• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ವಿರುದ್ಧದ ಬಿಜೆಪಿ ಹೋರಾಟ ರಾಜಕೀಯ ದುರುದ್ದೇಶದ್ದು
ರಾಜಕೀಯ ದುರುದ್ದೇಶದಿಂದಲೇ ವಕ್ಫ್ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ಮುಖಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಒತ್ತುವರಿಯಾಗಿರುವ ವಕ್ಫ್ ಆಸ್ತಿಯನ್ನು ವಾಪಸ್‌ ಕೊಡಿಸುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೆ ಬಿಜೆಪಿ ಅಧಿಕಾರದಲ್ಲಿ ಇದ್ದ ಅವಧಿಯಲ್ಲೇ ವಕ್ಫ್ ಆಸ್ತಿ ತೆರವು ಮಾಡಲು ಮೊದಲು ರೈತರಿಗೆ ನೋಟಿಸ್ ನೀಡಿದ್ದೇ ಬಿಜೆಪಿಯವರು. ಅವರ ಕಾಲದಲ್ಲೇ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ ಈಗ ಅದರ ಬಗ್ಗೆ ಅವರು ಮಾತನಾಡುವುದೇ ಇಲ್ಲ ಎಂದರು.
ಪ್ಲಾಸ್ಟಿಕ್‌ ಬಳಸದಂತೆ ಬೀದಿ ಬದಿ ವರ್ತಕರಿಗೆ ಸೂಚನೆ
ಚನ್ನರಾಯಪಟ್ಟಣ ಪಟ್ಟಣ ಏಳು ಕಿಲೋಮೀಟರ್ ಮುಖ್ಯರಸ್ತೆಯನ್ನು ಹೊಂದಿದ್ದು, ಬೀದಿ ಬದಿ ವ್ಯಾಪಾರಿಗಳೇ ರಸ್ತೆಗಳಲ್ಲಿ ಪ್ರಭುತ್ವ ಸಾಧಿಸಿದ್ದಾರೆ. ಅವರು ರಸ್ತೆಗೆ ಕಸ ಹಾಕಬಾರದು. ರಸ್ತೆಯನ್ನು ಒತ್ತುವರಿ ಮಾಡಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಘನತಾಜ್ಯ ನಿರ್ವಹಣೆಗಾಗಿ ನಲ್ಲೂರಿನಲ್ಲಿ ಸಂಸ್ಕರಣಾ ಘಟಕ ನಿಯೋಜನೆ ಮಾಡಲಾಗಿದೆ. ಕಸ ಹಾಕುವ ಬಗ್ಗೆ ಎಂಟು ದೂರುಗಳು ವಿವಿಧ ಶಾಲಾ ಇಲಾಖೆಗಳಿಂದ ಬಂದಿವೆ. ಸ್ವಚ್ಛತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ.
ಗೌಡರ ಕುಟುಂಬದ ಮೇಲೆ ಮುಗಿಬಿದ್ದ ಕಾಂಗ್ರೆಸ್ಸಿಗರು
ಕಾಂಗ್ರೆಸ್ಸಿನ ಜನಕಲ್ಯಾಣ ಸಮಾವೇಶದ ಆರಂಭದಿಂದಲೂ ಕಡೆವರೆಗೂ ಸ್ವತಃ ಸಿಎಂ ಸಿದ್ಧರಾಮಯ್ಯ ಅವರಿಂದ ಹಿಡಿದು ಉಪ ಮುಖ್ಯಮಂತ್ರಿ ಡಿಕೆಶಿ ಹಾಗೂ ಹಲವು ಸಚಿವರು ಕೂಡ ಜೆಡಿಎಸ್‌ ವರಿಷ್ಠರಾದ ಎಚ್‌.ಡಿ. ದೇವೇಗೌಡರು ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದರೊಂದಿಗೆ ಈ ಸಮಾವೇಶ ಹಾಸನದಲ್ಲಿಯೇ ಏಕೆ ನಿಗದಿಯಾಯಿತು ಎನ್ನುವುದು ಸ್ಪಷ್ಟವಾದಂತಾಗಿದೆ.
ವಕೀಲರ ಸಂಘದಲ್ಲಿ ಆರೋಗ್ಯ ತಪಾಸಣೆ
ವಕೀಲ ದಿನಾಚರಣೆಯ ಪ್ರಯುಕ್ತ ವಕೀಲರ ಸಂಘದಲ್ಲಿ ರೋಟರಿ ಕ್ಲಬ್ ವಿಷನ್ ಮತ್ತು ಲಯನ್ಸ್ ಕ್ಲಬ್ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ವಕೀಲರು ತಮ್ಮ ವೃತ್ತಿ ಜೀವನದಲ್ಲಿ ಎಷ್ಟೇ ಒತ್ತಡವಿದ್ದರೂ ಸಹ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯಾಧಿಕಾರಿ ಡಾ. ಮಹೇಶ್ ಅವರು ಏಡ್ಸ್ ಜಾಗೃತಿಯ ಬಗ್ಗೆ ಹಾಸನದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಜಗದೀಶ್ ಅರಿವು ಮೂಡಿಸಿದರು.
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಬಾಂಗ್ಲಾ  ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆ ಹಾಗೂ ಬಿಜೆಪಿಯಿಂದ ಬುಧವಾರ ನಗರದಲ್ಲಿ ಬೃಹತ್ ಜನಾಂದೋಲನ ಜಾಥಾ ನಡೆಸಿದಲ್ಲದೇ ನಗರದ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ಬಾಂಗ್ಲಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಪೂರ್ಣವಾಗದ ಅರ್ಜುನ ಆನೆಯ ಪ್ರತಿಮೆಯ ಕೆತ್ತನೆ
ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಡಿಸೆಂಬರ್‌ 4 ರಂದು ಮಾಜಿ ಕ್ಯಾಪ್ಟನ್ ಅರ್ಜುನ ಆನೆ ಮೃತಪಟ್ಟಿ ಒಂದು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಅರ್ಜುನ ಆನೆಯ ಪುಣ್ಯಸ್ಮರಣೆಯೊಂದಿಗೆ ಮೌನಾಚರಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣವಾಗುತ್ತಿದೆ. ಆದರೆ, ಅರ್ಜುನನ ಪ್ರತಿಮೆಯ ಕೆತ್ತನೆ ಪೂರ್ಣವಾಗದ ಕಾರಣ ಸ್ಮಾರಕ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಕಾಂಗ್ರೆಸ್‌ ಸಮಾವೇಶಕ್ಕೆ ಭಾರೀ ಬಿಗಿ ಭದ್ರತೆ
ಹಾಸನ ನಗರದ ಹೊರವಲಯದ ಕೃಷ್ಣ ನಗರದಲ್ಲಿ ಗುರುವಾರ ಕಾಂಗ್ರೆಸ್‌ ಪಕ್ಷದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆದಿಯಾಗಿ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದು, ಖುದ್ದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ನೇತೃತ್ವದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಪೊಲೀಸ್ ಇಲಾಖೆಯಿಂದ ಐವರು ಎಸ್ಪಿ, ಆರು ಎಎಸ್ಪಿ, ೧೨ ಡಿವೈಎಸ್ಪಿ, ೩೦ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌, ೮೦ಕ್ಕೂ ಹೆಚ್ಚು ಪಿಎಸ್‌ಐ ಹಾಗೂ ಸುಮಾರು ೨೦೦೦ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿ ಭದ್ರತೆ ವ್ಯವಸ್ಥೆ ಕೊಡಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್‌ ಸಮಾವೇಶಕ್ಕೆ ಆನಂದ್‌ ಕಾಳೇನಹಳ್ಳಿ ಆಕ್ರೋಶ
ಹಾಸನ ಜಿಲ್ಲೆಯಲ್ಲಿ ಗುರುವಾರ ನಡೆಯುವ ಕಾಂಗ್ರೆಸ್ ಪಕ್ಷದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ದುರುದ್ದೇಶದಿಂದ ಕೂಡಿದೆ. ಈ ಸಮಾವೇಶಕ್ಕೆ ಕೋಟ್ಯಾಂತರ ರು. ಹಣವನ್ನು ವಿನಿಯೋಗ ಮಾಡುವ ಬದಲು ಸರ್ಕಾರಿ ಶಾಲೆ, ರಸ್ತೆ, ಆಸ್ಪತ್ರೆಗಳು ಹಾಗೂ ಸ್ಥಳೀಯ ಶಾಸಕರಿಗೆ ಅನುದಾನ ನೀಡಿದರೆ ಆದಷ್ಟು ಸಾರ್ವಜನಿಕರಿಗೆ ಉಪಯೋಗವಾಗುತ್ತದೆ. ಅದನ್ನು ಹೊರತುಪಡಿಸಿ ಇಂದು ಹಾಸನ ಜಿಲ್ಲೆಗೆ ಆಗಮಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ವಾಭಿಮಾನದ ಸಮಾವೇಶ ನಡೆಸುತ್ತಿರುವುದು ಸರಿಯಲ್ಲ ಎಂದು ಕೆಂಪೇಗೌಡ ವೇದಿಕೆ ರಾಜ್ಯಾಧ್ಯಕ್ಷ ಆನಂದ್‌ ಕಾಳೇನಹಳ್ಳಿ ಕಿಡಿಕಾರಿದರು.
ರಾಯರಕೊಪ್ಪಲಿನಲ್ಲಿ ನಾಳೆ ಬೃಹತ್‌ ಆರೋಗ್ಯ ತಪಾಸಣಾ ಶಿಬಿರ
ರಾಯರಕೊಪ್ಪಲು ಮಗ್ಗೆ ಇನ್ಸ್ಪೈರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಡಿ.6ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ರಾಧಮ್ಮ ಜನಸ್ಪಂದನ ವತಿಯಿಂದ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ರಾಧಮ್ಮ ಜನಸ್ಪಂದನಾ ಸಂಸ್ಥೆಯ ಅಧ್ಯಕ್ಷ ಹೇಮಂತ್ ಕುಮಾರ್‌ ತಿಳಿಸಿದರು. ಈ ಶಿಬಿರದಲ್ಲಿ ಭಾಗವಹಿಸುವವರಿಗೆ ಕ್ಯಾಲ್ಸಿಯಂ ಮತ್ತು ವಿಟಮಿನ್ ಔಷಧಿಗಳನ್ನ ಸಹ ಉಚಿತವಾಗಿ ಕೊಡಲಾಗುವುದು. ಶಿಬಿರದಲ್ಲಿ ಭಾಗವಹಿಸುವ ಎಲ್ಲರಿಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.
ರಾಮನಾಥಪುರದ ಜಾತ್ರೆ ಹಿನ್ನೆಲೆ ತಹಸೀಲ್ದಾರ್‌ ಪೂರ್ವಭಾವಿ ಸಭೆ
ಕಾವೇರಿ ನದಿ ದಂಡೆಯಲ್ಲಿರುವ ರಾಮನಾಥಪುರದಲ್ಲಿ ಡಿ.7ರಂದು ರಥೋತ್ಸವದ ನಡೆಯುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿರುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಹಸೀಲ್ದಾರ್ ಕೆ.ಸಿ. ಸೌಮ್ಯ ಹೇಳಿದರು. ರಾಮನಾಥಪುರದ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ಜಾತ್ರೆ ಹಾಗೂ ರಥೋತ್ಸವ ಪ್ರಯುಕ್ತ ತಾಲೂಕು ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 7ರಂದು ಪ್ರಸನ್ನ ಶ್ರೀ ಸುಬ್ರಮಣ್ಯಸ್ವಾಮಿ ಮಹಾ ರಥೋತ್ಸವ ಹಾಗೂ ಒಂದು ತಿಂಗಳ ಕಾಲ ನಡೆಯುವ ಜಾತ್ರೆಗೆ ಈಗಾಗಲೇ ಸಿದ್ಧತೆ ಆಗಿದೆ ಎಂದರು.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved