• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಲ್ಲಿದ್ದ ಗುಣಗಳ ಪೈಕಿ ಒಂದನ್ನಾದರೂ ನಾವು ಅಳವಡಿಸಿಕೊಳ್ಳಬೇಕು
ರಾಮ ಮಂತ್ರವ ಜಪಿಸೋ ಹೇ ಮನುಜ ಆ ಮಂತ್ರ ಈ ಮಂತ್ರ ನೆಚ್ಚಿನೀ ಕೆಡಬೇಡ ಸೋಮಶೇಖರ ತನ್ನ ಸತಿಗೆ ಹೇಳಿದ ಮಂತ್ರ ಎಂದು ಶ್ರೀ ಪುರಂದರದಾಸರು ತಮ್ಮ ಕೀರ್ತನೆಯಲ್ಲಿ ರಾಮನಾಮನ ಮಹತ್ವವನ್ನು ತಿಳಿಸಿದ್ದಾರೆ ಎಂದು ಹರಿಕಥಾ ವಿದ್ವಾನ್ ಶವಿಠಲದಾಸರು ತಿಳಿಸಿದರು. ಅವರು ಪಟ್ಟಣದ ಗಣಪತಿ ಪೆಂಡಾಲಿನಲ್ಲಿ ನಡೆದ 48ದಿನ ವಾಲ್ಮೀಕಿ ರಾಮಾಯಣ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಡಿಯೋ ನನ್ನದಲ್ಲ ಎಂದ ಶಾಸಕ ಶಿವಲಿಂಗೇಗೌಡ
ನಮ್ಮ ವಕೀಲರೊಂದಿಗೆ ಚರ್ಚಿಸಿ ನಕಲಿ ಆಡಿಯೋ ಬಗ್ಗೆ ಪೊಲೀಸರಿಗೆ ದೂರು ನೀಡುವ ಬಗ್ಗೆ ಶೀಘ್ರ ನಿರ್ಧರಿಸುವೆ. ಜೆಡಿಎಸ್-ಬಿಜೆಪಿಯವರು ದೂರು ಕೊಡಲಿ, ಯಾವುದೇ ತನಿಖೆಯಾದ್ರೂ ನಡೆಯಲಿ, ಅದು ನನ್ನ ದನಿಯಲ್ಲ ಎಂದ ಮೇಲೆ ಹೆದರುವ ಪ್ರಶ್ನೆ ಇಲ್ಲ. ತನಿಖೆ ಎದುರಿಸುವೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆಡಿಯೋಗೂ ನನಗೂ ಸಂಬಂಧ ಇಲ್ಲ. ಕುತಂತ್ರದಿಂದ, ರಾಜಕೀಯವಾಗಿ ನನ್ನ ತುಳಿದು ಶಕ್ತಿ ಕುಂದಿಸಲು, ಜನರ ಪ್ರೀತಿ-ವಿಶ್ವಾಸ ಕಡಿಮೆ ಮಾಡಲು ಹೀಗೆ ಮಾಡಲಾಗುತ್ತಿದೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ.
ಕಾಳು ಮೆಣಸು ದರ ಕುಸಿತದಿಂದ ಸಂಕಷ್ಟದಲ್ಲಿ ಬೆಳೆಗಾರ
ಕಾಳು ಮೆಣಸು ಧಾರಣೆಯಲ್ಲಿ ನಿತ್ಯ ಕುಸಿತ ವ್ಯಾಪಾರಗಾರರು ಹಾಗೂ ಬೆಳೆಗಾರರನ್ನು ಹೌಹಾರುವಂತೆ ಮಾಡಿದೆ. ಹೌದು ಮೆಣಸು ಕೊಯ್ಲು ಮುಕ್ತಾಯಗೊಂಡು ತಿಂಗಳುಗಳು ಕಳೆದರೂ ಧಾರಣೆ ಏರಿಕೆಯಾಗುವ ನಿರೀಕ್ಷೆಯಲ್ಲಿದ್ದ ಬೆಳೆಗಾರರು ಹಾಗೂ ಸ್ಥಳೀಯ ವ್ಯಾಪಾರಗಾರರಿಗೆ ಕಾಳು ಮೆಣಸು ದರ ಕುಸಿತ ಕೊಟ್ಯಂತರ ರು. ನಷ್ಟ ಹೊಂದುವಂತೆ ಮಾಡಿದೆ.
ದೇವೇಗೌಡರು ವಾಲ್ಮೀಕಿ ಜನಾಂಗವನ್ನು ಎಸ್‌ಟಿಗೆ ಸೇರಿಸಲು ಶ್ರಮಿಸಿದ್ದರು
ಮಾಜಿ ಪ್ರಧಾನಿ ದಿ. ಚಂದ್ರಶೇಖರ್‌ ಅವರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿನಂತಿಸಿ ವಾಲ್ಮೀಕಿ ಜನಾಂಗವನ್ನು ಎಸ್‌ಟಿ ವರ್ಗಕ್ಕೆ ಸೇರಿಸಲು ಶ್ರಮಿಸಿದ್ದರು. ಜತೆಗೆ ೧೮ ಶಾಸಕರು ಹಾಗೂ ೩ ಸಂಸದರು ಆಯ್ಕೆಯಾಗಲು ಸಾಧ್ಯವಾಗಿತ್ತು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಾರ್ಶನಿಕರು ನೀಡಿರುವ ಮಹತ್ವದ ಕಾವ್ಯಗಳನ್ನು ಅರ್ಥ ಮಾಡಿಕೊಂಡು ತತ್ವಗಳನ್ನು ಅನುಸರಿಸುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.
ನಗರಸಭೆ ಕಾರ್ಯಾಚರಣೆ ಸ್ಥಳಕ್ಕೆ ರೇವಣ್ಣ ಭೇಟಿ
ನಗರಸಭೆ ವತಿಯಿಂದ ಬುಧವಾರ ಬೆಳ್ಳಂಬೆಳಗ್ಗೆ ಅಕ್ರಮ ಕಟ್ಟಡಗಳು ಹಾಗೂ ಒತ್ತುವರಿ ವಿರುದ್ಧ ನಗರಸಭೆ ಆಯುಕ್ತರು ತೆರವು ಕಾರ್ಯಾಚರಣೆ ನಡೆಸಿದ್ದರು. ಆದರೆ ಈ ಮೊದಲೇ ಯಾವುದೇ ನೋಟಿಸ್ ನೀಡದೆ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಸ್ಥಳೀಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒತ್ತುವರಿ ತೆರವು ಖಂಡಿಸಿ ಶಾಸಕ ಸ್ವರೂಪ್‌ ರಸ್ತೆ ಮಧ್ಯೆ ಧರಣಿ ಕೂತ ಸ್ಥಳಕ್ಕೆ ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಭೇಟಿ ನೀಡಿ ನಗರಸಭೆ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಒತ್ತುವರಿ ತೆರವು ಸ್ಥಳಕ್ಕೆ ಸಂಸದ ಶ್ರೇಯಸ್‌ ಭೇಟಿ
ತಣ್ಣೀರುಹಳ್ಳದ ಬಳಿ ಬುಧವಾರ ಒತ್ತುವರಿ ತೆರವು ಮಾಡಲಾದ ಸ್ಥಳಕ್ಕೆ ಗುರುವಾರ ಎಂಪಿ ಶ್ರೇಯಸ್ ಪಟೇಲ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಂಗಡಿ ಮಾಲಿಕರ ಸಮಸ್ಯೆಗಳನ್ನು ಆಲಿಸಿದರು. ನೋಟಿಸ್ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ಮಾಡಿರುವುದು ತಪ್ಪು ನಿರ್ಧಾರ, ಯಾರು ಈ ರೀತಿ ಮಾಡಿದ್ದಾರೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂಥವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ
ಮಹರ್ಷಿ ವಾಲ್ಮೀಕಿ ತಮ್ಮ ರಾಮಾಯಣ ಗ್ರಂಥದಲ್ಲಿ ಶ್ರೀ ವಿಷ್ಣುವಿನ ಅವತಾರಗಳಲ್ಲಿ ಒಂದಾದ ಶ್ರೀ ರಾಮನ ಮೂಲಕ ಮನುಕುಲಕ್ಕೆ ಪಿತೃ ವಾಕ್ಯ ಪರಿಪಾಲನೆ, ಅಧಿಕಾರದ ತ್ಯಾಗ, ಏಕ ಪತ್ನಿ ವ್ರತಸ್ಥ, ಸೀತಾ ದೇವಿಯ ಪಾವಿತ್ರ್ಯತೆ, ಆಂಜನೇಯ ಸ್ವಾಮಿಯ ಸ್ವಾಮಿ ನಿಷ್ಠೆ , ರಾವಣನ ಪರ ಸ್ತ್ರೀ ವ್ಯಾಮೋಹ, ರಾವಣನ ವಧೆಯ ಮೂಲಕ ರಾಕ್ಷಸ ಪ್ರವೃತ್ತಿಯ ಸಂಹಾರ, ತಾಯಿ ಮಾತು ಪರಿಪಾಲನೆ ಸೇರಿದಂತೆ ಹಲವು ಆದರ್ಶಗಳನ್ನು ಜಗತ್ತಿಗೆ ಅರ್ಥ ಮಾಡಿಸಿದ್ದಾರೆ, ಈ ನಿಟ್ಟಿನಲ್ಲಿ ರಾಕ್ಷಸ ಪ್ರವೃತ್ತಿ ಮಿತಿ ಮೀರಿದರೆ ವಿನಾಶ ನಿಶ್ಚಿತ ಎಂಬ ಸಂದೇಶವನ್ನು ಕೇವಲ ಭಾರತಕ್ಕಷ್ಟೇ ಅಲ್ಲ ಇಡೀ ಜಗತ್ತಿಗೆ ನೀಡಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.
ವಿದ್ಯುತ್‌ ಶಾಕ್‌ನಿಂದ ಒಂಟಿ ಸಲಗ ಸಾವು
ಬಿಎಸ್‌ಎನ್‌ಎಲ್ ಟವರ್‌ಗೆ ೧೧ ಕೆವಿ ವಿದ್ಯುತ್ ಪೂರೈಸುವ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಎಲೆಕ್ಟ್ರಿಕಲ್ ಡಿಯೋಲ್ ಅತ್ಯಂತ ಕೆಳಮಟ್ಟದಲ್ಲಿ ಇರುವುದ ಕಾಡಾನೆ ಸಾವಿಗೆ ಕಾರಣವಾಗಿದ್ದು, ಕಂಬಗಳನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದರು ನಿರ್ಲಕ್ಷ್ಯ ತೋರಿರುವ ವಿದ್ಯುತ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಕಳೆದ ಆರು ವರ್ಷಗಳಲ್ಲಿ ಹದಿನಾರು ಕಾಡಾನೆಗಳು ಮೃತಪಟ್ಟಿದ್ದು ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಪ್ರಾಣಿ ಪ್ರಿಯರು ಆಗ್ರಹಿಸಿದ್ದಾರೆ.
ಅರಕಲಗೂಡಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಜಯಂತಿ ಉತ್ಸವಗಳು ಜಾಗೃತಿ, ಜನಾಂಗೀಯ ತೇರನ್ನು ಎಳೆಯುವ, ಉದಾತ್ತ ಚಿಂತನೆ, ಮಂಥನಗಳನ್ನು ಮುಂದಿನ ಮನ್ವಂತರಕ್ಕೆ ಕೊಂಡೊಯ್ಯುವ ಮಾನವ ಸೇತುವೆಯಾಗಿದೆ ಎಂದು ಪ್ರಧಾನ ಭಾಷಣಕಾರ ಸತೀಶ್‌ ಅಲ್ಲಾಪಟ್ಟಣ ತಿಳಿಸಿದರು. ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಯಂತಿ ಉತ್ಸವಗಳನ್ನು ಬಹಳ ಉತ್ಸುಕತೆಯಿಂದ ಆಚರಿಸುತ್ತೇವೆ. ಜನಾಂಗದ ಪ್ರೇರಣೆ, ಪೋಷಣೆ ಇಲ್ಲದಿದ್ದರೆ ಯಾವ ಆಚರಣೆಗಳು ಯಶಸ್ವಿಯಾಗುವುದಿಲ್ಲ. ಇದಕ್ಕೆ ಜನಾಂಗೀಯ ಸಹಾಭಾಗಿತ್ವ ಮುಖ್ಯ ಎಂದರು.
ಅರಸೀಕೆರೆಯಲ್ಲಿ ಕರವೇ ಸ್ವಾಭಿಮಾನಿ ಸೇನೆ ಅಸ್ತಿತ್ವಕ್ಕೆ
ಕರವೇ ಸ್ವಾಭಿಮಾನಿ ಸೇನೆಗೆ ಹಾಸನ ಜಿಲ್ಲಾ ಅಧ್ಯಕ್ಷರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹರೀಶ್ ಗೌಡ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ನಮಗೆ ಯಾವುದೇ ಜಾತಿ, ಧರ್ಮವಿಲ್ಲ, ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು, ತಾಯಿ ಭುವನೇಶ್ವರಿ ಮಕ್ಕಳಾದ ನಾವು ಹೋರಾಟ ಮಾಡಲು ಸದಾ ಸಿದ್ಧ. ನೂತನ ಅರಸೀಕೆರೆ ಅಧ್ಯಕ್ಷರು ಶ್ರೀಧರ್ ಮರಂಡಿ ಅವರಿಗೆ ಅಭಿನಂದನೆ ತಿಳಿಸುತ್ತಾ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಹೋರಾಟ ಮಾಡಿ ಯಾವುದೇ ವಿರೋಧಗಳಿಗೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved