• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಕ ವಸ್ತುಗಳ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ
ಅಮಲು ಮುಕ್ತ ಸಕಲೇಶಪುರಕ್ಕಾಗಿ ಆಯೋಜಿಸಲಾಗಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ನಾಗರೀಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಯುವಜನಾಂಗಕ್ಕೆ ಮಾದಕ ವಸ್ತುಗಳು ಸಿಗದಂತೆ ಮಾದಕ ವಸ್ತು ಮುಕ್ತ ಸಮಾಜ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಸುಲಭವಾಗಿ ವಿದ್ಯಾರ್ಥಿಗಳಿಗೆ ನಶೆ ಬರುವ ಪದಾರ್ಥಗಳು ಬಹುಬೇಗನೆ ಕೈಗೆ ಸಿಗುವಂತಾಗುತ್ತಿದೆ ಎಂದು ವಿಷಾದಿಸಿದರು.
ಬೇಲೂರು ಪುರಸಭೆ ಅಧ್ಯಕ್ಷರಾಗಿ ಅಶೋಕ್‌ ಉಪಾಧ್ಯಕ್ಷರಾಗಿ ಉಷಾ ಆಯ್ಕೆ
ಬೇಲೂರು ಪುರಸಭೆಗೆ ನೂತನ ಅಧ್ಯಕ್ಷರಾಗಿ ಎ.ಆರ್‌. ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಉಷಾ ಸತೀಶ್ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪುರಸಭೆಯಲ್ಲಿ ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ತಹಸೀಲ್ದಾರ್‌ ಮಮತಾ ಅವರು ಅವಿರೋಧ ಆಯ್ಕೆ ಘೋಷಣೆ ಮಾಡುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಶಾಂತಕುಮಾರ್‌ ಜೊತೆ ಸಿ.ಎನ್. ದಾನಿ , ಸಭಾ ಕೌಸರ್, ಮೀನಾಕ್ಷಿ ವೆಂಕಟೇಶ್, ಭರತ್ ಸೇರಿದಂತೆ ಕೆಲ ಸದಸ್ಯರು ಸಭಾಭವನದಿಂದ ಹೊರ ನಡೆದರು.
ಬೈಕ್‌ಗಳನ್ನು ಜಖಂಗೊಳಿಸಿದ ಫಾರ್ಚೂನರ್ ವಾಹನ
ಅರಸೀಕೆರೆ ತಾಲೂಕಿನ ಕೆಂಕೆರೆಹಳ್ಳಿ ಗೇಟ್ ಬಳಿ ಫಾರ್ಚುನರ್ ವಾಹನದ ನಿಯಂತ್ರಣ ತಪ್ಪಿ 17 ಬೈಕ್‌ಗಳ ಮೇಲೆ ಹತ್ತಿ ಬೈಕ್‌ಗಳು ಜಖಂ ಆಗಿರುವ ಘಟನೆ ನಡೆದಿದೆ. ತುಂಬಾ ಮಳೆ ಇದ್ದ ಕಾರಣ ಬೈಕ್ ಸವಾರರು ತಮ್ಮ ದ್ವಿಚಕ್ರ ವಾಹನಗಳನ್ನು ಕೆಂಕೆರೆಹಳ್ಳಿ ಗೇಟ್ ಸಮೀಪದ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿ ಬಸ್ ನಿಲ್ದಾಣದ ಒಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಜಾವಗಲ್ ಮಾರ್ಗದಿಂದ ಬಾಣಾವರದ ಕಡೆಗೆ ಹೋಗುತ್ತಿದ್ದ ಫಾರ್ಚುನರ್‌ ವಾಹನವು ಚಾಲಕನ ನಿಯಂತ್ರಣ ತಪ್ಪಿ ಅಲ್ಲಿ ನಿಲ್ಲಿಸಿದ್ದ ಬೈಕ್‌ಗಳ ಮೇಲೆ ಹತ್ತಿದ ಪರಿಣಾಮ ಅಲ್ಲಿದ್ದಂತಹ 17 ಬೈಕುಗಳು ಜಖಂಗೊಂಡಿವೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದಾರೆ ಎನ್ನುವ ಆರೋಪದಡಿ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆಯುವುದರ ಜೊತೆಗೆ ಡಿಸಿ ನಿವಾಸದೆದುರು ಎದುರು ಬಿ.ಎಂ. ರಸ್ತೆಯಲ್ಲಿ ಟೈರಿಗೆ ಬೆಂಕಿ ಹಚ್ಚಿ ರಾಜ್ಯಪಾಲರ ಭಾವಚಿತ್ರ ಸುಟ್ಟು ಆಕ್ರೋಶ ಹೊರಹಾಕಿದರು.
ಪೋಷಕರು ಇಟ್ಟಿರುವ ನಂಬಿಕೆ ಹುಸಿ ಮಾಡಬೇಡಿ
ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದ ಆವರಣದಲ್ಲಿ ಸೀತಾಲಕ್ಷ್ಮಿ ರಂಗಸ್ವಾಮಿಶೆಟ್ಟಿ ಚಾರಿಟಬಲ್ ಟ್ರಸ್ಟ್ ಆಯೋಜನೆ ಮಾಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಅರುಣ್ ಮಾತನಾಡಿದರು. ನಿಮ್ಮ ಜ್ಞಾನದ ಹಸಿವನ್ನು ಹೆಚ್ಚಿಸಿಕೊಂಡು ಇನ್ನೂ ಉನ್ನತ ಸ್ಥಾನ ಪಡೆಯುವ ಮನಸ್ಥಿತಿಯಲ್ಲಿ ಕಲಿಕೆಯನ್ನು ಮುಂದುವರಿಸಿ ಮತ್ತು ನಿಮ್ಮ ಮೇಲೆ ಪೋಷಕರು ಇಟ್ಟಿರುವ ನಂಬಿಕೆ ಹಾಗೂ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಜಾಗೃತರಾಗಿರಿ ಎಂದು ಸಬ್‌ ಇನ್‌ಸ್ಪೆಕ್ಟರ್‌ ಅರುಣ್ ಸಲಹೆ ನೀಡಿದರು.
ರಸ್ತೆ ಗುಂಡಿ ಮುಚ್ಚುವ ಮೂಲಕ ಸ್ವಾತಂತ್ರ್ಯೋತ್ಸವ
ಹಲವಾರು ಅನಾಥ ವಯೋವೃದ್ಧರಿಗೆ ಆಶ್ರಯವಾಗಿರುವ ನಾಗಣ್ಣ ಕುಟುಂಬ ಈಗ ವಾಹನ ಸವಾರರು ರಸ್ತೆಯಲ್ಲಿ ಓಡಾಡುವಾಗ ಗುಂಡಿಗಳಲ್ಲಿ ಬಿದ್ದು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದನ್ನು ಗಮನಿಸಿದ ನಾಗಣ್ಣ ತಮ್ಮ ಸ್ವಂತ ಖರ್ಚಿನಲ್ಲೇ ಒಬ್ಬರೇ ಶ್ರಮಪಟ್ಟು ಮೈಸೂರು ರಸ್ತೆ, ಟಿವಿಎಸ್ ಶೋರೂಂ ಮುಂಭಾಗದಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಜನರಿಗೆ ಅರಿವು ಮೂಡಿಸಿ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ.
ಅರೇಹಳ್ಳಿ ಹೋಬಳಿಯಲ್ಲಿ ಕಾಡಾನೆಗಳ ಹಿಂಡು
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ವ್ಯಾಪ್ತಿಯಾದ್ಯಂತ ಕಾಡಾನೆಗಳು ನಡು ರಸ್ತೆಯಲ್ಲೆ ಗುಂಪಾಗಿ ಓಡಾಡುತ್ತಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಕಾಫಿ ತೋಟ, ಅಡಿಕೆ, ಬಾಳೆ, ಜೋಳದ ಹೊಲಗಳನ್ನು ಸಂಪೂರ್ಣ ಸರ್ವನಾಶ ಮಾಡುತ್ತಿರುವ ಅಷ್ಟು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರ ಮೂಲಕ ಬೆಳೆ ನಷ್ಟದಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟದಿಂದ ಪಾರು ಮಾಡಿ ಎಂಬುದು ರೈತರ ಒತ್ತಾಯವಾಗಿದೆ.
ನಗರದಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಈ ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ನೀವು ಬಿಜೆಪಿ ಅವರ ಕೈಗೊಂಬೆಯಾಗಿ, ರಾಜ್ಯಪಾಲರ ಕಚೇರಿಯನ್ನೇ ಬಿಜೆಪಿ ಮುಖಂಡರ ಅಂಗಳವನ್ನಾಗಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಏಜೆಂಟರ ರೀತಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದು, ಇಂತಹ ವರ್ತನೆ ಖಂಡಿಸಿ ಆ.೧೯ರ ಸೋಮವಾರ ಬೆಳಿಗ್ಗೆ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.
ಹಳ್ಳಿಮೈಸೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿಯನ್ನು ವಾಪನ್ ಪಡೆಯದೇ ಇದ್ದಲ್ಲಿ ನಾವು ಯಾವ ಹೋರಾಟಕ್ಕೂ ಸಿದ್ಧವೆಂದು ಕಾಂಗ್ರೆಸ್ ಮುಖಂಡ ಶ್ರೀಧರಗೌಡ ಎಚ್ಚರಿಸಿದರು. ತಾಲೂಕಿನ ಹಳ್ಳಿಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ರಾಜ್ಯಪಾಲರ ಧೋರಣೆ ಖಂಡಿಸಿ ಆಯೋಜನೆ ಮಾಡಿದ್ದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಕಾಟಾಚಾರಕ್ಕೆ ಆಗದಿರಲಿ
ಬೇಲೂರು ಪಟ್ಟಣದ ಮೂಡಿಗೆರೆ ರಸ್ತೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳನ್ನು ಕಾಟಾಚಾರಕ್ಕೆ ಆಚರಿಸದೆ ನಮಗೆ ಸ್ವಾತಂತ್ರ್ಯ ಬಂದ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಹೆಮ್ಮೆಯಿಂದ ಆಚರಿಸಿಕೊಳ್ಳಬೇಕು ಎಂದು ನ್ಯಾ . ಎಂ ಎಸ್. ಶಶಿಕಲಾ ಹೇಳಿದರು. ಹತ್ತು ಜನ ಸಾಧಕರನ್ನು ಗುರುತಿಸಿ, ಅವರವರ ಸಾಧನೆಯನ್ನು ವೇದಿಕೆಯ ಮೂಲಕ ಪರಿಚಯಿಸಿ ಗೌರವಿಸಲಾಯಿತು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved