• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾಭದಲ್ಲಿ ಬೆಳವಾಡಿ ಕೃಷಿಪತ್ತಿನ ಸಹಕಾರಿ ಸಂಘ
ಬೆಳವಾಡಿ ಕೃಷಿಪತ್ತಿನ ಸಹಕಾರಿ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸರ್ವಸದಸ್ಯರನ್ನು ಉದ್ದೇಶಿಸಿ ಕೃಷಿಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಮಾತನಾಡಿ, ಸಂಘದಲ್ಲಿ ಒಟ್ಟು ೭೯೦ ಸದಸ್ಯರನ್ನು ಹೊಂದಿದ್ದು ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ ೩೯ ಲಕ್ಷದ ೯೩ ಸಾವಿರದ ರು. ಗಳ ಷೇರು ಬಂಡವಾಳವನ್ನು ಹೊಂದಿದೆ. ಈ ಸಹಕಾರಿ ಸಂಘ ಸುಮಾರು ೧೦ ಗ್ರಾಮಗಳ ವ್ಯಾಪ್ತಿಯನ್ನು ಹೊಂದಿದೆ. ೩೬ ಸ್ವಸಹಾಯ ಸಂಘಗಳಿದ್ದು ೨೪-೨೫ನೇ ಸಾಲಿನಲ್ಲಿ ೧೪ ಸ್ವಸಹಾಯ ಸಂಘಗಳಿಗೆ ೭೮ ಲಕ್ಷದ ೫೦ ಸಾವಿರ ಸಾಲ ನೀಡಲಾಗಿದೆ. ೪೯೫ ಜನ ಸದಸ್ಯರಿಗೆ ಕೃಷಿಗಾಗಿ ಸದಸ್ಯರಿಗೆ ೩ ಕೋಟಿ ೨ ಲಕ್ಷ ರು. ಗಳನ್ನು ಕೃಷಿ ಸಾಲವಾಗಿ ನೀಡಲಾಗಿದೆ. ಸಂಘದಲ್ಲಿ ಸ್ಥಾಪನೆಯಾಗಿರುವ ರೈತ ಕ್ಷೇಮನಿಧಿಯನ್ನು ಸ್ಥಾಪಿಸಿ ೨೦೧೫-೧೬ರಿಂದ ೨೦೨೫ರವರೆಗೆ ಸುಮಾರು ೮೫ ಮರಣ ಹೊಂದಿದ ಸದಸ್ಯ ರೈತರ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ನೀಡಲಾಗಿದೆ.
ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು
ಸ್ವಚ್ಛ ಭಾರತ್ ಮಿಷನ್‌ಗಾಗಿ ಹೆಚ್ಚಿನ ಸಾರ್ವಜನಿಕ ಸಹಭಾಗಿತ್ವವನ್ನು ನಿರ್ಮಿಸುವ ಹಾಗೂ ಸ್ವಚ್ಛತೆಯನ್ನು ಪ್ರತಿಯೊಬ್ಬರ ಕರ್ತವ್ಯವೆಂದು ಬಲಪಡಿಸುವ ಗುರಿಯಿಂದ ''ಸ್ವಚ್ಛತಾ ಹಿ ಸೇವಾ'' ಅಭಿಯಾನವನ್ನು ಸಾಗಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ಜನರಿಗೆ ಕಸವನ್ನು ಸರಿಯಾಗಿ ವಿಂಗಡಿಸಿ ಕಸ ಸಂಗ್ರಹಿಸುವವರ ಕೈಯಲ್ಲಿ ನೀಡಬೇಕು, ಕಸವನ್ನು ಬೀದಿಗೆ ಬಿಸಾಡ ಬಾರದು, ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಬೇಕು. ಇದರಿಂದ ಕಸದ ನಿರ್ವಹಣೆ ಸುಲಭವಾಗಿ ನಡೆಯುತ್ತದೆ. ಪುರಸಭೆಯ ಸಿಬ್ಬಂದಿ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರ ಸಹಕಾರವೇ ಸ್ವಚ್ಛತೆಯನ್ನು ಯಶಸ್ವಿಯಾಗಿ ಮಾಡುವುದಕ್ಕೆ ಮುಖ್ಯ ಎಂದು ಹೇಳಿದರು.
ಸಾರಸ್ವತ ವರಪುತ್ರ ಭೈರಪ್ಪ ನಿಧನಕ್ಕೆ ಕಂಬನಿ
ಪದ್ಮಭೂಷಣ ಎಸ್.ಎಲ್. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರು ರಚಿಸಿದ ಕಾದಂಬರಿಗಳು ಹಲವಾರು ಭಾಷೆಗಳಲ್ಲಿ, ಕೆಲವು ಕಾದಂಬರಿಗಳು ಕನ್ನಡ ಚಲನಚಿತ್ರವಾಗಿ ಹೊರಹೊಮ್ಮಿವೆ. ಇನ್ನು ಕೆಲವು ಕಾದಂಬರಿಗಳು ನಾಟಕ, ಧಾರಾವಾಹಿಗಳಲ್ಲಿ ಪ್ರಸಾರಗೊಂಡಿವೆ. ಪದ್ಮಶ್ರೀ, ಸರಸ್ವತಿ ಸಮ್ಮಾನ್ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರರಾಗಿದ್ದ ಅವರು, ಸಾರಸ್ವತ ವರಪುತ್ರ ಎಂದು ಕಂಬನಿ ಮಿಡಿದರು. ಗುಜರಾತ್ ಸೇರಿದಂತೆ ಅನೇಕ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಅನುಪಮ ಸೇವೆ ಸಲ್ಲಿಸಿದ ಶ್ರೇಯಸ್ಸು ಅವರಿಗೆ ಇದೆ ಎಂದರು.
ನ್ಯೂ ಮಿನರ್ವಾ ಮಿಲ್ ಮುಚ್ಚುವ ಭೀತಿಯಲ್ಲಿ ಕಾರ್ಮಿಕರು
ಹನುಮಂತಪುರ ಸಮೀಪ ಇರುವ ನ್ಯೂ ಮಿನರ್ವಾ ಮಿಲ್ ಮತ್ತು ರಾಷ್ಟ್ರೀಯ ಜವಳಿ ನಿಗಮ ಮುಚ್ಚಿರುವುದರಿಂದ ಕಾರ್ಮಿಕರ ಜೀವನ ಸ್ಥಿತಿ ಮತ್ತು ಕುಟುಂಬಗಳು ಅರ್ಥಿಕ ಸ್ಥಿತಿ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಘಟಕವನ್ನು ಪುನರ್ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ನ್ಯೂ ಮಿನರ್ವ ಮಿಲ್ ವರ್ಕರ್ಸ್‌ ಯೂನಿಯನ್‌ನಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ೧೯೩೬ರ ಉದ್ಯೋಗ ಹಕ್ಕುಗಳ ಕಾಯ್ದೆಯ ಅಡಿಯಲ್ಲಿ ಉದ್ಯೋಗದಾತರು ಮಾಸಿಕ ಸಂಬಳ ಚೀಟಿಗಳನ್ನು ನೀಡಬೇಕಾದರೂ, ಹಾಸನದ ಮಿಲ್ ಆಡಳಿತವು ಈ ನಿಯಮ ಪಾಲನೆ ಮಾಡುತ್ತಿಲ್ಲ ಎಂದು ದೂರಿದರು.
ವಿಶ್ವಮಾನವ ತತ್ವ ಸಾರಿದ ಕುವೆಂಪು ಎಲ್ಲರಿಗೂ ಮಾದರಿ
ಧರ್ಮಾಂಧತೆಯ ಮಡುವಿನಲ್ಲಿ ನಲುಗುತ್ತಿರುವ ಜನತೆಗೆ ಕುವೆಂಪುರವರ ಚಿಂತನೆಗಳು ದಾರಿದೀಪವಾಗಿವೆ. ಇಂದಿನ ತಲೆಮಾರು ಕುವೆಂಪುರವರನ್ನು ಓದಿಕೊಳ್ಳುವ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಪ್ರೊ. ಸೈಯದ್ ಶಹಬುದ್ದೀನ್ ಅಭಿಪ್ರಾಯಪಟ್ಟರು. ಎಲೆಮರೆಕಾಯಿಯಂತಹ ಸಾಧಕರನ್ನು ಗುರುತಿಸಿ ಮುನ್ನೆಲೆಗೆ ತರುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಸಾಹಿತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ದೃಷ್ಠಿಕೋನದಲ್ಲಿ ಸಾಹಿತ್ಯ ರಚಿಸಬೇಕು ಎಂದರು. ನಗರದ ಸ್ಕೌಟ್ಸ್ ಗೈಡ್ಸ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ “ಹಾಸನ ದಸರಾ ಕವಿಗೋಷ್ಠಿ” ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಿಗೆ ತರಬೇತಿ ಜತೆಗೆ ಆರ್ಥಿಕ ನೆರವು ಬೇಕು
ತಗಡೂರು ಹಾಸ್ಟೆಲ್ ಸಮುದಾಯ ಭವನದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಬಲವರ್ಧನ ಸಂಸ್ಥೆ, ರಂಗನಾಥ ಸ್ವಾಮಿ ಸಂಜೀವಿನಿ ಮಹಿಳಾ ಒಕ್ಕೂಟ ಆಯೋಜಿಸಿದ್ದ 6ನೇ ವರ್ಷದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ ವರ್ಗಗಳು ಹೆಚ್ಚು ಇರುವ ತಗಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಶಕ್ತಿ ಹಾಗೂ ಸ್ವಸಹಾಯ ಸಂಘದ ಸದಸ್ಯರಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ತರಬೇತಿ ಶಿಬಿರಗಳನ್ನು ಆಯೋಜಿಸಬೇಕು ಈ ಭಾಗದ ಮಹಿಳಾ ಸದಸ್ಯರು ಸ್ವಾವಲಂಬಿಗಳಾಗಲು ಗ್ರಾಮ ಪಂಚಾಯಿತಿಯಿಂದ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು.
ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಸಂತಾಪ
ಎಲ್ ಭೈರಪ್ಪನವರ ನಿಧನಕ್ಕೆ ಹೋಬಳಿ ಕೇಂದ್ರದಲ್ಲಿ ವಿವಿಧ ಸಂಘ ಸಂಸ್ಥೆಗಳು, ಗ್ರಾಮಸ್ಥರು ಗುರುವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಸಾಹಿತಿ ಎಸ್ ಎಲ್ ಭೈರಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಜಗನ್ನಾಥ್ ಮಾತನಾಡಿ, ಎಸ್ ಎಲ್ ಭೈರಪ್ಪನವರು ನಮ್ಮ ತಂದೆಯವರಾದ ದಿವಂಗತ ಶ್ರೀನಿವಾಸ್ ಅಯ್ಯಂಗಾರ್ ಅವರ ಶಿಷ್ಯರಾಗಿದ್ದರು. ನಮ್ಮ ತಂದೆಯವರು ಬದುಕಿದ್ದ ಸಂದರ್ಭದಲ್ಲಿ ಅನೇಕ ಬಾರಿ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬಹಳ ಸರಳವಾದ ವ್ಯಕ್ತಿತ್ವ ಅವರದ್ದು. ಸಾಹಿತ್ಯ ಲೋಕದಲ್ಲಿ ತನ್ನದೇ ಆದ ಛಾಪು ಮಾಡಿಸಿದ್ದರು ಎಂದು ನೆನೆದರು.
ಉಚಿತ ಮಂಡಿನೋವಿನ ಚಿಕಿತ್ಸಾ ಶಿಬಿರ
ಬೆಂಗಳೂರಿನ ಕಾವೇರಿ ಆಸ್ಪತ್ರೆಯ ವೈದ್ಯ ಜಗದೀಶ್ ಮಾತನಾಡಿ, ಇಂದು ಬದಲಾದ ಜೀವನ ವಿಧಾನ ಹಾಗೂ ಕ್ಯಾಲ್ಸಿಯಂ ಕೊರತೆಯಿಂದ ಬಾಲಕರಿಂದ ಹಿಡಿದು ವೃದ್ದರವರಗೆ ಕೀಲ ಸಮಸ್ಯೆಗಳು ಭಯಾನಕವಾಗಿ ಕಾಡುತ್ತಿದೆ. ಆರಂಭದಲ್ಲೆ ಇವುಗಳಿಗೆ ಚಿಕಿತ್ಸೆ ಪಡೆದರೆ ಶಸ್ತ್ರಚಿಕಿತ್ಸೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. ಇಂದು ವೈದ್ಯಕೀಯ ರಂಗ ಸಾಕಷ್ಟು ಆಧುನೀಕತೆಗೆ ತೆರೆದುಕೊಂಡಿದ್ದು ರೋಬೋಟ್ ಮೂಲಕ ಕೀಲು ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಆದ್ದರಿಂದ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರು ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ಹಲವು ದೂರು
ಮಹಾನಗರ ಪಾಲಿಕೆಯಲ್ಲಿ ಕೆಲಸವೇ ಆಗದೇ ಎಷ್ಟೋ ಕಾಮಗಾರಿಗಳಿಗೆ ಬಿಲ್ ಪಾವತಿ ಮಾಡಿರುವ ಬಗ್ಗೆ ಕ್ರಮಕ್ಕೆ ಸದಸ್ಯರು ಆಗ್ರಹಿಸಿದರು. ಎಲ್ಲಾ ವಾರ್ಡ್‌ಗಳಿಗೆ ಸಮಾನ ಅನುದಾನ ಹಂಚಿಕೆ ಆಗಬೇಕು ಎಂದು ಪಾಲಿಕೆ ಮೇಯರ್ ಗಿರೀಶ್ ಚನ್ನವೀರಪ್ಪ ಹೇಳಿದರಲ್ಲದೇ ಅವರ ಮೊದಲ ಸಭೆಯಲ್ಲಿ ಅನೇಕ ವಿಚಾರಗಳು ಬಿಸಿ ಬಿಸಿ ಚರ್ಚೆಗೆ ಬಂದಿತು. “ಪಾಲಿಕೆಯ ಯಾವುದೇ ಟೆಂಡರ್ ಪ್ರಕ್ರಿಯೆಯನ್ನೂ ಎಲ್ಲ ಸದಸ್ಯರಿಗೂ ಮಾಹಿತಿ ನೀಡಿ, ಅವರ ಸಹಿ ಪಡೆದು ನಂತರವೇ ಪೂರ್ಣಗೊಳಿಸಲಾಗುವುದು. ಕಾಮಗಾರಿ ಲೋಪವಿದ್ದರೆ ಕೇವಲ ಸಭೆಯಲ್ಲಿ ದೂರು ಹೇಳುವುದರಿಂದ ಪ್ರಯೋಜನವಾಗುವುದಿಲ್ಲ. ಲಿಖಿತ ದೂರು ಸಲ್ಲಿಸಿದಲ್ಲಿ ಮಾತ್ರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಸ್ಪಷ್ಟಪಡಿಸಿದರು.
ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು
ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಪ್ರಮುಖ ಕೊಂಡಿಯನ್ನು ಕಳೆದುಕೊಂಡಂತಾಗಿದೆ. ತಾಲೂಕಿನ ಸುಪುತ್ರರಾಗಿ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದ ಭೈರಪ್ಪನವರ ಹುಟ್ಟೂರು ಸಂತೇಶಿವರ ಗ್ರಾಮಕ್ಕೆ ಕೊನೇ ದಿನಗಳಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದು ಕೆರೆತುಂಬಿಸುವ ಯೋಜನೆಗೆ ಸಾಕಷ್ಟು ಶ್ರಮವಹಿಸಿದ ಹಿರಿಯಚೇತನ. ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ, ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಸಾಹಿತ್ಯ ಲೋಕದ ಅನರ್ಘ್ಯ ರತ್ನ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved