• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಗಚಿ ಜಲಾಶಯ ಅಭಿವೃದ್ಧಿಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ
ಬೇಲೂರು ತಾಲೂಕಿಗೆ ಉಪಯೋಗವಾಲಿ ಎಂದು ಯಗಚಿ ಜಲಾಶಯ ನಿರ್ಮಿಸಿದ್ದರೂ ಉಪಯೋಗ ಮಾತ್ರ ಬೇರೆ ತಾಲೂಕುಗಳಿಗೆ ಆಗುತ್ತಿದೆ. ಇಲ್ಲಿನ ಇಚ್ಛಾಶಕ್ತಿ ಇಲ್ಲದ ರಾಜಕಾರಣಿಗಳು ಪ್ರವಾಸಿತಾಣ ಅಭಿವೃದ್ಧಿಗೊಳಿಸಲು ಮೀನಾಮೇಷ ಎಣಿಸುತ್ತಿದ್ದಾರೆ. ಕಳೆದ ಬಾರಿ ಶಾಸಕರಾಗಿದ್ದ ಕೆ.ಎಸ್.ಲಿಂಗೇಶ್ 40 ಕೋಟಿ ವೆಚ್ಚದಲ್ಲಿ ಯಗಚಿ ಜಲಾಶಯದ ಬಳಿ ಕೆಆರ್‌ಎಸ್ ಮಾದರಿಯಲ್ಲಿ ಹೈಟೆಕ್ ಮಾದರಿ ಉದ್ಯಾನವನ, ಕಾರಂಜಿ ನಿರ್ಮಿಸುವ ಭರವಸೆ ನೀಡಿ ಜನರ ಮೂಗಿಗೆ ತುಪ್ಪ ಸವರಿ ನಾಪತ್ತೆಯಾದರು. ಯಗಚಿ ಜಲಾಶಯದ ನೋಡಲು ಬರುವ ಪ್ರವಾಸಿಗರಿಗೆ ಶೌಚಾಲಯ ಇಲ್ಲದೇ ಪರದಾಡುತ್ತಾರೆ ಎಂದರು.
ನಕಲಿ ಆಧಾರ್ ಕಾರ್ಡ್ ನೀಡಿಕೆ ದೂರು
ನಕಲಿ ಆಧಾರ್‌ ಕಾರ್ಡ್‌ ತಯಾರಿಸಿ ಕೊಡುತ್ತಿದ್ದಾರೆಂಬ ದೂರಿನ ಮೇಲೆ ತಾಲೂಕಿನ ಬಿಕ್ಕೋಡು ಸೈಬರ್‌ ಕೇಂದ್ರ ಹಾಗೂ ಗ್ರಾಮ ಒನ್ ಸೆಂಟರ್‌ ಮೇಲೆ ತಹಸೀಲ್ದಾರ್‌ ದಾಳಿ ನಡೆಸಿ ಪರಿಶೀಲಿಸಿದರು. ಹಾಸನ ಜಿಲ್ಲೆಯಲ್ಲಿ ನಖಲಿ ಆಧಾರ್‌ ಕಾರ್ಡುಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲಾ ತಹಸೀಲ್ದಾರ್‌ ಅವರಿಗೆ ಪರಿಶೀಲನೆಗೆ ಸ್ಪಷ್ಟ ಸೂಚನೆ ನೀಡಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಎಂ.ಮಮತಾ ಅವರು, ಬಿಕ್ಕೋಡು ಉಪ ತಹಸೀಲ್ದಾರ್‌ ಪ್ರದೀಪ್, ಅರೇಹಳ್ಳಿ ಪಿಎಸ್‌ಐ ಶೋಭ ಅವರೊಂದಿಗೆ ದಾಳಿ ನಡೆಸಿ ಪರಿಶೀಲಿಸಿದರು.
ಕೋಳಿ ಅಂಗಡಿಗಳಿಗೆಲ್ಲಾ ಒಂದೇಕಡೆ ವ್ಯವಸ್ಥೆ
ಬೇಲೂರು ಪಟ್ಟಣದ ಹೊಳೆಬೀದಿಯಲ್ಲಿ ಕೋಳಿ ಅಂಗಡಿಗಳ ಸಂಖ್ಯೆ ಮಿತಿ ಮೀರುತ್ತಿದ್ದು ವಾಸ ಮಾಡಲು ತೊಂದರೆಯಾಗುತ್ತಿದೆ, ಕೋಳಿ ಅಂಗಡಿಗಳ ತೆರವುಗೊಳಿಸಬೇಕೆಂದು ನಿವಾಸಿಗಳು ನೀಡಿದ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಈಗ ಇರುವ ಅಂಗಡಿಗಳ ಮಾಲೀಕರಿಗೆ ಶುಚಿತ್ವ ಕಾಪಾಡುವಂತೆ ಸೂಚಿಸಲಾಗುವುದು, ಇನ್ನುಮುಂದೆ ಯಾವುದೇ ಅಂಗಡಿಗೆ ಪರವಾನಗಿ ನೀಡುವುದಿಲ್ಲ, ಯಗಚಿ ಸೇತುವೆ ಅಕ್ಕಪಕ್ಕದಲ್ಲಿ ಪುರಸಭೆಯ ಸ್ಥಳ ಇರುವ ಬಗ್ಗೆ ಮಾಹಿತಿ ಇದ್ದು, ಅಲ್ಲಿ ಮಳಿಗೆಗಳ ನಿರ್ಮಿಸಬಹುದೆ ಅಥವಾ ಬಾಡಿಗೆ ಪಡೆದು ನೀಡಬಹುದೆ ಎಂಬುದನ್ನು ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುರಸಭೆ ಅಧ್ಯಕ್ಷರು ತಿಳಿಸಿದರು.
ಸಕಲೇಶಪುರ : ಕಾಫಿ ತೋಟಗಳಲ್ಲಿ ಅನುಮಾನಕ್ಕೆ ಆಸ್ಪದ ನೀಡುವ ಕಾರ್ಮಿಕರ ಸಂಖ್ಯೆ ಹೆಚ್ಚಳ

ತಾಲೂಕಿನ ಕಾಫಿ ತೋಟಗಳಲ್ಲಿ ಅನುಮಾನಕ್ಕೆ ಆಸ್ಪದ ನೀಡುವ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ತಾಲೂಕು ಆಡಳಿತ ಸಮಗ್ರ ಪರಿಶೀಲನೆ ನಡೆಸಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಲವ್ ಜಿಹಾದ್‌ ಬಗ್ಗೆ ಹಿಂದೂ ಹೆಣ್ಣು ಮಕ್ಕಳು ಜಾಗ್ರತೆಯಿಂದಿರಿ
ಲವ್ ಜಿಹಾದ್ ನೆಪದಲ್ಲಿ ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಟ್ಟುಕೊಂಡು ಮತಾಂತರ ಮಾಡುವ ಕೆಲಸಕ್ಕೆ ಒಂದು ಸಮುದಾಯ ಮುಂದಾಗಿದ್ದು, ನಮ್ಮ ಹೆಣ್ಣುಮಕ್ಕಳು ಜಾಗೃತಿ ವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಾಂತ್ಯ ಕಾರ್ಯಕಾರಣಿ ಕಲ್ಲಡ್ಕ ಪ್ರಭಾಕರ್ ಭಟ್ ತಿಳಿಸಿದರು. ನಮ್ಮ ರಾಜ್ಯದ ಬಹುದೊಡ್ಡ ಪಿಡುಗೆಂದರೆ, ಮತಾಂತರದ ಮೂಲಕ ಬಡವರ್ಗ ಹಾಗೂ ಕೂಲಿಕಾರ್ಮಿಕರನ್ನು ಸೆಳೆಯುತ್ತಿರುವುದು ಎಂದರು.
ರಾಯರಕೊಪ್ಪಲಿನಿಂದ ಬೆಂಗಳೂರಿಗೆ ಬಸ್‌ ಸೌಲಭ್ಯಕ್ಕೆ ಶಾಸಕರಿಂದ ಚಾಲನೆ
ಕೆಂಚಮ್ಮನ ಹೊಸಕೋಟೆ ಹೋಬಳಿ ರಾಯರಕೊಪ್ಪಲು ಗ್ರಾಮದಿಂದ ಹಾಸನ ಮಾರ್ಗವಾಗಿ ಬೆಂಗಳೂರಿನ ವರೆಗೆ ನೂತನ ಬಸ್‌ ಸಂಚಾರಕ್ಕೆ ಚಾಲನೆ ದೊರೆತಿದೆ. ನಿತ್ಯ ಬೆಳಿಗ್ಗೆ 5 ಗಂಟೆಯಿಂದ ರಾಯರ ಕೊಪ್ಪಲು ಗ್ರಾಮದಿಂದ ಬೆಂಗಳೂರಿಗೆ ಬಸ್ ಸಂಚರಿಸಿ ಪುನಃ ರಾತ್ರಿ 9 ಗಂಟೆಗೆ ರಾಯರಕೊಪ್ಪಲು ಗ್ರಾಮಕ್ಕೆ ಬಂದು ನಿಲ್ಲುವುದು ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕರು ತಿಳಿಸಿದ್ದಾರೆ.
ನಗರದಲ್ಲಿ ಆರ್‌ಎಸ್‌ಎಸ್‌ ಬೃಹತ್‌ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಾ ಸಂಘ (ಆರ್‌.ಎಸ್.ಎಸ್.) ನಗರ ಘಟಕದ ವತಿಯಿಂದ ವಿಜಯದಶಮಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಥ ಸಂಚಲನ ನಡೆಸಿ ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೈನ್ಯ ಪ್ರಾರಂಭವಾಗಿದ್ದೆ ೧೯೨೫ರಲ್ಲಿ. ಆರ್‌.ಎಸ್.ಎಸ್. ಇರುವುದು ಚಾರಿತ್ರ್ಯವಂತ ಸ್ವಯಂ ಸೇವಕರನ್ನು ಮಾತ್ರ ತಯಾರು ಮಾಡುತ್ತದೆ. ನಮ್ಮ ಸ್ವಯಂ ಸೇವಕರು ಎಲ್ಲಾ ಕ್ಷೇತ್ರಗಳಲ್ಲೂ ಕಾಲಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಂಘ ಪರಿವಾರದ ವಕ್ತಾರರಾದ ಅರುಣ್ ಕುಮಾರ್‌ ತಿಳಿಸಿದರು.
ಚನ್ನರಾಯಪಟ್ಟಣದಲ್ಲಿ 920 ಗ್ರಾಂ ಗಾಂಜಾ ವಶ
ಮನೆಯೊಂದರಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಸುಮಾರು ೯೨೦ ಗ್ರಾಂ ಗಾಂಜಾವನ್ನು ಅಬಕಾರಿ ಇಲಾಖೆಯವರು ವಶಪಡಿಸಿಕೊಂಡಿದ್ದಾರೆ. ಮಂಜುನಾಥ ನಗರದ ಸಾಯಿಬಾಬ ದೇವಸ್ಥಾನದ ಹತ್ತಿರ ವಾಸದ ಮನೆಯಲ್ಲಿ ಬಾಡಿಗೆ ಇದ್ದುಕೊಂಡು, ಒಣ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಇಟ್ಟಿದ್ದು ಖಚಿತ ಮಾಹಿತಿ ಮೇರೆಗೆ ಮನೆಯ ಮೇಲೆ ದಾಳಿ ಮಾಡಿದ ಅಬಕಾರಿ ಇಲಾಖೆ ಸಿಬ್ಬಂದಿ ಆರೋಪಿತನನ್ನು ದಸ್ತಗಿರಿ ಮಾಡಿ ದೊರೆತ ಮಾಲನ್ನು ಇಲಾಖೆ ವಶಕ್ಕೆ ಪಡೆದುಕೊಂಡು ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ಸಕಲೇಶಪುರ : ತಾಲೂಕಿನ ಉಚ್ಚಂಗಿ ಗ್ರಾಮದ ಕಾಫಿ ಎಸ್ಟೇಟ್‌ನಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ

ತಾಲೂಕಿನ ಉಚ್ಚಂಗಿ ಗ್ರಾಮದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಯಸಳೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದಿದ್ದಾರೆ.

ಶಾಸಕ ಶಿವಲಿಂಗೇಗೌಡ ವಿರುದ್ಧ ಕ್ರಮಕ್ಕೆ ಆಗ್ರಹ
ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಕೋಟಿ ಕೋಟಿ ಹಣ ಹಂಚಿಕೆ ಕುರಿತು ಮಾತನಾಡಿರುವ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಮುಖಂಡರು ಶುಕ್ರವಾರ ಸಂಜೆ ನಗರಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಏಳೆಂಟು ಕೋಟಿ ರು.ಹಂಚುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌, ರಾಜ್ಯಸಭಾ ಸದಸ್ಯ ಚಂದ್ರಶೇಖರ್‌ ಸೂಚನೆ ನೀಡಿದ್ದಾರೆ ಎಂದು ಆರೋಪಿಸಿದರು.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved