• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಸ್ತ್ರಚಿಕಿತ್ಸೆಗಾಗಿ ಎಡಗಾಲಿನ ಬದಲು ಬಲಗಾಲನ್ನು ಕೊಯ್ದ ಹಿಮ್ಸ್‌ ವೈದ್ಯ
ಎಡಗಾಲಿನ ಶಸ್ತ್ರಚಿಕಿತ್ಸೆ ಮಾಡುವ ಬದಲು ಬಲಗಾಲಿನ ಶಸ್ತ್ರಚಿಕಿತ್ಸೆ ಮಾಡಿದ ಎಡವಟ್ಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮ್ಸ್ ಆಡಳಿತ ಪರಿಷತ್ ಸದಸ್ಯ ರವೀಶ್ ಬಸವಾಪುರ ಅವರು ಆಸ್ಪತ್ರೆಗೆ ಭೇಟಿ ನೀಡಿ, ಎಡಗಾಲಿನ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಜ್ಯೋತಿ ಎಂಬ ೨೮ ವರ್ಷದ ಮಹಿಳೆಯನ್ನು ಭೇಟಿ ಮಾಡಿ ರೋಗಿಗೆ ಧೈರ್ಯ ತುಂಬಿ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ಇಂತಹ ನಿರ್ಲಕ್ಷ್ಯದಿಂದ ಹಿಮ್ಸ್‌ನ ಹೆಸರಿಗೂ ಧಕ್ಕೆಯಾಗಿದೆ. ಈ ತಪ್ಪಿಗೆ ಕಾರಣರಾದ ವೈದ್ಯ ಸಂತೋಷ್‌ರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದರು.
ಮಂದಗತಿಯಲ್ಲಿ ಸಾಗಿದ ಅರಸೀಕೆರೆ ರೈಲ್ವೆ ನಿಲ್ದಾಣ ಮೇಲ್ದರ್ಜೆ ಕಾಮಗಾರಿ
ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಆರಂಭವಾದ ಮೇಲ್ದರ್ಜೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಪ್ರಯಾಣಿಕರು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನೂರಾರು ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಯು ತ್ವರಿತಗತಿಯಲ್ಲಿ ಮುಗಿದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಆದರೆ ಕಾಮಗಾರಿ ಪೂರ್ಣಗೊಳ್ಳುವ ತನಕ ಕನಿಷ್ಠ ನಿಲ್ದಾಣದ ದಾರಿಯನ್ನು ಸರಿಪಡಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಬೇಕೆಂದು ಪ್ರಯಾಣಿಕರು ಆಗ್ರಹಿಸುತ್ತಿದ್ದಾರೆ. ಸ್ಥಳೀಯರು ನಿಲ್ದಾಣ ತಲುಪಲು ಈಜುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಪ್ಪ ವಿರುದ್ಧ ಬೋವಿ ಸಮಾಜದ ಆಕ್ರೋಶ
ಬೋವಿ ಸಮುದಾಯ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪುರ್ಲೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಬೋವಿ ಸಮಾಜದ ಮುಖಂಡ ನಾಗರಾಜ್ ಮಾತನಾಡಿ, "ಅಜ್ಜಪ್ಪ ಅವರು ಅಂಗಡಿಯಲ್ಲಿ ವ್ಯವಹಾರ ನಡೆಸಿದ ಬಳಿಕ ಮಾಲೀಕರಿಗೆ ಕೊಡಬೇಕಾದ ಹಣವನ್ನು ತಿರಸ್ಕರಿಸಿ, ‘ನಾನು ಈಗಾಗಲೇ ಹಣ ಕೊಟ್ಟಿದ್ದೇನೆ, ಉಳಿದ ಬಾಕಿಯಲ್ಲಿ ಅರ್ಧವನ್ನು ಮಾತ್ರ ಕೊಡುತ್ತೇನೆ ಎಂದು ಹೇಳಿದ್ದಾರೆ ಆದರೆ ಅದನ್ನು ತಿರಸ್ಕರಿಸಿ ಅಂಗಡಿ ಮಾಲೀಕರು ಹಣಕ್ಕಾಗಿ ಒತ್ತಾಯಿಸಿದಾಗ, ಅಜ್ಜಪ್ಪ ಅವರು ನಿಮ್ಮ ಮೇಲೆ ವಡ್ಡನನ್ನು ಕರೆಸಿ ಅಟ್ರಾಸಿಟಿ ಕೇಸ್ ಹಾಕಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ. ಇಂತಹ ನಡವಳಿಕೆಯಿಂದ ಸಮಾಜದ ಹೆಸರಿಗೆ ಧಕ್ಕೆಯಾಗಿದ್ದು, ಈ ರೀತಿಯ ವ್ಯಕ್ತಿಯಿಂದ ನಮ್ಮ ಬೋವಿ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿಲುಬೆ ಬೆಟ್ಟದ ಗಣಿಗಾರಿಕೆ ಖಂಡಿಸಿ ಪ್ರತಿಭಟನೆ
ಹಸು, ಕುರಿ ಜೊತೆ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್‌. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಇದೇ ವೇಳೆ ಜಯಬಸವಾನಂದ ಸ್ವಾಮೀಜಿ ಮಾಧ್ಯಮದೊಂದಿಗೆ ಮಾತನಾಡಿ, ಗಣಿಗಾರಿಕೆ ಸ್ಫೋಟದಿಂದ ಸುತ್ತಮುತ್ತಲಿನ ಮನೆಗಳಲ್ಲಿ ಬಿರುಕು ಉಂಟಾಗಿದ್ದು, ಭಾರಿ ವಾಹನ ಸಂಚಾರದಿಂದ ರಸ್ತೆಗಳು ಹಾಳಾಗಿವೆ. ಕಾಡು ಪ್ರಾಣಿಗಳು ಗ್ರಾಮಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಶಾಲಾ ಬಸ್ಸುಗಳು ಹಾಳಾದ ರಸ್ತೆಯಿಂದ ಸಂಚಾರ ನಿರಾಕರಿಸಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆ ಆಗಿದೆ. ಮಳೆಗಾಲದಲ್ಲಿ ಕಲುಷಿತ ನೀರು ಮತ್ತು ಧೂಳು ಹೊಲಗಳಿಗೆ ಹರಿದು ಕಾಫಿ, ಮೆಣಸು, ಭತ್ತದ ಬೆಳೆ ಹಾನಿಯಾಗುತ್ತಿದೆ. ಹೊಸಮಠ, ಕಲ್ಲುಕೊಪ್ಪಲು, ಮಟದಕೊಪ್ಪಲು, ಹಾರೋಹಳ್ಳಿ, ನವಿಲಹಳ್ಳಿ, ಬಡಗಿಕೊಪ್ಪಲು, ದಿಣ್ಣೆಕೊಪ್ಪಲು ಮುಂತಾದ ಹಳ್ಳಿಗಳ ಜನತೆ "ಗಣಿಗಾರಿಕೆ ನಿಲ್ಲಿಸಬೇಕು " ಎಂದು ಒಗ್ಗಟ್ಟಿನಿಂದ ಧ್ವನಿ ಎತ್ತಿದ್ದಾರೆ ಎಂದರು.
ದಲಿತ ಸಮುದಾಯದೊಂದಿಗೆ ಕ್ರೈಸ್ತ ಧರ್ಮದ ತಳುಕು
ಒಳಮೀಸಲಾತಿಯ ಹಂಚಿಕೆಯನ್ನು ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರ ಹೊರಟಿದ್ದು, ಪರಿಶಿಷ್ಟ ಜಾತಿಗಳೊಂದಿಗೆ ಕ್ರೈಸ್ತ ಎನ್ನುವ ಪದವನ್ನು ತಳುಕು ಹಾಕುತ್ತಿರುವುದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು. ಇಲ್ಲವಾದರೆ ಎಲ್ಲ ಜಿಲ್ಲೆಗಳಲ್ಲಿ ದಲಿತರು ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಕೊಡುತ್ತಿದ್ದೇವೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಕ್ರಿಶ್ಚಿಯನ್ ಜಾತಿಗಳನ್ನು ಸೇರಿಸುವುದು ಸಂವಿಧಾನ ವಿರೋಧಿ. ಸಂವಿಧಾನದ ೩೪೧ನೇ ವಿಧಿಯ ವಿರುದ್ಧವಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ಎರಡು ತಿಂಗಳ ಹಿಂದಷ್ಟೇ ನಾಗಮೋಹನ್ ದಾಸ್ ಆಯೋಗವು ೧೫೦ ಕೋಟಿ ರುಪಾಯಿ ವೆಚ್ಚದಲ್ಲಿ ಸಮಗ್ರ ಸಮೀಕ್ಷೆ ನಡೆಸಿತ್ತು. ಇದೀಗ ಮತ್ತೆ ಸಮೀಕ್ಷೆ ನಡೆಸುವುದು ಅನಗತ್ಯ ಎಂದರು.
ಎಸ್‌ಆರ್‌ಎಸ್‌ ಶಾಲೆಯಲ್ಲಿ ದಸರಾ ಬೊಂಬೆಗಳ ಉತ್ಸವ
ಇಂದಿನ ಮಕ್ಕಳಲ್ಲಿ ನಮ್ಮ ದೇಶೀಯ ಪರಂಪರೆ ಹಾಗೂ ದಸರಾ ಬೊಂಬೆಗಳ ಹಿನ್ನೆಲೆ ಮತ್ತು ಮಹತ್ವವನ್ನು ತಿಳಿಸಿಕೊಡುವ ಉದ್ದೇಶದಿಂದ ಸೋಮವಾರ ನಗರದ ಎಸ್.ಆರ್.ಎಸ್. ಪ್ರಜ್ಞಾ ವಿದ್ಯಾ ಶಾಲೆಯಲ್ಲಿ ’ದಸರಾ ಬೊಂಬೆ ಸಂಭ್ರಮ - ೨೦೨೫’ ಅನ್ನು ಸಾಂಪ್ರದಾಯಿಕವಾಗಿ ಆಯೋಜಿಸಲಾಗಿತ್ತು. ಮಕ್ಕಳಿಗೆ ದಸರಾ ಬೊಂಬೆ ಸಂಭ್ರಮದ ಮಹತ್ವ, ಹಾಗೂ ಹತ್ತು ದಿನಗಳ ಕಾಲ ಅಂದಿನಿಂದಲು ದಸರಾ ಬೊಂಬೆಗಳ ಪ್ರದರ್ಶನ ನಡೆಸುತ್ತಿದ್ದ ಹಿಂದಿರುವ ಉದ್ದೇಶವೇನೆಂದು ಸವಿಸ್ತಾರವಾಗಿ ವಿವರಿಸಲಾಯಿತು. ಆ ಮೂಲಕ ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ದಸರಾ ಹಬ್ಬದ ಇತಿಹಾಸವನ್ನು ಪರಿಚಯಿಸುವುದರೊಂದಿಗೆ ಸೆ.22 ರಿಂದ ಅಕ್ಟೋಬರ್‌ 1ರವರೆಗೆ ಹತ್ತು ದಿನಗಳ ಬೊಂಬೆಗಳನ್ನು ಇಡಲಾಗುವುದು.
ರಾಮನಾಥಪುರದ ಉತ್ತರಾಧಿ ಮಠದಲ್ಲಿ ಹುಂಡಿ ಕಳವು
ಉತ್ತರಾಧಿ ಮಠದ ಮುಂದಿನ ಬಾಗಿಲ ಬೀಗ ಮತ್ತು ಡೋರ್‌ ಲಾಕ್ ತೆಗೆಯಲು ಬಾಗಿಲು ಮೀಟಿ ಮುರಿದು ಒಳ ನುಗ್ಗಿರುವ ಕಳ್ಳರು ಹುಂಡಿಯನ್ನು ಹೊತ್ತೊಯ್ದಿದ್ದಾರೆ. ದೇವಾಲಯದ ವ್ಯವಸ್ಥಾಪಕರು ಸೋಮವಾರ ಬೆಳಿಗ್ಗೆ ಪೂಜೆ ಮಾಡಲು ಬಂದ ಸಮಯದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರು ಹುಂಡಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯವು ಪಕ್ಕದ ಮನೆಯವರಾದ ವೇದಬ್ರಹ್ಮ ಪ್ರದೀಪ್ ಅವರ ಸಿ.ಸಿ.ಕ್ಯಾಮರದಲ್ಲಿ ಸೆರೆಯಾಗಿದ್ದು, ಒಬ್ನ ಕಳ್ಳ ಮಾತ್ರ ಕಳ್ಳತನದಲ್ಲಿ ಪಾಲೊಂಡಿರುವುದು ಹಾಗೂ ಒಬ್ಬ ಹುಂಡಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊಳೆನರಸೀಪುರದಲ್ಲಿ ಜನಪದ ಗೀತೆ ಗಾಯನ ಸ್ಪರ್ಧೆ
ಶ್ರೀ ಮಹಾಗಣಪತಿ ಪೆಂಡಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ಜಾನಪದ ಗೀತೆಗಳ ಗಾಯನ ಸ್ಪರ್ಧೆಯು ಪ್ರೇಕ್ಷಕರ ಮನ ಸೂರೆಗೊಂಡಿತು. ಸ್ಪರ್ಧೆಯಲ್ಲಿ ಪಟ್ಟಣದ ಅಂಚೆ ಕಚೇರಿಯ ನೌಕರ ಎಚ್.ಆರ್.ಗಣೇಶ್ ಪ್ರಥಮ, ಟಾಪರ್ ಕಾಲೇಜಿನ ವಿದ್ಯಾರ್ಥಿ ತರುಣ್ ಕುಮಾರ್(ಮೆಣಗನಹಳ್ಳಿ) ದ್ವಿತೀಯ, ಹರದನಹಳ್ಳಿ ಮೊರಾರ್ಜಿ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬೃಂದ ತೃತೀಯ ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪಡೆದರು. ಕಡುವಿನ ಹೊಸಹಳ್ಳಿ ಸರ್ಕಾರಿ ಶಾಲೆಯ ೪ನೇ ತರಗತಿ ವಿದ್ಯಾರ್ಥಿನಿ ನಿಹಾರಿಕಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರಳಾಗಿ ಸಮಾಧಾನಕರ ಬಹುಮಾನ ನಗದು ಹಾಗೂ ಪ್ರಶಸ್ತಿ ಪತ್ರ ಪಡೆದರು.
ಯೋಗಾಭ್ಯಾಸದಿಂದ ರೋಗನಿರೋಧಕ ಶಕ್ತಿ ಹೆಚ್ಚಳ
ವೇಗದ ಜೀವನಶೈಲಿಯಿಂದ ಉಂಟಾಗುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು, ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಮತ್ತು ರೋಗಗಳಿಂದ ದೂರವಿರಲು ಯೋಗ ಹಾಗೂ ಧ್ಯಾನಗಳು ಅನಿವಾರ್ಯವಾಗಿವೆ. ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಆಧುನಿಕ ಜೀವನಕ್ಕೆ ಶಾಂತಿಯನ್ನು ತರುವ ಭಾರತದ ಅಮೂಲ್ಯ ಕೊಡುಗೆಗಳಾಗಿವೆ. ಪತಂಜಲಿ ಋಷಿಗಳು ನೀಡಿದ ಈ ಕೊಡುಗೆಯನ್ನು ಸರಿಯಾಗಿ ಬಳಸಿಕೊಂಡು, ದೇಹ ಮತ್ತು ವಯಸ್ಸಿಗೆ ತಕ್ಕಂತೆ ಯೋಗಾಭ್ಯಾಸವನ್ನು ಮಾಡಬೇಕು ಎಂದು ಸಲಹೆ ನೀಡಿದರು. ಸದೃಢ ದೇಹ ಮತ್ತು ಉತ್ತಮ ಯೋಗಗಳ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.
ಗ್ರಾಮೀಣ ಪ್ರದೇಶದ ವಂಚಿತ ಸಮುದಾಯಕ್ಕೆ ಶ್ರೀಗಳಿಂದ ಶಿಕ್ಷಣ ಭಾಗ್ಯ
ಸುತ್ತೂರು ಕ್ಷೇತ್ರದ ಲಿಂಗೈಕ್ಯ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹು ಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು, ಬೃಹತ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ರಾಜಗುರುತಿಲಕ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಕಾರ್ಯ ಮಹತ್ವದ್ದಾಗಿದೆ ಎಂದು ಶ್ರೀ ಕಲ್ಯಾಣಸ್ವಾಮಿಗಳು ತಿಳಿಸಿದರು. ಮೈಸೂರಿನ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಸಮಾಜಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರಿಗೆ ೧೯೭೦ ರಲ್ಲಿ ’ರಾಜಗುರುತಿಲಕ’ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು. ಜತೆಗೆ ಮರಣೋತ್ತರವಾಗಿ, ಮೈಸೂರು ವಿಶ್ವವಿದ್ಯಾನಿಲಯವು ೧೯೮೯ ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು ಎಂದು ವಿವರಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved