ಎಚ್ ಎಸ್ ದ್ಯಾಮೇಶ್ಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಈ ಬಾರಿ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಅಧ್ಯಾಪಕ, ರಂಗಕರ್ಮಿ ಎಚ್ ಎಸ್ ದ್ಯಾಮೇಶ್ ಭಾಜನರಾಗಿದ್ದಾರೆ. ಇವರು ಕಳೆದ ಮೂರು ದಶಕಗಳಿಂದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ, ಶಿವಸಂಚಾರ, ಭಾರತ ಸಂಚಾರ, ಶಿವದೇಶ ಸಂಚಾರ, ವಚನ ಸಂಚಾರ, ರಂಗಪ್ರಯೋಗಶಾಲೆ ಸೇರಿದಂತೆ ವಿವಿಧ ರಂಗ ಸಂಸ್ಥೆಗಳೊಂದಿಗೆ ಸಂಚಾಲಕರಾಗಿ, ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ, ಲೇಖಕರಾಗಿ, ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.