• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಾಹಿತ ಮಹಿಳೆಯರೊಂದಿಗೆ ಅನೈತಿಕ ಸಂಬಂಧದಿಂದ ಯುವಕ ಆತ್ಮಹತ್ಯೆ
ಇಬ್ಬರು ವಿವಾಹಿತ ಮಹಿಳೆಯರ ಕಾಟಕ್ಕೆ ಸಿಲುಕಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ಬಾಳೆಗದ್ದೆ ಬಡಾವಣೆಯ ಕವನ್(೨೫) ಮೃತ ಯುವಕ. ಅನೈತಿನ ಸಂಬಂಧದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಕಳೆದ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಎಲ್ಲ ಘಟನೆಗಳನ್ನು ವಿಷ ಸೇವಿಸುವ ಮುನ್ನ ಕವನ್‌ ವಿಡಿಯೋ ಮಾಡಿ ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಮೃತಪಟ್ಟಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಮುಂದೆ ಗುರಿ ಹಿಂದೆ ಗುರು ಇರಬೇಕು
ಮುಂದೆ ಗುರಿ ಇರಬೇಕು ಹಿಂದೆ ಗುರುವಿನ ಮಾರ್ಗದರ್ಶನ ಇರಬೇಕು. ಆಗ ಮಾತ್ರ ಮುಕ್ತಿ, ಮತ್ತು ಆದರ್ಶ ಹೊಂದಲು ಸಾಧ್ಯ ಎಂದು ಸಮಾಜ ಚಿಂತಕ ಶಿವಶಂಕರ್ ಅಭಿಪ್ರಾಯಪಟ್ಟರು. ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಜೈ ಹೋ ರಾಮಲಲ್ಲ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ರಾಮಚಂದ್ರ ಪ್ರತಿಯೊಬ್ಬ ವ್ಯಕ್ತಿಗೆ ಆದರ್ಶ ಮರ್ಯಾದ ಪುರುಷೋತ್ತಮ ಎನಿಸಿಕೊಂಡರು ಎಂದು ತಿಳಿಸಿದರು.
ಬಿಜಿಎಸ್‌ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ
ಬಿಜಿಎಸ್ ಪಬ್ಲಿಕ್ ಸ್ಕೂಲ್ ಮತ್ತು ಬಿಜಿಎಸ್‌ ಪಿಯು ಕಾಲೇಜಿನ ವತಿಯಿಂದ ಮಕರ ಸಂಕ್ರಾಂತಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜಿಎಸ್ ಶಾಲಾ ಮಕ್ಕಳು ಮತ್ತು ಶಿಕ್ಷಕರು ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇಶಿಯ ಉಡುಪುಗಳನ್ನು ಧರಿಸಿಕೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು ಹಾಗೂ ಸಿರಿ ಧಾನ್ಯಗಳ ರಾಶಿ ಪೂಜೆ ಮಾಡುವುದರೊಂದಿಗೆ ಎಲ್ಲ ಮಕ್ಕಳಿಗೆ ಎಳ್ಳು ಬೆಲ್ಲವನ್ನು ವಿತರಿಸಲಾಯಿತು.
ಶಿಕ್ಷಣ ಹಾಗೂ ಆರೋಗ್ಯ ವ್ಯಾಪಾರೀಕರಣ
ಶಿಕ್ಷಣ ಮತ್ತು ಆರೋಗ್ಯ ಸಂಪೂರ್ಣವಾಗಿ ವ್ಯಾಪಾರೀಕರಣವಾಗುತ್ತಿದ್ದು, ಇದು ನೋವಿನ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್ ತಿಳಿಸಿದರು. ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು ಉಳಿದು, ಬೆಳೆದಾಗ ಜನಸಾಮಾನ್ಯರು, ಬಡವರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಸುಲಭವಾಗಿ ದೊರಕಲು ಸಾಧ್ಯವಾಗುತ್ತದೆ. ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದು ಹರ್ಷದಾಯಕ ಸಂಗತಿಯಾಗಿದ್ದು, ಇದು ಎಲ್ಲ ಶಾಲೆಗಳಲ್ಲೂ ಸಾಕಾರಗೊಳ್ಳುವಂತಾಗಬೇಕು ಎಂದರು.
ಧರ್ಮಧರ್ಮಗಳ ನಡುವೆ ಬಡಿದಾಟ ಮೊದಲು ನಿಲ್ಲಲಿ
ಪ್ರಸಕ್ತ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಬಹಳಷ್ಟು ದೇಶಗಳಲ್ಲಿ ಮಾನವ ಹಕ್ಕುಗಳಿಗೆ ಚ್ಯುತಿ ಬರುವುದನ್ನು ನೋಡುತ್ತಿದ್ದೇವೆ. ಧರ್ಮಧರ್ಮಗಳ ಬಡಿದಾಟ, ವೈಮನಸ್ಸುಗಳ ಸ್ಥಿತಿ ಉದ್ಭವ ಆಗುತ್ತಿದ್ದು, ಇದು ನಿಲ್ಲಬೇಕಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಾನಂ ಲೋಕೇಶ್ ತಿಳಿಸಿದರು. ಹಾಸನದಲ್ಲೂ ಕೂಡ ಮಾನವ ಹಕ್ಕುಗಳ ಜನಸೇವಾ ಸಮಿತಿ ಜನ್ಮತಾಳಿದೆ. ಏನಾದರೂ ಸಮಸ್ಯೆ ಇದ್ದರೆ ನಮ್ಮ ಸಂಸ್ಥೆಗಳ ಪದಾಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದರು.
ಜೆಡಿಎಸ್‌ ಪಕ್ಷದೊಳಗಿನ ವಿರೋಧಿಗಳ ಬಗ್ಗೆ ಸೂರಜ್ ಅಸಮಾಧಾನ
ಹೊಳೆನರಸೀಪುರ ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದ ತಮ್ಮ ಹುಟ್ಟುಹಬ್ಬದ ಆಚರಣೆ ವೇಳೆ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಜೆಡಿಎಸ್‌ ಪಕ್ಷದೊಳಗೇ ಇದ್ದುಕೊಂಡು ಮೋಸ ಮಾಡಿದವರ ವಿರುದ್ಧ ಆಕ್ರೋಶ ಅಸಮಾಧಾನ ಹೊರಹಾಕಿದರು. ನಾನು ನಿನ್ನೆ, ಮೊನ್ನೆ ಪೆನ್‌ಡ್ರೈವ್ ಹಂಚಿ ಎಂಎಲ್‌ಸಿ ಆಗಿಲ್ಲ. ಯಾವುದೇ ಇಲಾಖೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆ ನನ್ನ ಗಮನಕ್ಕೆ ತನ್ನಿ. ನಿಮ್ಮ ನೆರವಿಗೆ ಯಾರು ಬರ್ತಾರೋ, ಬಿಡ್ತಾರೋ ಈ ಸೂರಜ್‌ ರೇವಣ್ಣ ಬರ್ತಾನೆ ಎಂದರು.
ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ
ಶ್ರೀ ವಿವೇಕಾನಂದ ಯೋಗಶಿಕ್ಷಣ ಶಾಲೆಯಲ್ಲಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ. ಎಚ್. ಎಲ್. ಜನಾರ್ದನ್‌ ಮಾತನಾಡಿದರು. ಒಳ್ಳೆಯದರಲ್ಲಿ ನಂಬಿಕೆ ಇಡಬೇಕು. ದ್ವೇಷ, ಅಸೂಯೆಗಳನ್ನು ತೊರೆದು ತಾವು ಒಳ್ಳೆಯವರಾಗಿ ಇತರರಿಗೆ ಸನ್ಮಾರ್ಗದಲ್ಲಿ ನಡೆಯಲು ಸಹಕರಿಸುವುದರಿಂದ ಮಾನವ ಜೀವನದ ಶ್ರೇಷ್ಠತೆಯು ಸಾಧಿತವಾಗುತ್ತದೆ ಎಂದು ವಿವೇಕಾನಂದರು ಪ್ರತಿಪಾದಿಸಿದರು ಎಂದು ತಿಳಿಸಿದರು.
ನಾಳೆ ಪೊಲೀಸರಿಂದ ಕುರುಕ್ಷೇತ್ರ ನಾಟಕ ಪ್ರದರ್ಶನ
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಮೀಪ ಜ. ೧೪ರ ಮಂಗಳವಾರ ರಾತ್ರಿ ನಿರ್ಮಿಸುವ ವಿಶೇಷ ವೇದಿಕೆಯಲ್ಲಿ ಮಲ್ಲತಮ್ಮನಹಳ್ಳಿಯ ಎಂ.ಪಿ.ಪದ್ಮರಾಜು ನಿರ್ದೇಶನದಲ್ಲಿ ತಾಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಅಭಿನಯಿಸುವ ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಪುರಾಣದ ಪಾತ್ರಗಳ ಮೂಲಕ ಬದುಕಿನ ಆದರ್ಶಗಳನ್ನು ಮಕ್ಕಳ ಮನಸ್ಸಿಗೆ ತುಂಬಿಸುತ್ತಾ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬೇರುಗಳನ್ನು ಮಕ್ಕಳಿಗೆ ತಿಳಿಸಿಕೊಡುತ್ತಾ ಅವರಿಗೆ ಬದುಕಿನ ಸನ್ಮಾರ್ಗವನ್ನು ತೋರಿಸುವ ಜತೆಗೆ ಗಟ್ಟಿಗೊಳಿಸಬೇಕಿದೆ.
ಆಲೂರಿನ ದೇಗುಲಗಳಲ್ಲಿ ವೈಕುಂಠ ಏಕಾದಶಿ
ಕುಂದೂರು ಹೋಬಳಿ ಅಡಿಬೈಲು ಗ್ರಾಮದಲ್ಲಿರುವ ರಂಗನ ಬೆಟ್ಟದಲ್ಲಿನ ಶ್ರೀ ಬಿಂದಿಗಮ್ಮ ರಂಗನಾಥ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾದವು. ಮೊದಲಿಗೆ ಸುಪ್ರಭಾತ ಸೇವೆ, ಗುರು ಪರಂಪರ ಅನುಸಂಧಾನ, ಸಂಕಲ್ಪ ವಾಸುದೇವ ಪುಣ್ಯ, ಪಂಚಾಮೃತ ಅಭಿಷೇಕ ನಡೆಸಲಾಯಿತು. ಏಳು ಗಂಟೆಗೆ ನೆರೆದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಂಗನಾಥ ಸ್ವಾಮಿಯ ಅಡ್ಡ ಪಲ್ಲಕ್ಕಿ ಉತ್ಸವ ನಡೆಸಿ, ವೈಕುಂಠ ದ್ವಾರ ಪ್ರವೇಶ ಪೂಜೆ ನೆರವೇರಿಸಲಾಯಿತು.
ಸೌರವ್ಯೂಹ ವೀಕ್ಷಣೆ ವಿಶೇಷ ಪ್ರಾಯೋಗಿಕ ಕಲಿಕೆಗೆ ಒತ್ತು
ಸೌರವ್ಯೂಹ ಗ್ರಹಗಳ ಚಲನೆ ಮತ್ತು ಕಾರ್ಯವೈಖರಿ ಕುರಿತು ನಗರದ ಆದಿಚುಂಚನಗಿರಿ ಆಂಗ್ಲ ಪ್ರಾಥಮಿಕ ಶಾಲೆಯು ತನ್ನ ಶಾಲೆಯ ವಿದ್ಯಾರ್ಥಿಗಳಿಗೆ ಖಗೋಳಶಾಸ್ತ್ರದ ವಿಶೇಷ ಪ್ರಾಯೋಗಿಕ ಕಲಿಕೆಗೆ ಮುಂದಾಗುವುದರ ಮೂಲಕ ಪರಿಣಾಮಕಾರಿ ಕಲಿಕೆಗೆ ಒತ್ತು ನೀಡಿ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. , ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿನ ನೈಸರ್ಗಿಕವಾಗಿ ವಿಭಿನ್ನ ರೀತಿಯ ಚಟುವಟಿಕೆಗಳು ಅದರಲ್ಲೂ ವಿಶೇಷವಾಗಿ ಪ್ರತಿ ಹುಣ್ಣಿಮೆಯ ರಾತ್ರಿ ಚಂದ್ರ ಭೂಮಿಗೆ ತೀರ ಸಮೀಪಿಸುವುದರಿಂದ ಸಮುದ್ರದ ಅಲೆಗಳಲ್ಲಿ ಏರಿಳಿತಗಳು ವಿಪರೀತವಾಗುವುದರಿಂದ ಭೂಕಂಪನ ಹಾಗೂ ಸುನಾಮಿಯಂಥ ಪ್ರಕೃತಿ ವಿಕೋಪಗಳು ಘಟಿಸುತ್ತವೆ.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved