• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ನ.7ರಂದು ಹುಣಸೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಪಟ್ಟಣದ ಗೂರಮಾರನಹಳ್ಳಿ ಮುರಾರ್ಜಿದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳ ಹಾಸನ ಜಿಲ್ಲಾ ತಂಡ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು, ನ.14ರಂದು ವಿಜಯಪುರ ಜಿಲ್ಲೆಯ ಆಲಮಟ್ಟಿ ಪಟ್ಟಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಕ್ಫ್ ಬೋರ್ಡ್ ವಿರುದ್ಧ ರೈತಸಂಘ ಪ್ರತಿಭಟನೆ
ರೈತಪರ ಎನ್ನುವ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ರಾತ್ರೋ ರಾತ್ರಿ ರೈತರ ಭೂಮಿಯ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಲಾಗಿದೆ. ಸಚಿವ ಜಮೀರ್‌ ಅಹಮದ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೂಚನೆ ಮೇರೆಗೆ ವಕ್ಫ್ ಆಸ್ತಿ ಘೋಷಿಸಲಾಗುತ್ತಿದೆ. ರಾಜ್ಯದಲ್ಲಿ ರೈತರು, ಹಿಂದೂಗಳು ಮತ್ತು ದೇವಾಲಯಗಳಿಗೆ ಸೇರಿದ ಜಮೀನನ್ನು ವಕ್ಫ್ ಬೋರ್ಡ್‌ ತನ್ನ ಆಸ್ತಿ ಎಂದು ಕಬಳಿಸುವ ಹುನ್ನಾರಕ್ಕೆ ಮುಂದಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಯಿತು.
ಮಾನವ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ
ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ಕೊಡಲಾಗಿದ್ದು, ಏನಾದರೂ ಉಲ್ಲಂಘನೆಯಾದರೇ ಪೊಲೀಸ್ ಠಾಣೆಗೆ ಹೋಗುತ್ತಾರೆ. ಕೂಡಲೇ ಎಫ್‌ಐಆರ್‌ ದಾಖಲಿಸಿ ರಿಜಿಸ್ಟರ್‌ ಮಾಡದಿದ್ದರೇ ನಂತರ ಮಾನವ ಹಕ್ಕುಗಳ ಆಯೋಗಕ್ಕೆ ಹೋಗಿ ದೂರನ್ನು ಸಲ್ಲಿಸುತ್ತಾರೆ ಎಂದು ಉಚಿತ ಕಾನೂನು ನೆರವು ಸಮಿತಿ ಸದಸ್ಯ ಕಾರ‍್ಯದರ್ಶಿ ಹಾಗೂ ನ್ಯಾಯಾಧೀಶೆ ಜಿ.ಕೆ. ದಾಕ್ಷಾಯಿಣಿ ತಿಳಿಸಿದರು. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು, ಫೇಸ್ ಮಾಡಬೇಕೆ ಹೊರತು ತಮ್ಮ ಸ್ಥಿಮಿತವನ್ನು ಕಳೆದುಕೊಳ್ಳಬಾರದು. ಮಾನವ ಹಕ್ಕುಗಳು ಉಲ್ಲಂಘನೆ ಆದಾಗ ಏನು ಮಾಡಬೇಕು? ನಿಮ್ಮ ಸ್ವತಂತ್ರವನ್ನು ಪಡೆಯುವ ಹಕ್ಕು ನಿಮಗಿದೆ ಎಂದರು.
ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಜಾಥಾ
ಗರ್ಭ ಕಂಠದ ಕ್ಯಾನ್ಸರ್‌ ಹಾಗೂ ಸ್ತನ ಕ್ಯಾನ್ಸರ್‌ನಿಂದ ಹೆಚ್ಚು ಮಹಿಳೆಯರು ಸಾವಿಗೀಡಾಗುತ್ತಿದ್ದಾರೆ. ಪ್ರಾರಂಭದಲ್ಲೆ ಈ ಕಾಯಿಲೆಯನ್ನು ಗುರುತಿಸಿ ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ. ಜೊತೆಗೆ ಆಗುವ ಸಾವು ನೋವನ್ನು ತಪ್ಪಿಸಬಹುದು. ಈ ಬಗ್ಗೆ ಇನ್ನು ಅನೇಕರಲ್ಲಿ ತಿಳಿವಳಿಕೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಈ ಬಗ್ಗೆ ಜಾಥಾದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಿವಸ್ವಾಮಿ ತಿಳಿಸಿದರು.
ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜನೆ
ಹಾಸನಾಂಬ ಕಲಾಕ್ಷೇತ್ರದಲ್ಲಿ ನ.10ರಂದು ಭಾನುವಾರ ಸಂಜೆ 5 ಗಂಟೆಗೆ ಅದ್ಧೂರಿ ಕನ್ನಡ ರಾಜ್ಯೋತ್ಸವ ಮತ್ತು ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜಣ್ಣ ಫಿಟ್ನೆಸ್‌ನ ಆನಂದ್ ತಿಳಿಸಿದರು. ಈ ಸ್ಪರ್ಧೆಗೆ ಬಂದವರಿಗೆಲ್ಲಾ ಒಂದು ಬಹುಮಾನವನ್ನು ವಿಶೇಷವಾಗಿ ಕೊಡುತ್ತಿದ್ದೇವೆ. ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ದೆಯಲ್ಲಿ ಪ್ರಥಮ ಬಹುಮಾನವಾಗಿ ಯುವರತ್ನ ಪ್ರಶಸ್ತಿ ನೀಡಿ ಒಂದು ಕೆ.ಜಿಯ ಬೆಳ್ಳಿ ಗದೆ ಹಾಗೂ ನಗದು ಕೊಡಲಾಗುವುದು ಎಂದರು.
ಇಂದಿನಿಂದ ಕಬ್ಳಿ ಬಸವೇಶ್ವರ ಸ್ವಾಮಿ ಜಾತ್ರೋತ್ಸವ
ಸುತ್ತಮುತ್ತಲಿನ ಗ್ರಾಮ ಹಾಗೂ ದೂರದ ಪಟ್ಟಣಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ತಮ್ಮ ಜಾನುವಾರುಗಳೊಂದಿಗೆ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಬಸವೇಶ್ವರ ಸ್ವಾಮಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿದಿನ ಧಾರ್ಮಿಕ ಹಾಗೂ ಸಾಂಸ್ಕೃತ ಕಾರ್ಯಕ್ರಮಗಳು ಜರುಗಲಿವೆ. ದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ನ.9ರಂದು ಸಾಂಪ್ರದಾಯಿಕ ಧ್ವಜಾರೋಹಣದೊಂದಿಗೆ ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಕಬ್ಬಳಿ ಶಾಖಾ ಮಠದ ಶಿವಪುತ್ರನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಪೂಜಾ ಕೈಂಕರ್ಯ ನಡೆಯಲಿದೆ.
ಇಂದು ಹಿರೇಕಲ್ಲು ಬೆಟ್ಟದ ಸಿದ್ದೇಶ್ವರ ಸ್ವಾಮಿಯ ನೂತನ ಮಹಾದ್ವಾರ ಲೋಕಾರ್ಪಣೆ
ಅರಸೀಕೆರೆ ತಾಲೂಕಿನ ಹಿರೇಕಲ್ಲು ಗುಡ್ಡದ ರಾಮೇನಹಳ್ಳಿ ಸ್ಟೇಟ್ ಫಾರೆಸ್ಟಿನಲ್ಲಿ ನೆಲೆಸಿ ವೈಭೋಗದಿಂದ ರಾರಾಜಿಸುತ್ತಿರುವ ಶ್ರೀ ಹಿರೇಕಲ್ಲು ಬೆಟ್ಟದ ಸಿದ್ದೇಶ್ವರ ಸ್ವಾಮಿಯ ನೂತನ ಮಹಾದ್ವಾರ ಲೋಕಾರ್ಪಣೆ ಮಹೋತ್ಸವವು ನ.8ರ ಶುಕ್ರವಾರ ಶ್ರೀಕರಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಹೊನ್ನವಳ್ಳಿ ತಿಪಟೂರು ತಾ. ಇವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಮಹಾದ್ವಾರ ಲೋಕಾರ್ಪಣೆಗೊಳ್ಳಲಿದೆ.
ಪಠ್ಯೇತರ ಚಟುವಟಿಕೆಗಳು ಪ್ರತಿಭೆ ಅನಾವರಣಕ್ಕೆ ವೇದಿಕೆ
ಮಕ್ಕಳು ತಮ್ಮ ಪ್ರತಿಭೆಯನ್ನು ಹೊರಹಾಕಲು ಸಿಗುವ ಅವಕಾಶವೆಂದರೆ ಅದು ಪಠ್ಯೇತರ ಚಟುವಟಿಕೆಗಳಿಂದ ಮಾತ್ರ ಸಾಧ್ಯ ಎಂದು ಎ. ವಿ. ಕೆ. ಕಾಲೇಜಿನ ಪ್ರಾಂಶುಪಾಲ ಡಾ.ಸೀ.ಚ.ಯತೀಶ್ವರ್ ತಿಳಿಸಿದರು. ಪಠ್ಯದ ಜೊತೆಗೆ ಭಾಷಾಭಿಮಾನ ಇರಬೇಕು. ವಿದ್ಯಾರ್ಥಿಗಳು ತಮ್ಮ ಮನೋವಿಕಾಸದ ಜೊತೆಗೆ ಓದಿನಲ್ಲೂ ನಿರತರಾಗಿರಬೇಕು, ಸ್ವಾಮಿವಿವೇಕಾನಂದರು ಚಿಕಾಗೋನಲ್ಲಿ ನಡೆದ ವಿಶ್ವ ಸಮ್ಮೇಳನದಲ್ಲಿ ಭಾಷಣ ಮಾಡಿದ್ದನ್ನು ಇಡೀ ವಿಶ್ವವೇ ಕೊಂಡಾಡಿದ್ದು ಇತಿಹಾಸ ಅಂತಹ ಮಹನೀಯರ ನಾಡಿನಲ್ಲಿ ಹುಟ್ಟಿರುವ ನಾವೆಲ್ಲರೂ ಧನ್ಯರು ಎಂದರು.
ಓವರ್ ಟ್ಯಾಂಕ್ ನಿರ್ಮಿಸಲು ನಗರಸಭೆ ಅಧ್ಯಕ್ಷರಿಂದ ಭೂಮಿ ಪೂಜೆ
ವಿಜಯನಗರ ಬಡಾವಣೆಯಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ೪,೭೫,೦೦೦ ಲೀಟರ್‌ ಸಾಮರ್ಥ್ಯದ ಸಂಗ್ರಹದ ಓವರ್‌ ರೆಡ್‌ಟ್ಯಾಂಕನ್ನು ನಿರ್ಮಿಸಲು ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡರು ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಇನ್ನು ಒಂದು ವರ್ಷದೊಳಗೆ ನದೀ ನೀರನ್ನು ಈ ಬಡಾವಣೆಗೆ ನೀಡಲಾಗುವುದು ಎಂದರಲ್ಲದೆ ಈ ಯೋಜನೆ ಅನುಷ್ಠಾನ ಮಾಡುವ ಕಂಪನಿಯವರು ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಸೂಚಿಸಿದರು.
ಉಪ ಚುನಾವಣೆಯಲ್ಲಿ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿ
ರೈತರ ಭೂಮಿ ಅಷ್ಟೇ ಅಲ್ಲ ಮಠಮಾನ್ಯಗಳು ದೇವಾಲಯಗಳು ಆಸ್ತಿ ಎಂದು ಪಹಣಿಯಲ್ಲಿ ವಕ್ಫ್‌ ಹೆಸರು ಕಂಡುಬರುತ್ತಿರುವುದು ನಿಜಕ್ಕೂ ಆತಂಕದ ಸಂಗತಿ. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬೇರೊಂದು ಸಮುದಾಯದ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ತಕ್ಷಣವೇ ಎಚ್ಚೆತ್ತು ಸರಿಪಡಿಸದಿದ್ದಲ್ಲಿ ಅಶಾಂತ ವಾತಾವರಣ ಸೃಷ್ಟಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಡಾ. ಶ್ರೀ ಪ್ರಸನ್ನರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಎಚ್ಚರಿಸಿದರು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 510
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved