• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದಾಳು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ತಿಮ್ಮೇಗೌಡ ಅವಿರೋಧ ಆಯ್ಕೆ
ಆಲೂರು ತಾಲೂಕಿನ ಕದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ತುರುಗನಹಳ್ಳಿ ಗ್ರಾಮದ ತಿಮ್ಮೇಗೌಡ (ಕಾಂತರಾಜು) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷ ಶಾಂತಮಲ್ಲಪ್ಪ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ತಿಮ್ಮಗೌಡ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪಕ್ಷಭೇದ ಮರೆತು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿ
ಹಾಸನದಲ್ಲಿ ನಡೆಯುತ್ತಿರುವ ಬೃಹತ್ ಸ್ವಾಭಿಮಾನಿ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿಕೊಳ್ಳೋಣ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಕರೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ರಾಜ್ಯ ಸರ್ಕಾರದೊಟ್ಟಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡೋಣ ಎಂದು ಮನವಿ ಮಾಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಂಘೀಕುಸ್ತಿ
ಈಗಾಗಲೇ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರ ಆಯ್ಕೆ ಬಾಕಿ ಇದೆ. ಅದಕ್ಕಾಗಿ ಭಾರೀ ಹಣಾಹಣಿ ನಡೆಯುತ್ತಿದ್ದು, ಬಾಗೂರು ಮಂಜೇಗೌಡ ಅವರ ಸಹೋದರ ಸಾರಿಗೆ ಇಲಾಖೆ ನೌಕರ ಕೃಷ್ಣೇಗೌಡ ಪರ ಹೆಚ್ಚಿನ ಒಲವು ಪ್ರಾಥಮಿಕವಾಗಿ ಕಂಡು ಬರುತ್ತಿದ್ದು, ಮತ್ತೊಬ್ಬ ಆಕಾಂಕ್ಷಿ ಶ್ರೀನಿವಾಸ್ ಸಹ ತೆರೆಮರೆಯಲ್ಲಿ ತಮ್ಮ ಗೆಲುವಿಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ಅಧ್ಯಕ್ಷರ ಚುನಾವಣೆಗೆ ಸಮಬಲದ ಹೋರಾಟ ನಡೆಯುತ್ತಿದ್ದು, ಅಧ್ಯಕ್ಷೀಯ ಚುನಾವಣಾ ಕಣ ರಂಗೇರಿದೆ.
ಕಾಡಾನೆ ಹಾವಳಿಯಿಂದ ಬಸವಳಿದ ರೈತರಿಂದ ರಸ್ತೆತಡೆ
ಕಾಡಾನೆ ಹಾವಳಿಯಿಂದ ಬಸವಳಿದ ರೈತರು ಬೇಲೂರು ತಾಲೂಕು ಬಿಕ್ಕೋಡು ಹೋಬಳಿಯ ತಗರೆಯಲ್ಲಿ ಸಕಲೇಶಪುರ- ಬೇಲೂರು ಮುಖ್ಯರಸ್ತೆ ತಡೆದು ದಿನವಿಡೀ ಪ್ರತಿಭಟನೆ ನಡೆಸಿದ್ದರಿಂದ ಅರೇಹಳ್ಳಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳಲು ಸಾಧ್ಯವಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನೆ ಮುಂದುವರಿದ ಪರಿಣಾಮ‌ ಕತ್ತಲಾಗುತ್ತಿದ್ದರೂ ಬಸ್ ಬಾರದೇ ವಿದ್ಯಾರ್ಥಿಗಳು ಆತಂಕಕ್ಕೀಡಾದರು.
ಕಾನೂನು ವ್ಯವಸ್ಥೆ ಇಲ್ಲದಿದ್ದರೇ ಬದುಕು ದುಸ್ತರ
ಸಮಾಜದಲ್ಲಿ ಕಾನೂನು ವ್ಯವಸ್ಥೆ ಇಲ್ಲದಿದ್ದರೇ ಬದುಕು ಏನಾಗುತಿತ್ತು ಎನ್ನುವ ಬಗ್ಗೆ ನೆನಪಿಸಿಕೊಂಡರೇ ನಮಗೆ ಭಯವಾಗುತ್ತದೆ. ದೇಶದ ಇತಿಹಾಸದಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಕರ್ನಾಟಕ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅಭಿಪ್ರಾಯಪಟ್ಟರು. ವಕೀಲರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಈಗಿರುವ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಕೊಡಬೇಕಾದರೇ ವಾದ ವಿವಾದಗಳು ಇರುತ್ತದೆ ಎಂದು ಹೇಳಿದರು.
ವಕೀಲ ವೃತ್ತಿಯೂ ಬಹಳ ಗೌರವಯುತವಾದದ್ದು
ಸಮಾಜದಲ್ಲಿ ನೊಬೆಲ್ ವೃತ್ತಿ ಎಂದು ಗುರುತಿಸಿ ಕೊಂಡಿರುವ ವಕೀಲ ವೃತ್ತಿಯೂ ಬಹಳ ಗೌರವಯುತವಾಗಿದೆ. ವಕೀಲ ವೃತ್ತಿಯ ಕಲಿಕೆಯ ಅಭಿರುಚಿಯೂ ಉತ್ತಮವಾಗಿದ್ದು, ಸಮಾಜದಲ್ಲಿ ನಾನಾ ಸ್ತರದಲ್ಲಿ ಜೀವನ ರೂಪಿಸಿಕೊಳ್ಳಲು ಉತ್ತಮ ವೃತ್ತಿಯಾಗಿದೆ. ದಾಸಶ್ರೇಷ್ಠ ಕನಕದಾಸರು ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಜತೆಗೆ ಉತ್ತಮ ರಾಷ್ಟ್ರ ನಿರ್ಮಾಣಕ್ಕೂ ಮಾರ್ಗದರ್ಶನ ನೀಡುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಅಭಿಪ್ರಾಯಪಟ್ಟರು.
ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಮಾಡುವ ನೈತಿಕತೆ ಕಾಂಗ್ರೆಸಿಗರಿಗಿಲ್ಲ
ಡಿ.೫ರಂದು ನಡೆಯುವ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಹಾಸನಕ್ಕೆ ಈ ಸರ್ಕಾರ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವುದನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಬಹಿರಂಗಗೊಳಿಸುವಂತೆ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ಆಗ್ರಹಿಸಿದರು. ಈ ಸರ್ಕಾರಕ್ಕೆ ಈ ಸಮಾವೇಶ ನಡೆಸುವ ನೈತಿಕತೆ ಇಲ್ಲ. ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಂತೆ ಅನುದಾನ ಬಿಡುಗಡೆ ಮಾಡಿಲ್ಲ.
ಮೊಬೈಲ್‌ ಬಳಕೆ ಹೆಚ್ಚಾಗಿ ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತಿದೆ
ಇಂದಿನ ಕಾಲಘಟ್ಟದಲ್ಲಿ ಮಕ್ಕಳು ಹೊರಾಂಗಣ ಕ್ರೀಡೆ ಮತ್ತು ಆಟೋಟ ಸ್ಪರ್ಧೆಗಳನ್ನು ಬಿಟ್ಟು ಮೊಬೈಲ್‌ಗಳ ಬಳಕೆ ಹೆಚ್ಚಾದ ಕಾರಣ ಮಕ್ಕಳಲ್ಲಿ ಆತ್ಮವಿಶ್ವಾಸˌ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತಗೂಳ್ಳುತ್ತಿದೆ. ಆದ್ದರಿಂದ ಪೋಷಕರು ಎಚ್ಚರ ವಹಿಸಬೇಕು ಎಂದು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಜಾವಲಿನ್ ಆಟಗಾರ ಪ್ರದೀಪ್ ಜಿ ಪಿ ಕಿವಿಮಾತು ಹೇಳಿದರು.
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು
ಪರಿಸರವನ್ನು ಉಳಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದ್ದು, ಪ್ರತಿಯೊಬ್ಬರು ಪರಿಸರವನ್ನು ಸಂರಕ್ಷಿಸಲು ಮುಂದಾಗಬೇಕಿದೆ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ಸಿ.ಎ ದೇವಾನಂದ್ ಹೇಳಿದರು. ಹಾನುಬಾಳು ರೋಟರಿ ಸಂಸ್ಥೆ ವತಿಯಿಂದ ಸಾರ್ವಜನಿಕರಿಗೆ ಪರಿಸರ ಮತ್ತು ಸ್ವಚ್ಛತೆಯ ಕುರಿತು ಮಾಹಿತಿ ಫಲಕವನ್ನು ಹಾನುಬಾಳ್ ಸಮೀಪದ ಮಗಜಹಳ್ಳಿ ಅಬ್ಬಿ ಫಾಲ್ಸ್ ಬಳಿ ಅನಾವರಣಗೊಳಿಸಿದ ನಂತರ ಮಾತನಾಡಿದರು. ತಾಲೂಕಿನಲ್ಲಿ ಅನೇಕ ಪ್ರವಾಸಿ ಸ್ಥಾನಗಳಿದ್ದು ಇವುಗಳನ್ನು ವೀಕ್ಷಿಸಲು ಬರುವ ಪ್ರವಾಸಿಗರು ಸ್ವಚ್ಛತೆಯನ್ನು ಕಾಪಾಡುವ ಅವಶ್ಯಕತೆಯಿದೆ ಎಂದರು.
ಹುಟ್ಟೂರು ಹೇರೂರಲ್ಲಿ ನಟಿ ಶೋಭಿತಾ ಅಂತ್ಯಕ್ರಿಯೆ
ತೆಲಂಗಾಣದ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕನ್ನಡದ ನಟಿ ಶೋಭಿತಾ ಶಿವಣ್ಣರವರ ಅಂತ್ರಕ್ರಿಯೆ ಅವರ ಹುಟ್ಟೂರು ಹೇರೂರು ಗ್ರಾಮದಲ್ಲಿ ನಡೆಯಿತು. ಸಕಲೇಶಪುರ ತಾಲೂಕಿನ ಚಂಗಡಹಳ್ಳಿ ಸಮೀಪದ ಹೇರೂರು ಗ್ರಾಮದಲ್ಲಿ ಮಲೆನಾಡು ಸಂಪ್ರದಾಯದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅಂತಿಮ ವಿಧಿ ಪೂಜೆ ನಡೆಸಿ ಮಂಗಳವಾರ ಎರಡು ಗಂಟೆಗೆ ಅಂತ್ಯಕ್ರಿಯೆ ನಡೆಸಿದರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved