• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇರೆ ಭಾಷೆಗಳನ್ನು ಕಲಿತರೂ ಕೂಡ ಕನ್ನಡವನ್ನು ಬಿಡಬಾರದು
ಕನ್ನಡ ಭಾಷಾ ಅಭಿಮಾನ ಕೇವಲ ನವೆಂಬರ್‌ ತಿಂಗಳಿಗೆ ಸೀಮಿತವಾಗದೆ ಪ್ರತಿದಿನ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕು ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಕೆ. ಸುರೇಶ್ ಹೇಳಿದರು. ಅನ್ಯ ಭಾಷಿಗರನ್ನು ಗೌರವಿಸುವ ಜೊತೆಗೆ ಕನ್ನಡದ ಬಗ್ಗೆ ಪ್ರೀತಿ ಇರಬೇಕು. ಅನಿವಾರ್ಯ ಕಾರಣಗಳಿಗಾಗಿ ಬೇರೆ ಭಾಷೆಗಳನ್ನು ಕಲಿತರೂ ಕೂಡ ಕನ್ನಡವನ್ನು ಬಿಡಬಾರದು ಎಂದು ಹೇಳಿದರು. ಪಟ್ಟಣದ ವೈಡಿಡಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕಾಲೇಜಿನ ವಿವಿಧ ಸಮಿತಿಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.
ಅಂಗವಿಕಲ ಯುವತಿಗೆ ಸಿಗದ ಸರ್ಕಾರಿ ಸೌಲಭ್ಯ
ಅಶಕ್ತ, ದೀನ, ದುರ್ಬಲ, ಶೋಷಿತ ಮಹಿಳಾ ಸಮುದಾಯಕ್ಕೆ ಸವಲತ್ತುಗಳನ್ನು ತಲುಪಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಮೊದಲ ಆದ್ಯತೆಯಾಗಿದೆ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಹಾಸಿಗೆ ಹಿಡಿದಿರುವ ತಾಲೂಕಿನ ಕಣಕಟ್ಟೆ ಹೋಬಳಿ ಕಿತ್ತನಕೆರೆ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಅಂಗವಿಕಲ ಪದವೀಧರ ಯುವತಿ ಶ್ರುತಿ ಇಂತಹ ಎಲ್ಲ ಬಗೆಯ ಸೌಕರ್ಯಗಳಿಂದ ವಂಚಿತಳಾಗಿದ್ದಾಳೆ. ವಾಸ್ತವ ಮನಗಂಡು ತಕ್ಷಣವೇ ಯುವತಿ ನೆರವಿಗೆ ಧಾವಿಸಬೇಕು ಎನ್ನುವ ಒತ್ತಾಯ ಸಾಮಾಜಿಕ ಕಾರ್ಯಕರ್ತ ವೀರಭದ್ರಪ್ಪ ಅವರಿಂದ ಕೇಳಿಬಂದಿದೆ.
ಮೊಬೈಲ್‌ ವ್ಯಾಮೋಹದಿಂದ ಓದುವ ಹವ್ಯಾಸ ಕಡಿಮೆಯಾಗಿದೆ
ಇಂಗ್ಲೀಷ್ ವ್ಯಾಮೋಹ ಬಿಟ್ಟು ಹಲವಾರು ಶತಮಾನಗಳಿಂದ ಬಳಕೆಯಲ್ಲಿರುವ ಜತೆಗೆ ಜೀವಂತ ಭಾಷೆಯಾಗಿರುವ, ನಮ್ಮ ನಾಡು, ನುಡಿ, ಸಂಸ್ಕೃತಿಯ ಪ್ರತೀಕವಾದ ಕನ್ನಡ ಭಾಷೆ ಬಳಕೆಯಿಂದ ಮುಂದಿನ ತಲೆಮಾರಿಗೆ ಕನ್ನಡದ ಹಿರಿಮೆಯನ್ನು ಪಸರಿಸಲು ಸಾಧ್ಯವೆಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್ ಅಭಿಪ್ರಾಯಪಟ್ಟರು. ಇಂದಿನ ಮೊಬೈಲ್ ವ್ಯಾಮೋಹದಿಂದ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಶ್ರೇಷ್ಠ ಕೃತಿಗಳ ಬಗ್ಗೆ ಅಧ್ಯಯನ ಮತ್ತು ಚರ್ಚೆ ಪ್ರತಿ ಮನೆಯಲ್ಲೂ ನಡೆಯಬೇಕಿದೆ ಎಂದು ಸಲಹೆ ನೀಡಿದರು.
ರಾಮನಾಥಪುರದಲ್ಲಿ ಗೂಡಂಗಡಿಗಳ ತೆರವು
ರಾಮನಾಥಪುರ ಶ್ರೀ ಪ್ರಸನ್ನ ಸುಬ್ರಮಣ್ಯಸ್ವಾಮಿ ಮಹಾರಥೋತ್ಸವ ಡಿಸೆಂಬರ್ 7ರಂದು ಶನಿವಾರ ನಡೆಯುವುದರಿಂದ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ಹಾಕಿಕೊಂಡಿದ್ದ ಗೂಡಂಗಡಿಗಳನ್ನು ತೆರವು ಮಾಡಿಸಿ ಮತ್ತೆ ಅದೇ ಜಾಗದಲ್ಲಿ ಉತ್ತಮ ರೀತಿಯಲ್ಲಿ ಅಂಗಡಿಗಳನ್ನು ನಿರ್ಮಾಣ ಮಾಡಿಕೊಳ್ಳಲು ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ಹೇಳಿದರು. ಶ್ರೀ ಸುಬ್ರಮಣ್ಯೇಶ್ವರಸ್ವಾಮಿ, ಅಗಸ್ಥೇಶ್ವರಸ್ವಾಮಿ ಮುಂತಾದ ದೇವಾಲಯಗಳ ಅಕ್ಕಪಕ್ಕದಲ್ಲಿ ಇಷ್ಟ ಬಂದಂತೆ ಸ್ವಚ್ಛತೆ ಇಲ್ಲದೆ ಕಟ್ಟಿಕೊಂಡಿದ್ದ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ರಂಗಕಲೆ ಮನರಂಜನಾ ಮಾಧ್ಯಮವಾಗಿ ಜೀವಂತಿಕೆ ಉಳಿಸಿಕೊಂಡಿದೆ
ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಆಯೋಜಿಸಿರುವ ಒಂಬತ್ತು ದಿನಗಳ ನಾಟಕೋತ್ಸವದ ೨ನೇ ದಿನವಾದ ಶನಿವಾರ ಹಾಸನದ ಶ್ರೀ ಮೇಲುಕೋಟೆ ಚಲುವನಾರಾಯಣಸ್ವಾಮಿ ಕಲಾಸಂಘದ ಕಲಾವಿದರು ಕೆ.ಆರ್‌. ಬಾಲಕೃಷ್ಣ ಕಟ್ಟಾಯ, ಕಲ್ಲಯ್ಯ (ಕುಶಾಲ್), ದೇವರಾಜು ಗೊರೂರು, ಎಚ್.ಎಂ.ಪ್ರಭಾಕರ್, ಟಿ.ಆರ್‌.ಪ್ರಕಾಶ್, ಎಸ್.ಎಲ್.ಚಂದ್ರಶೇಖರ್ ನೇತೃತ್ವದಲ್ಲಿ ಸೀಗೆನಾಡು ಪಾಲಾಕ್ಷಾಚಾರ್ ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸಿದರು.
ಕಾರ್ಜುವಳ್ಳಿ ಮಠದಲ್ಲಿ ವೀರಭದ್ರಸ್ವಾಮಿ ಕಲ್ಯಾಣ ಮಹೋತ್ಸವ
ಶ್ರೀಮದ್ ರಂಭಾಪುರಿ ವೀರ ಸಿಂಹಾಸನ ಶಾಖೆಯಾದ ಕಾರ್ಜುವಳ್ಳಿಯ ಹಿರೇಮಠದಲ್ಲಿ ಡಿ.16ರಿಂದ 20ರವರೆಗೆ ಲಿಂಗೈಕ್ಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರ 46ನೇ ವರ್ಷದ ಪುಣ್ಯ ಸ್ಮರಣೋತ್ಸವ, ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಅವರ ಪಟ್ಟಾಧಿಕಾರದ 4ನೇ ವಾರ್ಷಿಕೋತ್ಸವ ವರ್ಧಂತಿ ಮಹೋತ್ಸವ ಹಾಗೂ ವೀರಭದ್ರಸ್ವಾಮಿ ಕಲ್ಯಾಣ ಮಹೋತ್ಸವ ಹಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಮಹಿಳಾ ಕಲಾವಿದರಿಂದ ಕುರುಕ್ಷೇತ್ರ ನಾಟಕ ಪ್ರದರ್ಶನ
ಕಾವೇರಿ ಸಾಂಸ್ಕೃತಿಕ ಮಹಿಳಾ ಕಲಾ ಸಂಘ ಮಾರಗೌಡನಹಳ್ಳಿ ವತಿಯಿಂದ ನಂಜುಂಡೇಶ್ವರ ಡ್ರಾಮಸೀನ್ಸ್‌ರ ದಿಂಡಗೂರು ಮೀನ್‌ರಾಜಣ್ಣರವರ ಸೀನರಿಯಲ್ಲಿ ನಡೆದ ಕುರುಕ್ಷೇತ್ರ ಅಥವಾ ಗದಾಯುದ್ಧ ಎಂಬ ಮಹಿಳಾ ಕಲಾವಿದರು ಅಭಿನಯಿಸಿರುವ ಪೌರಾಣಿಕ ನಾಟಕದ ಉದ್ಘಾಟನೆಯನ್ನು ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿರವರ ಪತ್ನಿ ಕಾಂಗ್ರೆಸ್ ಮುಖಂಡರಾದ ಗೀತಾ ಗೋಪಾಲಸ್ವಾಮಿ ತಿಳಿಸಿದರು. ಮಹಿಳೆಗೆ ಯಾವಾಗ ವಂಚನೆಗಳು ನಡೆಯುತ್ತವೋ ಆಗ ದೇವರು ಎಂದೂ ಕೈಬಿಡುವುದಿಲ್ಲ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಮಹಿಳಾ ನಾಟಕೋತ್ಸವಗಳು ನಡೆಯಲಿ ನಮ್ಮ ಸಹಕಾರ ಸದಾ ಇರುತ್ತದೆ ಎಂದರು.
ಹೊರಗುತ್ತಿಗೆ ನೌಕರರ ಬೇಡಿಕೆ ಬಗ್ಗೆ ಸದನದಲ್ಲಿ ಚರ್ಚೆ
ಹೊರಗುತ್ತಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಬಗ್ಗೆ ಸದನದಲ್ಲಿ ಚರ್ಚೆಗೆ ತರಲಾಗುವುದು. ಹೊರಗುತ್ತಿಗೆ ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾರಾದರೂ ಹಣ ಕೇಳಿದರೆ ಕೊಡಬೇಡಿ. ನಮ್ಮ ಗಮನಕ್ಕೆ ತಂದರೇ ಇದನ್ನ ದೊಡ್ಡಮಟ್ಟದಲ್ಲಿ ತೆಗೆದುಕೊಂಡು ಹೋಗಿ ಕಡಿವಾಣ ಹಾಕಲಾಗುವುದು ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದರು. ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಸದನದಲ್ಲಿ ಚರ್ಚೆ ಮಾಡುವ ಕೆಲಸವನ್ನು ಖಂಡಿತವಾಗಿ ಮಾಡಲಾಗುವುದು. ನಿಮ್ಮ ನ್ಯಾಯಯುತವಾದ ಬೇಡಿಕೆಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದರು.
ಚಾರುಕೀರ್ತಿ ಭಟ್ಟಾರಕರ ನಿಷಿಧಿ ಮಂಟಪ ಲೋಕಾರ್ಪಣೆ
ಜೈನಕಾಶಿ ಶ್ರೀ ಶ್ರವಣಬೆಳಗೊಳದ ಪ್ರಾತಃಸ್ಮರಣೀಯರಾದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ನೆನಪಿಗಾಗಿ ಶ್ರವಣಬೆಳಗೊಳದ ಚಿಕ್ಕಬೆಟ್ಟದ ಪಕ್ಕದಲ್ಲೇ ಇರುವ ನಿಷಿಧಿ ಬೆಟ್ಟದಲ್ಲಿ "ನಿಷಿಧಿ ಮಂಟಪ " ನಿರ್ಮಾಣ ಮಾಡಲಾಗಿದ್ದು, ಡಿಸೆಂಬರ್‌ ೬ರಂದು ಈ ಮಂಟಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶ್ರವಣಬೆಳಗೊಳ ಜೈನ ಮಠದ ಅಭಿನವ ಚಾರುಕೀರ್ತಿ ಭಟ್ಟಾರಕರು ತಿಳಿಸಿದರು.
ಸಂವಿಧಾನ ಉಳಿದಿದೆ ಎಂದ್ರೆ ಪ್ರಧಾನಿ ಮೋದಿ ಸರ್ಕಾರದಿಂದ
ಬಿಜೆಪಿಯನ್ನು ಮತ್ತು ಪಕ್ಷದ ಮುಖಂಡರನ್ನು ಯಾವುದೇ ಆಧಾರಗಳಿಲ್ಲದೇ ಸಂವಿಧಾನ ವಿರೋಧಿಗಳೆಂದು ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಸ್ತುತದಲ್ಲಿ ಸಂವಿಧಾನಕ್ಕೆ ಏನಾದರೂ ಗೌರವ ಉಳಿದಿದ್ದರೇ ಅದು ಬಿಜೆಪಿಯ ಮೋದಿ ಸರ್ಕಾರದಿಂದ ಮಾತ್ರ ಎಂದು ಬಿಜೆಪಿ ವಕ್ತಾರ ವಿಕಾಸ್ ಪುತ್ತೂರು ತಿಳಿಸಿದರು. ಮೋದಿಯವರು ಪ್ರಧಾನಿ ಆಗುವ ಮೊದಲೇ ಗುಜರಾತಿನಲ್ಲಿ ಮುಖ್ಯಮಂತ್ರಿಯಾದ ವೇಳೆ ಆನೆ ಅಂಬಾರಿ ಮೇಲೆ ಸಂವಿಧಾನವನ್ನಿಟ್ಟು ಮೆರವಣಿಗೆ ಮಾಡಿದ್ದರು. ನವೆಂಬರ್ ೨೬ರೆಂದರೇ ಶ್ರೇಷ್ಠವಾದ ದಿನವಾಗಿದೆ. ಅಧಿಕೃತ ಭಾರತದ ಸಂವಿಧಾನವಾಗಿ ೧೯೫೦ರ ಜನವರಿ ೨೬ಕ್ಕೆ ಆಗಿದೆ.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 510
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved