• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವಗ್ರಹ ಗಣೇಶನಿಗೆ ಪತ್ರಕರ್ತರ ಸಂಘದಿಂದ ವಿಶೇಷ ಪೂಜೆ
ನವಗ್ರಹ ಗಣೇಶ ಮೂರ್ತಿಗೆ ೫೨ ದಿನಗಳ ಕಾಲ ನಡೆಯುವ ಪ್ರತಿದಿನದ ವಿಶೇಷ ಪೂಜೆಯ ನಿಮಿತ್ತ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸದಸ್ಯರು ಹಾಗೂ ಕುಟುಂಬ ವರ್ಗದೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯು ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಅಭಿನಂದಿಸಿದರು.
ವಾಲ್ಮೀಕಿ ಜೀವನಾದರ್ಶಗಳನ್ನು ನಾವು ಪಾಲಿಸಬೇಕಿದೆ
ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು. ವಾಲ್ಮೀಕಿಯವರ ಆದರ್ಶ ತತ್ವ ಸಿದ್ಧಾಂತಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಂಡಾಗ ಅವರ ಜೀವನ ಉತ್ತಮವಾಗಿರುತ್ತದೆ. ಮಹರ್ಷಿ ವಾಲ್ಮೀಕಿಯವರು ಬರೆದ ರಾಮಾಯಣ ಮಹಾಕಾವ್ಯ ವಿಶ್ವವಿಖ್ಯಾತ ಪಡೆದಿದ್ದು ವಿಶ್ವಕ್ಕೆ ಮಾದರಿ ಕಾವ್ಯವಾಗಿದೆ. ವಾಲ್ಮೀಕಿ ಮೊದಲು ಸಾಮಾನ್ಯ ವ್ಯಕ್ತಿಯಾಗಿದ್ದು ತದ ನಂತರ ದೇವರ ಅನುಗ್ರಹ ಹಾಗೂ ತಪಸ್ಸಿನ ಫಲವಾಗಿ ಪವಿತ್ರ ಗ್ರಂಥ ರಾಮಾಯಣ ಮಹಾಕಾವ್ಯ ರಚಿಸಿ ಜೀವನದ ಮೌಲ್ಯಗಳನ್ನು ಜಗತ್ತಿಗೆ ತಿಳಿಸುವ ಮೂಲಕ ಮಹರ್ಷಿ ವಾಲ್ಮೀಕಿಯಾದರು ಎಂದರು.
ಮಹರ್ಷಿ ವಾಲ್ಮೀಕಿಯವರ ಮಾರ್ಗದರ್ಶನ ಅನುಸರಿಸಿ
ಸಂಸ್ಕೃತದಲ್ಲಿ ರಾಮಾಯಣ ರಚಿಸಿರುವ ಮಹರ್ಷಿ ವಾಲ್ಮೀಕಿ ಅವರ ಮಾರ್ಗದರ್ಶನ ಅನುಸರಿಸಿ ನಡೆಯಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಅವರು ತಿಳಿಸಿದರು. ಹಾಸನಾಂಬ ಕಲಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ರಾಮಾಯಣ ಕುರಿತು ತಿಳಿಸುವುರ ಮೂಲಕ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ತಿಳಿಹೇಳಬೇಕು ಎಂದರು.
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆಯಿಂದ ಪ್ರತಿಭಟನೆ
ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರಿಂಕೋರ್ಟ್‌ ನೀಡಿರುವ ತೀರ್ಪನ್ನು ಕೂಡಲೇ ರಾಜ್ಯ ಸರ್ಕಾರವು ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಬುಧವಾರ ಪ್ರತಿಭಟಿಸಿ ಹೇಮಾವತಿ ಪ್ರತಿಮೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್‌. ವೃತ್ತದ ಮೂಲಕ ಡಿಸಿ ಕಚೇರಿ ಆವರಣಕ್ಕೆ ಬಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಒತ್ತಾಯವನ್ನು ಮಾಡುತ್ತೇವೆ ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
ಸರ್ಕಾರಿ ನೌಕರರ ಚುನಾವಣೆ ಹಿನ್ನೆಲೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿಗಳಾದ ನವೀನ್, ಕೃಷ್ಣಪ್ಪ, ಶಶಿಧರ್, ಶಿವಪ್ರಸಾದ ನಾಯಕ್ ನಾಮಪತ್ರ ಸಲ್ಲಿಸಿದರು. ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ದ್ಯಾವೇಗೌಡ ಹಾಗೂ ಶಿಕ್ಷಕರ ಸಂಘದ ನಿರ್ದೇಶಕರು ಸೇರಿದಂತೆ ಸುಮಾರು 200 ಜನ ಶಿಕ್ಷಕರೊಂದಿಗೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಇರುವ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಹನ್ಯಾಳಿನಲ್ಲಿ ಹೊನಲುಬೆಳಕಿನ ಷಟಲ್‌ ಬ್ಯಾಡ್ಮಿಂಟನ್‌
ಹನ್ಯಾಳು ಗ್ರಾಮಕ್ಕೆ ಹಬ್ಬಕ್ಕೆ ಊರಿಗೆ ಆಗಮಿಸಿದ್ದ ಹುಡುಗರಿಗಾಗಿ ಗ್ರಾಮದ ಹಿರಿಯ ವಿದ್ಯಾರ್ಥಿ ಬಳಗ ನೀರಾವರಿ ತಜ್ಞ ದಿವಂಗತ ಎಚ್ ಎನ್ ನಂಜೇಗೌಡರ ಸ್ಮರಣಾರ್ಥ ಫೇಸ್ಬುಕ್ ಲೈವ್ ನಲ್ಲಿ ರೋಲಿಂಗ್ ಟ್ರೋಫಿ 2024 ಹೊನಲು ಬೆಳಕಿನ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಹೊನಲು ಬೆಳಕಿನ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಸುಮಾರು 16 ತಂಡಗಳು ಭಾಗವಹಿಸಿದ್ದು, ಶ್ರೀನಿವಾಸ್ ಅವರ ತಂಡ ಪ್ರಥಮ ಸ್ಥಾನ ಪಡೆದು ಪ್ರಪ್ರಥಮ ರೋಲಿಂಗ್ ಟ್ರೋಫಿ ಹಾಗೂ ಆಕರ್ಷಕ ಬಹುಮಾನ ಗಳಿಸಿದರು.
ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ದರ್ಶನ ಅಭಿಯಾನ
ಹಾಸನಾಂಬೆ ದೇವಿ ಜಾತ್ರಾ ಸಮಯದಲ್ಲಿ ಭಕ್ತಾದಿಗಳು ಸಾಂಪ್ರದಾಯಿಕ (ದೇಶೀಯ) ವಸ್ತ್ರ ಸಂಹಿತೆ ವೇಷಭೂಷಣಗಳಲ್ಲಿ (ಹಣೆಯಲ್ಲಿ ಕುಂಕುಮ, ಚಂದನ, ವಿಭೂತಿ, ನಾಮ ಇತ್ಯಾದಿ ಇಟ್ಟು) ದರ್ಶನ ಮಾಡಲು ಪ್ರೇರೇಪಿಸುವ ಅಭಿಯಾನ (ಜನಜಾಗೃತಿ) ಶ್ರೀ ಹಾಸನಾಂಬೆ ದೇವಾಲಯದ ಮುಂಭಾಗ ಚಾಲನೆ ನೀಡಲಾಯಿತು. ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರು ವಸ್ತ್ರಸಂಹಿತೆಯನ್ನು ಪಾಲಿಸಿ ಹಾಗೂ ಹಣೆಯಲ್ಲಿ ಕುಂಕುಮ ಚಂದನ ಅಥವಾ ವಿಭೂತಿ ಇತ್ಯಾದಿಗಳನ್ನು ಧರಿಸಿ ದರ್ಶನಕ್ಕೆ ಆಗಮಿಸಲು ವಿನಂತಿಸಿದರು.
ರಮ್ಮಿ ಸರ್ಕಲ್‌ ಗೇಮ್‌ ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ
ಅಕ್ರಮವಾಗಿ ನಡೆಸುತ್ತಿರುವ ರಮ್ಮಿ ಆನ್‌ಲೈನ್ ಬೆಟ್ಟಿಂಗ್ ಮುಂತಾದ ಬೆಟ್ಟಿಂಗ್ ಆ್ಯಪ್ ಮತ್ತು ನಡೆಸುತ್ತಿರುವವರನ್ನೂ ಬಂಧಿಸಬೇಕು ಮತ್ತು ಆನ್‌ಲೈನ್ ಬೆಟ್ಟಿಂಗ್ ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸುಮಾರು ವರ್ಷಗಳಿಂದ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ ಆಗುತ್ತಿರುವ ಅನಾಹುತಗಳಿಂದ ಸರ್ಕಾರಿ ನೌಕರರು, ಯುವಕರು ಇದನ್ನು ಚಟವಾಗಿಸಿಕೊಂಡಿದ್ದು ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದೆ ಎಂದರು.
ಕಡತ ಬಾಕಿ ಉಳಿಸಿಕೊಂಡ ಆರ್‌ಟಿಒ ಮೇಲೆ ರೇವಣ್ಣ ಗರಂ
ಆರ್‌.ಟಿ. ಒ ಕಚೇರಿಗೆ ಬುಧವಾರ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಭೇಟಿ ನೀಡಿ ಆರ್‌.ಟಿ.ಒ ರಾಜ್‌ಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅರ್ಜಿ ಸಲ್ಲಿಸಿದ ಎಲ್ಲಾ ಕಡತಗಳನ್ನು ಬಾಕಿ ಉಳಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಡತಗಳನ್ನು ಹೊರ ತೆಗೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಚೇರಿಯಲ್ಲೇ ಸಾರಿಗೆ ಸಚಿವರಿಗೆ ಕರೆ ಮಾಡಿ ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತಿಳಿಸಿ, ಅವುಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಾರಿಗೆ ಸಚಿವರು ಹಾಗೂ ಕಾರ್ಯದರ್ಶಿಗಳು ಸ್ಥಳಕ್ಕೆ ಬರುವವರೆಗೂ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಗ್ಯಾರಂಟಿಗಳಿಂದ ಜನರ ಆರ್ಥಿಕ ಶಕ್ತಿ ವೃದ್ಧಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಾಲೂಕಿನ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ೫ ಗ್ಯಾರಂಟಿ ಯೋಜನೆಗಳ ಪೈಕಿ ೧ಯೋಜನೆಯ ಸುಮಾರು ೧೦೦ ಫಲಾನುಭವಿಗಳನ್ನು ಭೇಟಿ ಮಾಡುವ ಮೂಲಕ ಯೋಜನೆ ಸಮರ್ಪಕವಾಗಿ ತಲುಪುತ್ತಿರುವ ಮಾಹಿತಿ ಪಡೆಯುವ ಮೂಲಕ ಯೋಜನೆಯಿಂದಾಗಿರುವ ಅನುಕೂಲಗಳನ್ನು ಫಲಾನುಭವಿಗಳ ಮುಖಾಂತರ ಪಡೆಯಲಾಗುತ್ತದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ ತಿಳಿಸಿದರು.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved