ಬೇಲೂರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮಂಜುನಾಥ್ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಆರ್.ಮಂಜುನಾಥ್, ರಾಜ್ಯ ಪರಿಷತ್ತು ಸದಸ್ಯ ಪಶುಪಾಲನಾ ಇಲಾಖೆಯ ಜಿ.ಆರ್.ರವಿ ಚುನಾಯಿತರಾದರು. ಖಜಾಂಚಿ ಸ್ಥಾನಕ್ಕೂ ಚುನಾವಣೆ ನಡೆಯಬೇಕಿತ್ತಾದರೂ, ಶಿಕ್ಷಕ ಎಚ್.ಆರ್.ಪೂರ್ಣೇಶ್ ಅವರು ಅವಿರೋಧ ಆಯ್ಕೆಯಾಗಿದ್ದರು. ಉಳಿದ ಸ್ಥಾನಗಳ ಪದಾಧಿಕಾರಿಗಳ ಆಯ್ಕೆ ಮಾಡಿಕೊಳ್ಳಲು ಅಧ್ಯಕ್ಷರಿಗೆ ಅವಕಾಶ ನೀಡಲಾಗಿದೆ.