• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಕ್ಕೋಡು ಸುತ್ತಮುತ್ತ ಆನೆ ಓಡಿಸಲು ಸಜ್ಜಾದ ನಿಡುಮನಹಳ್ಳಿ ಬಾಯ್ಸ್‌
ಬಿಕ್ಕೋಡು ಹೋಬಳಿ ಸುತ್ತಮುತ್ತ ಗ್ರಾಮಗಳಲ್ಲಿ ಬೀಟಮ್ಮ ಗ್ಯಾಂಗ್, ಬೀಟಮ್ಮ 2 ಆನೆ ಗ್ಯಾಂಗ್‌ ಬೀಡು ಬಿಟ್ಟಿದ್ದು ಗದ್ದೆ, ಕಾಫಿ ತೋಟ, ಅಡಿಕೆ, ಬಾಳೆ ತೋಟಗಳಿಗೆ ನುಗ್ಗಿ ಬೆಳೆಗಳನ್ನು ಹಾನಿ ಮಾಡುತ್ತಿವೆ. ಇರುವೆ ಸಾಲಿನಂತೆ ಸಾಗುವ 25ಕ್ಕೂ ಹೆಚ್ಚು ಕಾಡಾನೆಗಳ ಗುಂಪಿನ ಹಾವಳಿಯಿಂದ ರೈತರು, ಕೂಲಿ ಕಾರ್ಮಿಕರು ಜಮೀನಿನ ಬಳಿ ಹೋಗಲು ಭಯಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಕ್ಕೋಡು ಹೋಬಳಿಯ ಅರೆಮಲೆನಾಡು ಭಾಗದಲ್ಲಿ ಬೀಟಮ್ಮ ಗ್ಯಾಂಗ್, ಬೀಟಮ್ಮ 2 ಆನೆ ಗ್ಯಾಂಗ್ ಬೀಡು ಬಿಟ್ಟಿದ್ದು, ಆನೆಗಳಿಂದ ಬೆಳೆ ಹಾನಿ ತಪ್ಪಿಸಲು ಸ್ಥಳೀಯ ಯುವಕರು ಅಹೋರಾತ್ರಿ ಕಾವಲು ಕಾಯುತ್ತಿದ್ದು, ಇವರ ಜೊತೆ ಅರಣ್ಯ ಸಿಬ್ಬಂದಿ ಕೂಡ ಸಾಥ್ ನೀಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆಯ ಶಾಸಕ ಮುನಿರತ್ನರನ್ನು ಪಕ್ಷದಿಂದ ಅಮಾನತು ಮಾಡಲಿ
ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಬಿಬಿಎಂಪಿ ಗುತ್ತಿಗೆದಾರರನ್ನು ಹಣಕ್ಕಾಗಿ ಪೀಡಿಸಿ, ತೊಂದರೆ ಕೊಟ್ಟು ಅವರ ತಾಯಿ ಮತ್ತು ಪತ್ನಿಯ ಬಗ್ಗೆ ತುಚ್ಛವಾಗಿ ಪದಬಳಕೆ ಮಾಡುವ ಮೂಲಕ ಸ್ತ್ರೀ ಕುಲಕ್ಕೆ ಅವಮಾನ ಮಾಡಿರುತ್ತಾರೆ. ಹಣಕ್ಕಾಗಿ ಅವರು ಎಂತಹ ಕೀಳು ಮಟ್ಟಕ್ಕಾದರೂ ಇಳಿಯಲು ಸಿದ್ಧರಿರುತ್ತಾರೆ ಎಂಬುದನ್ನು ಸಾಬೀತು ಮಾಡಿದ್ದಾರೆ ಶಾಸಕ ಮುನಿರತ್ನರನ್ನು ಪಕ್ಷದಿಂದ ಅಮಾನತು ಮಾಡಲಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಆಗ್ರಹಿಸಿದರು.
ವಿಶ್ವದಲ್ಲಿ ಶಾಂತಿ ಕಾಪಾಡಲು ಯುವಜನತೆ ಮುಂದಾಗಬೇಕು
ಜಗತ್ತಿನಲ್ಲಿ ಇಂದು ವಿವಿಧ ವಿಚಾರಗಳಿಗೆ ಮನುಕುಲದ ನಡುವೆಯೇ ಗಲಭೆ ಸೃಷ್ಟಿಯಾಗಿ ಆಶಾಂತಿ ವಾತಾವರಣ ಸೃಷ್ಟಿಯಾಗಿದೆ, ಉಕ್ರೇನ್, ರಷ್ಯಾ, ಇಸ್ರೇಲ್ ಪ್ರತಿಯೊಂದು ದೇಶಗಳ ನಡುವೆ ಯುದ್ಧ ನಡೆಯುವ ಸಂದರ್ಭದಲ್ಲಿ ನಾವುಗಳು ಶಾಂತಿ ಕಾಪಾಡಬೇಕು. ಅಶಾಂತಿ ಸೃಷ್ಟಿಯಾಗಿರುವುದಕ್ಕೆ ಅಂತ್ಯ ಕಂಡುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಯೋಚಿಸಬೇಕಿದೆ ಎಂದರು. ಕರ್ನಾಟಕ ರಾಜ್ಯದಲ್ಲಿ ಕೂಡ ಧರ್ಮ ಧರ್ಮಗಳ ನಡುವೆ ಗಲಭೆಗಳು ಸೃಷ್ಟಿಯಾಗುತ್ತಿವೆ, ಮಂಗಳೂರು, ನಾಗಮಂಗಲ ಸೇರಿದಂತೆ ವಿವಿಧೆಡೆ ನಡೆದ ಗಲಭೆಗಳ ಇದಕ್ಕೆ ಉತ್ತಮ ಉದಾಹರಣೆಯಾಗಿವೆ ಇಂತಹ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಶಾಸಕ ಸ್ವರೂಪ್‌ ಹೇಳಿದರು.
ಸ್ವರ್ಣ ಗೌರಮ್ಮನನ್ನು ಪ್ರತ್ಯೇಕವಾಗಿ ಪ್ರತಿಷ್ಠಾಪಿಸಿದ್ದಕ್ಕೆ ಅಸಮಧಾನ
ಅರಸೀಕೆರೆ: ಹಬ್ಬಹರಿದಿನಗಳ ಆಚರಣೆ ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವಲ್ಲಿ ಜನರ ಮನಸ್ಸು, ಮನಸುಗಳನ್ನು ಬೆಸೆಯುವ ಸಾಧನವಾದಾಗ ಮಾತ್ರ ಹಬ್ಬ ಹಾಗೂ ಜಾತ್ರಾ ಮಹೋತ್ಸವಗಳ ಮೌಲ್ಯ ಹೆಚ್ಚಾಗುತ್ತದೆ ಎಂದು ಮಾಡಾಳು ನಿರಂಜನ ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ ಶುಕ್ರವಾರ ಸಂಜೆ ತಿಳಿಸಿದರು.
ವಿದ್ಯಾರ್ಥಿಗಳು ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ: ಬಿಇಒ ಕೃಷ್ಣೇಗೌಡ
ಆಲೂರು: ವಿದ್ಯಾರ್ಥಿಗಳು ಕೇವಲ ಓದು ಬರಹಕ್ಕೆ ಸೀಮಿತವಾಗದೆ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ತಿಳಿಸಿದರು.
ಅಪೌಷ್ಟಿಕತೆ ನಿವಾರಣೆಗೆ ಕೈತೋಟ ಸಹಕಾರಿ
ಹಾರನಹಳ್ಳಿ: ಮಹಿಳಾ ಮತ್ತು ಮಕ್ಕಳ ಇಲಾಖೆ ಅರಸೀಕೆರೆ ‌ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಹಾರನಹಳ್ಳಿ ಸಮುದಾಯ ಭವನದಲ್ಲಿ ವಿಶ್ವ ಪೌಷ್ಟಿಕ ಆಹಾರ ಸಪ್ತಾಹ ಪೋಷಣ ಕಾರ್ಯಕ್ರಮ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಅಪೌಷ್ಟಿಕತೆ ನಿವಾರಣೆಗೆ ಕೈತೋಟ ಸಹಕಾರಿ ಎಂದು ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶಂಕರಮೂರ್ತಿ ತಿಳಿಸಿದರು.
ಮಟ್ಟನವಿಲೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಮಕ್ಕಳಲ್ಲಿ ಪಠ್ಯ ಚಟುವಟಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸಿ. ತಂದೆತಾಯಿಗಳು ಮಕ್ಕಳಿಗೆ ಮೊಬೈಲ್ ನೀಡದೆ ಪಠ್ಯ ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ರಾಷ್ಟ್ರಕ್ಕೆ, ರಾಜ್ಯಕ್ಕೆ ಹೆಸರು ತರುವಂತಹ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದೊಡ್ಡೇರಿ ತಾಂಡವೇಶ್ ತಿಳಿಸಿದರು. ನುಗ್ಗೇಹಳ್ಳಿ ಹೋಬಳಿಯ ದೊಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಟ್ಟನವಿಲೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು.
ಉಚಿತ ರೇಬಿಸ್ ಲಸಿಕೆ ಹಾಗೂ ಅರಿವು ಕಾರ್ಯಕ್ರಮ
ರಾಜ್ಯ ಸರ್ಕಾರದ ಆದೇಶದ ಮೇರೆಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಉಚಿತವಾಗಿ ೧೫೭ ನಾಯಿಗಳು, ೫ ಬೆಕ್ಕುಗಳಿಗೆ ಉಚಿತ ಲಸಿಕೆ ಹಾಕಲಾಯಿತು ಎಂದು ಹಳೇಬೀಡಿನ ಪಶು ಆಸ್ಪತ್ರೆಯ ಹಿರಿಯ ವೈಧ್ಯಾಧಿಕಾರಿ ಡಾ. ಎಂ. ವಿನಯ್ ತಿಳಿಸಿದರು. ರೇಬಿಸ್ ರೋಗದ ನಿರ್ಮೂಲನೆಗಾಗಿ ಸರ್ಕಾರವು ಪ್ರತಿ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ಉಚಿತ ಲಸಿಕೆ ಕಾರ್ಯಕ್ರಮ ಮಾಡುತ್ತ ಬಂದಿದ್ದು, ಅದರ ಜೊತೆಗೆ ಶಾಲಾ ಮಕ್ಕಳಿಗೆ ಈ ರೇಬಿಸ್ (ಹುಚ್ಚು ನಾಯಿ ರೋಗ)ದ ಮಾಹಿತಿ ನೀಡಿ, ಇದು ಅತೀ ಮುಖ್ಯವಾದ ಮಾರಣಾಂತಿಕ ರೋಗವಾಗಿದ್ದು ಸೂಕ್ತ ಮುಂಜಾಗ್ರತೆ ವಹಿಸಿ ಲಸಿಕೆ ಹಾಕಿಸುವುದರಿಂದ ಈ ರೋಗವನ್ನು ತಡೆಗಟ್ಟಬಹುದು ಎಂದು ತಿಳಿಸಿದ್ದೇವೆ ಎಂದರು.
ನಾಟ್ಯಕಲೆ ನಮ್ಮ ದೇಶದ ಸಂಸ್ಕೃತಿ: ನಾಗರತ್ನ
ನಾಟ್ಯಕಲೆ ನಮ್ಮ ದೇಶದ ಸಂಸ್ಕೃತಿಯಾಗಿದ್ದು, ಪಾಲಕರು ಮಕ್ಕಳಿಗೆ ನೃತ್ಯ ಕಲೆಗಳಲ್ಲಿರುವ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು
ಬೇಲೂರಿಗೆ ಆಗಮಿಸಿದ ಕನ್ನಡ ರಥಕ್ಕೆ ಸ್ವಾಗತ
ಬೇಲೂರು: ಬೇಲೂರಿಗೆ ಶುಕ್ರವಾರ ಆಗಮಿಸಿದ ಕನ್ನಡ ರಥವನ್ನು ಪಟ್ಟಣದ ವಿಷ್ಣುಸಮುದ್ರ ಕೆರೆಯ ಬಳಿ ರಥವನ್ನು ಬರಮಾಡಿಕೊಂಡು ಶಾಲಾ ಮಕ್ಕಳು, ಧರ್ಮಸ್ಥಳ ಸ್ತ್ರೀ ಶಕ್ತಿ ಸಂಘದ ಮಹಿಳೆಯರ ಪೂರ್ಣಕುಂಭ ಹಾಗೂ ವಿವಿಧ ಕನ್ನಡಪರ ಸಂಘಟನೆ ಪ್ರಮುಖರೊಂದಿಗೆ ಶ್ರೀಚನ್ನಕೇಶವಸ್ವಾಮಿ ದೇಗುಲದ ಮುಂಭಾಗದಿಂದ ಬಸವೇಶ್ವರ ವೃತ್ತಕ್ಕೆ ಮೆರವಣಿಗೆ ಮೂಲಕ ತೆರಳಲಾಯಿತು.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved