• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎತ್ತಿನಹೊಳೆ ಯೋಜನೆ ವಿರುದ್ಧ ಪ್ರತಿಭಟನೆ
ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಮೊಗನಹಳ್ಳಿ, ಹಿರದನಹಳ್ಳಿ ಗ್ರಾಮಸ್ಥರು ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ಎತ್ತಿನಹೊಳೆ ಯೋಜನೆ ವಿರುದ್ಧ ಮೊಗನಹಳ್ಳಿ ಡ್ಯಾಮ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಹತ್ತು ದಿನಗಳ ಒಳಗೆ ತಮ್ಮ ಬೇಡಿಕೆಗಳನ್ನು ಇಡೆರಿಸುವಂತೆ ಒತ್ತಾಯಿಸಿದರು. ಇಲ್ಲವಾದರೆ ಡ್ಯಾಮಿಗೆ ಬೀಗ ಹಾಕಿ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ಎಚ್ಚರಿಕೆ ನೀಡಿದರು.
ಸರ್ವರ್‌ ಸಮಸ್ಯೆಯಿಂದ ಪಡಿತರ ವಿತರಣೆಯಲ್ಲಿ ವ್ಯತ್ಯಯ
ಬೇಲೂರು ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸಲು ಸರ್ವರ್‌ ಸಮಸ್ಯೆ ಉಂಟಾಗಿದ್ದು, ಕೂಡಲೆ ಇದನ್ನು ಸರಿಪಡಿಸಬೇಕೆಂದು ತಾಲೂಕು ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಗಂಗೂರು ರಂಗೇಗೌಡ ಆಗ್ರಹಿಸಿದ್ದಾರೆ. ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಮಮತಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಳೆದು ಮೂರು ತಿಂಗಳಿಂದ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಗ್ರಾಹಕರು ಮತ್ತು ಮಾಲೀಕರ ನಡುವೆ ವಾಗ್ವಾದ ನಡೆಯುತ್ತಿದ್ದು, ಕೂಡಲೇ ಸರ್ವರ್ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.
ಮೂರು ಕ್ಷೇತ್ರಗಳಲ್ಲೂ ಹಿಂದುಳಿದ ವರ್ಗಗಳ ಬೆಂಬಲದಿಂದ ಕಾಂಗ್ರೆಸ್‌ಗೆ ಗೆಲುವು
ಉಪಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತದಾರರೇ ನಿರ್ಣಾಯಕರಾಗಿದ್ದು, ಅವರ ಬೆಂಬಲದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಗಿದೆ ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಒಬಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯಿತಿ ಕೆಡಿಪಿ ಸದಸ್ಯ ಮಹೇಶ್ ಕಬ್ಬಾಳು ತಿಳಿಸಿದ್ದಾರೆ. ಚನ್ನಪಟ್ಟಣದಲ್ಲಿ ಒಕ್ಕಲಿಗರು ಒಂದು ಲಕ್ಷಕ್ಕೂ ಹೆಚ್ಚಿದ್ದರೂ ಸಹ, ಮುಸ್ಲಿಂ, ದಲಿತ, ಕುರುಬ, ತಿಗಳ, ನೇಕಾರ, ಬಲಿಜ, ಮಡಿವಾಳ, ಬೆಸ್ತ ಹೀಗೆ ಅಹಿಂದ ಮತಗಳು ಒಂದು ಲಕ್ಷಕ್ಕೂ ಹೆಚ್ಚಿನ ಪ್ರಮಾಣದಲ್ಲಿವೆ.
ಮೆದುಳು ಜ್ವರ ಹರಡದಂತೆ ಎಚ್ಚರಿಕೆ ಅಗತ್ಯ
ಮೆದುಳು ಜ್ವರ ಹರಡದಂತೆ ಎಚ್ಚರಿಕೆ ಅಗತ್ಯ. ಸುತ್ತಮುತ್ತಲು ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ವೈದ್ಯರನ್ನು ಕಾಣಬೇಕು ಎಂದು ಪುರಸಭೆ ಅಧ್ಯಕ್ಷ ಬನಶಂಕರಿ ರಘು ಹೇಳಿದ್ದಾರೆ. ಮೆದುಳು ಜ್ವರಕ್ಕೆ ಕಾರಣವಾಗುವ ಕ್ಯೂಲೆಕ್ಸ್ ಸೊಳ್ಳೆಯ ನಿಯಂತ್ರಣ ಅಗತ್ಯವಿದೆ. ಈ ವೈರಾಣು ತಡೆಯಲು ಸ್ವಚ್ಛತೆ ಅಗತ್ಯವಿದೆ, ೧೫ ವರ್ಷದೊಳಗಿನ ಮಕ್ಕಳು ಹೆಚ್ಚಾಗಿ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ. ನರ ದೌರ್ಬಲ್ಯ ಹಾಗೂ ಬುದ್ಧಿಮಾಂದ್ಯತೆ ಉಂಟಾಗುವ ಸಾಧ್ಯತೆ ಇದೆ. ೯ ಹಾಗೂ ೧೮ನೇ ತಿಂಗಳಲ್ಲಿ ಮಕ್ಕಳಿಗೆ, ಈ ರೋಗದ ವಿರುದ್ಧ ಮದ್ದನ್ನ ಹಾಕಿಸಬೇಕು ಎಂದರು.
ಮೇಯುತ್ತಿದ್ದ ಹಸುವನ್ನು ಹೊತ್ತೊಯ್ದು ತಿಂದ ಚಿರತೆ
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯಲ್ಲಿ ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕುರಿಗಾಹಿಗಳ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಲ್ಲದೆ ಕುರಿಯನ್ನು ಹೊತ್ತೊಯ್ದು ತಿಂದುಹಾಕಿತ್ತು. ಆ ಘಟನೆ ಮಾಸುವ ಮುನ್ನವೆ ಬೇಲೂರು ತಾಲೂಕಿನ ಯಲಹಂಕ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಿಕ್ಕಮ್ಮನಹಳ್ಳಿ ಮಂಜೇಗೌಡ ಎಂಬುವವರಿಗೆ ಸೇರಿದ ಹಸುವನ್ನು ಎಳೆದೊಯ್ದು ತಿಂದುಹಾಕಿದೆ. ಹಸು ಮನೆಗೆ ಬಂದಿರಬಹುದು ಎಂದು ಬಂದು ಅಕ್ಕಪಕ್ಕದಲ್ಲಿ ಹುಡುಕಿ ಸಿಗದಿದ್ದ ಹಿನ್ನೆಲೆಯಲ್ಲಿ ಊರಿನಲ್ಲಿ ಹುಡುಕುವ ಸಂದರ್ಭದಲ್ಲಿ ಹಸುವನ್ನು ಚಿರತೆ ತಿಂದುಹಾಕಿದ್ದು ಪತ್ತೆಯಾಗಿದೆ.
ಹೊಯ್ಸಳೇಶ್ವರ ದೇವಾಲಯಕ್ಕೆ ಕೆಎಸ್ಸಾರ್ಟಿಸಿ ಎಂಡಿ ನಂದಿನಿ ಭೇಟಿ
ವಿಶ್ವ ವಿಖ್ಯಾತ ಹೊಯ್ಸಳೇಶ್ವರ ದೇವಾಲಯಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ನಂದಿನಿ ಆಗಮಿಸಿ ದೇವಾಲಯದ ಬಗ್ಗೆ ಕೂಲಂಕಷವಾಗಿ ಮಾರ್ಗದರ್ಶನ ತೆಗೆದುಕೊಂಡು ದೇವಾಲಯದ ಚಿತ್ರ ಹಾಗು ಕೆತ್ತನೆ ಬಗ್ಗೆ ಭಾರಿ ಸಂತೋಷ ವ್ಯಕ್ತಪಡಿಸಿದರು. ಹಳೇಬೀಡಿನಲ್ಲಿ ಸರ್ಕ್ಯೂಟ್ ಬುಕ್ಕಿಂಗ್ ಕೇಂದ್ರವನ್ನು ತೆರೆದರೆ ಅನುಕೂಲವಾಗುತ್ತದೆ ಎಂಬ ಮನವಿ ಕೇಳಿ ಬಂತು.
ಮಡಬಲು ಗ್ರಾಪಂ ಅಧ್ಯಕ್ಷರಾಗಿ ವನಿತಾ ಅವಿರೋಧ ಆಯ್ಕೆ
ಆಲೂರು ತಾಲೂಕಿನ ಮಡಬಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ವನಿತಾ ಮಂಜುನಾಥ್, ಉಪಾಧ್ಯಕ್ಷರಾಗಿ ಪುಷ್ಪವತಿ ಮಂಜೇಗೌಡ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯನ್ನು ತಾಲೂಕು ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ವನಿತಾ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಪುಷ್ಪಾವತಿ ಮಂಜೇಗೌಡ ಅವಿರೋಧವಾಗಿ ಆಯ್ಕೆ ಆಗಿರುವುದಾಗಿ ಘೋಷಣೆ ಮಾಡಿದರು.
ವಿದ್ಯೆಯೊಂದಿಗೆ ವಿನಯ ಇದ್ದರೆ ಜೀವನದಲ್ಲಿ ಮುಂದೆಬರಲು ಸಾಧ್ಯ
ಇಂದಿನ ಕಾಲೇಜು ಮಟ್ಟದ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಸಾಂಸ್ಕೃತಿಕ ಮತ್ತು ಮನೋರಂಜನೆ ಕಾರ್ಯಕ್ರಮಗಳನ್ನು ಹೆಚ್ಚಾಗಿ ನೀಡಿದರೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಲು ಸಾಧ್ಯ ಎಂದು ಕೆ.ಪಿ.ಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಬಿ.ಎಸ್ ಸೋಮಶೇಖರ್ ತಿಳಿಸಿದರು. ಮೊಬೈಲ್‌ಗಳನ್ನು ಬಿಟ್ಟು ಕ್ರೀಡೆಯಲ್ಲಿ ಭಾಗವಹಿಸಿ ಈ ಕಾಲೇಜನ್ನು ಹೆಚ್ಚಿನ ಸ್ಥಾನಕ್ಕೆ ಬೆಳೆಸಿ. ಇದಕ್ಕೆ ಪೋಷಕರು ಸಹಕಾರ ನೀಡಬೇಕು. ಮಕ್ಕಳ ಬಗ್ಗೆ ಹೆಚ್ಚು ಗಮನ ನೀಡಬೇಕೆಂದು ಎಂದು ತಿಳಿಸಿದರು.
ದೇವಸ್ಥಾನದ ಎಂಟು ಎಕರೆ ಭೂಮಿ ಪರರ ಪಾಲು
ಅರುವನಹಳ್ಳಿ ಗ್ರಾಮದ ಉದ್ಭವ ಬಸವಣ್ಣ ದೇವಸ್ಥಾನದ ೮ ಎಕರೆ ಮೀಸಲಿಟ್ಟ ಜಮೀನನ್ನು ಬೇರೆಯವರಿಗೆ ಖಾತೆ ಮಾಡಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ದೇವಸ್ಥಾನಕ್ಕೆ ಸಂಬಂಧಪಟ್ಟ ೮ ಎಕರೆ ಜಮೀನನ್ನು ದೇವಸ್ಥಾನಕ್ಕೆ ಉಳಿಸಿಕೊಡಬೇಕೆಂದು ಮನವಿ ಮಾಡಿದರು. ಹಾಗೇನಾದರೂ ಜಮೀನನ್ನು ನೀಡದೆ ಹೋದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜನ್ಮಸ್ಮರಣೆ
ಮಹಾವೀರ ವೃತ್ತದ ಬಳಿ ಶ್ರೀ ಮಸವತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರ ೧೦೯ನೇ ಜನ್ಮಸ್ಮರಣೆಯ ಅಂಗವಾಗಿ ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು ಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದಾಸೋಹಕ್ಕೆ ಚಾಲನೆ ನೀಡಿದರು. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರು ಸಮಾಜದಲ್ಲಿ ಶಾಂತಿ ನೆಲೆಸಲಿ. ಅಭಿವೃದ್ಧಿ ಆಗಲೆಂದು ಶಿಕ್ಷಣ ಸಂಸ್ಥೆ ಸ್ಥಾಪಿಸಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved