• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿರು ಸೇತುವೆ ಕಾಮಗಾರಿ ವಿಳಂಬ
ಕಾವೇರಿ ನದಿಪಾತ್ರದಲ್ಲಿರುವ ಕಿರುಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ ಎಂದು ರಾಮನಾಥಪುರದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಎಚ್.ಎಸ್. ಶಂಕರ್ ಆರೋಪಿಸಿದರು. ಸೇತುವೆ ಕಾಮಗಾರಿಯನ್ನು ಶೀಘ್ರ ಮುಗಿಸಿ ದೇವಾಲಯಗಳಿಗೆ ಭಕ್ತರು ಹಾಗೂ ವಾಹನಗಳು ತಿರುಗಾಡಲು ಅನುವು ಮಾಡಿಕೊಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸರ್ಕಾರಿ ಜಮೀನು ಗುತ್ತಿಗೆ ಪಡೆಯುವ ಅರ್ಜಿ ಕಾಲಾವಕಾಶ ವಿಸ್ತರಣೆ
ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆದಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ೨೦೨೪ ಡಿಸೆಂಬರ್ ೩೧ರ ವರೆಗೂ ಕಾಲಾವಕಾಶ ನೀಡಿರುವುದಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಎಚ್.ಟಿ. ಮೋಹನ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು. ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿಗಳನ್ನು ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಪಡೆಯಲು ಮುಂದಾಗಬೇಕೆಂದು ಹೇಳಿದರು.
ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಶಾಸಕ ಬಾಲಕೃಷ್ಣ ಬಿರುಸಿನ ಪ್ರಚಾರ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಶಾಸಕ ಸಿ ಎನ್ ಬಾಲಕೃಷ್ಣರವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದು, ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಅಲೆ ಇದ್ದು ಅವರ ಗೆಲುವು ನಿಶ್ಚಿತವಾಗಿದೆ ಎಂದರು.
ಆರೋಗ್ಯದ ಸೌಲಭ್ಯ ವಿಸ್ತರಣೆಗೆ ಎನ್ ಕ್ಯೂಎಎಸ್‌ ಸಹಾಯಕ
ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಸಮೀಕ್ಷೆಯ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ವಿಸ್ತರಣೆಗೆ ಸಹಾಯಕವಾಗಲಿದೆ ಎಂದು ರಾಜ್ಯ ಆರೋಗ್ಯ ಅಧಿಕಾರಿ ಡಾ. ಸಂತೋಷ್‌ ತಿಳಿಸಿದರು. ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಿ ಅವರಿಗೆ ಸೌಲಭ್ಯಗಳ ವಿಸ್ತರ್ಣೆಮಾಡಿ ಜನರಿಗೆ ಆದಷ್ಟು ಸೌಲಭ್ಯ ನೀಡುವುದು ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಸಮೀಕ್ಷೆಯ ಉದ್ದೇಶವಾಗಿದೆ. ಸೌಲಭ್ಯ ವಿಸ್ತರಣೆಯಿಂದ ಸರ್ಕಾರದ ವತಿಯಿಂದ ಹೆಚ್ಚಿನ ಅನುದಾನ ಪಡೆದು ಸೌಲಭ್ಯಗಳು ಹೆಚ್ಚು ಹೆಚ್ಚು ಸಿಗುವಂತೆ ಮಾಡಬೇಕೆಂದರು.
ದತ್ತಪೀಠ ವಕ್ಫ್ ಆಸ್ತಿ ಎಂದು ಬಂದ್ರೆ ದರ್ಗಾ ವಿರುದ್ಧ ಹೋರಾಟ
ಕಾಂಗ್ರೆಸ್ ಪಕ್ಷದ ಅಜೆಂಡಾದಲ್ಲಿ ಏನಾದರೂ ದತ್ತಪೀಠವನ್ನು ನಮ್ಮ ವಕ್ಫ್ ಬೋರ್ಡಿನ ಆಸ್ತಿ ಎಂದು ಹೇಳಿದರೆ ಇಡೀ ರಾಜ್ಯಾದ್ಯಂತ ಬಹುಸಂಖ್ಯಾತ ಹಿಂದೂಗಳು ಶ್ರೀರಾಮಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಒಂದು ಲಕ್ಷ ಜನ ಸೇರಿ ಬಾಬನ ದರ್ಗಾವನ್ನು ಕಿತ್ತೆಸೆಯುವ ಹೋರಾಟ ಮಾಡುವುದಾಗಿ ಶ್ರೀರಾಮಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಮರನಾಥ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಎಚ್ಚರಿಸಿದರು.
ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ
ನಿಷ್ಕಲ್ಮಶ ಮನಸ್ಸಿನ ಮಕ್ಕಳನ್ನು ಪೋಷಕರು ಸಂಸ್ಕಾರವಂತರನ್ನಾಗಿ ಮಾಡಿ ಅವರ ಉತ್ತಮ ಬದುಕಿಗೆ ಭದ್ರ ಬುನಾದಿ ಹಾಕಬೇಕೆಂದು ಅರಕಲಗೂಡು ತಾಲೂಕು ಅರೇಮಾದನಹಳ್ಳಿಯ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಯತಿಶ್ರೇಷ್ಠರಾದ ಅನಂತಶ್ರೀ ವಿಭೂಷಿತ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಗಳು ಹಿತ ನುಡಿದರು. ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಖಾಸಗಿ ಕಾರ್ಯಕ್ರಮದ ಧಾರ್ಮಿಕ ಸಭೆಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಎಲ್ಲ ಧರ್ಮಗಳು ಶಾಂತಿ ಸಾರಿದ್ದಾವೆಯೇ ಹೊರತು ಸಂಘರ್ಷವನ್ನಲ್ಲ
ಧರ್ಮ-ಧರ್ಮಗಳ ನಡುವೆ ಆಚರಣೆ ಬೇರೆ-ಬೇರೆಯಾದರೂ ಅದು ಹೇಳುವ ನೀತಿ ಮಾನವ ಕಲ್ಯಾಣವೇ ಆಗಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬೆಳೆಸುವುದೇ ಧರ್ಮದ ಮೂಲ ಉದೇಶ ಎಂದು ಯಳನಾಡು ಮಹಾ ಸಂಸ್ಥಾನದ ಶ್ರೀ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ ಕಸಬಾ ಹೋಬಳಿ ಹಬ್ಬನಘಟ್ಟ ಗ್ರಾಮದ ಶ್ರೀ ರಾಮಮಂದಿರ ದೇವಾಲಯದ ಲೋಕಾರ್ಪಣೆ ಮಹೋತ್ಸವ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಹೊಳೆನರಸೀಪುರ : ಗಡ್ಡವನ್ನು ಟ್ರಿಂ ಮಾಡಿ ಎಂದಿದ್ದಕ್ಕೆ ಕಾಲೇಜಿನಲ್ಲಿ ವಿವಾದ ಸೃಷ್ಟಿ

ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ವಸ್ತ್ರ ಸಂಹಿತೆ ಪಾಲಿಸಿ, ಶುಚಿಯಾದ ಸಮವಸ್ತ್ರ ಧರಿಸಿ, ಗಡ್ಡವನ್ನು ಟ್ರಿಂ ಮಾಡಿ, ಕ್ಲಿನಿಕಲ್ ಲ್ಯಾಬ್‌ಗೆ ಹೋಗುವಾಗ ಶೂ ಧರಿಸಿ ಎಂದು ತಿಳಿ ಹೇಳಿದ್ದಕ್ಕೆ ಕಾಲೇಜಿನಲ್ಲಿ ವಿವಾದ ಸೃಷ್ಟಿಯಾಗಿದೆ. 

ಕನ್ನಡ ನಾಡು ನುಡಿ ರಕ್ಷಣೆಗೆ ಪ್ರತಿಯೊಬ್ಬರೂ ಹೋರಾಡಬೇಕು
ಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆಗಾಗಿ ಪ್ರತಿಯೊಬ್ಬರೂ ಸಂಘಟಿತರಾಗಿ ಹೋರಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್ ಕರೆ ನೀಡಿದರು. ಆಲೂರು ತಾಲೂಕಿನಲ್ಲಿಯೂ ಸಹ ಹಲವಾರು ಜ್ವಲಂತ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಟ್ಟಿದೆ ಎಂದು ತಿಳಿಸಿದರು.
ಎಲ್ಲದಕ್ಕೂ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ
ಹಿಂಸಾಚಾರವನ್ನು ಮಹಿಳೆಯರು ಮತ್ತು ಮಕ್ಕಳು ಅನುಭವಿಸುತ್ತಿದ್ದಾರೆ. ಇದಕ್ಕೆ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆ ಕಡೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹೆಸರಾಂತ ಸಾಹಿತಿ ಸುಬ್ಬು ಹೊಲೆಯಾರ್ ಅಭಿಪ್ರಾಯಪಟ್ಟರು. ಅಂತಿಮವಾಗಿ ನಮ್ಮೊಳಗಿನ ಪ್ರೀತಿ, ಕರುಣೆ ಬರಬೇಕು. ಕನ್ನಡದ ಪ್ರಜ್ಞೆ ವಿಶ್ವ ಪ್ರಜ್ಞೆ ಆಗಬೇಕು. ವ್ಯಕ್ತಿತ್ವವನ್ನ ಕಾಪಾಡಿಕೊಳ್ಳಬೇಕು. ಕಾವ್ಯ ಎಂದರೇ ಜನರ ಮಿಡಿಯುವ ಹೃದಯ ಆಗಿರಬೇಕು ಎಂದು ಹೇಳಿದರು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 555
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved