• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಮರ್ಪಕ ಯೂರಿಯಾ ವಿತರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಕೇಂದ್ರ ಸರ್ಕಾರವು ನೀಡಿರುವ ರಸಗೊಬ್ಬರವನ್ನು ರೈತರಿಗೆ ಸರಿಯಾಗಿ ಹಂಚಿಕೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದ ವತಿಯಿಂದ ಬುಧವಾರ ಸಂತೇಪೇಟೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಾರ್ಯಾಲಯದ ಮುಂದೆ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರಸಗೊಬ್ಬರ ಕಾಳದಂಧೆ ನಡೆಯುತ್ತಿದೆ. ರೈತರು ಎರಡುಪಟ್ಟು, ಮೂರುಪಟ್ಟು ಹಣ ನೀಡಿ ಯುರಿಯಾ ಗೊಬ್ಬರವನ್ನು ಖರೀದಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ನೀಡದೆ ಕಳಪೆ ಬಿತ್ತನೆ ಬೀಜ ನೀಡಿದ್ದು, ರೈತರು ಕಂಗಾಲಾಗಿ ಪರದಾಡುತ್ತಿದ್ದಾರೆ. ಇದರ ಪರಿಣಾಮವೇ ಇಂದು ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದರು.
ಪತ್ರಕರ್ತರ ಕೇರಂ ಕ್ರೀಡಾಕೂಟಕ್ಕೆ ಚಾಲನೆ
ಪ್ರತಿವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಭವನದಲ್ಲಿ ಮಂಗಳವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಕೇರಂ ಕ್ರೀಡಾಕೂಟವನ್ನು ಜಿಲ್ಲಾ ವಾರ್ತಾಧಿಕಾರಿ ಮೀನಾಕ್ಷಿ ಅವರು ಕೇರಂ ಆಟ ಆಡುವುದರ ಮೂಲಕ ಚಾಲನೆ ನೀಡಿದರು. ಮುಂದಿನ ಕ್ರೀಡೆಗಳನ್ನು ಕೂಡ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಸಹಕಾರಿಸುವಂತೆ ಮನವಿ ಮಾಡಿದರು. ಕ್ರೀಡೆಗಳಲ್ಲಿ ಗೆಲುವು ಸೋಲು ಸಾಮಾನ್ಯ. ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು, ಶಾಂತಿಯುತವಾಗಿ ಎಲ್ಲರೂ ಕ್ರೀಡೆಗಳಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಹೇಳಿದರು.
ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಸಿಟಿ ರೌಂಡ್ಸ್‌
ಡಿಸಿ ಅವರು ಆಗಾಗ ಹಾಸನ ನಗರ ಮತ್ತು ಸುತ್ತ ಮುತ್ತ ರೌಂಡ್ಸ್ ಮಾಡಿ ಇಲ್ಲಿನ ಜನರಿಗೆ ಅನುಕೂಲವಾಗುವ ಹಾಗೂ ಸಮಸ್ಯೆ ಇರುವುದನ್ನು ಸರಿಪಡಿಸಲು ಪರಿಶೀಲನೆ ನಡೆಸುತ್ತಲೆ ಇದ್ದಾರೆ. ಮಂಗಳವಾರವು ಕೂಡ ತಮ್ಮ ಮನೆಯಿಂದ ಎನ್.ಆರ್. ವೃತ್ತಕ್ಕೆ ಆಗಮಿಸಿದಾಗ ಅಲ್ಲಿ ಕೆಲಸಕ್ಕೆಂದು ಕೂಲಿ ಕಾರ್ಮಿಕರು ಗುಂಪು ಸೇರಿದನ್ನ ಗಮನಿಸಿ ವಿಚಾರಿಸಿದರು. ಇವರಿಗೆ ಇದುವರೆಗೂ ಕೂಲಿ ಕಾರ್ಮಿಕರ ಸೌಲಭ್ಯ ಸಿಗದ ಬಗ್ಗೆ ಚರ್ಚಿಸಿದರು. ಎಲ್ಲರೂ ಆಧಾರ್‌ ಕಾರ್ಡ್ ಹಾಗೂ ಇತರೆ ದಾಖಲೆ ತಂದುಕೊಟ್ಟರೇ ಶೀಘ್ರದಲ್ಲಿಯೇ ಕಾರ್ಮಿಕರ ಕಾರ್ಡ್ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾಸನ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಠ ಅಧಿಕಾರಿಗಳ ಮನೆ ಹಾಗೂ ಪತ್ನಿ ನಿವಾಸ, ಹಾರ್ಡ್ವೇರ್ ಅಂಗಡಿ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದಲ್ಲದೇ ಮಹತ್ವದ ದಾಖಲೆ ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಮಾಡಿರುವ ಬಗ್ಗೆ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಹೊಸ ಬಸ್ ನಿಲ್ದಾಣದ ಎದುರು ಹೌಸಿಂಗ್ ಬೋರ್ಡ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಹಾಸನ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಎಂಬುವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದರು.
ಜಿಲ್ಲೆಯಾದ್ಯಂತ ನಾಗರ ಪಂಚಮಿ ಹಬ್ಬ ಆಚರಣೆ
ನಾಗರ ಪಂಚಮಿ ಸಂಬಂಧಿಸಿದಂತೆ ಜಾನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ ದಿವಸವಾಗಿದೆ. ಇನ್ನು ಅಣ್ಣ-ತಂಗಿಯರ ಬಾಂಧವ್ಯವು ಗಟ್ಟಿಯಾಗಿರಲೆಂದು ಹುತ್ತಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ.
ಹಿಂಡು ಹಿಂಡಾಗಿ ಕೃಷಿ ಭೂಮಿಗೆ ನುಗ್ಗಿದ ಕಾಡಾನೆಗಳು
ತಾಲೂಕಿನಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು ಆಹಾರ ಹುಡುಕಿಕೊಂಡು ರೈತರ ಕೃಷಿ ವಲಯಕ್ಕೆ ಕಾಡಾನೆಗಳು ಹಿಂಡು ಹಿಂಡಾಗಿ ದಾಂಧಲೆ ನಡೆಸುತ್ತಿದ್ದು ಇದರಿಂದ ರೈತರು ಕಂಗಲಾಗಿದ್ದಾರೆ. ಇದೇ ಗ್ರಾಮದ ಪಟೇಲರ ಮನೆ ಬಸಪ್ಪ ಗೌಡ ಎಂಬುವರ ತೋಟವನ್ನು ನಾಶಪಡಿಸಿವೆ. ಇದೇ ರೀತಿ ತಾಲೂಕಿನ ಕೊಡಗು ಗಡಿ ಗ್ರಾಮ ತಂಬಲಗೇರಿಯಲ್ಲಿ ಐದಕ್ಕೂ ಹೆಚ್ಚು ಕಾಡಾನೆಗಳು ಗ್ರಾಮದ ಕೃಷ್ಣಮೂರ್ತಿ ಎಸ್ಟೇಟ್, ಟಿಡಿ ಸುಬ್ರಹ್ಮಣ, ಧರ್ಮರಾಜ್‌ರವರ ಕಾಫಿ ತೋಟಗಳಲ್ಲಿ ಕಾಫಿ, ಏಲಕ್ಕಿ, ಅಡಿಕೆ ಗಿಡಗಳನ್ನು ನಾಶಪಡಿಸಿವೆ. ಇದೇ ಗ್ರಾಮದ ವಿನೋದ್, ಮಧು ಎಂಬುವರ ಭತ್ತದ ಗz ಹಾಗೂ ತೋಟದ ಕೆರೆಯನ್ನು ಸಂಪೂರ್ಣ ನಾಶಪಡಿಸಿವೆ.
ಕಾಡುಗೊಲ್ಲರ ಸಮುದಾಯ ಸಂಘಟಿತವಾಗಿ ಮುಂಚೂಣಿಗೆ ಬರಬೇಕು
ಪ್ರತಿ ಸಮುದಾಯಗಳು ಕೇವಲ ಅಧಿಕಾರಕ್ಕಾಗಿ ಸ್ಥಾನಗಳನ್ನು ಅಲಂಕರಿಸದೇ ಸಂಘಟನೆಗೆ ಹೆಚ್ಚು ಆಸಕ್ತರಾಗಬೇಕಿದೆ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಇನ್ನಿತರೆ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರಬೇಕಾದರೆ ಸಂಘಟನೆ ಮುಖ್ಯವಾಗಿದೆ. ನೂತನ ಪದಾಧಿಕಾರಿಗಳು ಅರಸೀಕೆರೆ ತಾಲೂಕಿನಲ್ಲಿ ಸಂಘಟನೆಗೆ ಹೆಚ್ಚು ಒತ್ತನ್ನು ನೀಡುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕು. ಸಮುದಾಯದ ಸಂಘಟನೆ ಬಲಿಷ್ಠಗೊಳಿಸುವ ಜೊತೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಗಮನ ಹರಿಸಲು ಮುಂದಾಗಬೇಕು. ನಿಮ್ಮೆಲ್ಲರ ಶಕ್ತಿಯನ್ನು ಕಾಡುಗೊಲ್ಲರ ಸಮುದಾಯ ಅಭಿವೃದ್ಧಿಗೆ ಧಾರೆ ಎರೆದಾಗ ಮಾತ್ರ ಎಲ್ಲ ಕ್ಷೇತ್ರಗಳಲ್ಲೂ ಪ್ರಮುಖ ಪಾತ್ರ ವಹಿಸಲು ಸಾದ್ಯವಾಗುತ್ತದೆ ಎಂದರು.
ಒತ್ತಡರಹಿತ ಜೀವನದಿಂದ ಹೃದಯದ ಆರೋಗ್ಯ ಕಾಪಾಡಿ
ಸಂಪ್ರಾದಾಯಿಕ ಆಹಾರ ಪದ್ಧತಿಯ ಪಾಲನೆ ಜತೆಗೆ ಸಿದ್ಧ ಪಡಿಸಿದ ಆಹಾರದಿಂದ ದೂರ ಉಳಿಯುವುದು ಹಾಗೂ ದೈನಂದಿನ ಜೀವನದಲ್ಲಿ ಯೋಗ, ಪ್ರಾಣಾಯಾಮ, ವ್ಯಾಯಾಮ ಮತ್ತು ಒತ್ತಡ ರಹಿತವಾದ ಜೀವನವನ್ನು ರೂಪಿಸಿಕೊಂಡರೆ ಹೃದಯದ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ತಹಸೀಲ್ದಾರ್‌ ವೈ.ಎಂ. ರೇಣುಕುಮಾರ್‌ ಸಲಹೆ ನೀಡಿದರು. ಮಾರಣಾಂತಿಕ ಕಾಯಿಲೆಯಾದ ಹೃದಯಾಘಾತ ತಡೆಯವ ಜತೆಗೆ ಉತ್ತಮ ಜೀವನ ಜೈಲಿ ಆಳವಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ನಡೆಯುತ್ತಿದೆ. ಜನರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬೇಕು. ಪೌಷ್ಠಿಕ ಆಹಾರವನ್ನು ಸೇವಿಸಬೇಕು, ಮದ್ಯಪಾನ, ಧೂಮಪಾನ, ಮಾದಕ ವಸ್ತುಗಳಾದ ಡ್ರಗ್ಸ್ ಹಾಗೂ ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಹಾವಿಗೆ ಹಾಲು ನೀಡದೇ ರೋಗಿಗಳಿಗೆ ಹಾಲು ವಿತರಿಸಿ ಬಸವ ಪಂಚಮಿ ಆಚರಣೆ
ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಜಯಲಕ್ಷ್ಮಿ ಮಾತನಾಡಿ, ಮಾನವ ಬಂಧುತ್ವ ವೇದಿಕೆಯಿಂದ ರೋಗಿಗಳಿಗೆ ಹಾಲು, ಬ್ರೆಡ್ ವಿತರಿಸಿ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಾರಣ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಆದರೂ ಹಾಲನ್ನು ಹುತ್ತಕ್ಕೆಎರೆದು ಹಾಳು ಮಾಡುತಿದ್ದೇವೆ. ಆದರೆ ದೇಶದಲ್ಲಿ ಸಾಕಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತಿದ್ದಾರೆ. ಈ ಹಾಲಿನಲ್ಲಿ ಕಾರ್ಬೋಹೈಡೆಟ್, ಪ್ರೋಟೀನ್ ಸೇರಿದಂತೆ ಮಕ್ಕಳಿಗೆ ಏನು ಬೇಕು ಅದೆಲ್ಲ ಇರುತ್ತೆ. ಹಾಲನ್ನು ವೇಸ್ಟ್ ಮಾಡದೆ ಒಳ್ಳೆ ಉದ್ದೇಶಕ್ಕೆ ಬಳಸಿದರೆ ಸಾರ್ಥಕವಾಗುತ್ತದೆ ಎಂದರು.
ಬಹುಸಂಖ್ಯಾತ ಒಕ್ಕಲಿಗರಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡಲಿ
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ತನು, ಮನ, ಧನ ಖರ್ಚು ಮಾಡಿ ಪಕ್ಷ ಸಂಘಟನೆ ಮಾಡಿದ ಹಲವಾರು ವಿಧಾನಸಭಾ ಕ್ಷೇತ್ರದಲ್ಲಿ ಬಹು ಸಂಖ್ಯಾತರಾಗಿರುವುದರಿಂದ ಒಕ್ಕಲಿಗರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಒತ್ತಾಯಿಸುತ್ತೇವೆ. ಒಂದು ವೇಳೆ ಸಾಧ್ಯವಾಗದಿದ್ದರೆ, ಹಾಸನ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಅಥವಾ ದಲಿತ ವರ್ಗದವರನ್ನು ಪರಿಗಣಿಸುವ ಮೂಲಕ ಪಕ್ಷ ಸಂಘಟನೆಗೆ ಅನುಕೂಲ ಮಾಡಿಕೊಡಬೇಕಾಗಿ ಆಗ್ರಹಿಸಿದರು. ಬಹುಸಂಖ್ಯಾತರಾಗಿರುವ ಒಕ್ಕಲಿಗರನ್ನೇ ಹುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಕುಮಾರಶೆಟ್ಟಿ ಒತ್ತಾಯಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 500
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved