ಬೇಲೂರಿನಲ್ಲಿ ಸಾಂಕೇತಿಕ ಬಂದ್ ಪ್ರತಿಭಟನಾ ಮೆರವಣಿಗೆಪುರಸಭೆ ಗಣೇಶ ವಿಗ್ರಹಕ್ಕೆ ಅಪಚಾರ ಖಂಡಿಸಿ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್ ಯಶಸ್ವಿಯಾಗಿ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆ ಸಂದರ್ಭದಲ್ಲಿ ಶ್ರೀ ಚನ್ನಕೇಶವ ಸ್ವಾಮಿ ದೇಗುಲದಿಂದ ವಿಶೇಷ ಪೂಜೆ ಸಲ್ಲಿಸಿ ಪೂರ್ಣ ಕಳಶದೊಂದಿಗೆ ಗಂಗಾತೀರ್ಥವನ್ನು ಮೆರವಣಿಗೆ ಮೂಲಕ ತರಲಾಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಣಿ ನಿರ್ಮಿಸಿ ರಸ್ತೆ ತಡೆ ನಡೆಸಿ ಹಿಂದೂ ಪರ ಸಂಘಟನೆಗ ಕಾರ್ಯಕರ್ತರೊಂದಿಗೆ ಶಾಸಕ ಎಚ್ ಸುರೇಶ್, ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಪ್ರತಿಭಟನೆ ನಡೆಸಿದರು.