• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಂರಕ್ಷಣೆ ಪ್ರತಿ ನಾಗರಿಕರ ಸಾಂವಿಧಾನಿಕ ಕರ್ತವ್ಯ
ಪರಿಸರ ಸಂರಕ್ಷಣೆ ಪ್ರತಿ ನಾಗರಿಕರ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಪಟ್ಟಣದ ಸಿವಿಲ್ ಮತ್ತು ಜೆಎಂಎಫ್‌ ನ್ಯಾಯಾಲಯದ ನ್ಯಾಯಾಧೀಶೆ ಸ್ನೇಹ ಅಭಿಪ್ರಾಯಪಟ್ಟರು. ಪ್ರಕೃತಿಯಲ್ಲಿನ ಗಿಡಮರಗಳನ್ನು ಕಾಳಜಿ ವಹಿಸಿ ರಕ್ಷಿಸಿದರೆ ಮನುಷ್ಯ ಹಾಗೂ ಪ್ರಾಣಿ, ಪಕ್ಷಿ ಸಂಕುಲಕ್ಕೆ ಶುದ್ಧ, ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ. ಇದರಿಂದ ಪ್ರಾಕೃತಿಕ ಸಮತೋಲನ ಕಾಪಾಡಲು ಸಾಧ್ಯ. ಅದೇರೀತಿ ಜಡ್ಜ್‌ಮೆಂಟ್ ಮೂಲಕ ಬಗೆಹರಿದರೆ ಒಬ್ಬರಿಗೆ ಸೋಲು ಇನ್ನೊಬ್ಬರಿಗೆ ಗೆಲುವಾಗುತ್ತದೆ. ಸೆಪ್ಟೆಂಬರ್‌ನಲ್ಲಿ ಲೋಕ ಅದಾಲತ್ ಇದ್ದು ಒಬ್ಬರಿಗೊಬ್ಬರು ಕೂತು ಲೋಕ ಅದಾಲತ್ ಮೂಲಕ ರಾಜಿ ಮಾಡಿಕೊಂಡರೆ ಇಬ್ಬರಿಗೂ ಗೆಲುವಾಗುತ್ತದೆ. ಆದ್ದರಿಂದ ರಾಜಿ ಮೂಲಕ ಬಗೆಹರಿಸಿಕೊಂಡು ನೆಮ್ಮದಿ ಜೀವನ ಕಾಣಬಹುದು ಎಂದರು.
ಗಣಪತಿ ಪೆಂಡಾಲಿನಲ್ಲಿ ನಿವೃತ್ತ ಸೈನಿಕರಿಂದ ಕಾರ್ಗಿಲ್‌ ವಿಜಯ್‌ ದಿವಸ್‌
ದೇಶಕ್ಕೆ ಸ್ವಾತಂತ್ರ ಸಿಕ್ಕ ನಂತರ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದಾಗ ನಡೆದ ಯುದ್ಧದಲ್ಲಿ ದೇಶಕ್ಕೆ ಅಭೂತಪೂರ್ವ ಗೆಲುವು ಸಿಕ್ಕಿತು. ಈ ಯುದ್ಧದಲ್ಲಿ ನಮ್ಮ ದೇಶದ 527 ಸೈನಿಕರು ಹುತಾತ್ಮರಾದರು. ಅವರನ್ನೆಲ್ಲಾ ನೆನಪಿಸಿಕೊಂಡು ಅವರಿಗೆ ಕೃತಜ್ಞತೆ ಸಲ್ಲಿಸಲು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರ್‌ಎಸ್‌ಎಸ್ ಪ್ರಚಾರ ತಂಡದ ಸದಸ್ಯ ಹೂವಿನಹಳ್ಳಿ ತಮ್ಮಯ್ಯ ತಿಳಿಸಿದರು. ನಮ್ಮ ವೀರ ಯೋಧರು ಹುತಾತ್ಮರಾಗುವ ಜತೆಗೆ ಭಾರತೀಯರ ರಕ್ಷಣೆ ಮಾಡಿ, ತಲೆಎತ್ತಿ ನಿಲ್ಲುವಂತಹ ಅವಕಾಶ ಕಲ್ಪಿಸಿದ ನಮ್ಮ ಸೈನಿಕರ ಸೇವೆ ಸದಾ ಸ್ಮರಣೀಯ ಎಂದರು.
ಹೊಳೆನರಸೀಪುರದ ಪೆಂಡಾಲ್‌ ಗಣೇಶೋತ್ಸವಕ್ಕೆ ಮಣ್ಣು ಪೂಜೆ
ಹೊಳೆನರಸೀಪುರ ೬೮ನೇ ವರ್ಷದ ಗಣೇಶೋತ್ಸವ ನಿರ್ವಿಘ್ನವಾಗಿ ಎಲ್ಲರ ಸಹಕಾರದಲ್ಲಿ ನಡೆಯಲಿ ಎಂದು ಪ್ರಾರ್ಥಿಸಿ ಸ್ಥಂಭ ನೆಡುವ, ಶ್ರೀ ಗಣೇಶಸ್ವಾಮಿಯ ಪೀಠ ಹಾಗೂ ಮೃತ್ತಿಕೆ ಪೂಜಿಸುವ ಸಂಪ್ರದಾಯ ಆಚರಣೆಯಲ್ಲಿದ್ದು, ಶಿಲ್ಪಿಗಳಾದ ಕೆ.ಸತೀಶ್ ಹಾಗೂ ಸಮಿತಿಯ ಸದಸ್ಯರು ಇಂದಿನ ಪೂಜೆಗೆ ಅಗತ್ಯವಾದ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿದ್ದರು. ಹಿರಿಯ ಅರ್ಚಕರಾದ ಶ್ರೀಷಾಚಾರ್ ಮಾರ್ಗದರ್ಶನದಲ್ಲಿ ಶಶಾಂಕ್ ಪುತ್ತೂರಾಯ ಪೂಜಾ ಕೈಂಕರ್ಯ ನೆರವೇರಿಸಿದರು. ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಹೋರಾಟದ ಹಾದಿ ಹಿಡಿದ ಮೂರ್ಕಣ್ಣು ಗುಡ್ಡ ನಿವಾಸಿಗಳು
ಹಲವು ವರ್ಷಗಳಿಂದ ನಡೆಯುತ್ತಿದ್ದ ಮೂರ್ಕಣ್ಣು ಗುಡ್ಡ ವ್ಯಾಪ್ತಿಯ ಸೆಕ್ಷನ್ 4ರ ಹೋರಾಟ ಇದೀಗ ತನ್ನ ಆಯಾಮವನ್ನೇ ಬದಲಿಸಿದೆ. 100 ವರ್ಷಗಳ ಹಿಂದಿನ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದ ಈ ಭಾಗದ ಜನರೀಗ ನೀರಿನಲ್ಲಿ ಹುಣಸೆಹಣ್ಣು ತೊಳೆಯುವ ಪ್ರಯತ್ನ ಕೈಬಿಟ್ಟು ಸಂಘಟಿತ ಹೋರಾಟದಿಂದ ನ್ಯಾಯ ಪಡೆಯುವ ಪ್ರಯತ್ನದಲ್ಲಿದ್ದಾರೆ. ಹಿಂದಿನ ಉಪವಿಭಾಗಾಧಿಕಾರಿಯಾಗಿದ್ದ ಪ್ರತೀಕ್ ಬಯಾಲ್ ಹಾಗೂ ಹಿಂದೆ ಕ್ಷೇತ್ರಕ್ಕೆ ರಾಜಕೀಯ ಸ್ಪರ್ಧಿಯಾಗಿ ಆಗಮಿಸಿದ್ದ ನಾರ್ವೇ ಸೋಮಶೇಖರ್ ಸೆಕ್ಷನ್ 4ನಿಂದ ಈ ಭಾಗದ ಜಮೀನನ್ನು ಕೈ ಬಿಟ್ಟಿರುವ ದಾಖಲೆಗಳ ಶೋಧಕ್ಕಾಗಿ ಸಾಕಷ್ಟು ಹೋರಾಟ ನಡೆಸಿದ್ದು, ವಿಧಾನಸೌಧದ ದಾಖಲೆ ಸಂಗ್ರಹಗಾರವನ್ನು ಜಾಲಾಡಿಸಿದರಾದರೂ ಯಾವುದೇ ಪ್ರಯೋಜವಾಗಿರಲಿಲ್ಲ.
ದೇವಾಲಯಗಳು ಬದುಕಿಗೆ ನೆಮ್ಮದಿ ಕರುಣಿಸುತ್ತವೆ
ದೇವರು, ಧರ್ಮ, ತಂದೆ ತಾಯಿ, ಗುರು ಹಿರಿಯರು ಎನ್ನುವಂತಹ ಪೂಜ್ಯಭಾವನೆಗಳಲ್ಲಿ ಉತ್ತಮ ಸಂಸ್ಕಾರವನ್ನು ಪಡೆದು ಜೀವನದ ಸಾರ್ಥಕತೆಯನ್ನು ನಾವು ಕಾಣುತ್ತೀದ್ದೇವೆ, ಆದರೆ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ನಂಬಿರುವ ಜನರು ಸಕಲ ವೈಭೋಗದ ಶ್ರೀಮಂತಿಕೆಯನ್ನು ತೊರೆದು ಸುಖ, ಶಾಂತಿ ನೆಮ್ಮದಿಯ ಜೀವನಕ್ಕಾಗಿ ಭಾರತದ ಕಡೆಗೆ ಬರುತ್ತಿದ್ದು, ಹರೇ ರಾಮ ಹರೇ ಕೃಷ್ಣ ಎಂದು ಭಗವಂತನ ಧ್ಯಾನವನ್ನು ಮಾಡುತ್ತಿರುವುದು ಕಾಣುತ್ತಿದ್ದೇವೆ. ದೇವನೊಬ್ಬ ನಾಮ ಹಲವು ಎನ್ನುವ ವಿಶಾಲ ಹಾಗೂ ವೈವಿಧ್ಯಮಯ ಸಂಸ್ಕೃತಿಯಲ್ಲಿ ಏಕತೆಯನ್ನು ಕಾಣುತ್ತಿರುವ ನಮಗೆ ರಾಮಾಯಣ ಹಾಗೂ ಮಹಾಭಾರತ ಮಹಾನ್ ಗ್ರಂಥಗಳೇ ಪ್ರೇರಣೆ ನೀಡುತ್ತಿವೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದರು.
ಪ್ರೌಢಾವಸ್ಥೆಯಲ್ಲಿ ಆಕರ್ಷಣೆಗೊಳಗಾದರೆ ಜೀವನ ಹಾಳು
ಪ್ರೌಢಾವಸ್ಥೆಯ ದಿನಗಳಲ್ಲಿ ಬಾಲಕಿಯರು ಆಕರ್ಷಣೆ ಅಥವಾ ಪ್ರೀತಿ-ಪ್ರೇಮಕ್ಕೆ ಸಿಲುಕುವ ಮುನ್ನ ಸಮಾಜದಲ್ಲಿ ತಂದೆ, ತಾಯಿ ಸ್ಥಿತಿ ಜತೆಗೆ ಮುಂದಿನ ಜೀವನದ ಪರಿಸ್ಥಿತಿಯ ಬಗ್ಗೆ ಯೋಚಿಸಿ, ಮುನ್ನಡೆಯುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಹೇಳಿದರು. ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಭವಿಷ್ಯದಲ್ಲಿ ಜೀವನ, ಪರಿಣಾಮಗಳು ಹಾಗೂ ಶಿಕ್ಷಣದ ಬಗ್ಗೆ ಯೋಚಿಸುವ ಜತೆಗೆ ತಂದೆ ತಾಯಿಯೊಂದಿಗೆ ಸಮಾಲೋಚಿಸಿ, ಮುನ್ನಡೆಯಿರಿ ಎಂದರು. ನಿಮಗೆ ಬಾಲ್ಯವಿವಾಹದ ಬಗ್ಗೆ ಮಾಹಿತಿ ದೊರೆತಲ್ಲಿ ನಿಮ್ಮ ಪ್ರಾಂಶುಪಾಲರು, ಹತ್ತಿರದ ಪೊಲೀಸ್ ಠಾಣೆ ಅಥವಾ ಉಪನ್ಯಾಸಕರಿಗೆ ತಿಳಿಸಿ ಎಂದು ಸಲಹೆ ನೀಡಿದರು.
ಸ್ತ್ರೀಯರು ಮಕ್ಕಳ ಆರೋಗ್ಯದ ಬಗ್ಗೆ ರೋಟರಿ ಕಾಳಜಿ
ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಸರ್ಕಾರ ಹಲವು ಸೌಲಭ್ಯ ನೀಡಿದ್ದು, ಇದರೊಂದಿಗೆ ರೋಟರಿಯಂತಹ ಸಂಘ ಸಂಸ್ಥೆಗಳು ಮತ್ತಷ್ಟು ಅರಿವು ಮೂಡಿಸುವ ಕೆಲಸ ಮಾಡಬೇಕಾದ ಅಗತ್ಯತೆ ಇದೆ ಎಂದು ರೋಟರಿ ಜೋನ್ 9 ರ ವಲಯ ಸೇನಾನಿ ಮಮತಾ ಪಾಟೀಲ್ ಹೇಳಿದರು. ಅಂಗನವಾಡಿಗೆ ಬರುವ ಮಕ್ಕಳಿಗೆ ಅಂಗನವಾಡಿ ಶಿಕ್ಷಕರು ಮಕ್ಕಳಿಗೆ ಆರೋಗ್ಯದಿಂದ ನೋಡಿಕೊಳ್ಳುವ ಮೂಲಕ ಸಮಾಜದಲ್ಲಿ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ಮಾಡಬೇಕು. ಸ್ತ್ರೀಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ರೋಟರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.
ಅಪಘಾತದಲ್ಲಿ ಜನ್ಮದಿನದಂದೇ ಸಾವನ್ನಪ್ಪಿದ ಯುವಕ
ಹಾಸನ-ಮೈಸೂರು ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಕೃಷ್ಣಪುರದ ಜಗದೀಶ್ ಎಂಬುವರ ಪುತ್ರ ಕೆ.ಜೆ. ಧನಂಜಯ್ಯ(೨೫) ಎಂಬ ಯುವಕ ಜನ್ಮದಿನದಂದೇ ಮೃತಪಟ್ಟು, ಸುಮಂತ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆದ್ದಾರಿಯ ರಸ್ತೆಯಲ್ಲಿ ಚರಂಡಿ ನಿರ್ಮಾಣಕ್ಕೆಂದು ತೆಗೆದಿರುವ ಗುಂಡಿಗೆ ಅಡ್ಡವಾಗಿ ಮಣ್ಣು ಹಾಕಿದ್ದು, ಯಾವುದೇ ಸೂಚನಾ ಫಲಕ ಅಥವಾ ರಿಲ್ಪೆಕ್ಟರ್ ಅಥವಾ ಬ್ಯಾರಿಕೇಡ್ ಹಾಕದ ಗುತ್ತಿಗೆದಾರನ ಬೇಜವಾಬ್ದಾರಿ ವರ್ತನೆಯಿಂದ ಅಮಾಯಕ ಯುವಕ ಅಪಘಾತದಲ್ಲಿ ಜನ್ಮದಿನದಂದೇ ಧನಂಜಯ್ಯ ಮೃತಪಟ್ಟಿದ್ದಾರೆ.
ಹೊಳೆನರಸೀಪುರದಲ್ಲಿ ಕಾರ್ಗಿಲ್‌ ದಿವಸ್‌ ಕಾರ್ಯಕ್ರಮ
ಕಾರ್ಗಿಲ್ ವಿಜಯ್ ದಿವಸ್ ಭಾರತೀಯರಿಗೆ ಹೆಮ್ಮೆಯ ವಿಷಯವಾದರೂ ಸಹ ಅಂದು ಯುದ್ಧದಲ್ಲಿ ವೀರ ಮರಣ ಹೊಂದಿ ಹುತಾತ್ಮರಾದ ವೀರ ಯೋಧರ ಸ್ಮರಣೆ, ಗೌರವ ಸಮರ್ಪಣೆ ಮತ್ತು ಅವರ ಕುಟುಂಬ ಸದಸ್ಯರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡುವುದು ನಮ್ಮ ಜವಾಬ್ದಾರಿ ಹಾಗೂ ಕರ್ತವ್ಯವಾಗಿದೆ ಎಂದು ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ ತಿಳಿಸಿದರು. ವೀರ ಯೋಧರಿಗೆ ಆತ್ಮಸ್ಥೈರ್ಯ ತುಂಬುತ್ತಾ ಅಗತ್ಯ ಸಮಯದಲ್ಲಿ ಯೋಧ ಕುಟುಂಬ ಸದಸ್ಯರ ಜತೆಗೆ ನಿಲ್ಲುವ ದೇಶಾಭಿಮಾನಿಗಳ ಕಾರ್ಯ ಅಭಿನಂದನೀಯ ಎಂದು ತಿಳಿಸಿ, ಹುತಾತ್ಮ ವೀರ ಯೋಧರನ್ನು ಸ್ಮರಿಸಿದರು.
ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಲು ಪ್ರದೀಪ್ ರಾಮಸ್ವಾಮಿ ಸಲಹೆ
ವಿದ್ಯಾರ್ಥಿ ದಿಸೆಯಲ್ಲಿ ವಿದ್ಯಾರ್ಥಿಗಳು ಪ್ರಶ್ನಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಯಾವುದು ಸರಿ, ಯಾವುದು ತಪ್ಪು ಎಂದು ವಿಚಾರಗಳನ್ನು ವಿಮರ್ಶಿಸಬೇಕು. ಅಲ್ಲದೆ ತಪ್ಪು ಅನಿಸಿದರೆ ಅದನ್ನು ಪ್ರಶ್ನಿಸಬೇಕು ಎಂದು ಪ್ರದೀಪ್ ಎ.ಟಿ ರಾಮಸ್ವಾಮಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. . ನೆಲ, ಜಲ, ಗಾಳಿ ಎಲ್ಲವೂ ಸಹ ಕಲುಷಿತವಾಗುತ್ತಿದ್ದು ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವುದು ನಮ್ಮೆಲ್ಲರ ಹೊಣೆಯಾಗಿದೆ. ನಾವು ಸಮರೋಪಾದಿಯಲ್ಲಿ ಪರಿಸರ ಸಂರಕ್ಷಣೆ ಮಾಡಬೇಕಾಗಿದೆ. ಎಲ್ಲರೂ ಸಹ ಇದಕ್ಕಾಗಿ ಶ್ರಮಿಸಬೇಕಾಗಿದೆ. ಸ್ಥಳೀಯವಾಗಿ ಲಭ್ಯವಿರುವ ತಾಜಾ ಹಣ್ಣುಗಳನ್ನು ಹೆಚ್ಚು ಹೆಚ್ಚು ಬೆಳಸಲು ವಿದ್ಯಾರ್ಥಿಗಳಿಗೆ ತಿಳಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 503
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ
ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ
ವಿಚಾರಣೆ ವೇಳೆ ಪಶ್ಚಾತ್ತಾಪದಿಂದ ಚಿನ್ನಯ್ಯ ಕಣ್ಣೀರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved