• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಳಂಬಿಗೆಯಲ್ಲಿ ನೂತನ ದೇವಾಲಯ ಉದ್ಘಾಟನೆ
ವಳಂಬಿಗೆ ಗ್ರಾಮದಲ್ಲಿ ಶ್ರೀ ಈಶ್ವರಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಮಾತನಾಡಿದರು. ಪ್ರಚಲಿತ ನಾಗರಿಕ ಸಮಾಜದಲ್ಲಿ ಅನಾಗರಿಕ ವರ್ತನೆ ಹೆಚ್ಚುತ್ತಿದ್ದು, ಸಮಾಜದಲ್ಲಿ ಮೊದಲಿಗೆ ಮನುಷ್ಯತ್ವದೊಂದಿಗೆ ಬದುಕುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.
ನಬಾರ್ಡ್ ವತಿಯಿಂದ ಕಡಿಮೆ ಬಡ್ಡಿಯಲ್ಲಿ 25 ಲಕ್ಷ ರುಪಾಯಿ ಸಾಲ
ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಗೋದಾಮು ನಿರ್ಮಾಣಕ್ಕೆ ನಬಾರ್ಡ್ ವತಿಯಿಂದ ವಾರ್ಷಿಕ ಶೇಕಡ 1% ಬಡ್ಡಿ ದರದಲ್ಲಿ 25 ಲಕ್ಷ ರು. ಸಾಲ ಕೊಡಿಸುವುದಾಗಿ ಶಾಸಕ ಸಿಎನ್ ಬಾಲಕೃಷ್ಣ ಭರವಸೆ ನೀಡಿದರು. ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಹೊಸ ಸಾಲ ವಿತರಣೆ ಕಾರ್ಯಕ್ರಮದಲ್ಲಿ ರೈತರಿಗೆ ಹೊಸ ಸಾಲದ ಚೆಕ್ ವಿತರಿಸಿ ಮಾತನಾಡಿದರು.
ವಿಜೃಂಭಣೆಯಿಂದ ಜಂಬೂರು ಶನೇಶ್ವರ ಬ್ರಹ್ಮರಥೋತ್ಸವ
ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮದ ಪುರಾಣ ಪ್ರಸಿದ್ಧ ಶನೇಶ್ವರ ಸ್ವಾಮಿಯವರ 37ನೇ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ್ತಿಕ ಸೋಮವಾರದಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಶನೇಶ್ವರ ಸ್ವಾಮಿಗೆ ವಿಶೇಷ ಪೂಜೆ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ಗ್ರಾಮದ ರಾಜಭೀದಿಗಳಲ್ಲಿ ಶ್ರೀ ಶನೇಶ್ವರ ಸ್ವಾಮಿ ಹಾಗೂ ಕೋಟೆ ಮಾರಮ್ಮನವರ ಉತ್ಸವ ನಡೆಯಿತು.
ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ ಹಾಗೂ ಇತರೆ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶನಿವಾರ ವಿಶೇಷ ಪೂಜಾ ಮಹೋತ್ಸವ ಮತ್ತು ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಶ್ರೀ ಧನಲಕ್ಷ್ಮಿ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.ಶ್ರೀದೇವಿ ಹಾಗೂ ಗರ್ಭಗುಡಿಯನ್ನು ನೋಟುಗಳಿಂದ ಧನಲಕ್ಷ್ಮಿ ಪೂಜಾ ಮಹೋತ್ಸವವು ವೈಭವದಿಂದ ಕಂಗೊಳಿಸುವಂತೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ
ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಹಬ್ಬ ಆಚರಣೆಯ ಹಿನ್ನೆಲೆಯನ್ನು ಪರಿಚಯಿಸಲಾಯಿತು. ಪೋಷಕರು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಬ್ಬದ ಆಚರಣೆಯು ಸಂತೋಷ ಪಸರಿಸುವ ವೇದಿಕೆ. . ಎಲ್ಲಾ ಹಬ್ಬಗಳ ಹಿನ್ನೆಲೆಯನ್ನು ತಿಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಅನಂತ ಕುಮಾರ್‌ ತಿಳಿಸಿದರು.
ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ
ಈ ಬಾರಿ ಅ.24ರಿಂದ ಆರಂಭವಾದ ಹಾಸನಾಂಬ ಜಾತ್ರೋತ್ಸವ ಹನ್ನೊಂದನೇ ದಿನವಾದ ಭಾನುವಾರ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಧ್ಯಾಹ್ನ 12.34ಕ್ಕೆ ಬಾಗಿಲು ಮುಚ್ಚುವ ಮೂಲಕ ೨೦೨೪ರ ದರ್ಶನೋತ್ಸವಕ್ಕೆ ತೆರೆ ಎಳೆಯಲಾಯಿತು. ಈ ವರ್ಷ ೨೦ಲಕ್ಷಕ್ಕೂ ಹೆಚ್ಚು ಜನ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುವ ಮೂಲಕ ದಾಖಲೆ ಬರೆದಂತಾಗಿದೆ. ಮುಂದಿನ ವರ್ಷ ಅಕ್ಟೋಬರ್‌ ೯ರಿಂದ ಅಕ್ಟೋಬರ್ ೨೩ರವರೆಗೂ ಇರುತ್ತದೆ
ಲಯನ್ಸ್ ಕ್ಲಬ್ ಆವರಣದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ
ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರವನ್ನು ನವೆಂಬರ್ ೨ರಿಂದ ನವೆಂಬರ್ ೧೫ರವರೆಗೂ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ. ಸತತವಾಗಿ ೧೫ ದಿನಗಳ ಕಾಲ ಕುವೆಂಪು ನಗರದಲ್ಲಿರುವ ಲಯನ್ಸ್ ಸೇವಾ ಸಂಸ್ಥೆಯಲ್ಲಿ ಈ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ನವೆಂಬರ್ ೨ರಿಂದ ೧೫ರವರೆಗೂ ಬೆಳಿಗ್ಗೆ ೯:೩೦ರಿಂದ ಸಂಜೆ ೫:೩೦ರವರೆಗೂ ಈ ಚಟುವಟಿಕೆ ನಡೆಯಲಿದೆ ಎಂದರು. ಇಲ್ಲಿಗೆ ಬಂದು ಉಚಿತ ಸೇವೆ ಪಡೆಯಬಹುದು.
ಹೆದ್ದಾರಿಯ ಎರಡೂ ಬದಿ ಕಸದ ರಾಶಿ
ಬೆಂಗಳೂರು ಮಾರ್ಗವಾಗಿ ಅರಸೀಕೆರೆಗೆ ಬರುವ ಪ್ರಯಾಣಿಕರಿಗೆ ಹೆದ್ದಾರಿಯ ಎರಡೂ ಬದಿ ಕಣ್ಣಿಗೆ ರಾಚುವಂತೆ ತ್ಯಾಜ್ಯ ಸುರಿದಿದ್ದಾರೆ. ನಗರ ವ್ಯಾಪ್ತಿಗೆ ಕೂದಲೆಳೆ ಅಂತರದಲ್ಲಿ ಸಾಲು ಸಾಲಾಗಿ ಕಸದ ರಾಶಿಯನ್ನ ಕಾಣಬಹುದು. ಈ ಪ್ರದೇಶ ನಗರ ವ್ಯಾಪ್ತಿಗೆ ಸೇರುವುದಿಲ್ಲ. ಹಾಗಾಗಿ ನಗರಸಭೆ ಆರೋಗ್ಯ ನಿರೀಕ್ಷಕರು ಇತ್ತ ತಿರುಗಿ ನೋಡುತ್ತಿಲ್ಲ. ಮತ್ತೊಂದೆಡೆ ಹೆದ್ದಾರಿ ಇಲಾಖೆ ಅಧಿಕಾರಿಗಳು ರಸ್ತೆ ಅಭಿವೃದ್ಧಿ, ದುರಸ್ತಿ ಇಷ್ಟೆ ನಮ್ಮ ಕೆಲಸ, ಉಳಿದಿದ್ದು ನಮ್ಮದಲ್ಲ ಎನ್ನುವ ಮನಸ್ಥಿತಿ ಹೊಂದಿದ್ದು, ಈ ಕಾರಣಗಳಿಂದಾಗಿ ಹೆದ್ದಾರಿ ಬದಿಯ ಪಾದಚಾರಿ ರಸ್ತೆಗಳು ಸವಾಲಾಗಿದೆ.
ಪುಷ್ಪಗಿರಿ ಶ್ರೀಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಇಲ್ಲಿಗೆ ಸಮೀಪದ ಪುಷ್ಪಗಿರಿಯಲ್ಲಿ ನಡೆದ ಶ್ರೀ ಕರಿಬಸವ ಅಜ್ಜಯ್ಯ ಸ್ವಾಮಿಯವರ ದೇವಾಲಯದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಹುಲ್ಲಳ್ಳಿ ಸುರೇಶ್ ಹಾಗೂ ತಾಲೂಕು ದಂಡಾಧಿಕಾರಿ ಮಮತಾ ಅವರು ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮಶೇಖರ ಸ್ವಾಮೀಜಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತ,ತಾಲೂಕು ಆಡಳಿತ ಶ್ರೀ ಮಠದ ಹಲವಾರು ಸಾಮಾಜಿಕ ಸೇವೆಗಳನ್ನು ಗುರುತಿಸಿ ಜಿಲ್ಲಾ ಮತ್ತು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದಕ್ಕೆ ಆಭಾರಿಯಾಗಿರುತ್ತೇನೆ ಎಂದರು.
ಕನ್ನಡ ಭಾಷೆಗೆ ಹೆಚ್ಚು ಆದ್ಯತೆ ನೀಡಿ
ಹಳೇಬೀಡಿನ ಸರ್ಕಾರಿ ಕೆ.ಪಿ.ಎಸ್ ಶಾಲೆಯ ಆವರಣದಲ್ಲಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಧ್ವಜವನ್ನು ಹಾರಿಸಲಾಯಿತು.ಈ ದ್ವಾರಸಮುದ್ರದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಗಳಿಗೆ ಅಪಾರ ಪ್ರಾಮುಖ್ಯತೆ ನೀಡಿದ ಹೊಯ್ಸಳರ ರಾಜರು ಎಂದು ಇತಿಹಾಸ ತಿಳಿಸಿದೆ ಎಂದು ಸರ್ಕಾರಿ ಕೆಪಿಎಸ್ ಶಾಲೆಯ ಅಧ್ಯಕ್ಷ ಬಿ. ಎಸ್. ಸೋಮಶೇಖರ ತಿಳಿಸಿದರು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 510
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved