ದೇವರ ದಾಸಿಮಯ್ಯ ಬಸವಾದಿ ಶರಣರಿಗೂ ಮಾರ್ಗದರ್ಶಕರುನೇಯ್ಗೆ ಕಾಯಕದ ಅವತಾರ ಪುರುಷ ದೇವರ ದಾಸಿಮಯ್ಯ ಅವರಾಗಿದ್ದಾರೆ, ಇವರು ಬಸವಾದಿ ಶರಣರಿಗೂ ಮಾರ್ಗದರ್ಶಕರಾಗಿದ್ದವರು, ನೇಯ್ಗೆ ವೃತ್ತಿಯಿಂದ ಕಾಯಕಕ್ಕೆ ಬುನಾದಿ ಹಾಕಿದವರು, ವಚನ ಸಾಹಿತ್ಯಕ್ಕೆ ಪೀಠಿಕೆ ಬರೆದು ಮುನ್ನುಡಿ ಹಾಕಿದವರು ದೇವರ ದಾಸಿಮಯ್ಯ, ಶರಣರ ತತ್ವಗಳನ್ನು ಪ್ರಚಾರ ಮಾಡಿದವರಾಗಿದ್ದಾರೆ. ಬಸವಣ್ಣನವರು ಕೂಡ ಇವರ ಕುರಿತು ವಚನಗಳಲ್ಲಿ ಹಾಡಿ ಹೊಗಳಿದ್ದಾರೆ. ದೇವರ ದಾಸಿಮಯ್ಯ ಅವರು ಕೇವಲ ಒಂದು ಜಾತಿ ಧರ್ಮಕ್ಕೆ ಸೀಮಿತವಾಗದೆ ಸಮಸ್ತ ಕುಲ ಕೋಟಿಗೆ ಸೇರಿದವರಾಗಿದ್ದಾರೆ. ಇವರು ವಚನ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದು ನಗರಸಭೆಯ ಅಧ್ಯಕ್ಷ ಚಂದ್ರೇಗೌಡ ಅವರು ತಿಳಿಸಿದ್ದಾರೆ.