ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರುಎಸ್.ಎಲ್. ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಪ್ರಮುಖ ಕೊಂಡಿಯನ್ನು ಕಳೆದುಕೊಂಡಂತಾಗಿದೆ. ತಾಲೂಕಿನ ಸುಪುತ್ರರಾಗಿ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದ ಭೈರಪ್ಪನವರ ಹುಟ್ಟೂರು ಸಂತೇಶಿವರ ಗ್ರಾಮಕ್ಕೆ ಕೊನೇ ದಿನಗಳಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದು ಕೆರೆತುಂಬಿಸುವ ಯೋಜನೆಗೆ ಸಾಕಷ್ಟು ಶ್ರಮವಹಿಸಿದ ಹಿರಿಯಚೇತನ. ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ, ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಸಾಹಿತ್ಯ ಲೋಕದ ಅನರ್ಘ್ಯ ರತ್ನ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.