• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಹುಣ್ಣಿಮೆಯ ಪ್ರಯುಕ್ತ ಲೋಕ ಕಲ್ಯಾಣರ್ಥ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಮಹೋತ್ಸವ ಸಂಪ್ರದಾಯದ ಆಚರಣೆಯಂತೆ ವೈಭವದಿಂದ ನಡೆಯಿತು. ಶುಕ್ರವಾರ ಮುಂಜಾನೆ ಬ್ರಾಹ್ಮಿ ಮುಹೂರ್ತದ ಭರಣಿ ನಕ್ಷತ್ರದಲ್ಲಿ ಶ್ರೀಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ನೆರವೇರಿಸಿ ಪೂಜಿಸಲಾಯಿತು.ಶ್ರೀಸ್ವಾಮಿಯ ಭಕ್ತರಿಗೆ ಪುರಸಭಾ ಸದಸ್ಯ ಶಿವಣ್ಣ ಹಾಗೂ ಕುಟುಂಬ ಸದಸ್ಯರು ಪ್ರಸಾದದ ರೂಪದಲ್ಲಿ ಉಪಹಾರದ ವ್ಯವಸ್ಥೆ ಮಾಡಿದ್ದರು.
ಬೀದಿನಾಯಿಗಳ ಹಾವಳಿಗೆ ಬೇಸತ್ತ ಸಕಲೇಶಪುರದಲ್ಲಿ ಜನ
ಪಟ್ಟಣದಲ್ಲಿ ಬೀದಿನಾಯಿಗಳ ಉಪಟಳ ಮೀತಿ ಮೀರಿದ್ದು, ನಿರ್ಜನ ಪ್ರದೇಶದಲ್ಲಿ ಜನಜಾನುವಾರುಗಳು ಸಂಚರಿಸುವುದು ದುಸ್ತರವಾಗಿದೆ. ಪಟ್ಟಣದ ಎಪಿಎಂಸಿ ಆವರಣ, ಪಟ್ಟಣದ ಅಜಾದ್ ರಸ್ತೆ, ತೇಜಸ್ವಿ ವೃತ್ತ, ಚಂಪಕನಗರ ಟೋಲ್‌ಗೇಟ್ ಸಮೀಪ ಇರುವ ಪ್ರತಿಯೊಂದು ಬೀದಿನಾಯಿಗಳ ಗುಂಪಿನಲ್ಲಿ ನೂರಕ್ಕೂ ಅಧಿಕ ನಾಯಿಗಳಿದ್ದು, ಕ್ರೂರವಾಗಿ ವರ್ತಿಸುವ ನಾಯಿಗಳಿಂದ ಜನರು ಒಂಟಿಯಾಗಿ ಸಂಚರಿಸುವುದು ಅಸಾಧ್ಯವಾಗಿದೆ. ಸಾಕಷ್ಟು ಬೀದಿನಾಯಿಗಳು ಮಿನಿವಿಧಾನ ಸೌಧದ ಸುತ್ತಲಿನ ಪ್ರದೇಶದಲ್ಲಿ ಬೀಡುಬಿಡುತ್ತಿದ್ದು, ಸಂಜೆವೇಳೆ ನಿರ್ಜನವಾಗುವ ಈ ಪ್ರದೇಶದಲ್ಲಿ ಒಂಟಿಯಾಗಿ ಸಂಚರಿಸುವುದು ಅಪಾಯಕಾರಿಯಾಗಿದೆ.
ಚನ್ನರಾಯಪಟ್ಟಣದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ
ಹೊಳೆನರಸೀಪುರದಿಂದ ಆಗಮಿಸಿದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಹಸೀಲ್ದಾರ್‌ ನವೀನ್‌ ಕುಮಾರ್‌ ತಾಲೂಕಿನ ಗನ್ನಿಕಡ ಗ್ರಾಮದ ಬಳಿ ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ರಥಯಾತ್ರೆ ನಮ್ಮ ತಾಲೂಕಿಗೆ ಬಂದಿರುವುದು ಸ್ವಾಗತಾರ್ಹ. ಕನ್ನಡದ ಭಾಷಾ ಪ್ರೇಮ ಇನ್ನಷ್ಟು ಪಸರಿಸಿ ಕನ್ನಡದ ಗಟ್ಟಿತನಕ್ಕೆ ಕನ್ನಡಿಗರಾದ ನಮ್ಮ ಕರ್ತವ್ಯವಾಗಿದೆ. ಮಂಡ್ಯದಲ್ಲಿ ಸಮ್ಮೇಳನದ ನಡೆಯುತ್ತಿರುವುದು ಸ್ವಾಗತಾರ್ಹ ಎಂದರು.
ರಸ್ತೆ ಬಿಡಿಸಿಕೊಡದ ಪಿಡಿಒ ಮೇಲೆ ಕ್ರಮಕ್ಕೆ ಆಗ್ರಹ
ಗ್ರಾಮಠಾಣಾ ಜಾಗಕ್ಕೆ ಸೇರಿದ ಸುಮಾರು ೧೨ ಅಡಿ ಜಾಗದಲ್ಲಿ ಕೂಡಲೇ ರಸ್ತೆ ಬಿಡಿಸಿಕೊಡುವಂತೆ ಬೇಲೂರು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮೌಖಿಕವಾಗಿ ಸ್ಥಳದಲ್ಲಿ ಪಿಡಿಒಗೆ ಆದೇಶ ಮಾಡಿದ್ದರೂ ಸಹ ರಸ್ತೆ ಬಿಡಿಸಿಕೊಡುವಲ್ಲಿ ವಿಫಲರಾಗಿರುವ ಪಿಡಿಒ ರಘುನಾಥರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಕುಟುಂಬವೊಂದು ಡಿಸಿ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕ
ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕವಾಗಿದೆ ಎಂದು ಹಂಜಳಿಗೆ ಕಾಳಿಂಗಪ್ಪ ವೆಲ್‌ಫೇರ್ ಅಸೋಸಿಯೇಷನ್ ಸಂಸ್ಥಾಪಕ ಹಂಜಳಿಗೆ ಮಂಜುನಾಥ್ ತಿಳಿಸಿದರು. ಟಿ. ಗುಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆ ವತಿಯಿಂದ ಸುಮಾರು ೨ ಲಕ್ಷ ವೆಚ್ಚದ ಅರ್ಚನ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಸ್ಮಾರ್ಟ್‌ಕ್ಲಾಸನ್ನು ಪ್ರಾರಂಭಿಸಿ, ಮೊದಲನೇ ತರಗತಿಯಲ್ಲಿ ಗ್ರಾಮೀಣ ಮಕ್ಕಳಿಗೆ ಡಿಜಿಟಲ್ ಎಜುಕೇಶನ ಕಲಿಸುವುದು ಇಂದು ಅನಿವಾರ್ಯವಾಗಿದೆ ಎಂದರು.
ಸಕಲೇಶಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸ್ವಾಗತ
ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ಜ್ಯೋತಿ ರಥವನ್ನು ಪಟ್ಟಣದಲ್ಲಿ ತಾಲೂಕು ಆಡಳಿತ, ಕಸಾಪ ಮತ್ತು ಕನ್ನಡ ಪರ ಸಂಘಟನೆಗಳು ಕನ್ನಡದ ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಕನ್ನಡ ಅಭಿಮಾನಿಗಳು ಸ್ವಾಗತಿಸಿ ಪೂರ್ಣಕುಂಭಗಳೊಂದಿಗೆ ಪುರಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ಬೇಲೂರು ತಾಲೂಕಿಗೆ ಕಳಿಸಿಕೊಡಲಾಯಿತು.
ಶ್ರೇಯಸ್‌ ಹುಟ್ಟುಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಗೆ ಬ್ಯಾಗ್‌ ವಿತರಣೆ
ಸಂಸದ ಶ್ರೇಯಸ್ ಎಂ ಪಟೇಲ್ ಅವರ 33ನೇ ಹುಟ್ಟುಹಬ್ಬ ಅಂಗವಾಗಿ ಹೋಬಳಿಯ ವಿರೂಪಾಕ್ಷಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಯಿತು. ಗ್ರಾಮೀಣ ಮಕ್ಕಳಲ್ಲಿ ಬುದ್ಧಿವಂತಿಕೆಯಿದ್ದು ಇಂತಹ ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ಮುಂದಾಗಬೇಕು ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸುವುದು ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಅಂಗಡಿಹಳ್ಳಿಯಲ್ಲಿ ಸಂಸದ ಶ್ರೇಯಸ್‌ 33ನೇ ಹುಟ್ಟುಹಬ್ಬ
ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಹಾಗೂ ಮಾಜಿ ಸಚಿವ ಬಿ ಶಿವರಾಂ ಅವರ ಹುಟ್ಟುಹಬ್ಬವನ್ನು ತಾಲೂಕಿನ ಹಗರೆ ಗ್ರಾಮದ ಅಂಗಡಿಹಳ್ಳಿಯ ಆಶ್ರಮ ಶಾಲೆಯ ಆವರಣದಲ್ಲಿ ಆಚರಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ತಲೆ ತಗ್ಗಿಸಿ ಓದಿದವರು ತಲೆ ಎತ್ತಿ ಬದುಕುತ್ತಾರೆ
ಸುಜ್ಞಾನದಿಂದ ಬೆಳೆದರೆ ಸಜ್ಜನರಾಗಿ ಆರೋಗ್ಯ, ಗೌರವ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ತಲೆತಗ್ಗಿಸಿ ಓದಿದವರು ತಲೆ ಎತ್ತಿ ಬದುಕುವರು ಎಂಬುದು ಗೊತ್ತಿಲ್ಲವೆ ಎಂದು ಉಪನ್ಯಾಸಕ ಹಾಗೂ ಬರಹಗಾರ ಹಳ್ಳಿವೆಂಕಟೇಶ್ ತಿಳಿಸಿದರು. ಪ್ರಪಂಚದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ರವರು ಹೆಚ್ಚು ಪುಸ್ತಕಗಳನ್ನು ಓದಿದವರು ಗ್ರಂಥಾಲಯವನ್ನು ಹೆಚ್ಚು ಬಳಕೆ ಮಾಡಿಕೊಂಡವರು. ಕುವೆಂಪು, ದ.ರಾ.ಬೇಂದ್ರೆ, ಎ. ಪಿ. ಜೆ. ಅಬ್ದುಲ್‌ ಕಲಾಂ, ರವಿಬೆಳಗೆರೆ ಇಂತಹವರೆಲ್ಲ ಜ್ಞಾನದಾಹದಿಂದ ಅಭ್ಯಸಿಸಿ ಮಹಾತ್ಮರು ಎಂದೆನಿಸಿಕೊಂಡರು ಎಂದರು.
ಕಲ್ಲಾಯ್ಕನಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ಶಿವಮೂರ್ತಿ ಆಯ್ಕೆ
ಕಲ್ಲಾಯ್ಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಿವಮೂರ್ತಿ ಸಂಕೋಡನಹಳ್ಳಿ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಸಿ. ದೇವರಾಜು ಘೋಷಿಸಿದರು. ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಸಂಘದ ಕೆಲವು ಷೇರುದಾರ ಸದಸ್ಯರುಗಳು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದಿಸಿ ಶುಭ ಕೋರಿದರು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 555
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved