• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಜೆಗಾಗಿ ಭಕ್ತರು ಪೊಲೀಸರ ನಡುವೆ ವಾಗ್ವಾದ
ಕುಶಾಲನಗರ ಬಡಾವಣೆಯ ಅಣ್ಣಪ್ಪವೃತ್ತದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ವಿಸರ್ಜನೆ ಕಾರ್ಯಕ್ರಮ ಬುಧವಾರ ಆಯೋಜಿಸಲಾಗಿತ್ತು. ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಡಿ.ಜೆ ಸದ್ದು,ಪಟಾಕಿಗಳ ಚಿತ್ತಾರದ ನಡುವೆ ಆದ್ಧೂರಿಯಾಗಿ ಮೆರವಣಿಗೆ ನಡೆಸಲಾಗಿತ್ತು. ಆದರೆ, ಸಕಲೇಶ್ವರಸ್ವಾಮಿ ದೇವಸ್ಥಾನ ಸಮೀಪ ಮೆರವಣಿಗೆ ಆಗಮಿಸಿದ ವೇಳೆ ರಾತ್ರಿ 10ಕ್ಕೆ ಪೊಲೀಸರು ಡಿ.ಜೆ ಬಂದ್ ಮಾಡಿಸಿದರು. ಇದರಿಂದ ಸಿಟ್ಟಾದ ಆಯೋಜಕರು 10.30ರವರೆಗೆ ಡಿ.ಜೆ ಬಳಸಲು ಅನುಮತಿ ಪಡೆಯಲಾಗಿದೆ. ಆದರೆ, 10 ಗಂಟೆಗೆ ಡಿ.ಜೆ ಬಂದ್ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ಆಯೋಜಕರು ಪ್ರತಿಭಟನೆ ನಡೆಸಿ, ಡಿ.ಜೆ ಬಳಸಲು ಅನುಮತಿ ನೀಡದ ಹೊರತು ಗಣೇಶಮೂರ್ತಿ ವಿಸರ್ಜಿಸುವುದಿಲ್ಲ ಎಂದು ಪಟ್ಟು ಹಿಡಿದರು.
ಜಯ ಮೃತ್ಯುಂಜಯ ಶ್ರೀ ಉಚ್ಛಾಟನೆ ಖಂಡಿಸಿ ಬೃಹತ್ ಪ್ರತಿಭಟನೆ
ಶ್ರೀಗಳ ತೇಜೋವಧೆ ನಿಲ್ಲಿಸಬೇಕು. ಅಷ್ಟೇ ಅಲ್ಲ ಅವರನ್ನು ಮರಳಿ ಪೀಠಕ್ಕೆ ಮರು ನೇಮಕಗೊಳಿಸಿ ತಮ್ಮ ತಪ್ಪಿನ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು
ಧರ್ಮಸ್ಥಳ ಮಾದರಿಯಲ್ಲಿ ಗಣಪತಿ ಆಸ್ಥಾನ ಮಂಟಪ
ಹೆಸರಾಂತ ಕಲಾವಿದ ರವೀಂದ್ರ ಅವರಿಂದ ಧರ್ಮಸ್ಥಳ ಮಾದರಿಯ ಮಂಟಪವನ್ನು ವಿಶೇಷ ವಿನ್ಯಾಸ ಮಾಡಿ ಗಣಪತಿಯನ್ನು ಪ್ರತಿಷ್ಠಾಪಿಸಿರುವುದು ವಿಶೇಷವಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಕ್ಷೇತ್ರದಲ್ಲಿ ಶ್ರೀ ಪ್ರಸನ್ನ ಗಣಪತಿಯನ್ನು ಕೂರಿಸಿರುವಂತೆ ಧರ್ಮಸ್ಥಳ ಮಾದರಿಯ ಭವ್ಯ ಮಂಟಪವು ಹಾಸನ ಜಿಲ್ಲೆಯ ಸಮಸ್ತ ಭಕ್ತರನ್ನು ಆಕರ್ಷಣೀಯವಾಗಿ ಸೆಳೆಯುತ್ತಿದೆ. ಈ ವಿನ್ಯಾಸವನ್ನು ರಾಮನಗರ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರು ಉದ್ಘಾಟಿಸಿ ರವೀಂದ್ರರಂಥ ವಿನ್ಯಾಸಕಾರರು ಕಲೆಯಲ್ಲಿ ಉತ್ತುಂಗದ ಸಾಧನೆ ಮಾಡಲಿ ಎಂದು ಅಭಿನಂದಿಸಿದ್ದರು.
ತ್ಯಾಜ್ಯ ಸಮಸ್ಯೆಗೆ ಕೊನೆಗೂ ಪುರಸಭೆಯಿಂದ ಮುಕ್ತಿ
ಜಿಲ್ಲಾಧಿಕಾರಿಗಳು ಘನತ್ಯಾಜ್ಯ ಘಟಕದಲ್ಲಿ ತ್ಯಾಜ್ಯವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದರು. ದಿನಕಳೆದಂತೆ ವಿರೋಧದ ಪ್ರಮಾಣ ಹೆಚ್ಚಿದ್ದರಿಂದ ಜನರ ಒತ್ತಡಕ್ಕೆ ಮಣಿದ ಪುರಪಿತೃಗಳು ಘನ ತ್ಯಾಜ್ಯಘಟಕದಲ್ಲಿ ಗಿಡಗಳನ್ನು ನಡೆಸುವ ಮೂಲಕ ಉದ್ಘಾಟಿಸಿ ತ್ಯಾಜ್ಯವಿಲೇವಾರಿಗೆ ಅವಕಾಶ ನೀಡಿದ್ದಾರೆ. ಪರಿಣಾಮ ಕಳೆದ ಒಂದು ವಾರದಿಂದ ಮಳಲಿ ಘನ ತ್ಯಾಜ್ಯಘಟಕದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ದಶಕಗಳ ಕಾಲದ ತ್ಯಾಜ್ಯ ಸಮಸ್ಯೆಗೆ ಪುರಸಭೆ ಕೊನೆಗೂ ಮುಕ್ತಿ ನೀಡಿದೆ.
ಭೈರಪ್ಪನವರು ಕನ್ನಡ ಸಾಹಿತ್ಯದ ಹೆಮ್ಮರ
೨೦೧೩ರಲ್ಲಿ ಮೈಸೂರಿನ ಅವರ ನಿವಾಸಕ್ಕೆ ನಾನು ಭೇಟಿ ನೀಡಿದಾಗ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ನಮ್ಮೊಂದಿಗೆ ಮಾತನಾಡಿ ಚನ್ನರಾಯಪಟ್ಟಣದ ಅವರ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ ಮಾತನಾಡಿದ್ದು ನನ್ನ ವಿಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ. ಹಾಗೆ ಪ್ರಥಮ ಬಾರಿಗೆ ನಮ್ಮ ಶಾಲೆಯ ಜ್ಞಾನಸಾಗರ ಪರಂಪರ ಕಾರ್ಯಕ್ರಮಕ್ಕೆ ಆಗಮಿಸಿದಾಗ ಅವರನ್ನು ಕಾರಿನಿಂದ ವೇದಿಕೆಗೆ ಕರೆದೊಯ್ಯುವಾಗ ಅವರ ನೂರಾರು ಅಭಿಮಾನಿಗಳು, ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದನ್ನು ಕಂಡಾಗ ಭೈರಪ್ಪನವರ ವ್ಯಕ್ತಿತ್ವದ ಪರಿಚಯ ಮನದಟ್ಟಾಗುವಂತಿತ್ತು. ಅಂದಿನ ಕಾರ್ಯಕ್ರಮದಲ್ಲಿ ಸುಮಾರು ಹತ್ತುಸಾವಿರಕ್ಕೂ ಹೆಚ್ಚುಜನ ಪೋಷಕರು, ಸಾರ್ವಜನಿಕರು ಭಾಗವಹಿಸಿದ್ದು ಸ್ಮರಣೀಯ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘಿಸಿದ ನ್ಯಾಯಾಧೀಶೆ
ತಾಯಂದಿರು ಮಕ್ಕಳ ಬೆಳವಣಿಗೆಯಲ್ಲಿ ಹೆಚ್ಚು ಗಮನ ನೀಡುವುದು ಸಾಮಾನ್ಯ, ಆದರೆ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರು ಕರ್ತವ್ಯದ ಜತೆಗೆ ಸರ್ಕಾರದ ನಿರ್ದೇಶನದಂತೆ ಮಕ್ಕಳ ಬೆಳವಣಿಗೆಗೆ ಅಗತ್ಯವಾದ ಪೌಷ್ಟಿಕ ಆಹಾರ ನೀಡುವಲ್ಲಿ ತೋರುವ ಜವಾಬ್ದಾರಿ ಮೆಚ್ಚಬೇಕಿದೆ ಮತ್ತು ಅವರನ್ನು ಕಾರ್ಯಕರ್ತೆ ಬದಲಾಗಿ ಅಧಿಕಾರಿಗಳು ಎಂದು ಕರೆಯಲು ಹರ್ಷಿಸುತ್ತೇನೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಕಾರ್ಯವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಐಶ್ವರ್ಯ ಎಸ್ ಗುಡದಿನ್ನಿ ಅಭಿನಂದಿಸಿದರು.
ಗಣೇಶ ವಿಸರ್ಜನಾ ಮಹೋತ್ಸವಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ
ಹುಲಿಕೆರೆ ಗ್ರಾಮದ ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಣೇಶ ವಿಸರ್ಜನಾ ಮಹೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇತ್ತೀಚೆಗೆ ಹಾಸನದ ಬಳಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ಟ್ರಕ್ ಚಾಲಕನ ಜಾಗರೂಕತೆಯಿಂದ ನಡೆದ ಅಪಘಾತದಲ್ಲಿ 10 ಜನ ಮೃತಪಟ್ಟರು. ಇನ್ನು ರಾಜ್ಯದ ನಾನಾ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಅವಘಡಗಳು ನಡೆದಿವೆ. ಆದರೆ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಹಾಗೂ ಸಂಘಗಳು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಆಗ ಇಂಥ ಘಟನೆಗಳು ಮರುಕಳಿಸುವುದಿಲ್ಲ ಎಂದರು.
ಸಬ್‌ಸ್ಟೇಷನ್‌ ತಂದರೂ ಕಾಮಗಾರಿಗೆ ಗುತ್ತಿಗೆದಾರರೆ ಬರುತ್ತಿಲ್ಲ
ರೈತರು ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನಹರಿಸಿ ಪರಿಹರಿಸುವಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಇದರ ನಡುವೆಯೂ ತಮ್ಮ ಪರಿಶ್ರಮದಿಂದ ಹೆಚ್ಚುವರಿ ವಿದ್ಯುತ್ ಸಬ್ ಸ್ಟೆಷನ್‌ಗಳನ್ನು ತಂದಿದ್ದರೂ ಟೆಂಡರ್‌ದಾರರು ಇಲ್ಲಿ ಟೆಂಡರ್‌ ಹಾಕಲು ಹಿಂದೇಟು ಹಾಕುತ್ತಿದ್ದು ಇದರ ಮೂಲ ಕಾರಣ ತಿಳಿದುಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಮಸ್ಯೆ ಇದ್ದರೂ ಸಹ ಯಾವುದೇ ಜನಪ್ರತಿನಿಧಿಗಳು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕೇಳಿದರೆ ಸರ್ಕಾರದ ಮಂತ್ರಿಗಳ ಬಳಿ ನೀವೆ ಕೇಳಿ ಎಂದು ಸಬೂಬು ಹೇಳುತ್ತಾರೆ. ಕೇವಲ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿ ಕೇಳಿದರೆ ಸಾಲದು ಅದನ್ನು ಕಾರ್ಯರೂಪಕ್ಕೆ ತರುವಂತಹ ಇಚ್ಛಾ ಶಕ್ತಿಯನ್ನು ಹೊಂದಿ ಕೆಲಸ ಮಾಡಬೇಕು ಎಂದರು.
ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರವೂ ಬೇಕು
ಗಣಪತಿ ಪೆಂಡಾಲಿನಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಮಂಗಳವಾರ ಸಂಜೆ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿಯವರು ಆಯೋಜಿಸಿದ್ದ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೆಳಗಿನ ಜಾವ ೪ ಗಂಟೆಯಿಂದ ನೀವೆಲ್ಲಾ ಏಳುವ ಮುನ್ನ ಪಟ್ಟಣವನ್ನು ಸ್ವಚ್ಛವಾಗಿಟ್ಟಿರುತ್ತೇವೆ. ಆದರೆ ಕೆಲವರು ಸ್ವಚ್ಛ ಮಾಡಿದ ನಂತರ ರಸ್ತೆಗಳಿಗೆ ಕಸ ತಂದು ಸುರಿಯುತ್ತಿದ್ದಾರೆ. ಇದರಿಂದ ನಮಗೆ ಅತ್ಯಂತ ಹಿಂಸೆ ಆಗುತ್ತಿದೆ. ಕೆಲವರು ಈಗಲೂ ಹಸಿ ಕಸ ಮತ್ತು ಒಣಕಸವನ್ನು ಬೇರೆ ಮಾಡಿ ಕೊಡುತ್ತಿಲ್ಲ. ದಯವಿಟ್ಟು ಸಾರ್ವಜನಿಕರು ನಮಗೆ ಸಹಕಾರ ಕೊಟ್ಟು ನಿರಂತರ ಸ್ವಚ್ಛತೆ ಕಾಪಾಡಿ, ಆರೋಗ್ಯ ಕಪಾಡಿಕೊಳ್ಳಲು ಸಹಕರಿಸಿ ಎಂದು ವಿನಂತಿಸಿದರು.
ಅಂಗನವಾಡಿಯಲ್ಲಿ ಸ್ತ್ರೀಶಕ್ತಿ ಸಂಘಗಳೇ ಪೌಷ್ಟಿಕ ಆಹಾರ ತಯಾರಿಸಬೇಕು
ಪ್ರಸ್ತುತ ಪೌಷ್ಟಿಕ ಆಹಾರ ಮದರಾಸಿನಲ್ಲಿ ತಯಾರಾಗುತ್ತಿದ್ದು, ಶಿವಮೊಗ್ಗ ಹಾಗೂ ಬೇಲೂರಿನಲ್ಲಿ ಪ್ಯಾಕ್ ಮಾಡಲಾಗುತ್ತಿದೆ. ಆದರೆ ಶುದ್ಧ ಆಹಾರ ಸ್ಥಳದಲ್ಲಿಯೇ ತಯಾರಾಗಿ ಮಕ್ಕಳಿಗೆ ತಲುಪಬೇಕು. ಈ ಜವಾಬ್ದಾರಿಯನ್ನು ಸ್ಥಳೀಯ ಸ್ತ್ರೀಶಕ್ತಿ ಸಂಘಗಳಿಗೆ ನೀಡಿದರೆ, ಅವರು ಅದನ್ನು ಉತ್ತಮವಾಗಿ ನಿರ್ವಹಿಸುತ್ತಾರೆ. ಇದಕ್ಕಾಗಿ ನಾನು ಸದನದಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು. ಅಂಗನವಾಡಿ ಕೇಂದ್ರಗಳು ಸಣ್ಣ ಗ್ರಾಮಗಳಿಗೂ ಮಂಜೂರಾಗುತ್ತಿವೆ. ಅಲ್ಲಿ ಮಕ್ಕಳಿಗೂ ಪೌಷ್ಟಿಕ ಆಹಾರ ಹಾಗೂ ಶಿಕ್ಷಣ ದೊರಕುವಂತೆ ಮಾಡಲು ನಾನು ಪ್ರಯತ್ನಿಸಿದ್ದೇನೆ. ಮಕ್ಕಳ ಸದೃಢ ಆರೋಗ್ಯಕ್ಕಾಗಿ ಈ ಯೋಜನೆ ಅತ್ಯಂತ ಮುಖ್ಯವಾಗಿದೆ. ಮಹಿಳೆಯರು ಕೇವಲ ಅಡಿಗೆಮನೆಗೆ ಸೀಮಿತವಾಗದೆ, ಸಮಾಜಮುಖಿಯಾಗಿ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕಾರ್ಯದಕ್ಷತೆಯನ್ನು ತೋರಿಸುತ್ತಿದ್ದಾರೆ ಎಂದು ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved