• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಂನಲ್ಲಿ ಭಾರತ್‌ ಕ್ಯಾನ್ಸರ್‌ ಒಪಿಡಿ ಆರಂಭ
ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಸಂಸ್ಥೆಯು (ಬಿಎಚ್‌ಐಒ) ನಗರದ ಎಸ್‌ಎಸ್‌ಎಮ್ ಸ್ಪೆಷಾಲಿಟಿ ಕ್ಲಿನಿಕ್ಸ್ ಮತ್ತು ಡಯಾಗ್ನೋಸ್ಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಹೊರರೋಗಿಗಳ ಆಸ್ಪತ್ರೆಯನ್ನು (ಒಪಿಡಿ) ಯನ್ನು ಪ್ರಾರಂಭಿಸಲಾಗಿದೆ ಎಂದು ಮೈಸೂರಿನ ಭಾರತ್ ಕ್ಯಾನ್ಸರ್‌ ಆಸ್ಪತ್ರೆಯ ಕನ್ಸಲೆಂಟ್ ರೇಡಿಯೇಶನ್ ಅಂಕೊಲಾಜಿಸ್ಟ್ ಡಾ. ವಿನಯಕುಮಾರ್ ಮುತ್ತಗಿ ತಿಳಿಸಿದರು. ಕೆ.ಆರ್‌.ಪುರಂನಲ್ಲಿರುವ ಎಸ್‌ಎಸ್‌ಎಮ್ ಸ್ಪೆಷಾಲಿಟಿ ಕ್ಲಿನಿಕ್ಸ್ ಮತ್ತು ಡಯಾಗ್ನೋಸ್ಟಿಕ್ಸ್ ಸಂಸ್ಥೆಯಲ್ಲಿ ತಿಂಗಳ ಪ್ರತಿ ಮೊದಲ ಮತ್ತು ಮೂರನೇ ಬುಧವಾರ ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೨.೩೦ರವರೆಗೆ ಈ ಬಿಎಚ್‌ಐಇ ಒಪಿಡಿ ಸೌಲಭ್ಯವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗಿದೆ ಎಂದರು.
ಗ್ರಂಥಾಲಯದ ಪುಸ್ತಕಗಳನ್ನು ಸದುಪಯೋಗಪಡಿಸಿಕೊಳ್ಳಿ
ಗ್ರಂಥಾಲಯದಲ್ಲಿರುವ ಪುಸ್ತಕಗಳ ಸದುಪಯೋಗಪಡಿಸಿಕೊಳ್ಳುವಂತೆ ಪುರಸಭೆ ಅಧ್ಯಕ್ಷ ಬನಶಂಕರಿ ರಘು ಕರೆ ನೀಡಿದ್ದಾರೆ. ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಹೇಮವಾಣಿ ಪ್ರಕಾಶನ, ಹೇಮಾವತಿ ಆಫ್‌ಸೆಟ್ ಪ್ರಿಂಟರ್ಸ್ ವತಿಯಿಂದ ನಡೆದ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಉನ್ನತ ಹುದ್ದೆಗಳನ್ನು ಯುವಕರು ಹಿಡಿಯುವಲ್ಲಿ ಗ್ರಂಥಾಲಯ ಸಹಕಾರಿಯಾಗಿದೆ. ಜ್ಞಾನದ ದೇಗುಲ ಗ್ರಂಥಾಲಯ ಎಂದರು.
ಇಂಗ್ಲೀಷ್ ವ್ಯಾಮೋಹ ಬಿಟ್ಟು ಕನ್ನಡ ಕಟ್ಟುವ ಕೆಲಸವಾಗಲಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕುವಂಪು ಕನ್ನಡ ವೇದಿಕೆಯ ವತಿಯಿಂದ ವಿನೂತನವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಅತಿಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಕಾರ್ಯಕ್ರಮಕ್ಕೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ಇಂಗ್ಲೀಷ್‌ನ ವ್ಯಾಮೋಹಕ್ಕೆ ಒಳಗಾಗದೆ ಮಾತೃಭಾಷೆಯಾದ ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕೆಂದು ಹೇಳಿದರು.
ಮಾದಕ ವಸ್ತುವಿನ ನಿಯಂತ್ರಣ ಅರಿವು
ಮಾದಕ ವಸ್ತುವಿನ ನಿಯಂತ್ರಣ ಹಾಗೂ ಅರಿವು ಮೂಡಿಸುವ ಒಂದು ದಿನದ ಕಾರ್ಯಾಗಾರವನ್ನು ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕ, ಮೆಕ್ಯಾನಿಕ್ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿತ್ತು. ಬಸ್ಸಿನಲ್ಲಿ ಪ್ರಯಾಣಿಸುವ 40ರಿಂದ 50 ಜನರ ಪ್ರಾಣವೂ ಒಬ್ಬ ಬಸ್ಸಿನ ಚಾಲಕ ಮತ್ತು ನಿರ್ವಾಹಕರ ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಇವರು ಸಮಯ ಪ್ರಜ್ಞೆ, ಯಾವುದೇ ದುಶ್ಚಟಗಳಿಗೆ ದಾಸರಾಗದೆ ತಮ್ಮ ಕೆಲಸವನ್ನು ಜವಾಬ್ದಾರಿಯಿಂದ, ಕಾರ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ಸಭೆಯಲ್ಲಿ ನೆರೆದಿದ್ದ ಸಿಬ್ಬಂದಿಗೆ ಕಿವಿಮಾತು ಹೇಳಿದರು.
ಮೆದುಳು ಜ್ವರ ಹದಿನೈದು ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿದೆ
ಮೆದುಳು ಜ್ವರ ಮಾರಕ ರೋಗವಾಗಿದ್ದು ಇದು 15 ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತದೆ, ಈ ಕುರಿತು ಮುನ್ನೆಚ್ಚರಿಕೆ ಆಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಜಿಲ್ಲಾ ಅಧಿಕಾರಿ ಡಾ. ನಾಗಪ್ಪ ತಿಳಿಸಿದರು. ಮೆದುಳು ಜ್ವರದ ವೈರಾಣುಗಳನ್ನು ಹೊಂದಿದ ಹಂದಿ ಮತ್ತು ಬೆಳ್ಳಕ್ಕಿಯನ್ನು ಕಚ್ಚಿದ ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗ ಹರಡುತ್ತದೆ ಎಂದರು. ಮೆದುಳು ಜ್ವರ ಹರಡುವ ವಿಧಾನ, ಇದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ, ಚಿಕಿತ್ಸೆ ಕುರಿತು ಮಾಹಿತಿ ನೀಡಿದರು.
ಅಧರ್ಮಗಳಿಗೆ ಸೋಲು ಖಂಡಿತ ಎಂದ ಬಾಳೆಹೊನ್ನೂರು ಶ್ರೀ
ಗುರುವಿನ ಮಾರ್ಗದರ್ಶನ ಅನುಸರಿಸಿ ಸಂಸ್ಕಾರವಂತರಾಗಿ ಧರ್ಮಾಚರಣೆ ಅನುಸರಣೆಯಿಂದ ಮಾನವನಿಗೆ ಶಾಂತಿ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಯಾರೂ ಅಧರ್ಮ ಮಾರ್ಗದಲ್ಲಿ ನಡೆಯಬಾರದು. ಅಧರ್ಮಗಳಿಗೆ ಸೋಲು ಖಂಡಿತ ಎಂದು ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಬಸವಾಪಟ್ಟಣ ಗ್ರಾಮದ ವೀರಶೈವ ಸಮಾಜದ ತೊಟ್ಟಿಮನೆ ವಂಶಸ್ಥರ ವತಿಯಿಂದ ನೂತನವಾಗಿ ನಿರ್ಮಿಸಿದ ಶ್ರೀಗಂಗಾಧರೇಶ್ವರ ನೂತನ ದೇವಾಲಯ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿ ನಂತರ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ವಕ್ಫ್‌ ಮುಷ್ಟಿಯಿಂದ ಭೂಮಿ ರಕ್ಷಿಸಲು ಬಿಜೆಪಿ ಪ್ರತಿಭಟನೆ
ಇಡೀ ರಾಜ್ಯಾದ್ಯಂತ ವಕ್ಫ್ ಕಾಯಿದೆ ವಿರುದ್ಧ ಜನಸಾಮಾನ್ಯರಿಗೆ ಮುಟ್ಟುವ ರೀತಿಯಲ್ಲಿ ರಾಜ್ಯ ಸರಕಾರ ತೆಗೆದುಕೊಳ್ಳುವ ನಿರ್ಧಾರ ಏನಿದೆ ಅದನ್ನು ವಿರೋಧಿಸುತ್ತಿದ್ದೇವೆ. "ನಮ್ಮ ಭೂಮಿ ನಮ್ಮ ಹಕ್ಕು " ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ. ನಮ್ಮ ಭೂಮಿಯನ್ನು ವಕ್ಫ್ ಕಾಯ್ದೆಯಿಂದ ರಕ್ಷಿಸೋಣ, ನಮ್ಮ ಹಕ್ಕಿಗಾಗಿ ಸಂಘಟಿತ ಹೋರಾಟ ಮಾಡೋಣ ಎನ್ನುವ ಘೋಷಣೆಯೊಂದಿಗೆ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಒಂದು ದಿನದ ಹೋರಾಟ ಮಾಡಿ ಸಂಜೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅರಸೀಕೆರೆ ನಗರಸಭೆಯ ಎಂಟು ಸ್ಥಾನಗಳ ಚುನಾವಣೆ
ಅರಸೀಕೆರೆ ನಗರಸಭೆಗೆ ಶನಿವಾರ 8 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಜೆಡಿಎಸ್‌ನಲ್ಲಿದ್ದ ವೇಳೆ 7 ಜೆಡಿಎಸ್ ಸ್ಥಾನಗಳು ಮತ್ತು ಒಂದು ಪಕ್ಷೇತರ ಅಭ್ಯರ್ಥಿ ತಮ್ಮದಾಗಿಸಿಕೊಂಡಿದ್ದ ಶಾಸಕರು ಶನಿವಾರ ಅದೇ 8 ಸ್ಥಾನಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುವುದು ಸವಾಲಾಗಿದೆ. ಜೆಡಿಎಸ್ ಆರು ಕ್ಷೇತ್ರಗಳಿಗೆ ಚುನಾವಣಾ ಕಣಕ್ಕೆ ತನ್ನ ಅಭ್ಯರ್ಥಿಗಳನ್ನು ಇಳಿಸಿದ್ದರೆ, ಬಿಜೆಪಿ ನಾಲ್ಕರಲ್ಲಿ ಸ್ಪರ್ಧೆ ನೀಡಿದೆ, ಕಳೆದ ಬಾರಿ ನಗರಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಗೆಲ್ಲಿಸಿಕೊಳ್ಳುವ ಮೂಲಕ ಜೆಡಿಎಸ್ ತೆಕ್ಕೆಗೆ ನಗರಸಭೆ ಒಲಿದಿತ್ತು.
ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ ಎಂದ ಸಂಸದ ಶ್ರೇಯಸ್‌
ನಮ್ಮ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಎಲ್ಲಾ ಭಾಷೆಗಳ ಬಗ್ಗೆ ಅಭಿಮಾನ ಇರಲಿ, ಆದರೆ ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ. ದೇಶ ಆಧುನಿಕತೆಗೆ ತೆರೆದುಕೊಳ್ಳುತ್ತಿರುವ ಇಂದಿನ ದಿನದಲ್ಲಿ ನಮ್ಮ ನಾಡಿನ ಸಂಸ್ಕೃತಿ ಮಾಯವಾಗುತ್ತಿದೆ ಎಂದರು. ನಾಲ್ಕು ದಿನಗಳು ನಡೆಯುತ್ತಿರುವ ರಾಜ್ಯೋತ್ಸವ ಕಾರ್ಯಕ್ರಮಗಳು ಅವಿಸ್ಮರಣೀಯ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಪುನೀತ್ ರಾಜಕುಮಾರ್ ವೇದಿಕೆಯಲ್ಲಿ ಜಿ ಕನ್ನಡ ಸರಿಗಮಪ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮುದಾಯ ಮತ್ತು ಪೋಷಕರಿಗೆ ಮತದಾನ ಜಾಗೃತಿ ಮೂಡಿಸಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ತರ ಪಾತ್ರ ವಹಿಸುವ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ವಿದ್ಯಾರ್ಥಿಗಳಿಂದ ಆಗಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶಂಕರ್ ಹೇಳಿದರು. ನೀವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನದಂತೆ ಆಡಳಿತವನ್ನು ರೂಪಿಸಲು ಚುನಾವಣೆಯಾಗುತ್ತದೆ, ನಮ್ಮ ಪ್ರತಿನಿಧಿಗಳ ಆಯ್ಕೆಯ ಸಮಯದಲ್ಲಿ ಈ ಹಕ್ಕಿನ ಉದ್ದೇಶವೇನು ಇದರ ಮಹತ್ವವೇನು ಎಂಬುದನ್ನು ನೀವು ತಿಳಿದಿದ್ದರೆ ನಿಮ್ಮ ಪೋಷಕರಿಗೂ ಮತ್ತು ನೆರೆಹೊರೆಯ ಮತದಾರರಲ್ಲಿಯೂ ಜಾಗೃತಿ ಮೂಡಿಸಬಹುದು ಎಂದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved