• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದವರು ಭೈರಪ್ಪ
ಕನ್ನಡ ಸಾಹಿತ್ಯದ ಕಾದಂಬರಿ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿ ಶ್ರೇಷ್ಠ ಕೃತಿಗಳನ್ನು ನೀಡುವುದರ ಮೂಲಕ ಕನ್ನಡದ ಅದರಲ್ಲೂ ಹಾಸನದ ನೆಲದನಿಯ ಕಂಪನ್ನು ರಾಜ್ಯ, ದೇಶ, ಹೊರದೇಶಗಳಲ್ಲಿಯೂ ಪಸರಿಸುವುದರ ಮುಖೇನ ನಾಡುನುಡಿಗೆ ಕೀರ್ತಿ ತಂದ ಅಪ್ರತಿಮ ಬರಹಗಾರ ಎಸ್‌. ಎಲ್. ಭೈರಪ್ಪ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್‌ ಅಭಿಪ್ರಾಯಪಟ್ಟರು.
ದೇಶ ಕಟ್ಟುವುದು ವಿದ್ಯಾರ್ಥಿಗಳ ಕರ್ತವ್ಯ
ಹಳೇಬೀಡಿನ ಪ್ರಥಮ ದರ್ಜೆ ಕಾಲೇಜು ಎಂದರೆ ಒಂದು ಗುರುಕುಲ ಮಾದರಿ ಇರುವ ಕಾಲೇಜು ಆಗಿದೆ. ಹಾಸನ ಜಿಲ್ಲೆಗೆ ಒಳ್ಳೆಯ ಫಲಿತಾಂಶ, ಅಧಿಕ ಸಂಖೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಪ್ರಥಮ ಸ್ಥಾನದಲಿ ಇದ್ದು, ನನ್ನ ಕ್ಷೇತ್ರದ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಪ್ರಾಧ್ಯಾಪಕ ವೃಂದದವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಗುರುಕುಲದ ಆವರಣದಲ್ಲಿ ಒಂದೊಂದು ಗಿಡಗಳನ್ನು ತಮ್ಮ ತಾಯಿಯ ನೆನಪಿನಲ್ಲಿ ಗಿಡವನ್ನು ಹಾಕಿ ಬೆಳೆಸಿದರೆ ದೊಡ್ಡ ಹೆಮ್ಮರವಾಗುತ್ತದೆ. ಆಗ ದೇಶದ ವಾತಾವರಣ ಪರಿವರ್ತನೆಯಾಗುತ್ತದೆ. ದೇಶ ಕಟ್ಟುವುದು ನಿಮ್ಮ ಕರ್ತವ್ಯ ಎಂದು ತಿಳಿಸಿದರು.
ಜನ ಮಂಗಳ ಯೋಜನೆಯಡಿ ಅಂಗವಿಕಲರಿಗೆ ನೆರವು
ಹಳೇಬೀಡಿನ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ದೊಡ್ಡ ಬೀದಿಯ ಮಹೇಶ್ವರಿ ಶಿವಕುಮಾರ್‌ ಸುಮಾರು ಆರು ತಿಂಗಳಿಂದ ಅನಾರೋಗ್ಯದಿಂದ ಮಲಗಿದ್ದರು. ಅವರಿಗೆ ವಾಟರ್ ಬೆಡ್ ನೀಡಿ ಮಾತನಾಡುತ್ತಾ ಬೇಲೂರು ತಾಲೂಕಿನಲ್ಲಿ ವಾಟರ್‌ಬೆಡ್- ೩೯, ವೀಲ್‌ಚೇರ್- ೫೯, ಯು-ಶೇಪ್‌ವಾಕರ್‌ಗಳು-೧೩, ಒನ್ನು ಸೈಡ್ ವಾಕರ್-೪೪, ಇನ್ನು ಹಲವಾರು-೧೮೫ ಸಾಮಗ್ರಿಗಳನ್ನ ನಮ್ಮ ತಾಲೂಕಿನಲ್ಲಿ ನೀಡಿದ್ದು, ಕರ್ನಾಟಕ ರಾಜ್ಯದಲ್ಲಿ ಸುಮಾರು ಈ ವರ್ಷ ಕೋಟಿ ೬೬ ಲಕ್ಷದ ಮೌಲ್ಯದಲ್ಲಿ ೮೧೮೮ ಜನರಿಗೆ ಸಲಕರಣೆ ನೀಡಿದ ಏಕೈಕ ಸಂಘ ಎಂದರೆ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ತಿಳಿಸಿದರು.
ಗಣಪತಿ ಆಸ್ಥಾನದಲ್ಲಿ ಆರೋಗ್ಯಕ್ಕಾಗಿ ಯೋಗ ಶಿಬಿರ
ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ "ಆರೋಗ್ಯಕ್ಕಾಗಿ ಯೋಗ ಶಿಬಿರ " ಆರಂಭವಾಗಿದೆ. ಸುಮಾರು ೧೩ ವರ್ಷಗಳಿಂದ ನಿರಂತರವಾಗಿ ಗಣಪತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ೨೦ ದಿನಗಳ ಕಾಲ ಯೋಗಾಸನ, ಪ್ರಾಣಾಯಾಮ ಧ್ಯಾನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಪರಿಸರ ಕಾಳಜಿಯಿಂದ ಗಿಡ ನೆಡುವ ಕಾರ್ಯಕ್ರಮ ಮನೆಮದ್ದುಗಳ ಮಹತ್ವ ತಿಳಿಸಿ ಬೆಳೆಸಲು ಔಷಧಿ ಸಸ್ಯಗಳ ವಿತರಣೆ ಇನ್ನೂ ಹೆಚ್ಚಿನ ಆರೋಗ್ಯದ ಅರಿವು ಮೂಡಿಸುವ ಉದ್ದೇಶದಿಂದ ಅನುಭವಿಗಳು, ವೈದ್ಯರನ್ನು ಕರೆಸಿ ಅವರಿಂದ ಉಪನ್ಯಾಸ ಕಾರ್ಯಕ್ರಮ ಕೂಡ ಏರ್ಪಡಿಸಲಾಗುತ್ತಿದೆ.
ಕೆರೆ ತುಂಬಿಸುವ ಯೋಜನೆಗೆ ಚಾಲನೆ
ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿಗೆ ದೊಡ್ಡಗಾವನಹಳ್ಳಿ ಏತ ನೀರಾವರಿ ಯೋಜನೆಯಿಂದ ಕೆರೆಗಳನ್ನು ತುಂಬಿಸುವ ಯೋಜನೆಗೆ ಶಾಸಕರು ಎ ಮಂಜು ಶನಿವಾರ ಚಾಲನೆ ನೀಡಿದ ನಂತರ ಮಾತನಾಡಿದರು. ಗಂಗನಾಳು ಏತ ನೀರಾವರಿ ಯೋಜನೆಯ ಎರಡನೇ ಹಂತದ ದೊಡ್ಡಗಾವನಹಳ್ಳಿ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸಲು ಇಂದು ಚಾಲನೆ ನೀಡಿದ್ದು ಸುಮಾರು 40ಕ್ಕೂ ಹೆಚ್ಚು ಕೆರೆಗಳು ತುಂಬುತ್ತಿದ್ದು ಅಂತರ್ಜಲ ಹೆಚ್ಚಾಗುತ್ತಿದ್ದು ರೈತರಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತಿದ್ದು ರೈತರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಗಣತಿ ಕಾರ್ಯಕ್ಕೆ ಅಡ್ಡಿಯಾದ ತಾಂತ್ರಿಕ ಸಮಸ್ಯೆ
ಶೈಕ್ಷಣಿಕ ಮತ್ತು ಆರ್ಥಿಕ ಗಣತಿ ಕಾರ್ಯ ತಾಂತ್ರಿಕ ಸಮಸ್ಯೆಗಳಿಂದ ಸರಿಯಾಗಿ ನeಡಯುತ್ತಿಲ್ಲ ಎಂದು ಶಿಕ್ಷಕರ ಸಂಘದ ಪ್ರತಿನಿಧಿಗಳು ಈ ಬಗ್ಗೆ ತಹಸೀಲ್ದಾರರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು. ಅಲ್ಲದೇ ಶಿಕ್ಷಕರನ್ನು ತಮ್ಮ ಕರ್ತವ್ಯ ಪ್ರದೇಶದಲ್ಲಿಲ್ಲದೆ ದೂರದ ಹಳ್ಳಿಗಳಿಗೆ ನಿಯೋಜಿಸಿರುವುದು ಇನ್ನೊಂದು ಅಸಮಾಧಾನಕ್ಕೆ ಕಾರಣವಾಗಿದೆ. ನಿವೃತ್ತಿ ಅಂಚಿನಲ್ಲಿರುವವರು, ಗರ್ಭಿಣಿಯರು ಹಾಗೂ ರೋಗಿಗಳಿಗೂ ಗಣತಿ ಕಾರ್ಯವನ್ನು ಹಂಚಿರುವುದು ಶಿಕ್ಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ ಎಂದು ವಿವರಿಸಿದರು.
ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು
ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು. ವಿದ್ಯಾರ್ಥಿಗಳು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಆರೋಗ್ಯ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಂಕರ್ ಹೇಳಿದ್ದಾರೆ. ತಾಲೂಕು ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ಮಾತನಾಡಿ, ವಯೋಸಹಜ ಆಕರ್ಷಣೆಯಿಂದ ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಸಮಾಜದ ಅಭಿವೃದ್ಧಿಗೆ ಸಮರ್ಪಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರಿನಲ್ಲಿ ಬಂದು ತಳ್ಳುಗಾಡಿಯಲ್ಲಿ ಕಳ್ಳತನ
ತಳ್ಳುಗಾಡಿ ಇಟ್ಟು ವ್ಯಾಪಾರ ಮಾಡುತ್ತಿದ್ದ ಬಡ ಮಹಿಳೆ ನಾಗಮ್ಮ ಕಂಬನಿ ಮಿಡಿಯುತ್ತಾ ಮಾತನಾಡಿ, ಹೊಟ್ಟೆಪಾಡಿಗಾಗಿ ಸಾಲ ಮಾಡಿ ಚಿಕ್ಕದಾದ ತಳ್ಳುಗಾಡಿಯಲ್ಲಿ ಪೆಟ್ಟಿಗೆ ಅಂಗಡಿ ನಿರ್ಮಿಸಿಕೊಂಡು ಸಣ್ಣ ಪುಟ್ಟ ವಸ್ತುಗಳನ್ನು ಮಾರಿ ಜೀವನ ಸಾಗಿಸುತ್ತಿದ್ದೇನೆ. ನಿನ್ನೆ ಸಂಜೆಯಷ್ಟೇ ವ್ಯಾಪಾರಕ್ಕಾಗಿ ಸಗಟು ಮಾರಾಟ ಅಂಗಡಿಯಿಂದ ಮಸಾಲೆ ಹಾಗೂ ದಿನಸಿ ಪದಾರ್ಥಗಳನ್ನು ತಂದು ಇಟ್ಟಿದ್ದೆ ಆದರೆ ಯಾರೋ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಅದನ್ನು ದೋಚಿರುವುದಲ್ಲದೆ ಕೂಡಿಟ್ಟಿದ ಸಾವಿರಾರು ರುಪಾಯಿ ಹಣವನ್ನು ಲಪಟಾಯಿಸಿದ್ದಾನೆ ಎಂದರು.
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬ ಖಂಡಿಸಿ ಪ್ರತಿಭಟನೆ
ರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ೪೩೨ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು ೬,೦೦೦ ಕಾಯಂ ಉಪನ್ಯಾಸಕರಲ್ಲಿ ೩,೦೦೦ಕ್ಕಿಂತ ಹೆಚ್ಚು ಮಂದಿ ಈಗಾಗಲೇ ನಿವೃತ್ತರಾಗಿದ್ದಾರೆ. ಇನ್ನುಳಿದ ೩,೦೦೦ ಕಾಯಂ ಉಪನ್ಯಾಸಕರ ಜೊತೆ ಸುಮಾರು ೧೨,೦೦೦ ಅತಿಥಿ ಉಪನ್ಯಾಸಕರ ನೆರವಿನಿಂದ ತರಗತಿಗಳು ಸಾಗುತ್ತಿವೆ. ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು, ಅದನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು, ನ್ಯಾಯಾಲಯದ ಆದೇಶವನ್ನೂ ಕಡೆಗಣಿಸಿ, ನೇಮಕಾತಿಯಲ್ಲಿ ಗಂಭೀರ ವಿಳಂಬ ತರುತ್ತಿರುವುದು ನಿಜಕ್ಕೂ ಕಳವಳಕರ ಎಂದರು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಸಿಗಬೇಕು
ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಏರ್ಪಡಿಸಲಾಗಿದ್ದ ಸಾಮಾಜಿಕ ನ್ಯಾಯದ ಕುರಿತು ಜಿಲ್ಲಾಮಟ್ಟದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾನತೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲರೂ ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವುದರಿಂದ ನಮ್ಮಲ್ಲಿಯೇ ಒಂದು ಅರಿವು ಮೂಡುತ್ತದೆ. ಹಾಗಾಗಿ ಈ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved