• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾಥಿFಗಳೇ ಸತತ ಪರಿಶ್ರಮದಿಂದ ಮಾತ್ರ ಗುರಿಮಟ್ಟಲು ಸಾಧ್ಯ: ದರ್ಶನ್
ರೋಟರಿ ಸಂಸ್ಥೆಯು ನಮ್ಮ ಶಾಲೆಯ ಮೇಲೆ ಹೆಚ್ಚಿನ ಅಭಿಮಾನವನ್ನು ಇಟ್ಟಿದೆ. ಅವರು ಇಂದು ನೀಡಿರುವ ಕೊಡುಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ.
ಶ್ರೀ ಭೀಮಸತಿ ಚಲನಚಿತ್ರಕ್ಕೆ ಶಾಸಕ ಕೆಎಂ ಶಿವಲಿಂಗೇಗೌಡ ಚಾಲನೆ
ಹಿಂದೆ ಪತಿ ನಿಧನರಾದರೆ ಸತಿಯೂ ಸಹ ಅದೇ ಚಿತೆಯಲ್ಲಿ ಸಹಗಮನ ಪದ್ಧತಿ ಇತ್ತು. ಇದನ್ನು ತಡೆಗಟ್ಟುವ ಸಲುವಾಗಿ ಭೀಮಸತಿಯು ತನ್ನನ್ನೇ ಅರ್ಪಣೆ ಮಾಡಿಕೊಂಡ ಕಥೆ ಇದಾಗಿದ್ದು ರಾಮ ನಾಯಕ್ ಅವರು ಬಹಳ ಪರಿಶ್ರಮ ದಿಂದ ಈ ಚಿತ್ರವನ್ನು ತೆರೆಯ ಮೇಲೆ ತಂದಿದ್ದಾರೆ ಇದು ಶತದಿನ ಆಚರಿಸಲಿ.
ಅಕ್ರಮ ಬಾಂಗ್ಲಾ ವಲಸಿಗರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಠಕ
ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ಪ್ರತಿಕೂಲ ಪರಿಣಾಮ ಬೀರಲಿದೆ. ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ವಕೀಲ ಕವನ್ ಗೌಡ ಒತ್ತಾಯಿಸಿದರು. ವಲಸಿಗರು ಈಗಾಗಲೇ ಬಾಡಿಗೆ ಮನೆ ಪಡೆದುಕೊಂಡು ಕರಾರು ಪತ್ರ ಪಡೆದುಕೊಂಡು ಹಂತ ಹಂತವಾಗಿ ಭಾರತೀಯ ಪ್ರಜೆಯಾಗಿ ಉಳಿಯುವ ಒಳಸಂಚು ನಡೆದಿದೆ. ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಕ್ರಮ ಬಾಂಗ್ಲಾ ವಲಸಿಗರು ಕಂಟಕವಾಗಲಿದ್ದಾರೆ ಎಂದರು.
ಮಕ್ಕಳನ್ನು ಮೊಬೈಲ್‌ನಿಂದ ಕ್ರೀಡೆಯತ್ತ ಸೆಳೆಯಿರಿ
ಪ್ರಸ್ತುತ ಮಕ್ಕಳು ಮೊಬೈಲ್ ಗೀಳಿಗೆ ಹೆಚ್ಚು ಅಂಟಿಕೊಂಡಿರುವುದರಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಪ್ರತಿದಿನ ಒಂದು ಗಂಟೆಯಾದರೂ ಯೋಗ ವ್ಯಾಯಾಮ ಅಥವಾ ಕ್ರೀಡಾಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಕರಾಟೆ ಕಲಿಯುವುದರಿಂದ ಆತ್ಮರಕ್ಷಣೆಯ ಜೊತೆಗೆ ಚುರುಕು ಬುದ್ಧಿಯನ್ನು ಗಳಿಸುತ್ತಾರೆ ಎಂದರು.
ಉಳುಮೆ ಮಾಡುವಾಗ ಸಿಕ್ಕಿತು ತೀರ್ಥಂಕರ ಮೂರ್ತಿ
ಸುಳುಗೋಡು ಸೋಮವಾರ ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ಜೈನ ತೀರ್ಥಂಕರರ ವಿಗ್ರಹ ಹಾಗೂ ಕೆತ್ತನೆಯುಳ್ಳ ಕಲ್ಲಿನ ಪುರಾತನ ಸ್ತಂಭ ಪತ್ತೆಯಾಗಿವೆ. ಟ್ರ್ಯಾಕ್ಟರ್ ಬಳಸಿ ಉಳುಮೆ ಮಾಡುವಾಗ ಈ ಕಲಾಕೃತಿಗಳು ನೆಲದಡಿಯಿಂದ ಹೊರಬಂದವು. ಮಂಜು ಹಾಗೂ ಸ್ಥಳೀಯ ಗ್ರಾಮಸ್ಥರು ಈ ವಿಷಯವನ್ನು ತಕ್ಷಣ ಪುರಾತತ್ವ ಇಲಾಖೆಗೆ ತಿಳಿಸಿದ್ದಾರೆ. ಪತ್ತೆಯಾದ ಕಲಾಕೃತಿಗಳು ತೀರ್ಥಂಕರರ ವಿಗ್ರಹ ಮತ್ತು ಸ್ತಂಭದ ಶಿಲ್ಪಗಳನ್ನು ಹೊಂದಿದ್ದು, ಅವು ಪುರಾತನ ಕಾಲಕ್ಕೆ ಸೇರಿದವು ಎಂದು ಊಹಿಸಲಾಗಿದೆ.
ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಯಿರಿ
ರಾಷ್ಟ್ರೀಯ ಧ್ವಜಗಳನ್ನು ಆಗಸ್ಟ್ ೧೫ ಮತ್ತು ೨೬ ಜನವರಿಯಲ್ಲಿ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಅದೇ ರಾಷ್ಟ್ರಧ್ವಜ ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಹಾನಗಲ್‌ ಶಾಲೆಗೆ ಡೆಸ್ಕ್‌ಗಳ ವಿತರಣೆ
ಅರಕಲಗೂಡು ತಾಲೂಕಿನ ಒಟ್ಟು 16 ಶಾಲೆಗಳಿಗೆ 1130500/- ರು. ಮೊತ್ತದ 133 ಬೆಂಚ್ ಡೆಸ್ಕ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು, 7 ಶಾಲೆಗಳಿಗೆ 56 ಬೆಂಚ್ ಡೆಸ್ಕ್‌ಗಳನ್ನು ವಿತರಣೆ ಮಾಡಲಾಯಿತು ಎಂದು ಯೋಜನಾಧಿಕಾರಿ ಜಿನ್ನಪ್ಪ ತಿಳಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾನಗಲ್ಲು ಗ್ರಾಮಕ್ಕೆ 10 ಬೆಂಚ್ ಡೆಸ್ಕ್ ವಿತರಣೆ ಮಾಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ ವಿವಿಧೆಡೆಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.
ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರೆಯಲಿ
ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತಾಗಬೇಕು ಎಂದು ಹಾಸನ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬನವಾಸಿ ರಂಗಸ್ವಾಮಿ ಅವರು ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಹಲವು ಸಲಹೆ ಸೂಚನೆಗಳನ್ನು ನೀಡಿದರು. ಇದೇ ವೇಳೆ ಯುವನಿಧಿ ಪೋಸ್ಟರ್‌ ಮತ್ತು ಕರಪತ್ರಗಳನ್ನು ಬಿಡುಗಡೆ ಮಾಡಿ ಪದವಿ ಮತ್ತು ಡಿಪ್ಲೋಮಾ ಪಡೆದಿರುವ ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಆದರವಳ್ಳಿ ಶಾಲೆಯ ಮೂವರು ಬಾಲಕರು ನಾಪತ್ತೆ
ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತಾಲೂಕಿನ, ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರತ್ (16), ಧನಂಜಯ್ (16), ಮುರುಳಿ (16) ಕಾಣಿಯಾಗಿರುವ ವಿದ್ಯಾರ್ಥಿಗಳು. ಕಾಣೆಯಾಗಿರುವ ಮೂವರು ಬಾಲಕರು ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬುವವರ ಮಕ್ಕಳಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆಗೆ ಮುಂದಾಗಿರುವ ಪೊಲೀಸರಿಗೆ ಬಾಲಕರು ಮೈಸೂರಿನತ್ತ ತೆರಳಿರುವ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಪೊಲೀಸರು ಮೈಸೂರಿಗೆ ತೆರಳಿದ್ದಾರೆ.
ಬೇಲೂರು ಪಟ್ಟಣದಲ್ಲಿ ಫುಟ್ಪಾತ್‌ ಅಂಗಡಿಗಳ ತೆರವು
ಜೂನಿಯರ್‌ ಕಾಲೇಜು ಆವರಣದ ಫುಟ್ಪಾತ್‌ ಮೇಲೆ ಅಂಗಡಿ ಹಾಕಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ವಿದ್ಯಾರ್ಥಿಗಳ ದೂರಿನ ಮೇರೆಗೆ ಪುರಸಭಾ ಅಧ್ಯಕ್ಷ ಎ.ಆರ್‌.ಅಶೋಕ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಫುಟ್ಪಾತ್‌ ಮೇಲಿನ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಮೆಚ್ಚುಗಾಗಿ ಪಾತ್ರರಾಗಿದ್ದಾರೆ. ತಳ್ಳುವ ಗಾಡಿಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಜಾಮ್‌ಗೆ ಕಾರಣವಾಗುತ್ತದೆ ಎಂಬ ನಿಟ್ಟಿನಲ್ಲಿ ಹರ್ಡಿಕರ್‌ ವೃತ್ತದ ಬಳಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದೆ ಎಂದರು.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved