• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳ ಹಿಡಿದ ಆಲೂರು ಪಟ್ಟಣದ ಮುಖ್ಯ ರಸ್ತೆ
ಲೋಕೋಪಯೋಗಿ ಇಲಾಖೆಗೆ ಸೇರಿದ ಈ ಮುಖ್ಯ ರಸ್ತೆಯನ್ನು ಪಟ್ಟಣ ಪಂಚಾಯಿತಿಯವರು, ಕಳೆದ ಕೆಲವು ವರ್ಷಗಳ ಹಿಂದೆ ನಗರೋತ್ಥಾನ ಅನುದಾನದಡಿ ಡಾಂಬರೀಕರಣ ನಡೆಸಿ ಆ ಸಮಯದಲ್ಲಿದ್ದ, ಏಕಪದ ಕಾಂಕ್ರೀಟ್ ರಸ್ತೆಯನ್ನು ತೆರವುಗೊಳಿಸದೆ ಅದರ ಮೇಲೆ ಡಾಂಬರೀಕರಣ ನಡೆಸಿ, ಅವೈಜ್ಞಾನಿಕ ಮಾದರಿಯಲ್ಲಿ ರಸ್ತೆ ನಿರ್ಮಿಸಲಾಗಿತ್ತು. ಕಾಂಕ್ರೀಟ್ ರಸ್ತೆಯ ಮೇಲೆ ಡಾಂಬರು ನಿಲ್ಲುವುದಿಲ್ಲವೆಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು ಅದನ್ನು ಲೆಕ್ಕಿಸದೆ, ಪಟ್ಟಣ ಪಂಚಾಯಿತಿಯವರು ವೀರಶೈವ ಕಲ್ಯಾಣ ಮಂಟಪದಿಂದ ರೇಣುಮಿಲ್‌ವರೆಗೂ ಡಾಂಬರೀಕರಣ ನಡೆಸಿ , ಮಧ್ಯದಲ್ಲಿ ಕಾಂಕ್ರೀಟ್ ಡಿವೈಡರ್‌ ನಿರ್ಮಿಸಿ ದ್ವಿಪಥ ರಸ್ತೆಯನ್ನಾಗಿಸಿದ್ದರು.
ಅಂಚೆ ಕಚೇರಿ ಎದುರು ಪಿಂಚಣಿದಾರರ ಪ್ರತಿಭಟನೆ
ಪ್ರತಿದಿನ ಪಟ್ಟಣದ ಅಂಚೆ ಇಲಾಖೆಯಿಂದ ಒಂದರಿಂದ ಎರಡು ಲಕ್ಷ ರು.ಗಳನ್ನು ಮಾತ್ರ ಪಿಂಚಣಿದಾರರಿಗೆ ವಿತರಣೆ ಮಾಡಲು ಕಳುಹಿಸುತ್ತಾರೆ, ಆದರೆ ಸಿಂಗಾಪುರ ಅಂಚೆ ವ್ಯಾಪಿಗೆ ೧೬ಕ್ಕೂ ಹೆಚ್ಚು ಹಳ್ಳಿಗಳು ಒಳಪಡುತ್ತದೆ. ಐದಾರು ಕಿ.ಮೀ. ದೂರದ ಈಡಿಗನಹೊಸೂರು, ಮಾರನಾಯಕನಹಳ್ಳಿ ಗುಂಜೇವು, ಅಡಿಕೆಕೆರೆಹೊಸೂರು, ಹಾಗೂ ಇತರೆ ಗ್ರಾಮದ ವೃದ್ಧರು ಪಿಂಚಣಿ ಪಡೆಯಲು ನಡೆದುಕೊಂಡು ಬರುವಷ್ಟರಲ್ಲಿ ಹಣ ಬಟವಾಡೆ ಮಾಡಿ ಆಗಿರುತ್ತದೆ. ಇದರಿಂದ ಇಳಿ ವಯಸ್ಸಿನಲ್ಲಿ ನಡೆದು ನಡೆದು ಸಾಕಾಗಿ ಹೋಗಿದೆ ಎಂದು ವೃದ್ಧರು ಬೇಸರದಿಂದ ನುಡಿದರು.
ಮಳೆ ನೀರಿನಲ್ಲಿ ಕೊಚ್ಚಿ ಹೋದ ರಿಂಗ್ ರಸ್ತೆ
ನಿರಂತರವಾಗಿ ಮಳೆ ಸುರಿದು ತೇಜೂರು ಕೆರೆ, ಸೀಗೆ ಕೆರೆ, ಚಿಕ್ಕಕೊಂಡಗುಳ, ಸೇರಿದಂತೆ ಹಲವಾರು ಕೆರೆಗಳು ಭರ್ತಿಯಾಗಿ ಕೋಡಿ ಹರಿಯುತ್ತಿವೆ. ಈ ನೀರು ರಿಂಗ್‌ ರಸ್ತೆ ಮೂಲಕವೇ ತಮ್ಲಾಪುರ ಸಮೀಪ ಇರುವ ಹುಣಸಿನಕೆರೆಗೆ ಸೇರುತ್ತದೆ. ಹಾಗಾಗಿ ರಿಂಗ್‌ ರಸ್ತೆ ಮೇಲೆ ನೀರು ಪ್ರವಾಹದ ರೂಪದಲ್ಲಿ ನುಗ್ಗುತ್ತಿದೆ. ನೀರಿನ ರಭಸಕ್ಕೆ ರಸ್ತೆಯ ಡಾಂಬರ್‌ ಕೂಡ ಕೊಚ್ಚಿ ಹೋಗಿದೆ. ಇದನ್ನರಿತ ಗ್ರಾಮಸ್ಥರು ಪೊಲೀಸ್ ಠಾಣೆಗೆ ಕರೆ ಮಾಡಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ ಮಾಡುವಂತೆ ಮನವಿ ಮಾಡಿದ್ದಾರೆ.
ಮೂವರು ಬಾಂಗ್ಲಾ ವಲಸಿಗರ ಸೆರೆ
ನಕಲಿ ಆಧಾರ್‌ ಕಾರ್ಡ್‌ ಬಳಸಿಕೊಂಡು ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಅಕ್ಕು ಬಂಧಿತರು. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬುವವರ ಮನೆಯಲ್ಲಿ ವಾಸವಿದ್ದರು. ಪಶ್ಚಿಮಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದವರು ಎನ್ನುವ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಲಾಗಿದೆ.
ವಾಸವಿ ಕ್ಲಬ್‌ಗೆ ಹಲವು ಪ್ರಶಸ್ತಿಗಳ ಸರಮಾಲೆ
ಹೊಳೆನರಸೀಪುರ ವಾಸವಿ ಕ್ಲಬ್ ಅಧ್ಯಕ್ಷ ರೋಹಿತ್ ಅವರಿಗೆ ಅತ್ಯುತ್ತಮ ಅಧ್ಯಕ್ಷ, ಹೇಮಾ ನಾಗೇಂದ್ರ ಅವರಿಗೆ ಅತ್ಯುತ್ತಮ ಕಾರ್ಯದರ್ಶಿ ಹಾಗೂ ಎಚ್.ಎಸ್. ಮಂಜುನಾಥ್ ಗುಪ್ತ ಅವರಿಗೆ ಅತ್ಯುತ್ತಮ ಖಜಾಂಚಿ ಪ್ರಶಸ್ತಿ ಜತೆಗೆ ಅತ್ಯುತ್ತಮ ಕ್ಲಬ್, ಅತ್ಯುತ್ತಮ ಬ್ಯಾನರ್ ಪ್ರದರ್ಶನ ಪ್ರಶಸ್ತಿಗಳು ವಾಸವಿ ಕ್ಲಬ್ ವಿಭಾಗೀಯ ಸಮ್ಮೇಳನದಲ್ಲಿ ಲಭಿಸಿದೆ. ವಾಸವಿ ಕ್ಲಬ್ ನಿರ್ದೇಶಕರಾದ ಅಂಬಟಿ ಪ್ರಸಾದ್, ಪ್ರಶಸ್ತಿ ನೀಡಿ ಗೌರವಿಸಿದರು.
ದೇಶವನ್ನು ಪ್ರೀತಿಸುವ ಪ್ರತಿಯೊಬ್ಬರೂ ಹಿಂದೂಗಳೇ
ಹಿಂದುತ್ವ ಎಂಬುದು ಹೆಮ್ಮೆಯ ವಿಷಯ. ಈ ದೇಶವನ್ನು ಪ್ರೀತಿಸುವ ಎಲ್ಲರೂ ಹಿಂದೂಗಳು ಎಂದು ಕರ್ನಾಟಕ ದಕ್ಷಿಣ ಪ್ರಾಂತ ಬೌದ್ಧಿಕ ಪ್ರಮುಖ ಕೃಷ್ಣಪ್ರಸಾದ್ ಬದಿ ತಿಳಿಸಿದರು. ನಮ್ಮ ಬದುಕು ಪ್ರಕೃತಿಗೆ ಪೂರಕವಾಗಿರಬೇಕು. ಅನ್ಯಭಾಷಿಗರನ್ನು ದ್ವೇಷ ಮಾಡುವುದು ನಮಗೆ ಭಾಷಾಭಿಮಾನವಾಗಬಾರದು. ನಮ್ಮ ಭಾಷೆಯ ಸಂಪತ್ತನ್ನು ಹೆಚ್ಚಿಸಿಕೊಳ್ಳಬೇಕು. ಸಮಾಜವನ್ನು ಒಡೆಯುವ ಕುತಂತ್ರವನ್ನು ನಿಲ್ಲಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಾಗಬೇಕು. ಶಿಷ್ಟಾಚಾರ ಪಾಲನೆಗೆ ಆದ್ಯತೆ ನೀಡಬೇಕು ಎಂದರು.
ಆಸ್ಪತ್ರೆ ಮುಂದಿನ ರಸ್ತೆ ಬದಿ ವಾಹನಗಳ ನಿಲುಗಡೆ ತಪ್ಪಿಸಿ
ಡಾ. ಅಂಬೇಡ್ಕರ್‌ ವೃತ್ತದ ಸಮೀಪ ಹೆದ್ದಾರಿಯ ಅರಕಲಗೂಡು ರಸ್ತೆಯ ಎರಡು ಬದಿಯಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇದ್ದು, ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯಿಂದ ವೈದ್ಯರು, ಸಿಬ್ಬಂದಿ, ರೋಗಿಗಳು ಹಾಗೂ ತುರ್ತು ಚಿಕಿತ್ಸೆ ವಾಹನಗಳ ಓಡಾಟಕ್ಕೆ ಬಹಳ ತೊಂದರೆಯಾಗುತ್ತಿದೆ. ಆದ್ದರಿಂದ ಅಗತ್ಯ ಪೊಲೀಸ್ ಬಂದೋಬಸ್ತಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹಾಸನಾಂಬೆ ದರ್ಶನಕ್ಕೆ ದಿನಗಣನೆ ಆರಂಭ
ಅಕ್ಟೋಬರ್ ೨೪ರಂದು ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯಲಾಗುವುದು. ನವಂಬರ್ ೩ರವರೆಗೂ ಜಾತ್ರಾ ಮಹೋತ್ಸವ ಜರುಗಲಿದೆ. ನ.೩ರ ಮಧ್ಯಾಹ್ನ ೧೨ ಗಂಟೆಗೆ ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಗುವುದು. ಒಟ್ಟು ೧೧ ದಿನದಲ್ಲಿ ೯ ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಕಡಿಮೆ ಸಮಯದಲ್ಲಿ ಹೆಚ್ಚು ಜನ ಬರುವ ನಿರೀಕ್ಷೆಯಿದ್ದು, ಸುಮಾರು ೨೦ ಲಕ್ಷ ಭಕ್ತರ ಆಗಮನದ ನಿರೀಕ್ಷೆ ಹೊಂದಲಾಗಿದೆ ಎಂದು ಸಚಿವರು ಹೇಳಿದರು.
ಶಾಸಕ ಶಿವಲಿಂಗೇಗೌಡರ ವಿರುದ್ಧ ಸಂತೋಷ್‌ ನೇತೃತ್ವದಲ್ಲಿ ಪ್ರತಿಭಟನೆ
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಹಣದ ಹೊಳೆ ಹರಿಸಲಾಗಿದೆ. ಅಷ್ಟೊಂದು ದುಡ್ಡು ಎಲ್ಲಿಂದ ಬಂತು ಎನ್ನುವ ಕುರಿತು ತನಿಖೆ ಮಾಡಬೇಕು. ರೈತರ ಜಮೀನು ಕಬಳಿಸಲು ಹೊರಟಿರುವ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನು ವಜಾಗೊಳಿಸಿ, ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ. ಮೂರು ಗ್ರಾಮಗಳ ರೈತರ ಭೂಮಿ ವಶಕ್ಕೆ ಪಡೆಯುವುದಿಲ್ಲ ಎಂದು ಡಿಸಿ ಘೋಷಣೆ ಮಾಡಬೇಕು. ಅಲ್ಲಿಯವರೆಗೆ ಹೋರಾಟದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಜೆಡಿಎಸ್ ಮುಖಂಡ ಎನ್.ಆರ್‌.ಸಂತೋಷ್ ಆಕ್ರೋಶ ಹೊರಹಾಕಿದರು.
ಕನ್ನಡದಲ್ಲಿ ನಾಮಫಲಕ ಹಾಕದ ಅಂಗಡಿಗಳಿಗೆ ಬೀಗ
ನವೆಂಬರ್ ೧ರಿಂದ ಎಲ್ಲಾ ವರ್ತಕರು ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು.ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಪುರಸಭೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ತಿಳಿಸಿದರು. ಇದರ ಜೊತೆಯಲ್ಲಿ ಪುರಸಭೆಯವರು ಸಹ ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಮನವಿ ಮಾಡಿದರು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved