• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಒತ್ತಾಯ
ಕುರಭತ್ತೂರು ಗ್ರಾಮ ಪಂಚಾಯಿತಿಯ ಹಡ್ಲಹಳ್ಳಿ ಹೊರಟ್ಟಿಯ ಹತ್ತಾರು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದೆ ಚೆಸ್ಕಾಂ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೊರುತ್ತಿದ್ದಾರೆಂದು ಆರೋಪಿಸಿ ವಳಲಹಳ್ಳಿ ಕೂಡಿಗೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ, ಹಿರಿಯ ಅಧಿಕಾರಿಗಳ ಆದೇಶವನ್ನು ಪಾಲಿಸಲು ಅಧಿಕಾರಿಗಳು ಮುಂದಾಗದೆ ತಾಂತ್ರಿಕ ಕಾರಣ ನೀಡುತ್ತಿದ್ದಾರೆ ಎಂದು ದೂರಿದ ಪ್ರತಿಭಟನಕಾರರು, ಸ್ಥಳಕ್ಕೆ ಬಂದ ಚೆಸ್ಕಾಂ ಸಹಾಯಕ ಕಾರ್ಯಪಾಲ ಅಭಿಯಂತರ ಹರೀಶ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಅಂಗನವಾಡಿಗಾಗಿ ಭೂಮಿ ದಾನ
ಕೇರಳಾಪುರದ ನಿವಾಸಿಯಾದ ಹಾಗೂ ಕೇರಳಾಪುರ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ಡಿ ಮಂಜುನಾಥ್ ಅವರು ಕೇರಳಾಪುರದಲ್ಲಿ ಜನತಾ ಬಡಾವಣೆಗೆ ಹೊಸದಾಗಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ೩೦*೪೦ ಅಳತೆಯ ಸುಮಾರು ೩೦ ಲಕ್ಷ ಬೆಲೆಬಾಳುವ ನಿವೇಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಸರಿಗೆ ದಾನ ನೀಡಿದ್ದಾರೆ.
ಅಮಿತ್ ಶಾ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ
ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ರವರು ಡಾ. ಬಿ.ಆರ್‌. ಅಂಬೇಡ್ಕರ್ ಬಗ್ಗೆ ಹಾಸ್ಯಾಸ್ಪದವಾಗಿ ಮತ್ತು ನಾಟಕೀಯವಾಗಿ ಸಂಸತ್ ಭವನದಲ್ಲಿ ಮಾತನಾಡಿರುವುದು ಖಂಡನೀಯ. ಹಾಗಾಗಿ ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ದೇಶದ ಗೃಹಮಂತ್ರಿ ಅಮಿತ್ ಶಾ ಅವರು ಡಿಸೆಂಬರ್ ೧೭ರಂದು ಸಂಸತ್ತಿನಲ್ಲಿ ಮಾತನಾಡುವಾಗ ಅಂಬೇಡ್ಕರ್‌ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿರುವುದು ಖಂಡನೀಯ.
ಅಮಿತ್‌ ಶಾ ವಿರುದ್ಧ ನಾಳೆ ಹೊಳೆನರಸೀಪುರದಲ್ಲಿ ಪ್ರತಿಭಟನೆ
ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಕ್ರಿಮಿನಲ್ ಹಿನ್ನೆಲೆಯುಳ್ಳ ಹಾಗೂ ಗುಜರಾತ್ ರಾಜ್ಯದಿಂದ ಗಡಿಪಾರು ಆಗಿರುವ ವ್ಯಕ್ತಿಯಾಗಿದ್ದಾರೆ. ಇವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಬಗ್ಗೆ ಮಾತನಾಡುವಷ್ಟು ಯೋಗ್ಯತೆ ಇಲ್ಲ. ಇಂತಹ ವ್ಯಕ್ತಿ ಡಾ. ಬಾಬಾ ಸಾಹೇಬರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅಕ್ಷಮ್ಯವಾಗಿದೆ. ಆದ್ದರಿಂದ ಅವರು ಹೇಳಿಕೆ ಖಂಡಿಸಿ ಮುಂದಿನ ಸೋಮವಾರ ಪ್ರತಿಭಟನೆ ಮಾಡುತ್ತೇವೆ ಎಂದು ಚಂದ್ರಶೇಖರ್‌ ತಿಳಿಸಿದರು.
ವಿವೇಕ ಯೋಜನೆಯಡಿ ಕಾಮನಾಯಕನಹಳ್ಳಿನಲ್ಲಿ ನೂತನ ಶಾಲಾ ಕಟ್ಟಡ
ವಿವೇಕ ಯೋಜನೆಯ ಮೂಲಕ ಹೋಬಳಿಯ ಕಾಮನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವನ್ನು 16 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಬಾಲಕೃಷ್ಣ ಶನಿವಾರ ತಿಳಿಸಿದರು. ತಾಲೂಕಿನಲ್ಲಿ ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ತಾಲೂಕಿಗೆ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇನೆ.
ಬೇಲೂರಲ್ಲಿ 12ನೇ ವರ್ಷದ ಹನುಮ ಜಯಂತಿ
ಲಕ್ಷ್ಮೀಪುರದಲ್ಲಿನ ಶ್ರೀ ವೀರಾಂಜನೇಯ ಸ್ವಾಮಿಯ ಜಯಂತಿ ಮಹೋತ್ಸವ ಸಾವಿರಾರು ಭಕ್ತಾದಿಗಳೊಂದಿಗೆ ಸಡಗರ, ಸಂಭ್ರಮದಿಂದ ನಡೆಯಿತು. ದೇಗುಲದಲ್ಲಿ ಹನುಮನಿಗೆ ವಿಶೇಷ ಮಹಾ ಮಂಗಳಾರತಿ ನಡೆಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಿದರು. ದೇಗುಲದ ಆವರಣದಲ್ಲಿ ಹಮ್ಮಿಕೊಂಡ ಲಕ್ಷ್ಮೀ ನಾರಾಯಣ ಹೃದಯ ಹೋಮ ಹಾಗೂ ಆಂಜನೇಯ ಮೂಲಮಂತ್ರ ಹೋಮಕ್ಕೆ ದೇಗುಲ ಸಮಿತಿ ಸದಸ್ಯರು ಪೂರ್ಣಾಹುತಿ ಅರ್ಪಿಸಿದರು.
ವಿದ್ಯಾರ್ಥಿಯೊಳಗಿನ ವಿಜ್ಞಾನಿ ಹೊರಬರಲು ವಸ್ತುಪ್ರದರ್ಶನ ಸಹಕಾರಿ
ಎಸ್.ಆರ್.ಎಸ್ ಪ್ರಜ್ಞಾ ವಿದ್ಯಾಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ವಿಗ್ಯಾನ್ ವಿಕಸನ್ - ೨೦೨೪ ಅನ್ನು ಆಯೋಜಿಸಲಾಗಿತ್ತು. ಶಿಕ್ಷಕರು ಭವಿಷ್ಯದ ಭಾವಿ ವಿಜ್ಞಾನಿಗಳನ್ನು ಶಾಲಾ ಹಂತದಿಂದಲೇ ಗುರುತಿಸಿ, ಅವರನ್ನು ಪ್ರೋತ್ಸಾಹಿಸಬೇಕು ಹಾಗೂ ವಿಜ್ಞಾನವನ್ನು ವಿದ್ಯಾರ್ಥಿಗಳ ದೈನಂದಿನ ಜೀವನಕ್ಕೆ ಅನ್ವಯಿಸಿ ಪರಿಣಾಮಕಾರಿಯಾಗಿ ಬೋಧಿಸಿ, ಅವರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಬೇಕೆಂದು ಅಭಿಪ್ರಾಯಪಟ್ಟರು.
ಮನುಷ್ಯ ದ್ವೇಷ ಬಿಟ್ಟಾಗ ಉದ್ಧಾರ ಸಾಧ್ಯ
ಮಾನವನು ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಜೀವನಕ್ಕೊಂದು ಅರ್ಥ ಬರುತ್ತದೆ ಎಂದು ಮಾಡಾಳು ಶ್ರೀ ರುದ್ರಮನಿ ಮಹಾಸ್ವಾಮಿಗಳು ಕರೆ ನೀಡಿದರು. ನಾಟಕಗಳು ವೈಚಾರಿಕ ಹಿನ್ನೆಲೆಯನ್ನು ಪ್ರತಿಬಿಂಬಿಸುತ್ತದೆ. ಸಮಾಜಕ್ಕೆ ಸಂದೇಶಗಳನ್ನು ನೀಡುತ್ತವೆ. ದ್ವೇಷ, ಅಸೂಯೆ ಒಳ್ಳೆಯದಲ್ಲ, ಸಮಾಜದಲ್ಲಿ ಒಬ್ಬ ಮುಂದುವರೆದನೆಂದರೆ ಅವನ ಕಾಲು ಎಳೆಯುವುದು ತರವಲ್ಲ, ಕಾಲು ಎಳೆಯುವವರು ಯಾವಾಗಲೂ ಕೆಳಗೆ ಇರುತ್ತಾರೆ, ಎಂಬುದನ್ನು ಅವರು ನೆನಪು ಮಾಡಿಕೊಟ್ಟರು.
ನೆಟ್ಟೆಕೆರೆ ಗ್ರಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ
ಇಬ್ಬೀಡು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಮಂಜುನಾಥ್ ಅವರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸದಸ್ಯರು ಒತ್ತಾಯಿಸಿದ್ದಾರೆ. ಪಂಚಾಯಿತಿಯ ನೌಕರ ವರ್ಗದವರೊಂದಿಗೆ ಸೌಹಾರ್ದ ನಡವಳಿಕೆ ಇಲ್ಲದೆ ದುರಾಡಳಿತ, ದುರ್ನಡತೆಯಿಂದ, ದರ್ಪದಿಂದ ವರ್ತಿಸಿ ಪಂಚಾಯಿತಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಕ್ಕೆ ಒತ್ತು ನೀಡದೆ ಸದಸ್ಯರ ನಡುವೆ ವೈಮನಸ್ಸು ಸೃಷ್ಟಿ ಮಾಡಿ ಅಧಿಕಾರದ ಆಸೆಗಾಗಿ ಪಂಚಾಯತಿಯ ಸದಸ್ಯರ ದಿಕ್ಕು ತಪ್ಪಿಸುತ್ತಿದ್ದಾರೆ. ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಆಲಿಸುತ್ತಿಲ್ಲ ಎಂದು ಸದಸ್ಯರು ಆರೋಪಿಸಿದ್ದಾರೆ.
ಕಾಲ ಸೃಷ್ಟಿಸಿದ ಅಸಾಮಾನ್ಯ ಪ್ರತಿಭೆ ಕುವೆಂಪು
ಮಲೆನಾಡಿನಲ್ಲಿ ಹುಟ್ಟು, ರಾಮಕೃಷ್ಣಾಶ್ರಮದ ಪ್ರಭಾವ , ಗ್ರೀನ್ ಜೊತೆಗಿನ ಭೇಟಿ , ಟಿ ಎಸ್ ವೆಂಕಣ್ಣಯ್ಯ ರವರ ಸಂಪರ್ಕ, ಎ ಆರ್ ಕೃಷ್ಣ ಶಾಸ್ತ್ರಿಗಳ ಮಾರ್ಗದರ್ಶನದಿಂದ ಮೊದಲ ಬ್ಯಾಚ್ ಕನ್ನಡ ಎಂ ಎ ಸೇರಿದ್ದು, ಬಿ ಎಂ ಶ್ರೀ ಅವರ ಇಂಗ್ಲಿಷ್ ಗೀತೆ ಹೊರಬಂದು ನವೋದಯ ಸಾಹಿತ್ಯಕ್ಕೆ ಮುನ್ನುಡಿ ಬರೆದದ್ದು ಆ ಕಾಲಘಟ್ಟದಲ್ಲಿ ನಡೆದು ಕೆ ವಿ ಪುಟ್ಟಪ್ಪ ಕುವೆಂಪುಗಳಾಗಿ ರೂಪುಗೊಂಡು ವಿಶ್ವಮಾನ್ಯರಾಗಲು ಕಾರಣವಾದವು ಎಂದು ಕುವೆಂಪು ಕುರಿತು ಲೇಖಕ ಗೊರೂರು ಶಿವೇಶ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved