• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣರಾಜ್ಯೋತ್ಸವದಂದು ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಿ
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಸುಭಾಷ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿವಿಧ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಗಣರಾಜ್ಯೋತ್ಸವ ಸಂದಭದಲ್ಲಿ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ದಂಡಾಧಿಕಾರಿಗಳಾದ ಮೇಘನಾ ತಿಳಿಸಿದ್ದಾರೆ.
ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ
ಕೆ.ಹೊಸಕೋಟೆ ಹೋಬಳಿ ಕಿತ್ತಗೆರೆ ಗ್ರಾಮದಲ್ಲಿ 22 ಲಕ್ಷ ರು. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟನೆ ಗ್ರಾಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರ ಬಳಿ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಕರೆಯದೆ ಆಹ್ವಾನಿಸದೆ ಇರುವ ಬಗ್ಗೆ ತಿಳಿಸಿದರು. ಎಂಎಲ್‌ಎ ಬರ್ತಾರೆ ಅಂದ್ರೆ ನಿಮಗೆ ಜವಾಬ್ದಾರಿ ಬೇಡವೇ, ಬೇಕಾಬಿಟ್ಟಿ ಮಾಡ್ತೀರಿ ಅಂದ್ರೆ ಸುಮ್ಮೆ ಇರ್ತೀನಾ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಾಯಕ ನಿರ್ದೇಶಕ ಎ. ಟಿ. ಮಲ್ಲೇಶ್ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಲ್ಮಾ ಮತ್ತು ರಜಾಕ್ ಅವರಿಗೆ ತೀವ್ರವಾಗಿ ತರಾಟೆ ತೆಗೆದುಕೊಂಡರು.
ಹದಿಹರೆಯದಲ್ಲಿ ದಾರಿತಪ್ಪಿದರೆ ಆರೋಗ್ಯ ಹಾಳು
ಹದಿಹರೆಯದ ಮಕ್ಕಳು ದಾರಿತಪ್ಪಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬಾರದು ಎಂದು ಶ್ರವಣಬೆಳಗೊಳ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಎ. ಬಿ. ಚೌಗಲೇ ಮಕ್ಕಳಿಗೆ ತಿಳಿ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಇಂದಿರಾಗಾಂಧಿ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ, ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ದುಶ್ಚಟಕ್ಕೆ ಬಲಿಯಾಗಬಾರದು, ಉತ್ತಮ ಸ್ನೇಹಿತರ ಸಂಪಾದನೆ ಮಾಡಿ, ಪುಸ್ತಕಗಳನ್ನೇ ಸ್ನೇಹಿತರನ್ನಾಗಿ ಮಾಡಿಕೊಳ್ಳಿ, ದುಶ್ಚಟಗಳಿಗೆ ಬಲಿಯಾಗಿ ದಾರಿ ತಪ್ಪಿದರೆ ಕುಟುಂಬ, ಸಮಾಜಕ್ಕೆ, ಕಳಂಕವಾಗುತ್ತೀರ. ಅತಿಯಾದ ಮೊಬೈಲ್ ಬಳಕೆ ಕೂಡ ದುಶ್ಚಟವಾಗುತ್ತದೆ ಎಂದರು.
ಬಾಲಗಂಗಾಧರನಾಥ ಶ್ರೀಗಳು ಅಪ್ರತಿಮ ಕಾಯಕ ಯೋಗಿ
ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳು ನಾಡು ಕಂಡ ಅಪ್ರತಿಮ ಕಾಯಕ ಯೋಗಿ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಆರ್ ಅನಂತ್ ಕುಮಾರ್‌ ತಿಳಿಸಿದರು. ಭೈರವ ಯುವಕ ಸಂಘ ಹಾಗೂ ಶ್ರೀ ಮಠದ ಸದ್ಭಕ್ತರ ಶ್ರದ್ಧಾಭಕ್ತಿಯಿಂದ ನಡೆದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಶ್ರೀಪದ್ಮಭೂಷಣ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಹನ್ನೆರಡನೇ ವರ್ಷದ ಪುಣ್ಯಾರಾಧನಾ ಮಹೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಸಂಕ್ರಾಂತಿಯಂದು ಧನುರ್ಮಾಸ ತಿಂಗಳ ಭಜನಾ ಮಹೋತ್ಸವ ಸಂಪನ್ನ
ಕುರುಹಿನಶೆಟ್ಟಿ ಜನಾಂಗದ ಶ್ರೀ ರಾಮಮಂದಿರದಲ್ಲಿ ೯೬ನೇ ವರ್ಷದ ಧನುರ್ಮಾಸ ತಿಂಗಳ ಭಜನಾ ಮಹೋತ್ಸವವು ಡಿ. ೧೭ರಂದು ಪ್ರಾರಂಭಗೊಂಡಿದ್ದು, ಸಂಪ್ರದಾಯದಂತೆ ಶ್ರೀರಾಮನ ಭಕ್ತರು ತೊಡಗಿಸಿಕೊಂಡು ಸಂಸ್ಕೃತಿಯ ಪಾಲನೆ ಮಾಡುವ ಜತೆಗೆ ಭಜನಾ ಮಹೋತ್ಸವಕ್ಕೆ ವಿಶೇಷ ಮೆರುಗನ್ನು ನೀಡುತ್ತಾ ಸಾಗಿದ ಆಚರಣೆಯು ಸಂಕ್ರಾಂತಿಯ ಹಬ್ಬದ ದಿನದಂದು ಸಂಪನ್ನವಾಯಿತು. ಭಜನಾ ಉತ್ಸವದಲ್ಲಿ ಗಾಯಕರಾದ ಗುರುರಾಜ್, ನಾಗರಾಜ್, ನರಸಿಂಹಮೂರ್ತಿ ಶಾಸ್ತ್ರಿ, ರಮೇಶ್, ಧನಂಜಯ ಹಾಗೂ ಚೈತ್ರ ಅವರ ಗಾಯನಕ್ಕೆ ಹಾರ್ಮೋನಿಯಂ ನುಡಿಸುವ ಹರ್ಷಿತ್ ಹಾಗೂ ಗಿರೀಶ್ ಮತ್ತು ತಬಲ ನುಡಿಸುವ ಧನಂಜಯ ಹಾಗೂ ಗೋಪಾಲಕೃಷ್ಣ ಭಜನಾ ಮಹೋತ್ಸವಕ್ಕೆ ವಿಶೇಷ ಮೆರುಗನ್ನು ನೀಡಿದರು.
ರಾಮನಾಥಪುರ ದೇಗುಲಗಳಲ್ಲಿ ಸಂಕ್ರಾಂತಿ ಪೂಜೆ
ರಾಮನಾಥಪುರದಲ್ಲಿ ಮಂಗಳವಾರ ಸಂಕ್ರಾಂತಿ ದಿನದಂದು ಮೂಲಸ್ಥಾನ ಸಂಕ್ರಾಂತಿ ಮಂಟಪದಲ್ಲಿ ಶ್ರೀ ರಾಮೇಶ್ವರಸ್ವಾಮಿ, ಶ್ರೀ ಸುಬ್ರಹ್ಮಣ್ಯಸ್ವಾಮಿ, ಅಘಸ್ಥೇಶ್ವರಸ್ವಾಮಿ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಅಡ್ಡೆಯ ಮೇಲೆ ತಂದು ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪಿಸಿ, ಪೂಜಾ ಕೈಂಕರ್ಯ ನೆರವೇರಿಸಿದ ನಂತರ ಸಂಕ್ರಾಂತಿ ಮಂಟಪದಿಂದ ಮೆರವಣಿಗೆಯಲ್ಲಿ ಪಟ್ಟಣದ ದೇವಾಲಯದ ರಸ್ತೆಯಲ್ಲಿ ತರಲಾಯಿತು. ಈ ಸಂದರ್ಭದಲ್ಲಿ ಇಲ್ಲಿಯ ಭಕ್ತರು ಹಣ್ಣು ಕಾಯಿ ಪೂಜೆ ಮಾಡಿಸಿದರು. ಕೆಲವು ಭಕ್ತರು ಇಡುಗಾಯಿ ಹಾಕಿ ದೇವರ ದರ್ಶನ ಪಡೆದ ನಂತರ ಉತ್ಸವ ಮೂರ್ತಿಗಳು ತಮ್ಮ ದೇವಾಲಯಕ್ಕೆ ಸಾಗಿದವು.
ಬಾಲಗಂಗಾಧರನಾಥ ಶ್ರೀಗಳ ಸಂಕಲ್ಪದಿಂದಾಗಿ ಚುಂಚನಗಿರಿ ಚಿನ್ನದ ಗಿರಿಯಾಯ್ತು
ಭೈರವೈಕ್ಯ, ಯುಗಯೋಗಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೧೨ನೇ ವರ್ಷದ ಪುಣ್ಯಾರಾಧನಾ ಕಾರ್ಯಕ್ರಮವು ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚಿಂತಕ ಹಾಗೂ ಖ್ಯಾತ ವಾಗ್ಮಿ ಪ್ರೊ.ಕೃಷ್ಣೇಗೌಡ ಮಾತನಾಡಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು, ಏನು ಇಲ್ಲದರ ನಡುವೆ ಬಂದು ಎಲ್ಲವನ್ನು ಇದೇ ಮಾಡಿದವರು. ಅವರು ಚುಂಚನಗಿರಿ ಪೀಠಾರೋಹಣ ಮಾಡಿದಾಗ ಅಲ್ಲಿ ಇಲ್ಲ ಎಂಬುದೇ ಹೆಚ್ಚಿತ್ತು. ಅವರ ಸಂಕಲ್ಪದಿಂದಾಗಿ ಚುಂಚನಗಿರಿ ಚಿನ್ನದ ಗಿರಿಯಾಯಿತು ಎಂದರು.
ಹೃದಯ ಸಂಬಂಧಿ ಕಾಯಿಲೆಯಿಂದ ಪ್ರತಿವರ್ಷ 30 ಲಕ್ಷ ಜನ ಸಾವು
ಭಾರತ ದೇಶದಲ್ಲಿ ಪ್ರತಿವರ್ಷ ಹೃದಯ ಸಂಬಂಧಿ ಕಾಯಿಲೆಯಿಂದ 30 ಲಕ್ಷಕ್ಕೂ ಹೆಚ್ಚು ಜನ ಸಾವನಪ್ಪುತ್ತಿದ್ದಾರೆ. ಇದರಲ್ಲಿ 20ರಿಂದ 40ವರ್ಷದ ಒಳಗಿನ ವಯೋಮಿತಿಯ ಯುವಕರೇ ಹೆಚ್ಚು ಮೃತ ಪಡುತ್ತಿದ್ದಾರೆ. ಸರಿಯಾದ ಆಹಾರ ಕ್ರಮಗಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಆಗಮಾತ್ರ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೃದ್ರೋಗ ತಜ್ಞ ಸಂಸದ ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು. ಕೋಟಿ ಮನೆ ಇಂಟರ್‌ನ್ಯಾಷನಲ್ ಸ್ಕೂಲ್ ವತಿಯಿಂದ ತೃತೀಯ ವರ್ಷದ ಕೋಟೆ ಮನೆ ಕಲೋತ್ಸವ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಕ್ಕೆ ರೈತರ ಬಗ್ಗೆ ಹೆಚ್ಚಿನ ಕಾಳಜಿ ಇಲ್ಲ
ವಿಧಾನ ಪರಿಷತ್ ಸದಸ್ಯರೊಬ್ಬರು ಹೆಣ್ಣು ಮಗಳಿಗೆ ಬೈದರೆಂದು ಅವರನ್ನ ೧೮ ಗಂಟೆ ವಿನಾಕಾರಣ ಸುತ್ತಿಸುವ ಇಂದಿನ ಆಡಳಿತದಲ್ಲಿ, ರೈತ ಮಹಿಳೆ ಕತ್ತಿನಿಂದ ಸರ ಕಿತ್ತುಕೊಂಡು, ರೆಕಾರ್ಡ್ ಮಾಡುತ್ತಿರುವ ಪಿಯು ವಿದ್ಯಾರ್ಥಿನಿ ಕೈಯಿಂದ ಮೊಬೈಲ್ ಕಿತ್ತುಕೊಂಡ ಸಂಬಂಧ ಪ್ರಕರಣ ದಾಖಲಿಸಿಲ್ಲ ನೋಡಿ ಎಂದು ಶಾಸಕ ಎಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು. ರಸ್ತೆ ಮಾಡುವುದಾದರೇ ಬೆಳೆದಿರುವ ಪೈರು ಕಟಾವು ಮಾಡಿದ ನಂತರ ರಸ್ತೆ ಮಾಡಬಹುದಿತ್ತು, ಆದರೆ ಬೆಳೆನಾಶ ಮಾಡಿ ರಸ್ತೆ ಮಾಡಿಕೊಡುವ ಅವಶ್ಯಕತೆ ಏನಿತ್ತು ಎಂದು ಆಕ್ರೋಶದಿಂದ ನುಡಿದರು.
18 ವರ್ಷ ತುಂಬದವರು ವಾಹನ ಚಲಾಯಿಸಬೇಡಿ
ರಸ್ತೆ ನಿಯಮವನ್ನು ಉಲ್ಲಂಘಿಸುತ್ತ ಈ ಹಲವಾರು ಜನ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಅವರ ಕುಟುಂಬಗಳು ಬೀದಿಗೆ ಬೀಳುತ್ತಿರುತ್ತವೆ. ಮತ್ತು ೧೮ ವರ್ಷ ದಾಟುವ ಮೊದಲು ಯಾರೂ ಸಹ ವಾಹನಗಳನ್ನು ಚಲಾವಣೆ ಮಾಡಬಾರದು. ಕಡ್ಡಾಯವಾಗಿ ಹೆಲ್ಮೆಟ್ ಅನ್ನು ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ ರಘುಪತಿ ಸಲಹೆ ನೀಡಿದರು. ರೋಟರಿ ಕ್ಲಬ್ ವಿಷನ್ ವತಿಯಿಂದ ತಾಲೂಕಿನ ಶ್ರವಣಬೆಳಗೊಳದ ಸರ್ಕಾರಿ ಪಿ.ಯು. ಕಾಲೇಜಿನ ಮುಂಭಾಗ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಒಂದು ಸೂಚನಾ ಫಲಕವನ್ನು ಅಳವಡಿಸಲಾಯಿತು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved