• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಗೊಲ್ಲರ ಸಮುದಾಯ ಸಂಘಟಿತವಾಗಿ ಮುಂಚೂಣಿಗೆ ಬರಬೇಕು
ಪ್ರತಿ ಸಮುದಾಯಗಳು ಕೇವಲ ಅಧಿಕಾರಕ್ಕಾಗಿ ಸ್ಥಾನಗಳನ್ನು ಅಲಂಕರಿಸದೇ ಸಂಘಟನೆಗೆ ಹೆಚ್ಚು ಆಸಕ್ತರಾಗಬೇಕಿದೆ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಇನ್ನಿತರೆ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರಬೇಕಾದರೆ ಸಂಘಟನೆ ಮುಖ್ಯವಾಗಿದೆ. ನೂತನ ಪದಾಧಿಕಾರಿಗಳು ಅರಸೀಕೆರೆ ತಾಲೂಕಿನಲ್ಲಿ ಸಂಘಟನೆಗೆ ಹೆಚ್ಚು ಒತ್ತನ್ನು ನೀಡುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕು. ಸಮುದಾಯದ ಸಂಘಟನೆ ಬಲಿಷ್ಠಗೊಳಿಸುವ ಜೊತೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಗಮನ ಹರಿಸಲು ಮುಂದಾಗಬೇಕು. ನಿಮ್ಮೆಲ್ಲರ ಶಕ್ತಿಯನ್ನು ಕಾಡುಗೊಲ್ಲರ ಸಮುದಾಯ ಅಭಿವೃದ್ಧಿಗೆ ಧಾರೆ ಎರೆದಾಗ ಮಾತ್ರ ಎಲ್ಲ ಕ್ಷೇತ್ರಗಳಲ್ಲೂ ಪ್ರಮುಖ ಪಾತ್ರ ವಹಿಸಲು ಸಾದ್ಯವಾಗುತ್ತದೆ ಎಂದರು.
ಒತ್ತಡರಹಿತ ಜೀವನದಿಂದ ಹೃದಯದ ಆರೋಗ್ಯ ಕಾಪಾಡಿ
ಸಂಪ್ರಾದಾಯಿಕ ಆಹಾರ ಪದ್ಧತಿಯ ಪಾಲನೆ ಜತೆಗೆ ಸಿದ್ಧ ಪಡಿಸಿದ ಆಹಾರದಿಂದ ದೂರ ಉಳಿಯುವುದು ಹಾಗೂ ದೈನಂದಿನ ಜೀವನದಲ್ಲಿ ಯೋಗ, ಪ್ರಾಣಾಯಾಮ, ವ್ಯಾಯಾಮ ಮತ್ತು ಒತ್ತಡ ರಹಿತವಾದ ಜೀವನವನ್ನು ರೂಪಿಸಿಕೊಂಡರೆ ಹೃದಯದ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ತಹಸೀಲ್ದಾರ್‌ ವೈ.ಎಂ. ರೇಣುಕುಮಾರ್‌ ಸಲಹೆ ನೀಡಿದರು. ಮಾರಣಾಂತಿಕ ಕಾಯಿಲೆಯಾದ ಹೃದಯಾಘಾತ ತಡೆಯವ ಜತೆಗೆ ಉತ್ತಮ ಜೀವನ ಜೈಲಿ ಆಳವಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ನಡೆಯುತ್ತಿದೆ. ಜನರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬೇಕು. ಪೌಷ್ಠಿಕ ಆಹಾರವನ್ನು ಸೇವಿಸಬೇಕು, ಮದ್ಯಪಾನ, ಧೂಮಪಾನ, ಮಾದಕ ವಸ್ತುಗಳಾದ ಡ್ರಗ್ಸ್ ಹಾಗೂ ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಹಾವಿಗೆ ಹಾಲು ನೀಡದೇ ರೋಗಿಗಳಿಗೆ ಹಾಲು ವಿತರಿಸಿ ಬಸವ ಪಂಚಮಿ ಆಚರಣೆ
ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಜಯಲಕ್ಷ್ಮಿ ಮಾತನಾಡಿ, ಮಾನವ ಬಂಧುತ್ವ ವೇದಿಕೆಯಿಂದ ರೋಗಿಗಳಿಗೆ ಹಾಲು, ಬ್ರೆಡ್ ವಿತರಿಸಿ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಾರಣ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಆದರೂ ಹಾಲನ್ನು ಹುತ್ತಕ್ಕೆಎರೆದು ಹಾಳು ಮಾಡುತಿದ್ದೇವೆ. ಆದರೆ ದೇಶದಲ್ಲಿ ಸಾಕಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತಿದ್ದಾರೆ. ಈ ಹಾಲಿನಲ್ಲಿ ಕಾರ್ಬೋಹೈಡೆಟ್, ಪ್ರೋಟೀನ್ ಸೇರಿದಂತೆ ಮಕ್ಕಳಿಗೆ ಏನು ಬೇಕು ಅದೆಲ್ಲ ಇರುತ್ತೆ. ಹಾಲನ್ನು ವೇಸ್ಟ್ ಮಾಡದೆ ಒಳ್ಳೆ ಉದ್ದೇಶಕ್ಕೆ ಬಳಸಿದರೆ ಸಾರ್ಥಕವಾಗುತ್ತದೆ ಎಂದರು.
ಬಹುಸಂಖ್ಯಾತ ಒಕ್ಕಲಿಗರಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡಲಿ
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ತನು, ಮನ, ಧನ ಖರ್ಚು ಮಾಡಿ ಪಕ್ಷ ಸಂಘಟನೆ ಮಾಡಿದ ಹಲವಾರು ವಿಧಾನಸಭಾ ಕ್ಷೇತ್ರದಲ್ಲಿ ಬಹು ಸಂಖ್ಯಾತರಾಗಿರುವುದರಿಂದ ಒಕ್ಕಲಿಗರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಒತ್ತಾಯಿಸುತ್ತೇವೆ. ಒಂದು ವೇಳೆ ಸಾಧ್ಯವಾಗದಿದ್ದರೆ, ಹಾಸನ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಅಥವಾ ದಲಿತ ವರ್ಗದವರನ್ನು ಪರಿಗಣಿಸುವ ಮೂಲಕ ಪಕ್ಷ ಸಂಘಟನೆಗೆ ಅನುಕೂಲ ಮಾಡಿಕೊಡಬೇಕಾಗಿ ಆಗ್ರಹಿಸಿದರು. ಬಹುಸಂಖ್ಯಾತರಾಗಿರುವ ಒಕ್ಕಲಿಗರನ್ನೇ ಹುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಕುಮಾರಶೆಟ್ಟಿ ಒತ್ತಾಯಿಸಿದರು.
ಸ್ಥಳೀಯರಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಪ್ರತಿಭಟನೆ
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಹುದ್ದೆಯನ್ನು ಹಾಸನ ನಗರದ ವ್ಯಾಪ್ತಿಯಲ್ಲಿರುವಂತಹ ಸ್ಥಳೀಯ ಕಾರ್ಯಕರ್ತರಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಬಿ.ಎಂ. ರಸ್ತೆ ತಡೆ ನಡೆಸಿ ಬಳಿಕ ಹುಡಾ ಕಚೇರಿ ಮುಂದೆ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಬಂದು ಸುಮಾರು ಎರಡು ವರ್ಷಗಳ ಕಾಲ ಕಳೆದರೂ ಸಹ ಈವರೆಗೂ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಸರ್ಕಾರಿ ನಾಮಿನಿ ಮಾಡದೇ ಇರುವುದು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಿಗೆ ಸರ್ಕಾದ ಮುಖಂಡರ ಮೇಲೆ ಬೇಸರ ಬರಲು ಕಾರಣವಾಗಿದೆ ಎಂದು ದೂರಿದರು.
ಹೊರಗಿನವರಿಗೆ ನೀಡಿದರೆ ಕಾರ್ಯಕರ್ತರಿಂದಲೇ ಹೋರಾಟ
ಈಗಾಗಲೇ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ೨ ವರ್ಷಗಳು ಕಳೆದಿರುತ್ತದೆ. ಇದುವರೆಗೂ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿರುವುದಿಲ್ಲ. ಇದರಿಂದಾಗಿ ಹಾಸನ ನಗರದ ಸರ್ವತಮುಖ ಅಭಿವೃದ್ಧಿ ಕುಂಠಿತವಾಗಿರುತ್ತದೆ ಎಂದು ದೂರಿದರು. ಈ ಹಿನ್ನೆಲೆಯಲ್ಲಿ ಹಾಸನದ ಪ್ರಾಧಿಕಾರಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮುಖಂಡರು ಅಥವಾ ಕಾರ್ಯಕರ್ತರನ್ನು ನೇಮಿಸುವ ಮೂಲಕ ಹಾಸನ ನಗರದ ಅಭಿವೃದ್ಧಿಗೆ ಸಹಕರಿಸಲು ಸರ್ಕಾರವನ್ನು ಒತ್ತಾಯಿಸುತ್ತೇವೆ. ಅಧ್ಯಕ್ಷ ಸ್ಥಾನಕ್ಕೆ ಸ್ಥಳೀಯರನ್ನು ನೇಮಕ ಮಾಡದೆ ಬೇರೆ ಕ್ಷೇತ್ರದ ವ್ಯಕ್ತಿಗಳನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಅಭಿವೃದ್ಧಿಗೆ ವೃದ್ಧಿಗೆ ಕುಂಠಿತವಾಗುತ್ತದೆ ಎಂದರು.
ಕಾಡಂಚಿನ ಪ್ರದೇಶದಲ್ಲಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತಿಲ್ಲ
ಕಾಡಂಚಿನ ಪ್ರದೇಶದಲ್ಲಿ ಸುರಕ್ಷತೆ ದೃಷ್ಟಿಗಾಗಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕಾಡುಪ್ರಾಣಿಗಳನ್ನು ನಾಶ ಮಾಡುವುದು ಘೋರ ಅಪರಾಧವಾಗುತ್ತದೆ. ಮಳೆ, ಗಾಳಿ ಇದ್ದ ಸಂದರ್ಭದಲ್ಲಿ ಮರಗಿಡಗಳು ವಿದ್ಯುತ್ ತಂತಿ ಮೇಲೆ ಬಿದ್ದು ತಂತಿ ತುಂಡಾಗಿರುತ್ತದೆ. ತಂತಿಯಲ್ಲಿ ವಿದ್ಯುತ್ ಪ್ರಸರಿಸುತ್ತಿರುವುದು ಕಣ್ಣಿಗೆ ಕಾಣುವುದಿಲ್ಲ. ಆಕಸ್ಮಿಕವಾಗಿ ಸ್ಪರ್ಶಿಸಿದರೆ ಕೆಲ ಸೆಕೆಂಡ್ ಸಮಯದಲ್ಲಿ ಪ್ರಾಣ ಹಾರಿ ಹೋಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಜಾಗ್ರತೆಯಿಂದ ಇರಬೇಕು. ಕಳ್ಳತನ, ದುರುಪಯೋಗದಂತಹ ಪ್ರಕರಣ ಕಂಡುಬಂದಲ್ಲಿ ಸಂಬಂಧಿಸಿದ ಸೆಸ್ಕ್ ಜಾಗೃತದಳ ಇಲಾಖೆಗೆ ತಿಳಿಸಬೇಕು ಎಂದರು.
ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಲಾಭ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಿತಾಂಶ ಈಗಾಗಲೇ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಬೆಳಕು ಮೂಡಿಸುತ್ತಿದ್ದು, ಅದರಲ್ಲೂ "ಶಕ್ತಿ ಯೋಜನೆ " ಮೂಲಕ ಉಚಿತ ಬಸ್ ಪ್ರಯಾಣ ಅವಕಾಶದಿಂದ ಲಕ್ಷಾಂತರ ಮಹಿಳೆಯರು ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಶಾಸಕ ಎಚ್.ಕೆ. ಸುರೇಶ್ ಹೇಳಿದರು. ಈ ಯೋಜನೆಯಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದ್ದು, ತಮ್ಮದೇ ಆದ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಇದೊಂದು ಸಾಮಾಜಿಕ ಕ್ರಾಂತಿಯೆಂದು ಕರೆಯಬಹುದಾದ ಯೋಜನೆಯಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯೇಗಬೇಕಿದ್ದ ಸ್ಥಿತಿ ಅಧೋಗತಿ
ಚನ್ನರಾಯಪಟ್ಟಣ- ಹೊಳೆನರಸೀಪುರ ಮಾರ್ಗವಾಗಿ ಬೂವನಹಳ್ಳಿ ಕ್ರಾಸ್ ಗಡಿ ಭಾಗದಿಂದ ಕಳ್ಳಿಮುದ್ದನಹಳ್ಳಿ, ಹೆತ್ತಗೌಡನಹಳ್ಳಿ, ಬೈಚನಹಳ್ಳಿ, ಹೊಡಿಕೆಕಟ್ಟೆ, ಚಿಕ್ಕಗಾವನಹಳ್ಳಿ, ದೇವರಹಳ್ಳಿ, ಹೊನ್ನವಳಿ ಬಳಿ ಅಲ್ಲಲ್ಲಿ ಡಾಂಬರು ಕಿತ್ತು ವಾಹನಗಳ ಸಂಚಾರಕ್ಕೆ ಯೋಗ್ಯವಾಗಿಲ್ಲ. ಅರಕಲಗೂಡಿನ ಚನ್ನಬಸವೇಶ್ವರ ವೃತ್ತದಿಂದ ಆರಂಭವಾಗುವ ಗುಂಡಿ ಹೊಂಡಗಳು ಚನ್ನರಾಯಪಟ್ಟಣದ ಗನ್ನಿಕಡ ತನಕ ಹೆಜ್ಜೆಗೊಂದು ಬಾಯ್ತೆರೆದು ಸಾವಿನ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಹದಗೆಟ್ಟ ರಸ್ತೆಯಲ್ಲಿ ವಾಹನಗಳ ಅಪಘಾತ ದಿನನಿತ್ಯ ತಪ್ಪದಾಗಿದೆ. ಮೈಸೂರಿಗೆ ತೆರಳಲು ಹೊಳೆನರಸೀಪುರ ಮಾರ್ಗದ ಬದಲು ಅರಕಲಗೂಡಿನಿಂದ ಕೇರಳಾಪುರ ಇಲ್ಲವೇ ಪಿರಿಯಾಪಟ್ಟಣ ಮಾರ್ಗವಾಗಿ ವಾಹನಗಳು ಓಡಾಡುವಂತಾಗಿದೆ.
ಕತ್ತರಿಘಟ್ಟ ಮೆಳಿಯಮ್ಮ ಆಧ್ಯಾತ್ಮ ಕೇಂದ್ರದಲ್ಲಿ ಪತ್ರಿಕಾ ದಿನಾಚರಣೆ
ದೇಶದ ಗಟ್ಟಿಯಾದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮದ ಪಾತ್ರ ಅತಿ ಮುಖ್ಯವಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದ್ದಾರೆ. ಸಮಾಜಕ್ಕೆ ಮಾಧ್ಯಮದ ಸೇವೆ ಅಗತ್ಯವಿದೆ. ತಾಲೂಕು ಹಂತದಲ್ಲಿ ಉತ್ತಮ ಪತ್ರಕರ್ತರ ಭವನ ಚನ್ನರಾಯಪಟ್ಟಣದಲ್ಲಿ ನಿರ್ಮಾಣವಾಗಿದ್ದು, ಭವನ ನಿರ್ಮಾಣ ಹಾಗೂ ಕ್ಷೇಮನಿಧಿಗೆ ಸಹಕಾರ ನೀಡಿದ್ದನ್ನು ಸ್ಮರಿಸಿ, ದ್ವೇಷ ಅಸೂಯೆ ದೂರ ಇಟ್ಟು ಶಾಂತಿಯ ಬದುಕು ನಮ್ಮದಾಗಬೇಕು. ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಉತ್ತಮ ಕಾರ್ಯ ಮಾಡುತ್ತಿದ್ದು, ಬಸ್‌ಗಳ ಸಂಖ್ಯೆ ಕಡಿಮೆಯಾಗಬಾರದು ಎಂದು ಮುಖ್ಯಮಂತ್ರಿಗಳಿಗೆ ಮಾಧ್ಯಮದ ಮೂಲಕ ತಿಳಿಸಿ, ಪತ್ರಕರ್ತರ ಕುಟುಂಬಕ್ಕೂ ಉಚಿತ ಬಸ್‌ಪಾಸ್ ನೀಡಲಿ ಎಂದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 501
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved