• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಕಲಗೂಡಲ್ಲೂ ವೈದ್ಯರ ಪ್ರತಿಭಟನೆ
ಕರ್ತವ್ಯನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ದುಷ್ಕೃತ್ಯವನ್ನು ಖಂಡಿಸಿ ವೈದ್ಯರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ತಾಲೂಕು ಸರ್ಕಾರಿ ವೈದ್ಯರ ಸಂಘದ ಘಟಕ ಹಾಗೂ ಖಾಸಗಿ ಘಟಕದ ವೈದರು, ಸಿಬ್ಬಂದಿ ಪಟ್ಟಣದ ಅನಕೃ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಮಾತನಾಡಿ, ಕರ್ತವ್ಯ ನಿರತ ವೈದರ ಮೇಲಿನ ಅತ್ಯಾಚಾರ, ಕೊಲೆಯಾಗಿರುವುದು ಅಮಾನುಷ ಕೃತ್ಯವಾಗಿದೆ. ಇದರಿಂದ ವೈದ್ಯಕೀಯ ಸೇವೆ ಸಲ್ಲಿಸುವ ವೃಂದಕ್ಕೆ ಜೀವ ಭಯ ಉಂಟು ಮಾಡಿದೆ. ವೈದ್ಯರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ ಎಂದು ವಿಷಾದಿಸಿದರು.
ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸ್ತಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಬಾಣಾವರದ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 206 ಅನ್ನು ತಡೆದು, ಟೈಯರ್‌ಗೆ ಬೆಂಕಿ ಹಚ್ಚುವುದರ ಮೂಲಕ ರಾಜ್ಯಪಾಲರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ನೀರಿಗೆ ಬಿದ್ದು ಇಬ್ಬರು ಸಾವು
ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿ ಕಾಲುಜಾರಿ ನೀರಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮಹೇಶ್ ಎಂಬುವರ ಮಗ ಶ್ರೀಕಾಂತ್ (15 ವರ್ಷ) ಹಾಗೂ ಚಿಕ್ಕವಯಸ್ಸಿನಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಂತಹ ವಿಜಯ್ (18 ವರ್ಷ) ಗ್ರಾಮದ ದೊಡ್ಡ ಕೆರೆಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಜೋರಾಗಿ ಮಳೆ ಬರುತ್ತಿದ್ದ ಕಾರಣ ಪಕ್ಕದಲ್ಲಿದ್ದಂತಹ ಮರದ ಬಳಿ ನಿಂತ ಸಂದರ್ಭದಲ್ಲಿ ವಿಜಯ್ ಚಪ್ಪಲಿ ಜಾರಿ ನೀರಿಗೆ ಬಿದಿದೆ. ಅದನ್ನು ತರಲು ಹೋದಾಗ ಶ್ರೀಕಾಂತ್ ನೀರಿಗೆ ಬಿದ್ದಿದ್ದಾನೆ. ದಡದಲ್ಲಿದ್ದ ವಿಜಯ್ ಆತನನ್ನು ರಕ್ಷಿಸಲು ಹೋಗಿ ತಾನು ಸಹ ಮುಳುಗಿ ಸಾವನ್ನಪ್ಪಿದ್ದಾನೆ.
ಡೆಂಘೀ ಮುಕ್ತವಾಗಲು ಎಲ್ಲರೂ ಶ್ರಮಿಸೋಣ
ರೋಟರಿ ಕ್ಲಬ್ ಬೇಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಮೇದೂರು ಹಾಗೂ ಸರ್ಕಾರಿ ಪ್ರೌಢಶಾಲೆ ಗಬ್ಬಲಗೋಡು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಕ್ಲಬ್ ಕಾರ್ಯದರ್ಶಿ ಬಿ.ಬಿ.ಶಿವರಾಜು, ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ಡೆಂಘೀ ಬಗ್ಗೆ ಭಯಪಡಬೇಕಾದ ಅವಶ್ಯಕತೆ ಇಲ್ಲ. ಆದರೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಅಪಾಯ ಮಾತ್ರ ಕಟ್ಟಿಟ್ಟ ಬುತ್ತಿ ಎಂದರು.
ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವರಮಹಾಲಕ್ಷ್ಮಿ ವ್ರತಾಚರಣೆ
ಹೊಳೆನರಸೀಪುರ ಪಟ್ಟಣದ ಐತಿಹಾಸಿಕ ಹಿನ್ನೆಲೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಪಟ್ಟಣದಲ್ಲಿ ಸುಮಂಗಲಿಯರು ಅವರ ಮನೆಗಳಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಶ್ರೀದೇವಿಯ ಆರಾಧನೆಗಾಗಿ ಹಿರಿಯರ ಮಾರ್ಗದರ್ಶನದಂತೆ ಕಳಸ ಪ್ರತಿಷ್ಠಾಪಿಸಿ, ಶ್ರೀದೇವಿಯ ಮುಖವಾಡದಿಂದ ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿದ ನಂತರ ಅಕ್ಕಪಕ್ಕದ ಮನೆಯ ಮಹಿಳೆಯರನ್ನು ಅರಿಶಿನ ಕುಂಕುಮಕ್ಕೆ ಆಹ್ವಾನಿಸಿ, ಸತ್ಕರಿಸುವ ಸಂಪ್ರದಾಯದ ಆಚರಣೆ ಪಾಲನೆಯನ್ನು ಮಾಡುವ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಹಬ್ಬದ ಆಚರಣೆಗೆ ಮೆರುಗನ್ನು ನೀಡಿದರು.
ವಯನಾಡಿನ ಘಟನೆಯಿಂದ ಮನುಕುಲ ಎಚ್ಚೆತ್ತುಕೊಳ್ಳಬೇಕಿದೆ
ಕೇರಳದ ವೈನಾಡಿನಲ್ಲಿ ನಡೆದ ಪ್ರಕೃತಿ ವಿಕೋಪ ಮನುಕುಲಕ್ಕೆ ಪಾಠವಾಗಿದ್ದು ಇನ್ನಾದರೂ ಪರಿಸರದ ಉಳಿವಿನ ಬಗ್ಗೆ ಜಾಗೃತಿ ವಹಿಸಿ ಕಾಪಾಡಬೇಕು ಎಂದು ಬೇಲೂರು ತಹಸೀಲ್ದಾರ್‌ ಎಂ ಮಮತಾ ಕರೆ ನೀಡಿದರು. ತ್ಯಾಗ ಬಲಿದಾನದಿಂದ ಪಡೆದ ಸ್ವಾತಂತ್ರ್ಯ ನಮಗೆ ಆತ್ಮಗೌರವ ನೀಡುವ ಸಂಕೇತವಾಗಬೇಕಿದೆ. ಶಾಂತಿಯುತ ಬದುಕು ಪ್ರತಿಯೊಬ್ಬ ಭಾರತೀಯರ ಉಸಿರಾಗಬೇಕಿದೆ. ಭಾರತದ ಸ್ವಾತಂತ್ರ್ಯಕ್ಕೆ ಕರುನಾಡಿನ ಪಾತ್ರ ಹಿರಿದು, ಹಾಸನ ಜಿಲ್ಲೆಯಲ್ಲಿನ ಹತ್ತಾರು ಮಹನೀಯರು ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಹೊಯ್ಸಳರ ನಾಡಿಗೆ ಮಹಾತ್ಮ ಗಾಂಧಿಯವರು ಬಂದು ಇಲ್ಲಿನ ಚನ್ನಕೇಶವಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಶಿಲ್ಪಕಲಾ ವೈಭವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮ್ಮೆಲ್ಲರ ಹೆಮ್ಮೆಯ ವಿಚಾರ ಎಂದರು.
ರೈಲು ಸಂಚಾರ ಮತ್ತೆ ಅನಿರ್ದಿಷ್ಟಾವಧಿ ರದ್ದು
ಸಕಲೇಶಪುರ ತಾಲೂಕಿನ ಆಚಂಗಿ ಗ್ರಾಮ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಭೂ ಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿಯವರೆಗೆ ರದ್ದುಗೊಳಿಸಲಾಗಿದೆ. ಭೂಕುಸಿತ ಸಂಭವಿಸಿದ ಪ್ರದೇಶದಲ್ಲೇ ಮತ್ತೆ ಹಳಿಗಳ ಮೇಲೆ ಭೂಮಿ ಕುಸಿದ ಪರಿಣಾಮ ರೈಲನ್ನು ಬಾಳ್ಳುಪೇಟೆ ಬಳಿ ತಡೆಹಿಡಿಯಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರವಾರ ಎಕ್ಸ್‌ಪ್ರೆಸ್ ರೈಲನ್ನು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ಇದರಿಂದಾಗಿ ನಿಗದಿತ ಸ್ಥಳಕ್ಕೆ ಸರಿಯಾದ ಸಮಯಕ್ಕೆ ತಲುಪಲಾಗದೆ ಎರಡು ರೈಲಿನಲ್ಲಿದ್ದ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿತ್ತು.
ಆಲೂರಲ್ಲಿ ಯುವಕರ ಬಳಗದಿಂದ ಸ್ವಾತಂತ್ರ್ಯೋತ್ಸವ
ಆಲೂರು ಪಟ್ಟಣದ ಯಡೂರು ಕ್ರಾಸ್ ರಸ್ತೆ ಬಳಿ ಇರುವ ಎಫ್.ಎಂ ಚಿಕನ್ ಸೆಂಟರ್ ಆವರಣದಲ್ಲಿ ಯುವಕರ ಬಳಗದ ಚೇತನ್ ಹಾಗೂ ನವಾಜ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಎಟಿ ಮಲ್ಲೇಶ್ ಮಾತನಾಡಿದರು. ಭಾರತ ದೇಶ ಅನೇಕ ಭಾಷೆ, ಧರ್ಮ ಅನೇಕ ಜಾತಿಗಳಿಂದ ಕೂಡಿದ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ದೇಶದಲ್ಲಿ ಕೋಮುವಾದ, ಭ್ರಷ್ಟಾಚಾರ, ಜಾತಿ ಸೇರಿದಂತೆ ಅನಿಷ್ಟ ಪದ್ಧತಿ ನಿರ್ಮೂಲನೆಗಾಗಿ ಶ್ರಮಿಸಬೇಕಾಗಿದೆ. ಮಕ್ಕಳಿಗೆ ದೇಶಾಭಿಮಾನ ಬೆಳೆಸಲು ರಾಷ್ಟ್ರನಾಯಕರ, ಮಹಾನ್‌ ಪುರುಷರ , ಶರಣರ, ದಾರ್ಶನಿಕರ ಜೀವನ ಆಧಾರಿತ ವಿಷಯ ಹೇಳಬೇಕು ಎಂದು ಹೇಳಿದರು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ನವೀನ್ ಕುಮಾರ್
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕ್ರೀಡಾಂಗಣ ಮೈದಾನದಲ್ಲಿ ಗುರುವಾರದಂದು ಬೆಳಿಗ್ಗೆ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ವಿ. ಎಸ್. ನವೀನ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸರು ಮತ್ತು ಹೋಂ ಗಾರ್ಡ್‌ಗಳು ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳ ತಂಡದ ಬಳಿ ತೆರೆದ ವಾಹನದಲ್ಲಿ ಸಾಗಿ ಪಥ ಸಂಚಲನ ನಡೆಸುವ ತುಕಡಿಗಳ ಪರಿಚಯ ಮಾಡಿಕೊಂಡರು.
ಮನೆಮನೆಯಲ್ಲಿ ಭಕ್ತಿಪೂರ್ಣ ವರಮಹಾಲಕ್ಷ್ಮಿ ವ್ರತ
ಮಹಾಲಕ್ಷ್ಮಿಗೆ ಮುಖವಾಡ ಹಾಕಿ ಶೃಂಗಾರ ಮಾಡಿ ದೇವಿಗೆ ಸೀರೆ ಹಾಕಿ, ಹೂವಿನಿಂದ ದೇವಿಯನ್ನು ಅಲಂಕಾರ ಮಾಡುತ್ತಾರೆ ಮತ್ತು ವಿವಿಧ ಸಿಹಿ ತಿನಿಸುಗಳನ್ನು ದೇವರ ಮುಂದೆ ಇಟ್ಟು ಪೂಜೆ ಸಲ್ಲಿಸುವ ವೇಳೆ ಐಶ್ವರ್ಯ ಕೊಡುವಂತೆ ಮಹಿಳೆಯರು ಬೇಡುವ ಪದ್ಧತಿಯನ್ನು ಹಿಂದಿನಿಂದಲೂ ನಡೆಸಿಕೊಂಡು ಬಂದಿದ್ದಾರೆ. ಹಾಸನದ ನಗರದ ಲಕ್ಷ್ಮೀಪುರಂ ಬಡಾವಣೆ, ಜವೇನಹಳ್ಳಿ ಮಠದ ಬಳಿ ವಾಸವಾಗಿರುವ ಶಿಕ್ಷಕರು ಮತ್ತು ಪತಂಜಲಿ ಸಮಿತಿಯ ಪ್ರಭಾರಿ ಗಿರೀಶ್ ಮತ್ತು ಪಲ್ಲವಿ ಮನೆಯೊಲ್ಲಿ ಭಕ್ತಿಪೂರ್ಣವಾಗಿ ವರಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಯಿತು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 416
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved