳು ನಡೆಯತ್ತಿರುವುದಕ್ಕೆ ಬಹಳ ಸಂತೋಷ ವ್ಯಕ್ತಪಡಿಸಿದರು.
ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆಗೆ ಚಾಲನೆ
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ಆರಂಭಿಸಿದ್ದು, ಬಿಕ್ಕೋಡು ಆನೆ ಕ್ಯಾಂಪ್ ಬಳಿ ಬಂದಿರುವ ಸಾಕಾನೆಗಳಿಗೆ ಶಾಸಕ ಎಚ್ ಕೆ ಸುರೇಶ್ ಪೂಜೆ ಸಲ್ಲಿಸಿದರು. ಈ ತಿಂಗಳಿಂದ ನಡೆಯುವ ಅಧಿವೇಶನದಲ್ಲಿ ಇದರ ಬಗ್ಗೆ ಸದನದಲ್ಲಿ ಚರ್ಚಿಸುವುದರ ಜೊತೆಗೆ ಶಾಶ್ವತವಾಗಿ ನಮಗೆ ಪರಿಹಾರ ಸಿಗುವಂತೆ ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಸಚಿವರ ಜೊತೆ ಚರ್ಚಿಸುವುದಾಗಿ ತಿಳಿಸಿದರು.
ವಿವಿಧತೆಯಲ್ಲಿ ಏಕತೆ ತೋರಿದ ಮಹಾನ್ ಪುರುಷ ಅಂಬೇಡ್ಕರ್
ಎಲ್ಲರೂ ಭಾರತೀಯರು ಎಂಬ ಧ್ಯೇಯದೊಂದಿಗೆ, ಯಾವುದೇ ತಾರತಮ್ಯವಿಲ್ಲದೇ ವಿವಿಧತೆಯಲ್ಲಿ ಏಕತೆಯನ್ನು ತೋರಿದ ಮಹಾನ್ ಪುರುಷ ಡಾ. ಬಿ.ಆರ್‌.ಅಂಬೇಡ್ಕರ್ ಅವರು ಎಂದು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ಆಯುಕ್ತರಾದ ಡಾ. ಸಿ.ಟಿ.ಮೂರ್ತಿ ಸ್ಮರಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ೬೯ನೇ ಪರಿದಿಬ್ಬಾಣದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು

  ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು.   ದೇವೇಗೌಡರ ಯಾವ್ಯಾವ ಸಾಕ್ಷಿ ಗುಡ್ಡೆ ಇದೆ ಎಂಬುದನ್ನು ಕಾಲ ಬಂದಾಗ ಹೇಳ್ತೀನಿ. ಅವರು ಬಂದರೆ ಕರೆದುಕೊಂಡು ಹೋಗಿ ಎಲ್ಲೆಲ್ಲಿ ಸಾಕ್ಷಿ ಗುಡ್ಡೆ ಇದೆ ಅಂತ ತೋರುಸ್ತೀನಿ ಎಂದಿದ್ದಾರೆ.  

ತಗಡೂರು ಸೊಸೈಟಿ ಅಧ್ಯಕ್ಷರಾಗಿ ಜಯರಾಮ್ ಆಯ್ಕೆ
ನುಗ್ಗೇಹಳ್ಳಿ ಹೋಬಳಿಯ ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ಸಿದ್ದರಹಟ್ಟಿ ಗ್ರಾಮದ ಎಸ್. ಜಿ. ಜಯರಾಮ್, ಉಪಾಧ್ಯಕ್ಷರಾಗಿ ಕಲ್ಲು ಮಲ್ಲೇನಹಳ್ಳಿ ಗ್ರಾಮದ ಕೆ. ಸಿ. ಪ್ರತೀಪ್‌, ಗುರುವಾರ ಅವಿರೋಧವಾಗಿ ಆಯ್ಕೆಯಾದರು. ನೂತನ ಜೆಡಿಎಸ್ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಸಿ. ಎನ್. ಬಾಲಕೃಷ್ಣ ಅಭಿನಂದಿಸಿದರು.
ಕುಂದೂರು ಮಠದಲ್ಲಿ ಪುನರ್‌ ನಿರ್ಮಾಣಗೊಂಡ ದೇವಾಲಯಗಳ ಲೋಕಾರ್ಪಣೆ
ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯಲ್ಲಿನ ಶ್ರೀ ಕುಂದೂರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಕುಂದೂರು ಗ್ರಾಮದ ಆದಿದೇವತೆಗಳಾದ ಶ್ರೀ ವಿಶ್ವನಾಥ ಸ್ವಾಮಿ ಮತ್ತು ಶ್ರೀ ರಂಗನಾಥಸ್ವಾಮಿ ಮತ್ತು ಪರಿವಾರ ದೇವತೆಗಳ ಪುನರ್ ನಿರ್ಮಾಣಗೊಂಡ ದೇವಾಲಯಗಳ ಲೋಕಾರ್ಪಣೆ ಕಾರ್ಯ ಹಾಗೂ ಕುಂಭಾಭಿಷೇಕ ಮತ್ತು ಧರ್ಮಧ್ವಜ ಸ್ಥಾಪನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಶ್ರದ್ಧೆ, ಜ್ಞಾನದಿಂದ ಕೂಡಿರುವ ಮನಸನ್ನು ಮಲೀನವಾಗದಂತೆ ನೋಡಿಕೊಳ್ಳಲು ದೇವರ ಆರಾಧನೆ ಮುಖ್ಯವಾಗುತ್ತದೆ ಎಂದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved