• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಜೀವನಕ್ಕೆ ಅಂಬೇಡ್ಕರ್‌ ಆದರ್ಶಗಳು ಗಟ್ಟಿಯಾದ ಅಡಿಪಾಯ
ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಕೊಡುಗೆ ಸ್ಮರಣೀಯವಾಗಿದ್ದು, ಉತ್ತಮ ಜೀವನ ರೂಪಿಸಿಕೊಳ್ಳಲು ಹಾಕಿಕೊಟ್ಟ ಆದರ್ಶಪ್ರಾಯ ಅಡಿಪಾಯ ಮಹತ್ವದ್ದಾಗಿದೆ ಹಾಗೂ ಇಂದಿನ ಕಾರ್ಯಕ್ರಮ ಔಚಿತ್ಯಪೂರ್ಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಅಭಿಪ್ರಾಯಪಟ್ಟರು. ಅವರು ನಮ್ಮ ಪೀಳಿಗೆಗೆ ನೀಡಿದ ವಿಚಾರಧಾರೆಗಳು, ಆದರ್ಶಗಳು ಹಾಗೂ ವ್ಯಕ್ತಿತ್ವದ ಪಾಲನೆ ಮಾಡೋಣವೆಂದರು.
ಪಂಚೇಂದ್ರಿಯಗಳು ಬಹಳ ಮುಖ್ಯ ಎಂದ ಗೂಗಲ್‌ ವೈದ್ಯ ನವನ್ನೆ ಚಂದ್ರಪ್ಪ
ಚನ್ನರಾಯಪಟ್ಟಣ ಪಟ್ಟಣದ ವಾಸವಿ ವಿದ್ಯಾಶಾಲೆಯಲ್ಲಿ ಸುಮಾರು ೩೫೦ ಮಕ್ಕಳು ಹಾಗೂ ಪೋಷಕರ ಆರೋಗ್ಯ ತಪಾಸಣಾ ಕಾರ್ಯ ನಡೆಸಿ ಮಾತನಾಡಿದರು. ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರಗಳ ಸೇವನೆ ಮಾಡಬೇಕು, ಮೊಬೈಲ್‌ ಗೀಳನ್ನು ಮಕ್ಕಳು ಬಿಡಬೇಕು. ಬೆಳಕಿನಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವಿರಲಿ, ಕಣ್ಣಿಗೆ ಹೆಚ್ಚು ಆಯಾಸ ನೀಡಬಾರದು. ಸಿಹಿ ಪದಾರ್ಥಗಳ ಸೇವನೆಯ ಮೇಲೆ ಮಿತಿ ಇರಲಿ, ಕಣ್ಣು ಸೂಕ್ಷ್ಮವಾದ ಅಂಗವಾಗಿದ್ದು, ಹೆಚ್ಚು ಜಾಗ್ರತೆ ಅಗತ್ಯ ಎಂದು ಗೂಗಲ್ ಕಂಪನಿ ತಜ್ಞ ವೈದ್ಯ ಹಾಗೂ ಪಿಜಿಶಿಯನ್ ಡಾ. ನವನ್ನೆ ಚಂದ್ರಪ್ಪ ಹೇಳಿದರು.
ಆಯುಷ್ಮಾನ್ ಭಾರತ್ ಕಾರ್ಡ್‌ ನೋಂದಣಿ ಕಾರ್ಯಕ್ಕೆ ಚಾಲನೆ
೭೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಐದು ಲಕ್ಷ ರುಪಾಯಿ ಆರೋಗ್ಯ ವಿಮೆ ಸೌಲಭ್ಯ ಯೋಜನೆ ರೂಪಿಸಲಾಗಿದ್ದು, ಎಪಿಎಲ್ ಅಥವಾ ಬಿಪಿಎಲ್ ಎಂಬ ತಾರತಮ್ಯವಿಲ್ಲದೇ, ಆದಾಯ ಲೆಕ್ಕಿಸದೇ ಪ್ರತಿಯೊಬ್ಬ ಹಿರಿಯ ನಾಗರಿಕರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಜತೆಗೆ ನೋಂದಣಿ ಮುಖ್ಯವಾಗಿರುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್‌ ಸಲಹೆ ನೀಡಿದರು. ಆಯುಷ್ಮಾನ್ ಭಾರತ್ ಕಾರ್ಡ್‌ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಚಾರುಕೀರ್ತಿ ಭಟ್ಟಾರಕರ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ
ಶ್ರವಣಬೆಳಗೊಳದಲ್ಲಿ ಶುಕ್ರವಾರ ಸಮಾಧಿಸ್ತರಾದ ಕರ್ಮಯೋಗಿ ದಿಗಂಬರ ಜೈನ ಮಹಾಸಂಸ್ಥಾನ ಮಠದ ಚಾರುಕೀರ್ತಿ ಭಟ್ಟಾರಕರ ನಿಷಿಧಿ ಮಂಟಪ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಮಠಕ್ಕೂ ಭಟ್ಟಾರಕ ಸ್ವಾಮಿಗಳಿಗೂ ಅವಿನಾಭಾವ ಸಂಬಂಧವಿತ್ತು, ಚಾರುಕೀರ್ತಿಗಳು ಮಾನವೀಯತೆ ಗುಣ ಹೊಂದಿದ್ದರು. ಸಮಾಜದಲ್ಲಿ ಎಲ್ಲರನ್ನು ಒಂದೇ ಎಂದು ಕಾಣುತ್ತಿದ್ದ ಚಾರುಕೀರ್ತಿಗಳ ಮಾನವೀಯ ಗುಣ ಶ್ರೇಷ್ಠವಾದದ್ದು. ವಿಶೇಷವಾಗಿ ಜ್ಞಾನಾರ್ಜನೆಯಲ್ಲೆ ಕಾಲ ಕಳೆದರೂ ಅವರಿಗೆ ಯಾವುದಕ್ಕೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಚಾರುಕೀರ್ತಿ ಮಹಾತ್ಮರಾದವರು ಎಂದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಇರುವ ಬೇರೆ ಬೇರೆ ವೃತ್ತಿಗಳಿಗಿಂತ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು ಎಂದು ದಂಡಿಗನಹಳ್ಳಿ ಹೋಬಳಿ ಕುಂಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಬಾಬು ಎಸ್ ಅಭಿಪ್ರಾಯಪಟ್ಟರು. ಶಿಕ್ಷಕರು ತಮ್ಮ ಅಪಾರವಾದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆದು ಅವರಿಗೆ ತಮ್ಮ ಜೀವನ ರೂಪಿಸಿಕೊಳ್ಳುವ ಮಾರ್ಗವನ್ನು ತೋರಿಸಿ ಉತ್ತಮ ಮಾರ್ಗದರ್ಶನ ಮಾಡಿ ತನ್ಮೂಲಕ ಮಾರ್ಗದರ್ಶಿ ಗಳಾಗಿದ್ದಾರೆ ಎಂದು ತಿಳಿಸಿದರು.
ವಕೀಲರು ವೃತ್ತಿ ಪಾವಿತ್ರ್ಯತೆ ಕಾಯ್ದುಕೊಳ್ಳಲಿ
ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ವಕೀಲ ವೃತ್ತಿ ಅತ್ಯಂತ ಘನತೆಯ ವೃತ್ತಿಯಾಗಿದ್ದು, ವಕೀಲರು ವೃತ್ತಿ ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಬಿ. ಕೆ. ನಾಗೇಶ ಮೂರ್ತಿ ತಿಳಿಸಿದರು. ವಕೀಲರ ಸಂಘ ಏರ್ಪಡಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ನ್ಯಾಯ ದೊರಕಿಸಿ ಕೊಡುವ ಜತೆಗೆ ಸಾರ್ವಜನಿಕ ಹಕ್ಕುಗಳ ರಕ್ಷಣೆಯನ್ನೂ ವಕೀಲರು ಮಾಡಬೇಕಿದೆ. ವಕೀಲರು ಎಲ್ಲ ವಿಷಯಗಳ ಕುರಿತು ಜ್ಞಾನ ಹೊಂದಲು ನಿರಂತರ ಅಧ್ಯಯನ ನಡೆಸಬೇಕು ಎಂದರು.
ಬೀಳುವ ಹಂತದಲ್ಲಿ ಅಂಗನವಾಡಿ ಕಟ್ಟಡಗಳು
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಕ್ಕಳಿಗೆ ಅಂಗನವಾಡಿ ನಡೆಸಲು ಸ್ವಂತ ಕಟ್ಟಡವಿಲ್ಲದೆ ಬಿದ್ದು ಹೋಗುವ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ಬಾಡಿಗೆ ಅಧಾರದ ಮೇಲೆ ಪಡೆದು ಶಾಲೆ ನಡೆಸುತ್ತಿರುವುದು ಜನರ ದುರ್ದೈವದ ಸಂಗತಿಯಾಗಿದೆ ಎಂದು ಬಿಜೆಪಿ ಮುಖಂಡ ಕೆಂಪುಸಾಗರ ಶಿವರಾಜ್‌ ಕುಮಾರ್‌ ವಿಷಾದ ವ್ಯಕ್ತಪಡಿಸಿದರು. ಮಲ್ಲೇಶ್ವರ ನಗರದಲ್ಲಿರುವ ಅಂಗನವಾಡಿ ಕಟ್ಟಡ ಸೇರಿದಂತೆ ಹಲವು ಕಟ್ಟಡಗಳು ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಶಾಲಾ ಅವಧಿಯಲ್ಲಿ ಏನಾದರೂ ಆದರೆ ಏನು ಗತಿ ಎಂಬುದನ್ನು ಅರಿಯುವ ಶಾಸಕರು ಇವರಾಗಬೇಕಿದೆ ಎಂದರು.
ನಾವೆಲ್ಲರೂ ಸೇರಿ ಜೆಡಿಎಸ್‌ ಕಟ್ಟೋಣ
ಹಾಸನದ ಕೃಷ್ಣಾ ನಗರದಲ್ಲಿ ನಡೆದ ಕಾಂಗ್ರೆಸ್‌ನ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡುವ ವೇಳೆ "ನಾವೆಲ್ಲಾ ಸೇರಿ ಜೆಡಿಎಸ್ಸನ್ನು ಕಟ್ಟೋಣ " ಎಂದು ಶಾಸಕರಾದ ಕೆ.ಎಂ. ಶಿವಲಿಂಗೇಗೌಡರು ಹೇಳಿದ್ದಾರೆ.ಕಳೆದ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿ ರಾಜ್ಯ ಗೃಹ ಮಂಡಳಿ ಅಧ್ಯಕ್ಷರೂ ಆಗಿದ್ದಾರೆ. ಆದರೂ ಅಭ್ಯಾಸಬಲ ಎನ್ನುವಂತೆ ಅವರ ಬಾಯಿಂದ ಜೆಡಿಎಸ್‌ ಇನ್ನೂ ದೂರಾಗಿಲ್ಲ.
ರಾಮನಾಥಪುರ ಜಾತ್ರೆಗೆ ಸಜ್ಜಾಗುತ್ತಿದೆ ತೇರು
ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ಮಹಾ ರಥೋತ್ಸವ ಡಿ.7ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಸುಮಾರು 40 ಅಡಿ ಎತ್ತರದ ಸುಬ್ರಹ್ಮಣ್ಯಸ್ವಾಮಿ ತೇರನ್ನು ಕಾರ್ಮಿಕರು ಸಜ್ಜುಗೊಳಿಸುತ್ತಿದ್ದಾರೆ ಎಂದು ದೇವಾಲಯದ ದಿವಾನರಾದ ಬಾಬಣ್ಣ ಹಾಗೂ ಪಾರುಪತ್ತೇಗಾರ್ ರಮೇಶ್ ಭಟ್ ತಿಳಿಸಿದರು. ಡಿಸೆಂಬರ್ 7ರಂದು ಶನಿವಾರ ಹಗಲು 12 ಗಂಟೆಗೆ ಶ್ರೀ ಪ್ರಸನ್ನ ಶ್ರೀ ಸುಬ್ರಮಣ್ಯಸ್ವಾಮಿ ಮಹಾ ರಥೋತ್ಸವ ಸಂಭ್ರಮದಿಂದ ಅದ್ಧೂರಿಯಾಗಿ ನಡೆಯಲಿದೆ.
ಅರಸೀಕೆರೆ ಆಸ್ಪತ್ರೆ ಆವರಣದಲ್ಲಿ ಉಪಯೋಗಕ್ಕೆ ಬಾರದ ಪಾರ್ಕ್
ಜಯಚಾಮರಾಜೇಂದ್ರ ಆಸ್ಪತ್ರೆ ಆವರಣದಲ್ಲಿ ರೋಗಿಗಳು ಹಾಗೂ ಅವರ ಸಹಾಯಕರಿಗೆ ಕೆಲ ಹೊತ್ತು ವಿಶ್ರಮಿಸಿಕೊಳ್ಳಲು ಆಸ್ಪತ್ರೆ ಆವರಣದಲ್ಲಿ ನಗರಸಭೆ ಉದ್ಯಾನವನ್ನು ನಿರ್ಮಿಸಿ ಕೊಟ್ಟಿದೆ. ಇದು ನಿರ್ಮಾಣವಾಗಿ ಹಲವು ವರ್ಷಗಳಾದರೂ ಆಸ್ಪತ್ರೆ ಆಡಳಿತ ಇದನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆಯದೆ ಗೇಟ್ ಬಂದ್ ಮಾಡಿದ್ದಾರೆ. ಪಾರ್ಕ್ ಗಿಡಗಂಟಿಗಳಿಂದ ಆವೃತಗೊಂಡಿದ್ದು, ವಾಕ್ ಪಾತ್‌ನಲ್ಲಿ ಸಿಮೆಂಟ್ ಚಿಪ್ಸ್‌ಗಳ ಮೇಲೆ ಗಿಡಗಂಟೆಗಳು ಬೆಳೆದಿವೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved