• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಜಯಂತಿ ಕಾರ್ಯಕ್ರಮ
ಟಿಪ್ಪು ಯೂತ್ ಸೋಶಿಯಲ್ ವರ್ಕರ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಟಿಪ್ಪು ಜಯಂತಿ ಕಾರ್ಯಕ್ರಮ ಜರುಗಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ, ಸ್ವಯಂಪ್ರೇರಿತ ರಕ್ತ ಕೇಂದ್ರ ಮತ್ತು ರೋಟರಿ ಕ್ಲಬ್ ಚನ್ನರಾಯಪಟ್ಟಣ ವಿನ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 154ಕ್ಕೂ ಹೆಚ್ಚು ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ಹಾಗೂ ಹೃದಯ ತಪಾಸಣೆ ನಡೆಸಲಾಯಿತು.
ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಪಡೆದಾಗ ಶ್ರಮದ ಸಾರ್ಥಕ
ಸರ್ಕಾರದ ನಾನಾ ಯೋಜನೆಯ ಅಡಿ ತಮ್ಮ ಸುತ್ತಮುತ್ತ ನಡೆಯುವ ಅಭಿವೃದ್ಧಿ ಕಾಮಗಾರಿಗಳನ್ನು ಸಾರ್ವಜನಿಕರು ಖುದ್ದು ವೀಕ್ಷಿಸಿ ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿಯನ್ನು ಪಡೆದಾಗ ಮಾತ್ರ ನನ್ನ ಶ್ರಮದ ಜತೆಗೆ ಸರಕಾರದ ಅನುದಾನ ಸಾರ್ಥಕವಾಗಲಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷ ಕೆ.ಎಂ ಶಿವಲಿಂಗೇಗೌಡ ಕ್ಷೇತ್ರದ ಜನತೆಗೆ ಕಿವಿಮಾತು ಹೇಳಿದರು.
ಕಾಂಗ್ರೆಸ್ ಗೆಲುವು ಸಂಭ್ರಮಿಸಿದ ಕಾರ್ಯಕರ್ತರು
ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜೆಡಿಎಸ್ ಪಕ್ಷಕ್ಕೆ ಚನ್ನಪಟ್ಟಣದಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಯಾರೂ ಸಹ ರಾಜ್ಯದಿಂದ ಕಾಂಗ್ರೆಸ್ ಪಕ್ಷದಿಂದ ಕಿತ್ತೊಗೆಯಲು ಸಾಧ್ಯವಿಲ್ಲವೆಂಬುದನ್ನು ಅರಿಯಬೇಕಿದೆ ಎಂದರು.
ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಅಚ್ಚರಿ ಏನಲ್ಲ : ಜೆಡಿಎಸ್ ವಕ್ತಾರ ರಘು ಹೊಂಗೆರೆ

ಯಾವುದೇ ಉಪ ಚುನಾವಣೆಗಳಲ್ಲಿ ಆಡಳಿತದಲ್ಲಿರುವ ಪಕ್ಷ ಗೆಲ್ಲುವುದು ಸಹಜ. ಅದರಂತೆ ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿರುವುದು ಅಚ್ಚರಿ ಏನಲ್ಲ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಹೇಳಿದ್ದಾರೆ.

ಅಗತ್ಯವಿದ್ದಾಗ ನೀಡುವ ರಕ್ತ ಜೀವರಕ್ಷಕವಾಗಿದೆ
ಪ್ರಕೃತಿ ನಮಗೆ ನೀಡಿರುವ ರಕ್ತವೂ ಅತ್ಯಮೂಲ್ಯ ಕೊಡುಗೆಯಾಗಿದ್ದು, ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಕಾರ್ಯವನ್ನು ರಕ್ತದಾನದಿಂದ ಮಾಡಬಹುದಾಗಿದೆ. ಅಗತ್ಯ ವ್ಯಕ್ತಿಗಳಿಗೆ ಕೊಡುವ ರಕ್ತವೂ ಬೆಲೆ ಕಟ್ಟಲಾಗದ ಜೀವ ರಕ್ಷಕವಾಗಿದೆ, ದಾನಿಗಳು ನೀಡುವ ರಕ್ತ ಅಗತ್ಯ ವ್ಯಕ್ತಿಗಳಿಗೆ ನೀಡಿದ ಸಂದರ್ಭದಲ್ಲಿ ಅವರಲ್ಲಿನ ನಿರಾಳತೆ ಮತ್ತು ಧನ್ಯತಾಭಾವಕ್ಕೆ ಸರಿಸಾಟಿಯಿಲ್ಲ ಮತ್ತು ತುರ್ತು ಸಂದರ್ಭಕ್ಕೆ ರಕ್ತದಾನಿಗಳ ಕೊಡುಗೆ ಅಗತ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ ಅಭಿಪ್ರಾಯಪಟ್ಟರು.
ದಲಿತ ಸಮುದಾಯಗಳು ಹೆಚ್ಚು ಸಮಸ್ಯೆ ಎದುರಿಸುವಂತಾಗಿದೆ
ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯಗಳು ಹೆಚ್ಚು ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ಬಂದೊದಗಿದೆ. ಶೋಷಣೆ ಅಸಮಾನತೆ ವಿರುದ್ಧ, ಜಾತಿ ಧರ್ಮಗಳ ವಿರುದ್ಧ ಪ್ರಶ್ನೆ ಮಾಡಲು ಹುಟ್ಟಿದ್ದೇ ದಲಿತ ಚಳವಳಿ. ಒಂದು ಕಡೆ ಸಂವಿಧಾನ ಮತ್ತೊಂದು ಕಡೆ ಅಲಿಖಿತ ಸಂವಿಧಾನ ಇದೆ. ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಸಂವಿಧಾನ ಇದ್ದರೂ ಸಹ ಧಾರ್ಮಿಕ ಭಯೋತ್ಪಾದನೆ ಅಂತಹ ಅಲಿಖಿತ ಸಂವಿಧಾನಗಳು ದಾಳಿ ಮಾಡಿ ನಮ್ಮನ್ನು ಕುಗ್ಗಿಸುವಂತೆ ಮಾಡುತ್ತಿದೆ ಎಂದು ಅಂಬೇಡ್ಕರ್‌ ವಾದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಬೇಸರ ವ್ಯಕ್ತಪಡಿಸಿದರು.
ಗುಣಾತ್ಮಕ ಶಿಕ್ಷಣದಿಂದ ವಿದ್ಯಾರ್ಥಿಗಳ ಬದುಕು ಉಜ್ವಲ
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡಿದಾಗ ಮಾತ್ರ ವಿದ್ಯಾರ್ಥಿಗಳ ಬದುಕು ಉಜ್ವಲವಾಗುತ್ತದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್ ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ತಮ್ಮ ತಂದೆ ತಾಯಿಗಳ ಶ್ರಮ ಮತ್ತು ಜವಾಬ್ದಾರಿಗಳನ್ನ ಅರಿತು ವಿದ್ಯಾವಂತರಾದರೆ ಬುದ್ಧಿವಂತರಾದರೆ ಅವರಿಗಿಂತ ಖುಷಿಪಡುವವರು ಮತ್ತೊಬ್ಬ ಇರುವುದಿಲ್ಲ. ಹೀಗಾಗಿ ಸಮಯ ಪಾಲನೆ ಪರಿಶ್ರಮ ಶಿಸ್ತುಬದ್ಧ ಕಲಿಕೆಗೆ ಹೆಚ್ಚು ಒತ್ತುಕೊಟ್ಟು ಶಿಕ್ಷಣವನ್ನು ಪಡೆದು ಬದುಕನ್ನು ಕಟ್ಟಿಕೊಳ್ಳಬೇಕೆಂದು ಹೇಳಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿರುವುದರಿಂದ ಪದವಿ ಶಿಕ್ಷಣ ಮೂಲ ಅಡಿಪಾಯವಾಗಿರುತ್ತದೆ ಎಂದರು.
ಆಟಗಳ ಮೂಲಕ ಮಕ್ಕಳಿಗೆ ಕಲಿಸಲು ಮುಂದಾಗಿ
ಮಕ್ಕಳನ್ನು ಚಟುವಟಿಕೆಯಲ್ಲಿ ತೊಡಗಿಸಿ, ಆ ದಿಕ್ಕಿನಲ್ಲೇ ಶಿಕ್ಷಣ ನೀಡುವಲ್ಲಿ ಶಾಲೆಗಳು ಮಂದಾಗಬೇಕು, ಇದರಿಂದ ಮಕ್ಕಳಿಗೆ ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ಸಾಧ್ಯವೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ದೀಪಾ ತಿಳಿಸಿದರು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಮುಂದಾಗಬೇಕು. ಅವರಿಗಾಗಿ ಆಸ್ತಿ ಮಾಡಿಟ್ಟರೇ ಕಳ್ಳಕಾಕರ ಭಯವಿರುತ್ತದೆ. ಶಿಕ್ಷಣವನ್ನೆ ಆಸ್ತಿಯಾಗಿ ಕೊಟ್ಟರೇ ಸಮಾಜದಲ್ಲಿ ಎಲ್ಲಿ ಬೇಕಾದರೂ, ಹೇಗೆ ಬೇಕಾದರೂ ಬದುಕು ರೂಪಿಸಿಕೊಳ್ಳುತ್ತಾರೆ ಎಂದರು.
ಏಕೀಕರಣಕ್ಕಾಗಿ ಮಹನೀಯರ ಹೋರಾಟ ಅನನ್ಯವಾದದು
ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಕನ್ನಡಿಗರು ಹರಿದು ಹಂಚಿಹೋಗಿದ್ದರು. ಕನ್ನಡದ ಏಕೀಕರಣಕ್ಕೆ ಹಲವು ಮಹನೀಯರ ಹೋರಾಟ ಅನನ್ಯವಾದದು ಎಂದು ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ತಿಳಿಸಿದ್ದಾರೆ. ಸಮಾಜ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವು ಏನುಕೊಟ್ಟೆವು ಎಂಬುದು ಮುಖ್ಯವಾಗುತ್ತದೆ. ಬೆಂಗಳೂರಿನಲ್ಲಿ ಸಾಕಷ್ಟು ಭಾಷೆಗಳ ಸಮಸ್ಯೆ ಹೆಚ್ಚಾಗಿದ್ದ ಕಾರಣ ಎಚ್ಚೆತ್ತ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದೇ ಬೆಂಗಳೂರು ಉಳಿವಿಗೆ ಸಾಕ್ಷಿಯಾಗಿದೆ ಎಂದರು.
''ಕರ್ನಾಟಕ ರಾಜ್ಯದಲ್ಲಿ ಉಪಚುನಾವಣೆಯ ಫಲಿತಾಂಶ : ಮೈತ್ರಿಕೂಟದ ಸುಳ್ಳಿನ ಸುರಿ ಮಳೆ ನಡೆಯಲಿಲ್ಲ': ರಾಜಶೇಖರ್'

ಸರ್ಕಾರದ ಅಭಿವೃದ್ಧಿ ಕೆಲಸಗಳು ಹಾಗೂ ಗ್ಯಾರಂಟಿ ಯೋಜನೆ ಗಳು ಹಾಗೂ ಸಿಎಂ ಡಿಸಿಎಂ ಜೋಡಿಗಳು ಒಂದಾಗಿ ಮಾಡಿದ ತಂತ್ರಗಾರಿಕೆಯಲ್ಲಿ ಈ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆದಿರುವುದಕ್ಕೆ ಸಂತೋಷವಾಗಿದೆ ಎಂದು ಗ್ರಾನೈಟ್ ಎಚ್.ಎಸ್. ರಾಜಶೇಖರ್ ಹೇಳಿದರು.  

  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved