• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಬಳಿ ಬಸವೇಶ್ವರ ದೇಗುಲ ವಿವಾದ ಬಗೆಹರಿಸಿದ ನಿರ್ಮಲಾನಂದ ಶ್ರೀ
ತಾಲೂಕಿನ ಕಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನ ವಿವಾದ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ಮಧ್ಯಸ್ಥಿಕೆಯೊಂದಿಗೆ ಸುಖಾಂತ್ಯಗೊಂಡಿದ್ದು, ಈ ಹಿಂದಿನ ಅರ್ಚಕರೇ ಪೂಜೆ ಮುಂದುವರಿಸುವಂತೆ ನಿರ್ಧರಿಸಲಾಗಿದೆ. ಶ್ರೀ ಕ್ಷೇತ್ರ ಕಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಪೂಜೆಗೆ ಸಂಬಂಧಿಸಿದಂತೆ ಅರ್ಚಕರಾದ ರೇಣುಕಾ ಆರಾಧ್ಯ ಕುಟುಂಬಸ್ಥರು ಕಾನೂನು ಮೊರೆಯನ್ನು ಹೋಗಿದ್ದರು. ಆದರೆ ಈ ಕಾನೂನು ಸಮರದಲ್ಲಿ ನ್ಯಾಯಾಂಗ ಇಲಾಖೆಯು ಅರ್ಚಕರ ಪರವಾಗಿ ತಡೆಯಾಜ್ಞೆ ನೀಡಿ ಪೂಜೆ ಮುಂದುವರೆಸುವಂತೆ ಆದೇಶಿಸಿತ್ತು.
ಹಾಸನ ಜಿಲ್ಲೆಗೆ ಡಾ.ಹೆಬ್ಬಾರ್ ಅನುಪಮ ಸೇವೆ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣನೆ

ಸಾಧ್ಯವಾದರೆ ಒಳ್ಳೆಯದನ್ನು ಮಾಡಿ, ಅವಕಾಶ ಸಿಗದಿದ್ದರೆ ಉತ್ತಮ ಕೆಲಸ ಮಾಡುವವರ ಜೊತೆ ಕೈಜೋಡಿಸಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಕೆಂಗೇರಿಯ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು.

ಸರ್ಕಾರಿ ಸವಲತ್ತನ್ನು ಕಾರ್ಮಿಕರಿಗೆ ತಲುಪಿಸಿ
ಕಾರ್ಮಿಕ ವರ್ಗದವರಿಗೆ ಸರ್ಕಾರದ ಸವಲತ್ತುಗಳು ವಿಫುಲವಾಗಿದ್ದು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಎ. ಮಂಜು ತಾಕೀತು ಮಾಡಿದರು. ಪಟ್ಟಣದ ದೇವರಾಜ ಅರಸು ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವರ್ಗದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ‌ ಭದ್ರತೆ ಯೋಜನೆಗಳ ಹಾಗೂ ಕಾರ್ಮಿಕ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ
ಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.
ವಿಕಲಚೇತನರೊಂದಿಗೆ ಹೊಸ ವರ್ಷಾಚರಣೆ
ಚನ್ನರಾಯಪಟ್ಟಣ ರೋಟರಿ ಕ್ಲಬ್ ವಿಷನ್ ವತಿಯಿಂದ ಪಟ್ಟಣದ ಸಮೀಪದ ಬರಗೂರು ಹ್ಯಾಂಡ್‌ಪೋಸ್ಟ್ ಬಳಿ ಇರುವ ವಿಕಲಚೇತನ ಮಕ್ಕಳ ಪಾಠಶಾಲೆಯಲ್ಲಿ ಮಕ್ಕಳ ಜೊತೆ ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಹೊಸ ವರ್ಷಾಚರಣೆ ಮಾಡಲಾಯಿತು. ಕ್ಲಬ್‌ನ ವತಿಯಿಂದ ೫೦ ಜನ ವಿಕಲಚೇತನ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಲಾಯಿತು. ಇಂಥ ಮಕ್ಕಳ ಜೊತೆಯಲ್ಲಿ ಹೊಸ ವರ್ಷವನ್ನು ಆಚರಣೆ ಮಾಡಿದಲ್ಲಿ ವಿಕಲಚೇತನ ಮಕ್ಕಳು ಸಹ ಹೊಸ ವರ್ಷದ ಸಂತೋಷವನ್ನು ಅನುಭವಿಸಬಹುದು ಎಂದರು.
ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ ಹಾಗೂ ಅಧೀಕ್ಷಕ
ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಉಪನಿರ್ದೇಶಕರಾದ ಪಾಂಡು ಆದೇಶದ ಮೇರೆಗೆ ಹಣ ಪಡೆಯುತ್ತಿರುವುದಾಗಿ ಹೇಳಿಕೆ ನೀಡಿದ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಪಾಂಡು ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ತಂದೆಯನ್ನೇ ಹೊಡೆದು ಕೊಂದ ಮಗ
ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಶಿಧರ (58 ವರ್ಷ) ಎಂಬುವವರನ್ನ ಮಗನೇ ಹತ್ಯೆ ಮಾಡಿದ್ದು, ನಂತರ ಹೃದಯಾಘಾತದಿಂದ ಪಟ್ಟಿದ್ದಾರೆ ಎಂದು ನಂಬಿಸಲು ಮುಂದಾಗಿ ತಾಯಿ ಹಾಗೂ ಗ್ರಾಮಸ್ಥರ ಹೇಳಿಕೆಯಿಂದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲು ಮಾಡಿದ್ದಾರೆ.
ಹುಟ್ಟೂರು ಕಾಳೇನಹಳ್ಳಿಹಟ್ಟಿ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡುತ್ತಿರುವ ನಟ ಡಾಲಿ ಧನಂಜಯ್

ಡಾಲಿ ಧನಂಜಯ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ತನ್ನೂರಿನ ಶಾಲೆಗೆ ಕೊಡುಗೆ ನೀಡಲು ಮುಂದಾಗಿರುವ ಡಾಲಿ, ತನ್ನ ಊರಾದ ಕಾಳೇನಹಳ್ಳಿ ಹಟ್ಟಿಯ ಸರ್ಕಾರಿ ಶಾಲೆಯನ್ನು ಸುಮಾರು ಹತ್ತು ಲಕ್ಷ ರು. ವೆಚ್ಚದಲ್ಲಿ ಹೈಟೆಕ್‌ ಶಾಲೆ ಮಾಡುತ್ತಿದ್ದಾರೆ.

ಅರಕಲಗೂಡಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ
ಶ್ರೀ ಧರ್ಮಸ್ಥಳ ಪಾದಯಾತ್ರೆ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಶಾಸಕ ಎ. ಮಂಜು ಜನರಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಿದರು. ಇದಕ್ಕೂ ಮುನ್ನ ದೊಡ್ಡಮ್ಮ ದೇವಸ್ಥಾನ ಆವರಣದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿ, ಜನರಿಗೆ ಅನ್ನದಾನ ಮಾಡಿ ಪಾದಯಾತ್ರೆ ಹೊರಟು ದೇವರಿಗೆ ಭಕ್ತಿ- ಭಾವ ಅರ್ಪಿಸುವುದು ಪುಣ್ಯದ ಕಾಯಕವಾಗಿದೆ ಎಂದರು.
ಇಂದಿನ ಮಹಿಳೆಯ ಎಲ್ಲಾ ಸಾಧನೆಗೆ ಸ್ಫೂರ್ತಿ ಸಾವಿತ್ರಿಬಾಯಿ ಫುಲೆ: ಉಪನ್ಯಾಸಕಿ ಸುಧಾ
ಈ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ನಗರದ ಪೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಆಚರಿಸಿತು. ಮಹಿಳೆಯರಿಗೆ ಇಷ್ಟು ಕಟ್ಟುಪಾಡುಗಳು ಕೇವಲ ಶತಮಾನದ ಹಿಂದೆ ಇತ್ತೇ ಎಂಬುದು ಆಶ್ಚರ್ಯ ಆಗುತ್ತದೆ. ಆಂಗ್ಲ ಆಳ್ವಿಕೆಯಲ್ಲಿ ಬಹಳ ನಿರ್ಲಕ್ಷ್ಯದಿಂದ ನಮ್ಮ ಶೈಕ್ಷಣಿಕ ಪರಿಸ್ಥಿತಿಯನ್ನು ಅವಹೇಳನ ಮಾಡುತ್ತಿದ್ದರು ಎಂದು ಸುಧಾ ಹೇಳಿದರು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved