• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸುವ ಮೂಲಕ ಶಕ್ತಿವಂತಳಾಗಿಸಿ
ಹೆಣ್ಣು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಸಮಾಜದಲ್ಲಿ ಹೆಣ್ಣು ಮಗುವಿಗೆ ದೊರೆಯಬೇಕಿರುವ ಗೌರವ ಮತ್ತು ಮೌಲ್ಯವನ್ನು ತಿಳಿಸಬೇಕು ಮನೆಯಲ್ಲಿ ತಾಯಿಂದಿರು ಮಕ್ಕಳಿಗೆ ಸಂಸ್ಕಾರ ನೀಡಬೇಕು. ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜದ ದೃಷ್ಟಿಕೋನ ಬದಲಿಸುವುದು. ಭಾರತೀಯ ಜನರಲ್ಲಿ ಲಿಂಗಸಮಾನತೆಯ ಜಾಗೃತಿ ಉಂಟು ಮಾಡುವುದುಮೊದಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವುದರ ಮೂಲಕ ಶಕ್ತಿ ತುಂಬಬೇಕು. ಮನೆಯಲ್ಲಿ ಹೆಣ್ಣು ಮಗು ಜನಿಸಿದರೇ ದುಃಖ ಪಡದೇ ಸಿಹಿ ಹಂಚಿ ಸಂಭ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು.
ಕೆಂಪು ಮತ್ತು ಕಪ್ಪು ಬಣ್ಣದ ಕೇಕ್ ತಯಾರಿಕೆ ಕೇಕ್ ಪಾಯಿಂಟ್ ಮಳಿಗೆಗೆ ಬೀಗ
ಕ್ಯಾನ್ಸರ್ ಕಾರಕ ಅಂಶವಿರುವ ಕೇಕ್ ತಯಾರಿ ಮತ್ತು ಮಾರಾಟ ಮಾಡದಂತೆ ಸರ್ಕಾರ ನಿಷೇಧ ಹೇರಿರುವ ಬೆನ್ನಲ್ಲೇ ಟಿಎಚ್‌ಒ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ಡಾ.ತಿಮ್ಮರಾಜು ನೇತೃತ್ವದ ತಂಡ ನಗರದ ಆಯಕಟ್ಟಿನ ಬೇಕರಿಗಳಿಗೆ ಬುಧವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಕೆಂಪು ಮತ್ತು ಕಪ್ಪು ಬಣ್ಣದ ಕೇಕ್ ತಯಾರಿಸಿ ಮಾರಾಟಕ್ಕೆ ಇರಿಸಿದ್ದ ಕೇಕ್ ಪಾಯಿಂಟ್ ಮಳಿಗೆಗೆ ಬೀಗ ಜಡಿಯುವ ಮೂಲಕ ಸಿಬ್ಬಂದಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.
ಬೇಲೂರು ಲಯನ್ಸ್ ಕ್ಲಬ್ ಭವನ ೧೩ರಂದು ಲೋಕಾರ್ಪಣೆ
ಬೇಲೂರಿನ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಿಸಿದ ಲಯನ್ಸ್ ಭವನದ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ ಅ.೧೩ ರ ಭಾನುವಾರ ಬೆಳಿಗ್ಗೆ ೧೦-೩೦ಕ್ಕೆ ಲಯನ್ಸ್ ಪಟ್ಟಣದ ಯಗಚಿ ಸೇತುವೆ ಮಂಜುನಾಥ ಕಲ್ಯಾಣ ಮಂಟಪದ ಹಿಂಭಾಗದಲ್ಲಿನ ಲಯನ್ಸ್ ಭವನದ ಬಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸರ್ವರೂ ಸಕಾಲಕ್ಕೆ ಆಗಮಿಸಬೇಕು ಎಂದು ಬೇಲೂರು ಲಯನ್ಸ್ ಭವನ ಟ್ರಸ್ಟ್ ಅಧ್ಯಕ್ಷ ದೊಡ್ಡಮನೆ ಪ್ರಭಾಕರ್‌ ಹೇಳಿದರು.
ರೈತರ ಸಮಸ್ಯೆಯನ್ನು ಕಾಲಮಿತಿಯೊಳಗೆ ಬಗೆಹರಿಸಿ
ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಪಟ್ಟಣದ ಗಣಪತಿಕೊತ್ತಲು ಉದ್ಯಾನದಲ್ಲಿ ಕಂದಾಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ "ಭೂಮಿ ದಸರಾ " ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎ. ಮಂಜು ಮಾತನಾಡಿದರು. ರೈತರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಸರಿಪಡಿಸಿಕೊಡುವ ಕೆಲಸವನ್ನು ಕಂದಾಯ ಇಲಾಖೆ ನಿಗದಿತ ಕಾಲಮಿತಿಯಲ್ಲಿ ಮಾಡಿಕೊಡುವಂತೆ ಹೇಳಿದರು.ತಮ್ಮ ಜಮೀನಿನ ದಾಖಲೆಗಳನ್ನು ಸರಿಪಡಿಕೊಳ್ಳಲು ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಜನರು ವರ್ಷಗಟ್ಟಲೆ ಕಚೇರಿಗೆ ಅಲೆದಾಟ ನಡೆಸಬೇಕಿದೆ. ಇದನ್ನು ತಪ್ಪಸಿ ಜನರ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವ ಪ್ರವೃತ್ತಿಯನ್ನು ಇಲಾಖೆ ಬೆಳೆಸಿಕೊಳ್ಳಬೇಕು ಎಂದರು.
ಕಾಂಗ್ರೆಸ್‌ ಸ್ಥಿತಿ ಇನ್ನೆರಡು ತಿಂಗಳಲ್ಲಿ ಏನಾಗಲಿದೆ ಕಾದು ನೋಡಿ
ಮೈಸೂರು ಮುಡಾ ಹಗರಣ ಯಾವ ದಿಕ್ಕಿಗೆ ತಲುಪಿದೆ ಎಂಬುದು ನೀವುಗಳೇ ನೋಡುತ್ತಿದ್ದೀರಿ. ಅಧಿಕಾರದ ದಾಹ ಮೇರೆ ಮೀರಿದ್ದು ಎಲ್ಲವೂ ಅಯೋಮಯವಾಗಿದೆ. ಸಿಎಂ ಗಾದಿಗೆರಲು ಸಚಿವರೇ ಪೈಪೋಟಿಗೆ ಬಿದ್ದಿರುವುದು ಅನಾವರಣಗೊಂಡಿದೆ. ಮುಂಬರುವ ದಿನಗಳಲ್ಲಿ ಎಲ್ಲವೂ ರಾಜ್ಯದ ಜನತೆಗೆ ಗೊತ್ತಾಗಲಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇಬಿಟ್ಟಿತು ಎಂದು ಬೆಳಗ್ಗೆ ಬೀಗಿದ್ದವರಿಗೆ ಮಧ್ಯಾಹ್ನದ ವೇಳೆಗೆ ಫಲಿತಾಂಶ ತಕ್ಕ ಉತ್ತರ ನೀಡಿದ್ದು ರಾಜ್ಯದಲ್ಲಿಯೂ ಏನೇನೋ ಬೆಳವಣಿಗೆಗಳು ನಡೆದಿವೆ ಕಾದು ನೋಡಿ ಎಂದು ಶಾಸಕ ಎಚ್‌ ಡಿ ರೇವಣ್ಣ ಹೇಳಿದ್ದಾರೆ.
ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅಗತ್ಯ
ಜ್ಞಾನ ಸಶಕ್ತವಾದದ್ದು. ಅದು ಕೊಡುವ ಬಲದಿಂದ ವ್ಯಷ್ಟಿ ಹಾಗೂ ಸಮಷ್ಟಿಯ ಅಜ್ಞಾನದ ತಮಂಧತೆಯನ್ನು ದೂರ ಮಾಡಿ ವಿವೇಕದ ಬೆಳಕನ್ನು ಮೂಡಿಸಬಹುದು. ಜ್ಞಾನದ ಬೆಳಕಲ್ಲಿ ಸಾಗಿದಾಗ ಲೋಕ ಸುಜ್ಞಾನಗೊಳ್ಳುತ್ತದೆ. ವಿದ್ಯಾರ್ಥಿನಿಯರು ಪದವಿಯೊಂದಿಗೆ ತಮ್ಮ ಜ್ಞಾನವನ್ನು ವಿವೇಕವನ್ನು ಉದ್ದೀಪಿಸಿಕೊಂಡು ಸಮಾಜಕ್ಕೆ ಬೆಳಕಾಗಬೇಕು. ಶಿಕ್ಷಣವು ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಲು ನೆರವಾಗುತ್ತದೆ ಎಂದು ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಜನಮಾನಸದಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಿದ್ದು, ಸಿದ್ದರಾಮಯ್ಯನವರ ಜನಪರ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ವಿರೋಧ ಪಕ್ಷಗಳು ಭಯದಿಂದ ಈ ರೀತಿಯ ಕೃತ್ಯಗಳನ್ನು ಮಾಡುತ್ತಿವೆ. ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಇಂತಹ ಕೃತ್ಯಗಳಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ರಸ್ತೆಬದಿ ಅಂಗಡಿಗಳ ಒತ್ತುವರಿ ಜಾಗ ತೆರವು
ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ತೆಗೆಯಲು ಇನ್ನು ಕೆಲವು ದಿನಗಳು ಬಾಕಿ ಇದ್ದು, ರಾಜ್ಯ ಮತ್ತು ದೇಶದ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಾಗಿ ಹಾಸನ ಜಿಲ್ಲೆಗೆ ಬರುವುದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಬಾರದಂತೆ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಕಲಾಗಿದ್ದ ಫ್ಲೆಕ್ಸ್, ಬ್ಯಾನರ್, ಪೆಟ್ಟಿಗೆ ಅಂಗಡಿಗಳನ್ನು ಬುಧವಾರ ಬೆಳಿಗ್ಗೆ ಜೆಸಿಬಿ ಹಾಗೂ ನಗರಸಭೆ ಸಿಬ್ಬಂದಿಯ ಸಹಕಾರದಲ್ಲಿ ನಗರಸಭೆ ಆಯುಕ್ತರು ಹಾಗೂ ಅಧಿಕಾರಿಗಳ ತಂಡ ತೆರವು ಕಾರ್ಯಾಚರಣೆ ನಡೆಸಿತು.
ಹರಿಯಾಣ ಗೆಲುವು ಭಾರತ ರಾಜಕಾರಣದ ದಿಕ್ಸೂಚಿ
ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಸಾಧನೆಯನ್ನು ಮಾಡುವ ಮೂಲಕ ದಿಗ್ವಿಜಯ ಸಾಧಿಸಿರುವ ಬಿಜೆಪಿ ಜನತೆಯ ವಿಶ್ವಾಸವನ್ನು ಗಳಿಸಿದ್ದರೆ, ದೇಶದ ಪಾಲಿನ ಮಗ್ಗುಲು ಮುಳ್ಳಾಗಿರುವ ಕಾಂಗ್ರೆಸ್ ಅತ್ಯಂತ ಹೀನಾಯವಾಗಿ ಸೋಲನುಭವಿಸಿರುವುದು ಭಾರತದ ರಾಜಕಾರಣದ ಮುಂದಿನ ದಿಕ್ಸೂಚಿ ಎಂದು ಹಿರಿಯ ವಕೀಲ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎನ್.ಡಿ. ಪ್ರಸಾದ್ ತಿಳಿಸಿದರು.
ಫುಟ್ಬಾಲ್‌ನಲ್ಲಿ ನಿಯಾತಿ ಸಾಧನೆ
ಬೆಂಗಳೂರಿನ ವಿಶ್ವವಿದ್ಯಾಪೀಠ ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿನ ಗೋರಕ್‌ಪುರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಂತಾರಾಜ್ಯ ಶಾಲೆಗಳ ಕೀಡಾಕೂಟದಲ್ಲಿ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ತಂಡಗಳು ಹಾಗೂ ಕರ್ನಾಟಕದ ನಡುವೆ ಸೆಣಸಾಟದಲ್ಲಿ ನಿಯತಿ ಎ.ಗೌಡ ಒಟ್ಟು ೩ ಗೋಲ್‌ಗಳನ್ನು ಹೊಡೆದು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪೆನಾಲ್ಟಿ ಗೋಲ್‌ನ ಪಂದ್ಯದ ಹಂತದಲ್ಲಿ ಕರ್ನಾಟಕಕ್ಕೆ ಸೋಲು ಅನುಭವಿಸುವಂತಾಗಿದ್ದು, ೩ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು ಕ್ರೀಡಾ ಸಾಧಕಿ ನಿಯಾತಿ ಹೇಳಿದ್ದಾರೆ.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 510
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved