• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಮೋದ್‌ ಮುತಾಲಿಕ್‌ ಮೇಲೆ ಪ್ರಕರಣ ದಾಖಲು
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್‌ ಹಾಗೂ ಇತರರ ಮೇಲೆ ಸಕಲೇಶಪುರ ನಗರ ಪೊಲೀಸ್‌ ಠಾಣೆಯಲ್ಲಿ ಕೋಮು ಪ್ರಚೋದನೆ ಆರೋಪದ ಪ್ರಕರಣ ದಾಖಲಾಗಿದೆ. ಸಕಲೇಶಪುದರಲ್ಲಿ ನಡೆದ "ವಿರಾಟ್ ಹಿಂದೂ ಸಮಾಜೋತ್ಸವ " ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಮೋದ್ ‌ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮೂವರ ವಿರುದ್ಧ ಶಾಸಕ ರೇವಣ್ಣ ಕೆಂಗಣ್ಣು
ಡಿಸಿ, ಎಸ್ಪಿ, ಜಿ.ಪಂ ಸಿಇಒ, ಎಸಿ ನನ್ನ ಕೈಗೆ ಸಿಗದಲೇ ಎಲ್ಲಿ ಹೋಗ್ತಾರೆ? ಈ ಮೂವರು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೇ ಶಾಶ್ವತವಾಗಿ ಇರುತ್ತದೆ ಎಂದುಕೊಂಡಿರಬೇಕು. ನಮಗೂ ಟೈಂ ಬರುತ್ತದೆ. ಆಗ ತೋರಿಸ್ತೀನಿ ಎಂದು ಮಾಜಿ ಸಚಿವರು ಹಾಗೂ ಜೆಡಿಎಸ್‌ ಶಾಸಕರೂ ಆದ ಎಚ್‌.ಡಿ.ರೇವಣ್ಣ ಅವರು ಅಧಿಕಾರಿಗಳ ಆಕ್ರೋಶ ಹೊರಹಾಕಿದರು. ಇವರು ಮಾಡಿರುವ ಅಕ್ರಮವನ್ನು ಧಾರಾವಾಹಿ ಥರ ಏನೇನು ಮಾಡಿದ್ದಾರೆ ಎಂದು ಪಾರ್ಟ್-೧, ಪಾರ್ಟ್-೨, ಪಾರ್ಟ್-೩ ಬಿಡುಗಡೆ ಮಾಡ್ತೀನಿ ಎಂದು ಎಚ್ಚರಿಸಿದರು. ಇಂತಹವನ್ನೆಲ್ಲಾ ನಾನು ಬಹಳ ನೋಡಿ ಬಿಟ್ಟಿದ್ದೇನೆ ಎಂದರು.
ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ನೌಕರರ ಉಡಾಫೆ ವರ್ತನೆ
ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ನಿರ್ವಹಣೆ ಗುತ್ತಿಗೆಯನ್ನು ಖಾಸಗಿ ಏಜೆನ್ಸಿಗಳಿಗೆ ನೀಡುತ್ತಿದ್ದು, ಡಿ ಗ್ರೂಪ್ ನೌಕರರು ಸಮರ್ಪಕವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ತಾಲೂಕು ವೈದ್ಯಾಧಿಕಾರಿಗಳ ಮೇಲೆ ಉಡಾಫೆ ವರ್ತನೆ ತೋರುತ್ತಿದ್ದು, ‌ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿಗಳ ಜೊತೆ‌ ಚರ್ಚಿಸಲಾಗುವುದು ಎಂದು ಶಾಸಕ ಎಚ್ ಕೆ ಸುರೇಶ್ ಹೇಳಿದರು. ಈ ಬಗ್ಗೆ ಜಿಲ್ಲೆಯ ಗುತ್ತಿಗೆದಾರನನ್ನು ಕೇಳಲು ಹೋದರೆ ಅವರು ಸಿಗುತ್ತಿಲ್ಲ. ಹೊರಗಿನವರಿಗೆ ಗುತ್ತಿಗೆ ನೀಡುತ್ತಿರುವುದರಿಂದ ಡಿ ಗ್ರೂಪ್ ನೌಕರರು ತಮ್ಮ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದು, ಸ್ವಚ್ಛತೆಯಲ್ಲಿ ಹಿಂದುಳಿಯಲು ಕಾರಣವಾಗಿದೆ ಎಂದರು.
ಬೇಲೂರು ಪುರಸಭೆ ಮಳಿಗೆಗಳ ಹರಾಜು ರದ್ದುಗೊಳಿಸಿ
ಒಳ್ಳೆಯ ಕೆಲಸಗಳಲ್ಲಿ ಹೆಸರು ಮಾಡುತ್ತಿರುವ ಪುರಸಭೆ ಅಧ್ಯಕ್ಷರು ಟೆಂಡರ್ ಪ್ರಕ್ರಿಯೆಯಲ್ಲಿ ಮಳಿಗೆಗಳ ಬಾಡಿಗೆಯನ್ನು ಕಡಿಮೆ ಮಾಡಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಿ ಈ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ವಿ ಎಸ್ ಭೋಜೇಗೌಡ ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಎಲ್ಲಿಂದಲೋ ಬಂದು ಮುಖ್ಯ ರಸ್ತೆಯಲ್ಲಿರುವ ಪುರಸಭೆ ಮಳಿಗೆಗಳ ಮೇಲೆ ಎರಡು ದಶಕಗಳಿಂದ ತನ್ನ ಹಿಡಿತ ಸಾಧಿಸುವಲ್ಲಿ ವ್ಯಾಪಾರಸ್ಥರು ಯಶಸ್ವಿಯಾಗಿದ್ದು, ಪುರಸಭೆಯವರು ಇವರ ಕೈಗೊಂಬೆಯಾಗಿ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಆರೋಪಿಸಿದರು.
ಸಮಯ ಪ್ರಜ್ಞೆ ಇಲ್ಲದ ಮುಖ್ಯ ಶಿಕ್ಷಕಿ ವಿರುದ್ಧ ದೂರು
ಬಿ.ಜಿ ಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 12 ವಿದ್ಯಾರ್ಥಿಗಳಿದ್ದು, ಇಲಾಖೆ ಇಬ್ಬರು ಶಿಕ್ಷಕರನ್ನು ಈ ಶಾಲೆಗೆ ಒದಗಿಸಿದೆ. ಸೌಲಭ್ಯದ ಕೊರತೆ ಇಲ್ಲ, ಪೋಷಕರ ಕಿರಿಕಿರಿ ಇಲ್ಲ , ಆದರೆ ಮುಖ್ಯ ಶಿಕ್ಷಕರದೇ ಸಮಸ್ಯೆ . ಈ ಬಡಾವಣೆ ಸಮೀಪವೇ ಖಾಸಗಿ ಶಾಲೆಗಳು ಇದ್ದರೂ ಸಹ ಪೋಷಕರು ಶಾಲೆಯ ಇಲಾಖೆಯ ಬಗ್ಗೆ ಪೂರ್ಣ ಭರವಸೆ ಇಟ್ಟು ತಮ್ಮ ಮಕ್ಕಳನ್ನು ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂದು ಕಳಿಸುತ್ತಿದ್ದಾರೆ. ಆದರೆ ಶಾಲಾ ಮುಖ್ಯ ಶಿಕ್ಷಕರೇ ಶಾಲೆಗೆ ವಿಳಂಬವಾಗಿ ಆಗಮಿಸುತ್ತಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಳಂಬವಾಗಿ ಬಂದರೂ ನಂತರ ಮನೆಯಿಂದ ತಂದ ಉಪಹಾರವನ್ನು ಸೇವಿಸುತ್ತಾ ಕೂರುತ್ತಾರೆ. ಇದು ಒಂದೆರಡು ದಿನದ ಕಥೆಯಲ್ಲ.
ಸ್ನೇಹಿತನ ಕೊಂದು ಶಿರಾಡಿಗೆ ಶವ ಎಸೆದ ಸ್ನೇಹಿತರು
ಜತೆಯಲ್ಲಿದ್ದ ಸ್ನೇಹಿತರೇ ಕೊಲೆ ಮಾಡಿ ಶವವನ್ನು ಶಿರಾಡಿ ಘಾಟಿಯ ಪ್ರಪಾತಕ್ಕೆ ಎಸೆದಿರುವ ಘಟನೆ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೈದರಾಬಾದ್‌ನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಶಿವಕುಮಾರ್ (34) ಕೊಲೆಯಾದ ಯುವಕ. ಅದೇ ಗ್ರಾಮದ ಶರತ್ ಹಾಗೂ ಪ್ರತಾಪ್ ಎಂಬುವವರಿಂದ ಈ ಕೃತ್ಯ ನಡೆದಿದ್ದು, ಆರೋಪಿಗಳು ತಲೆಮೆರೆಸಿಕೊಂಡಿದ್ದಾರೆ. ಶರತ್ ಹಾಗೂ ಪ್ರತಾಪ್ ಮಾಡಿದ್ದ ಕಳ್ಳತನದ ಬಗ್ಗೆ ಶಿವಕುಮಾರ್‌ಗೆ ತಿಳಿದಿತ್ತು. ಹಾಗಾಗಿ ಕಳೆದ ನಾಲ್ಕು ದಿನಗಳ ಹಿಂದೆ ಶಿವಕುಮಾರ್‌ನನ್ನು ಹೈದರಾಬಾದ್‌ನಿಂದ‌‌ ಶರತ್ ಹಾಗೂ ಪ್ರತಾಪ್ ಕರೆಸಿಕೊಂಡು ಕೊಲೆ ಮಾಡಿದ್ದಾರೆ.
ಖಾತೆ ಮಾಡಿಕೊಡಲು ರೈತರನ್ನು ಅಲೆಸಬೇಡಿ
ರೈತರಿಗೆ ಖಾತೆ ಮಾಡಿಕೊಡಲು ವಿನಾಕಾರಣ ಅಲೆಸದೆ ಅವರ ದಾಖಲೆಗಳು ಕಾನೂನು ರೀತಿ ಸರಿಯಾಗಿ ಇದ್ದಲ್ಲಿ ತ್ವರಿತವಾಗಿ ಖಾತೆ ಮಾಡಿಕೊಡಿ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು ಗ್ರಾಮ ಲೆಕ್ಕಾಧಿಕಾರಿಗಳಿಗೆ ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜನೆ ಮಾಡಿದ್ದ ಅಭಿಲೇಖಾಲಯದ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಕಂದಾಯ ದಾಖಲೆಗಳ ಗಣಕೀಕರಣಗೊಳಿಸುವ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ರೈತರು ಪಡೆಯಬೇಕೆಂದರು.
ಚಲಿಸುತ್ತಿದ್ದ ಬಸ್ಸಿನಿಂದ ಕಳಚಿದ ಚಕ್ರ
ಚಲಿಸುತ್ತಿದ್ದ ಸಾರಿಗೆ ಬಸ್‌‌‌‌ನ ಹಿಂದಿನ ಚಕ್ರಗಳು ಕಳಚಿ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಸಕಲೇಶಪುರದಿಂದ ಬೇಲೂರಿಗೆ ತೆರಳುತ್ತಿದ್ದ ಚಿಕ್ಕಮಗಳೂರು ಡಿಪೋದ ಸಾರಿ ಬಸ್‌ನ ಹಿಂದಿನ ಚಕ್ರಗಳು ಕಳಚಿ ಬೀಳುತ್ತಿದ್ದಂತೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿದೆ. ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಅಪಾಯವಾಗಿಲ್ಲ. ಪ್ರಯಾಣಿಕರನ್ನು ಬೇರೊಂದು ಬಸ್ಸಿನಲ್ಲಿ ಕಳುಹಿಸಿಕೊಡಲಾಯಿತು.
ಗುತ್ತಿನಕೆರೆ ರಂಗನಾಥ ಸ್ವಾಮಿ ಜಾತ್ರೆಗೆ ಸಿದ್ಧತೆ
ಗುತ್ತಿನಕೆರೆ ರಂಗನಾಥ ಸ್ವಾಮಿಯ ಜಾತ್ರಾ ಮಹೋತ್ಸವ ಜನವರಿ 14ರಿಂದ ೧7ರವರೆಗೆ ದೇವಾಲಯದ ಸಂಪ್ರದಾಯದಂತೆ ಜರುಗಲಿದ್ದು, ಮುಜರಾಯಿ ಇಲಾಖೆ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಅರ್ಚಕ ವೃಂದ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಜ.16ರ ಗುರುವಾರ ಮಧ್ಯಾಹ್ನ 2ಕ್ಕೆ ಗ್ರಾಮ ದೇವತೆಗಳ ಸಮ್ಮುಖದಲ್ಲಿ ಭೂ ನೀಳ ಸಮೇತ ರಂಗನಾಥ ಸ್ವಾಮಿಯ ದೊಡ್ಡ ರಥೋತ್ಸವವು ಜರುಗಲಿದ್ದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಲಿದೆ.
ಸ್ವಾಮಿ ವಿವೇಕಾನಂದರು ಯುವಜನರಿಗೆ ಸ್ಫೂರ್ತಿ
ಭಾರತದ ಶಕ್ತಿ ಏನೆಂಬುದನ್ನು ಇಡೀ ವಿಶ್ವಕ್ಕೆ ತಿಳಿಸಿಕೊಟ್ಟ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ. ಜೊತೆಗೆ ವಿವೇಕಾನಂದರು ಯುವ ಜನರಿಗೆ ಸ್ಫೂರ್ತಿಯ ಸಂಕೇತ ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಬಣ್ಣಿಸಿದರು. ವಿವೇಕಾನಂದರ ಪುಸ್ತಕ ಓದುವಾಗ ಇನ್ನಷ್ಟು ಓದಬೇಕೆನ್ನುವ ಆಸಕ್ತಿ ನನಗೂ ಕೂಡ ಬಂದಿದೆ. ಪ್ರಪಂಚದಲ್ಲಿಯೇ ಸ್ವಾಮಿ ವಿವೇಕಾನಂದರು ವಿದ್ವಾಂಸರು, ಲೋಕ ಸಂಚಾರಿ ಎಂದರೇ ತಪ್ಪಾಗಲಾರದು. ರಾಮಕೃಷ್ಣ ಪರಮಹಂಸರ ಪ್ರೇರಣೆಯಿಂದ, ಒಡನಾಟದಿಂದ ಅವರು ಕೂಡ ಆಧ್ಯಾತ್ಮಿಕವಾಗಿ ಚಿಂತಕರಾಗಿದ್ದಾರೆ ಎಂದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved